Andolana originals

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ

ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು ಎಕರೆ ದ್ರಾಕ್ಷಿ ತೋಟ ಹಾಗೂ ಚೆಂಡುಮಲ್ಲಿಗೆ ತೋಟವನ್ನು ವೀಕ್ಷಣೆ ಮಾಡಲು ಪ್ರವಾಸಿಗರು ಸಾವಿರಾರು ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ.

ತೋಟದಲ್ಲಿ ವಿವಿಧ ಜಾತಿಗಳ ಹಣ್ಣಿನ ಗಿಡಗಳು, ದ್ರಾಕ್ಷಿ ತೋಟ, ಚೆಂಡುಮಲ್ಲಿಗೆ ಇದ್ದು, ಜನರ ಅಕರ್ಷಣೆಯಾಗಿದೆ. ಅಲ್ಲದೆ ಹಸುವಿನ ಫಾರಂ ನಿರ್ಮಾಣ ಮಾಡುತ್ತಿದ್ದು, ಪ್ರವಾಸಿಗರಿಗೆ ಉತ್ತಮ ವಾತಾವರಣ ಒದಗಿಸುವ ಉದ್ದೇಶವಿದೆ ಎಂದು ಫಾರಂ ಮಾಲೀಕ ಅಶ್ರಫ್ ತಿಳಿಸಿದರು.

ಪ್ರತಿನಿತ್ಯ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಫೋಟೋ, ಸೆಲಿಗೆ ಮುಗಿಬಿದ್ದಿದ್ದು ರೀಲ್ಸ್ ಮಾಡಲು ಆಗಮಿಸುತ್ತಿದ್ದಾರೆ. ನೂರಾರು ವಾಹನಗಳಲ್ಲಿ ಜನರು ಬರುವುದರಿಂದ ಪ್ರವೇಶ ಶುಲ್ಕದ ಮೂಲಕವೇ ಸಾವಿರಾರು ರೂ. ಆದಾಯ ಗಳಿಸುತ್ತಿದ್ದಾರೆ.

ಸ್ಥಳೀಯರಿಗೆ ಉದ್ಯೋಗ ಸೃಷ್ಟಿ:  ನಮ್ಮ ತೋಟಕ್ಕೆ ಸಾವಿರಾರು ಪ್ರವಾಸಿಗರು ಬರುತ್ತಿದ್ದು, ತೋಟದ ಕೆಲಸಕ್ಕೆ ಸ್ಥಳೀಯ ಕೆಲಸಗಾರರನ್ನು ಬಳಸಿಕೊಂಡಿದ್ದೇವೆ. ಅವರಿಗೆ ಉದ್ಯೋಗ ಸಿಕ್ಕಿದೆ. ಅಲ್ಲದೆ ಐಸ್ ಕ್ರೀಂ, ಹಣ್ಣಿನ ವ್ಯಾಪಾರ,ಎಳನೀರು ಸೇರಿದಂತೆ ಎಲ್ಲಾ ರೀತಿಯ ಮಾರಾಟ ಮಾಡಲು ಉಚಿತವಾಗಿ ಅವಕಾಶ ನೀಡಿದ್ದು, ಇದರಿಂದ ಸಣ್ಣ ಪ್ರಮಾಣದ ಸ್ಥಳೀಯ ವ್ಯಾಪಾರಸ್ಥರಿಗೆ ಅನುಕೂಲವಾಗಿದೆ. ತೋಟದ ಒಳಗೆ ಪಾರ್ಕಿಂಗ್ ವ್ಯವಸ್ಥೆ ಮಾಡಿದ್ದು ಬರುವ ಪ್ರವಾಸಿಗಳು ತೋಟ ನೋಡಿ ಸಂತಸ ವ್ಯಕ್ತಪಡಿಸುತ್ತಿದ್ದಾರೆ.

ಅಶ್ರಫ್, ಫಾರಂ ಮಾಲೀಕ

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

7 mins ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

10 mins ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

13 mins ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

14 mins ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

18 mins ago

ಎಂಬತ್ತರ ದಶಕದ ಮೈಸೂರಿನ ಜೆನ್ ಝೀಗಳು

ಎಸ್.ಗಂಗಾಧರಯ್ಯ ಕಾಲೇಜು ಹಾಗೂ ಯೂನಿ ವರ್ಸಿಟಿಗಳೇ ಚಳವಳಿಗಳ ತಾಲೀಮು ರಂಗವಾಗಿದ್ದ ಕಾಲವೊಂದಿತ್ತು. ಮೇಷ್ಟ್ರುಗಳೂ ವಿದ್ಯಾರ್ಥಿಗಳನ್ನು ಚಳವಳಿಗಳಿಗೆ ಪ್ರೇರೇಪಿಸುತ್ತಿದ್ದ ಹಾಗೂ ಖುದ್ದು…

23 mins ago