Andolana originals

ಬೀದಿನಾಯಿಗಳು, ಕೋತಿಗಳ ಹಾವಳಿಯಿಂದ ಕಂಗೆಟ್ಟ ಜನತೆ

ಮಂಜು ಕೋಟೆ

ಕೋಟೆ ಪಟ್ಟಣ ವ್ಯಾಪ್ತಿಯಲ್ಲಿ ಬೀದಿನಾಯಿ, ಕೋತಿಗಳ ಹಾವಳಿ ನಿಯಂತ್ರಿಸಲು ಆಗ್ರಹ 

ಎಚ್.ಡಿ.ಕೋಟೆ: ಪಟ್ಟಣ ವ್ಯಾಪ್ತಿಯಲ್ಲಿ ಬೀದಿನಾಯಿ ಮತ್ತು ಕೋತಿಗಳ ಹಾವಳಿಯಿಂದಾಗಿ ಮಕ್ಕಳು, ವೃದ್ಧರು, ಜನಸಾಮಾನ್ಯರು ಪ್ರತಿನಿತ್ಯ ಪ್ರಾಣಭಯದಿಂದ ಜೀವನ ನಡೆಸುವ ಪರಿಸ್ಥಿತಿ ಎದುರಾಗಿದ್ದರೂ ಕ್ರಮ ಕೈಗೊಳ್ಳಬೇಕಾದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಪುರಸಭೆ ವ್ಯಾಪ್ತಿಯ ೨೩ ವಾಡ್ಗಳಲ್ಲೂ ದಿನದಿಂದ ದಿನಕ್ಕೆ ಬೀದಿ ನಾಯಿಗಳು ಮತ್ತು ಕೋತಿಗಳು ಹೆಚ್ಚಾಗಿದ್ದು, ಗುಂಪು ಗುಂಪುಗಳಾಗಿ ಬೀದಿ ಬೀದಿಯಲ್ಲಿ ಮನೆ, ಸರ್ಕಾರಿ ಕಚೇರಿಗಳು, ಪಶು ಆಸ್ಪತ್ರೆ, ಸಾರ್ವಜನಿಕ ಆಸ್ಪತ್ರೆಗಳಲ್ಲಿ ವಾಸ್ತವ್ಯ ಮಾಡುತ್ತಿವೆ. ಬೀದಿ ನಾಯಿಗಳಂತೂ ಎಲ್ಲೆಂದರಲ್ಲಿ ಗುಂಪುಗಳಾಗಿ ಓಡಾಡುತ್ತಿದ್ದು, ಮಹಿಳೆಯರು ಮಕ್ಕಳು, ದನ-ಕರು, ವೃದ್ಧರ ಮೇಲೆ ದಾಳಿ ನಡೆಸುತ್ತಿವೆ.

ಮೊದಲನೇ ಮತ್ತು ಎರಡನೇ ಮುಖ್ಯ ರಸ್ತೆಗಳಲ್ಲಿ ಹಾಗೂ ಕೃಷ್ಣಾಪುರದಲ್ಲಿ ಕೋತಿಗಳ ಹಾವಳಿ ಮಿತಿಮೀರಿದ್ದು, ಜನಸಾಮಾನ್ಯರ ಮೇಲೂ ದಾಳಿ ನಡೆಸುತ್ತಿವೆ. ಇದರಿಂದಾಗಿ ಇಲ್ಲಿನ ನಿವಾಸಿಗಳು ಮತ್ತು ಸಾರ್ವಜನಿಕರು ಭೀತಿಗೊಂಡಿದ್ದಾರೆ. ಅದರಲ್ಲೂ ಕೋಳಿ, ಮೇಕೆ, ದನದ ಮಾಂಸದ ಅಂಗಡಿಗಳ ಸಮೀಪ ಬಂದು, ಅಂಗಡಿಯವರು ಹಾಕುವ ಮೂಳೆ ಮಾಂಸಗಳಿಗೆ ಮುಗಿಬಿದ್ದು, ಆತಂಕ ಉಂಟುಮಾಡುತ್ತಿವೆ.

ಪರಿಸ್ಥಿತಿ ಹೀಗಿದ್ದರೂ ಇವುಗಳನ್ನು ನಿಯಂತ್ರಿಸಲು ಸಂಬಂಧಪಟ್ಟ ಪುರಸಭೆಯ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

” ಕೃಷ್ಣಾಪುರ ವ್ಯಾಪ್ತಿಯ ರಸ್ತೆಯಲ್ಲಿ ಕೋತಿಗಳ ಹಾವಳಿಯಿಂದಾಗಿ ಜನರು ಓಡಾಡಲು ಸಾಧ್ಯವಾಗುತ್ತಿಲ್ಲ. ಜನರು ಭಯ ಭೀತಿಯಿಂದ ಮನೆಯಲ್ಲೇ ಇರುವ ಪರಿಸ್ಥಿತಿ ಎದುರಾಗಿದೆ. ಇವುಗಳನ್ನು ನಿಯಂತ್ರಿಸುವಂತೆ ಪುರಸಭೆ ಅಧಿಕಾರಿಗಳಿಗೆ, ಅರಣ್ಯ ಇಲಾಖೆಯವರಿಗೆ ಎಷ್ಟು ಬಾರಿ ಮನವಿ ಮಾಡಿದರೂ ಪ್ರಯೋಜನವಾಗುತ್ತಿಲ್ಲ”

-ಪರಶಿವಮೂರ್ತಿ, ಕೃಷ್ಣಾಪುರ 

” ಕೋತಿಗಳನ್ನು ಸೆರೆಹಿಡಿಯಲು ಅರಣ್ಯ ಇಲಾಖೆಯವರ ಸಹಕಾರ ಬೇಕಾಗಿದೆ. ಆದರೆ ಅವರು ಸಹಕಾರ ನೀಡುತ್ತಿಲ್ಲ. ನಾಯಿಗಳ ಹಾವಳಿ ನಿಯಂತ್ರಿಸಲು ನ್ಯಾಯಾಲಯದ ನಿರ್ದೇಶನದಂತೆ ಶೀಘ್ರವೇ ಕ್ರಮ ಕೈಗೊಳ್ಳಲಾಗುವುದು.”

-ಸುರೇಶ್, ಮುಖ್ಯಾಧಿಕಾರಿ, ಪುರಸಭೆ

ಆಂದೋಲನ ಡೆಸ್ಕ್

Recent Posts

ಪ್ರಧಾನ್‌ ರಾಜೀನಾಮೆ : ವಾಂಗ್ಚುಕ್‌ ಫಸ್ಟ್‌ ರಿಯಾಕ್ಷನ್‌

ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್‌ ವಾಂಗ್ಚುಕ್‌ ಮೊದಲ ಪ್ರತಿಕ್ರಿಯೆ…

10 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 25 ಶನಿವಾರ  

18 hours ago

ನೋಟ-ಪ್ರತಿನೋಟ | ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಸರಿಯೇ? ತಪ್ಪೇ?

ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…

18 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಗೆ ಅಜ್ಜಿ ಒಡವೆ ನೀಡಿದ ಪ್ರಸಂಗ…

ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…

18 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಯ ಉಡುಪು ಯಾಕೆ ಬದಲಾಯಿತು?

  ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…

19 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಸಜ್ಜನನಾದ ಆಂಗ್ಲನಾಗುವ ಪ್ರಯತ್ನ

ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್‌ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…

19 hours ago