Andolana originals

2 ತಿಂಗಳಿಂದ ಆಡಳಿತಾಧಿಕಾರಿಯಿಲ್ಲದೆ ಜನರ ಅಲೆದಾಟ

ಮಂಜು ಕೋಟೆ

ಕೋಟೆ ಪುರಸಭೆಯಲ್ಲಿ ಇ-ಸ್ವತ್ತು ಸಿಗದೆ ಸಮಸ್ಯೆ; ವಾರ್ಡುಗಳಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಹೈರಾಣಾದ ಜನತೆ

ಎಚ್.ಡಿ.ಕೋಟೆ: ಪುರಸಭೆಯಲ್ಲಿ ಎರಡು ತಿಂಗಳುಗಳಿಂದ ಆಡಳಿತಾಧಿಕಾರಿಗಳು ಇಲ್ಲದೆ ಸಾರ್ವಜನಿಕರ ಮತ್ತು ಅಭಿವೃದ್ಧಿ ಕೆಲಸ ಕಾರ್ಯಗಳು ನಡೆಯದೆ ಜನರು ಪ್ರತಿನಿತ್ಯ ಕೆಲಸ ಕಾರ್ಯಗಳಿಗಾಗಿ ಅಲೆದಾಡು ವಂತಾಗಿದೆ.

ತಾಲ್ಲೂಕಿನ ಕೇಂದ್ರ ಸ್ಥಾನವಾದ ಪಟ್ಟಣದ ಪುರಸಭೆ ಕಚೇರಿಯಲ್ಲಿ ಯಾವುದೇ ಕೆಲಸ ಕಾರ್ಯಗಳು ನಡೆಯದೇ ಇರುವುದರಿಂದ ಜನಸಾಮಾನ್ಯರು ಅಧಿಕಾರಿಗಳ ಕಾರ್ಯವೈಖರಿಗೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಜನಪ್ರತಿನಿಧಿಗಳು ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಜನಸಾಮಾನ್ಯರಿಗೆ ಒಂದು ರೀತಿಯ ಸಮಸ್ಯೆಗಳಿದ್ದರೆ, ಈಗ ಅಧಿಕಾರಿಗಳ ಆಡಳಿತದಲ್ಲಿ ಮತ್ತೊಂದು ರೀತಿಯ ಸಮಸ್ಯೆಗಳು ಎದುರಾಗಿರುವುದು ವಿಪರ್ಯಾಸವಾಗಿದೆ.

ಇಲ್ಲಿನ ಪುರಸಭೆಯ ಸದಸ್ಯರುಗಳ ಅವಧಿ ಮುಗಿದು ೨ ತಿಂಗಳಾ ದರೂ ಹುಣಸೂರಿನ ಎಸಿ ಅವರು ಆಡಳಿತ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಿಲ್ಲ. ಜನಸಾ ಮಾನ್ಯರು ಇ-ಸ್ವತ್ತು ಪಡೆಯಲು ಸಾಧ್ಯವಾಗಿಲ್ಲ. ಸಾರ್ವಜನಿಕರ ಕೆಲಸ ಗಳಿಗೆ ಸಂಬಂಧಪಟ್ಟ ದಾಖಲಾತಿಗಳ ಕಡತಗಳು ಅಽಕಾರಿಗಳ ಚೇಂಬರ್‌ಗಳಲ್ಲಿ ಸಂಗ್ರಹವಾಗಿವೆ. ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಬೀದಿ ದೀಪಗಳ ನಿರ್ವಹಣೆ ಸಮರ್ಪಕವಾಗಿಲ್ಲದೆ ಕಗ್ಗತ್ತಲಿನಿಂದ ಕೂಡಿದೆ.

ಅಲ್ಲದೆ, ಪ್ರತಿ ರಸ್ತೆಯಲ್ಲೂ ಬೀದಿ ನಾಯಿಗಳ ಹಾವಳಿಂದಾಗಿ ಶಾಲಾ ಮಕ್ಕಳು, ವೃದ್ಧರು ನಿವಾಸಿಗಳು ಓಡಾಡಲು ಸಾಧ್ಯವಾಗದಂತಾಗಿದೆ. ಸ್ಟೇಡಿಯಂ ಬಡಾವಣೆಯಲ್ಲಿ ಚರಂಡಿಯಲ್ಲಿ ನೀರು ಹೋಗದೆ ರಸ್ತೆಗಳಲ್ಲಿ ಕೊಳಚೆ ನೀರು ಸಂಗ್ರಹವಾಗಿ ಕೆರೆಯಂತಾಗಿದೆ.

” ತಾಂತ್ರಿಕ ದೋಷದಿಂದ ೨ ತಿಂಗಳಿನಿಂದ ಇ-ಸ್ವತ್ತು ನೀಡಲು ಸಾಧ್ಯವಾಗುತ್ತಿರಲಿಲ್ಲ. ಈಗ ಸರಿಯಾಗುತ್ತಿದೆ. ಆಡಳಿತಾಧಿಕಾರಿಗಳು ಕಳೆದ ವಾರ ಅಧಿಕಾರ ಸ್ವೀಕರಿಸಿದ್ದು, ಶೀಘ್ರದಲ್ಲೇ ಕಚೇರಿಗೆ ಬರುವುದಾಗಿ ತಿಳಿಸಿದ್ದಾರೆ. ಅಮೃತ್ ಯೋಜನೆಯಡಿ ಪಟ್ಟಣದಲ್ಲಿ ಕಾಮಗಾರಿಯನ್ನು ವಾಟರ್ ಬೋರ್ಡ್‌ನವರು ಸಮರ್ಪಕವಾಗಿ ನಿರ್ವಹಿಸಬೇಕಾಗಿದೆ.”

-ಸುರೇಶ್, ಮುಖ್ಯಾಧಿಕಾರಿ, ಪುರಸಭೆ

” ಪಟ್ಟಣದ ಪುರಸಭೆಯ ಆಡಳಿತ, ಕೆಲಸ ಕಾರ್ಯಗಳು ಸಂಪೂರ್ಣವಾಗಿ ಕುಸಿದಿವೆ. ಜನರಿಗೆ ಇ-ಸ್ವತ್ತು ಸಿಗದೆ ಪರದಾಡುತ್ತಿದ್ದಾರೆ. ಅಮೃತ್ ಯೋಜನೆಯಡಿ ಶುದ್ಧ ಕುಡಿಯುವ ನೀರಿನ ೩೨ ಕೋಟಿ ರೂ. ವೆಚ್ಚದ ಕಾಮಗಾರಿಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ನಮ್ಮ ಅವಧಿಯ ೨ ಕೋಟಿ ರೂ. ವೆಚ್ಚದ ಕಾಮಗಾರಿಗೆ ಆರ್ಡರ್ ಕೂಡ ಸಿಕ್ಕಿಲ್ಲ. ಪುರಸಭೆಯಲ್ಲಿ  ಅಧಿಕಾರ ನಡೆಸಿದ ನಮ್ಮಂತಂಹವರಿಗೆ ನೋವು ಉಂಟಾಗುತ್ತಿದೆ.”

-ಶಿವಮ್ಮ ಚಾಕಹಳ್ಳಿ ಕೃಷ್ಣ, ಮಾಜಿ ಅಧ್ಯಕ್ಷರು, ಪುರಸಭೆ 

 

 

ಆಂದೋಲನ ಡೆಸ್ಕ್

Recent Posts

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

2 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

2 hours ago

ಚೀನಾದಲ್ಲಿ ಕಲ್ಲಿದ್ದಲು ಗಣಿ ಸ್ಫೋಟ: 82 ಜನರು ಸಾವು

ಬೀಜಿಂಗ್:‌ ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…

3 hours ago

ನಟ ದರ್ಶನ್‌ ಆತ್ಮಹತ್ಯೆಗೆ ಯತ್ನ ವದಂತಿ: ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್‌ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ…

4 hours ago

ಓದುಗರ ಪತ್ರ: ಕೆಪಿಎಸ್ ಶಾಲೆ ಯೋಜನೆ ಸರ್ಕಾರದ ಜಾಣ ನಡೆ!

ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…

6 hours ago

ಓದುಗರ ಪತ್ರ: ಸರ್ಕಾರಿ ಶಾಲೆ ದತ್ತು ಪಡೆಯುವ ಪ್ರಕ್ರಿಯೆ ಆರಂಭವಾಗಲಿ

ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…

6 hours ago