Andolana originals

ಕಬಿನಿ ಹಿನ್ನೀರಿನ ರೆಸಾರ್ಟ್‌ಗಳಿಗೆ ಜನರ ಲಗ್ಗೆ

ಮಂಜು ಕೋಟೆ

ಕೋಟೆ: ಹೊಸ ವರ್ಷಾಚರಣೆಗೆ ಮುಗಿಬಿದ್ದ ಪ್ರವಾಸಿಗರು; ಮತ್ತೊಂದೆಡೆ ಮೂಲಸೌಕರ್ಯಗಳ ಕೊರತೆ

ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಹಿನ್ನೀರು ರೆಸಾರ್ಟ್‌ಗಳಲ್ಲಿ ಹೊಸ ವರ್ಷ ಆಚರಣೆ ಮಾಡಲು ಜನರು ಮುಗಿಬಿದ್ದಿದ್ದಾರೆ.

ಜಿಲ್ಲೆಯಲ್ಲಿ ತಾಲ್ಲೂಕು ಹಿಂದುಳಿದ ಮತ್ತು ಗಡಿ ಪ್ರದೇಶವೆಂದು ಬಿಂಬಿತವಾಗಿದ್ದರೂ ಇಲ್ಲಿ ಅರಣ್ಯ, ವನ್ಯಪ್ರಾಣಿ ಸಂಪತ್ತು ಹೇರಳವಾಗಿದ್ದು, ಜಲಾಶಯಗಳಿಂದ ಸಮೃದ್ಧಿಯಾಗಿದೆ. ಆದರೆ, ಮೂಲಸೌಕರ್ಯಗಳಾದ ರಸ್ತೆ, ಕುಡಿಯುವ ನೀರು, ಕಾರ್ಖಾನೆ, ಶೈಕ್ಷಣಿಕ ಮತ್ತು ಆರೋಗ್ಯ ಕ್ಷೇತ್ರಗಳಲ್ಲಿ ಬಹಳಷ್ಟು ಹಿಂದುಳಿದಿದೆ.

ಮತ್ತೊಂದೆಡೆ ಕಬಿನಿ ಹಿನ್ನೀರಿನಲ್ಲಿ ಪೈಪೋಟಿಯಲ್ಲಿ ರೆಸಾರ್ಟ್‌ಗಳು ಮತ್ತು ಹೋಂ ಸ್ಟೇ ಗಳು ಅಽಕೃತ ಮತ್ತು ಅನಧಿಕೃತವಾಗಿ ತಲೆ ಎತ್ತಿವೆ. ಸರ್ಕಾರದ ವ್ಯಾಪ್ತಿಯ ಕಾರಾಪುರ ಕಬಿನಿ ಜಂಗಲ್ ರೆಸಾರ್ಟ್ ಹೊರತುಪಡಿಸಿದರೆ ಉಳಿದ ೧೮ಕ್ಕೂ ಹೆಚ್ಚು ರೆಸಾಟ್ ಗಳು ಮತ್ತು ೩೦ಕ್ಕೂ ಹೆಚ್ಚು ಹೋಂ ಸ್ಟೇಗಳಲ್ಲಿ ಹೊಸ ವರ್ಷಾಚರಣೆಗೆ ರಾಜ್ಯ ಮತ್ತು ಹೊರ ರಾಜ್ಯಗಳು, ವಿದೇಶಗಳಿಂದಲೂ ಶ್ರೀಮಂತರು, ರಾಜಕಾರಣಿಗಳು, ಉದ್ಯಮಿಗಳು, ಪ್ರಭಾವಿಗಳು ಮುಗಿಬಿದ್ದಿದ್ದಾರೆ. ಹೀಗಾಗಿ ಎಲ್ಲ ರೆಸಾರ್ಟ್‌ಗಳೂ ಭರ್ತಿಯಾಗಿವೆ.

ಬಹುತೇಕ ರೆಸಾರ್ಟ್‌ಗಳು ಮತ್ತು ಹೋಂ ಸ್ಟೇಗಳಿಗೆ ತೆರಳಲು ಸೂಕ್ತವಾದ ರಸ್ತೆ ಸಂಪರ್ಕವಿಲ್ಲದಿದ್ದರೂ ಐಷಾರಾಮಿ ಕಾರುಗಳ ಮೂಲಕ ಹೋಗುತ್ತಿರುವುದು ಕಂಡುಬಂದಿದೆ.

ಹೊಸ ವರ್ಷ ಆಚರಣೆ ಮತ್ತು ಇನ್ನಿತರ ಸಂದರ್ಭದಲ್ಲಿ ರೆಸಾರ್ಟ್‌ನವರು ಮತ್ತು ಹೋಂ ಸ್ಟೇ ಮಾಲೀಕರು ಕೋಟ್ಯಂತರ ರೂ. ಸಂಪಾದನೆ ಮಾಡಿದರೂ ರಸ್ತೆಗಳನ್ನು ಮತ್ತು ಸಮೀಪದ ಗ್ರಾಮಗಳಿಗೆ ಮೂಲಸೌಕರ್ಯ ಕಲ್ಪಿಸಲು, ಆರೋಗ್ಯ ಕ್ಷೇತ್ರಕ್ಕೆ ನೆರವು ನೀಡುವ ಮನೋಭಾವನೆ ಇಲ್ಲವಾಗಿದೆ.

ಹೊಸ ವರ್ಷ ಆಚರಣೆ ಪ್ರಯುಕ್ತ ವರ್ಷದಿಂದ ವರ್ಷಕ್ಕೆ ಸಾವಿರಾರು ಜನರು ಎರಡು ಮೂರು ತಿಂಗಳುಗಳ ಮುಂಚಿತವಾಗಿಯೇ ಮುಂಗಡವಾಗಿ ನೋಂದಾಯಿಸಿಕೊಂಡು, ೨-೩ ದಿನ ಮುಂಚಿತ ವಾಗಿಯೇ ರೆಸಾರ್ಟ್ ಮತ್ತು ಹೋಂಸ್ಟೇಗಳಲ್ಲಿ ವಾಸ್ತವ್ಯ ಮಾಡುತ್ತಿದ್ದಾರೆ.

ಇದಕ್ಕೆ ಪೂರಕವಾಗಿ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಜನರ ಮನರಂಜನೆಗೆ ಒಂದೊಂದುರೆಸಾರ್ಟ್‌ನವರೂ ವಿಭಿನ್ನ ರೀತಿಯಲ್ಲಿ ಕಾರ್ಯಕ್ರಮಗಳನ್ನು ರೂಪಿಸಿ ದ್ದಾರೆ.

ಜಿಲ್ಲೆಯಲ್ಲಿ ಪ್ರಮುಖ ಪ್ರವಾಸಿ ತಾಣವಾಗಿ ಗುರುತಿಸಿಕೊಳ್ಳುವ ಎಲ್ಲಾ ರೀತಿಯ ಲಕ್ಷಣಗಳನ್ನು ಹೊಂದಿರುವ ತಾಲ್ಲೂಕಿನಲ್ಲಿ ಸಮರ್ಪಕವಾಗಿ ಸೌಕರ್ಯಗಳನ್ನು ಒದಗಿಸಿ, ಅಭಿವೃದ್ಧಿ ಕೆಲಸಗಳನ್ನು ನಡೆಸಿದರೆ ಖಾಸಗಿಯವರ ಆರ್ಭಟಕ್ಕೆ ಕಡಿವಾಣ ಹಾಕಿ ಸರ್ಕಾರದ ಬೊಕ್ಕಸಕ್ಕೆ ಹಣ ಬರುವಂತೆ ಮಾಡಬಹುದು. ಈ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ನೀಡಲು ಪೂರಕ ವಾತಾವರಣವೂ ನಿರ್ಮಾಣವಾಗಲಿದೆ.

” ತಾಲ್ಲೂಕನ್ನು ಪ್ರವಾಸೋದ್ಯಮ ಕ್ಷೇತ್ರವನ್ನಾಗಿ ರೂಪಿಸಲು ಜಿಲ್ಲೆಯವರೇ ಆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಬೇಕಾಗಿದೆ. ಹಿಂದುಳಿದ ತಾಲ್ಲೂಕಿನ ಅಭಿವೃದ್ಧಿಯ ಜೊತೆಗೆ ಅರಣ್ಯ, ವನ್ಯಜೀವಿಗಳು, ಜಲಾಶಯಗಳನ್ನು ಹೊಂದಿರುವ ಈ ತಾಣವನ್ನು ಇನ್ನಷ್ಟು ಅಭಿವೃದ್ಧಿಪಡಿಸಲು ಇಲ್ಲಿ ರೆಸಾರ್ಟ್‌ಗಳನ್ನು ಪ್ರಾರಂಭಿಸಿ ಸ್ಥಳೀಯರಿಗೆ ಹೆಚ್ಚು ಉದ್ಯೋಗ ಕಲ್ಪಿಸಲಾಗಿದೆ. ದೇಶೀ ಆಹಾರ ಮತ್ತು ಆಟಗಳಿಗೆ ಹೆಚ್ಚು ಒತ್ತು ನೀಡಲಾಗುತ್ತಿದೆ.”

-ಸಂದೇಶ್, ಮಾಲೀಕರು, ಸಂದೇಶ್ ವಾಟರ್ ಎಡ್ಜ್, ಕಬಿನಿ.

ಆಂದೋಲನ ಡೆಸ್ಕ್

Recent Posts

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

3 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

4 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

5 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

7 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

10 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

10 hours ago