Andolana originals

2 ತಿಂಗಳಿಂದ ಆಡಳಿತಾಧಿಕಾರಿಯಿಲ್ಲದೆ ಜನರ ಅಲೆದಾಟ

ಮಂಜು ಕೋಟೆ

ಕೋಟೆ ಪುರಸಭೆಯಲ್ಲಿ ಇ-ಸ್ವತ್ತು ಸಿಗದೆ ಸಮಸ್ಯೆ; ವಾರ್ಡುಗಳಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಹೈರಾಣಾದ ಜನತೆ

ಎಚ್.ಡಿ.ಕೋಟೆ: ಪುರಸಭೆಯಲ್ಲಿ ಎರಡು ತಿಂಗಳುಗಳಿಂದ ಆಡಳಿತಾಧಿಕಾರಿಗಳು ಇಲ್ಲದೆ ಸಾರ್ವಜನಿಕರ ಮತ್ತು ಅಭಿವೃದ್ಧಿ ಕೆಲಸ ಕಾರ್ಯಗಳು ನಡೆಯದೆ ಜನರು ಪ್ರತಿನಿತ್ಯ ಕೆಲಸ ಕಾರ್ಯಗಳಿಗಾಗಿ ಅಲೆದಾಡು ವಂತಾಗಿದೆ.

ತಾಲ್ಲೂಕಿನ ಕೇಂದ್ರ ಸ್ಥಾನವಾದ ಪಟ್ಟಣದ ಪುರಸಭೆ ಕಚೇರಿಯಲ್ಲಿ ಯಾವುದೇ ಕೆಲಸ ಕಾರ್ಯಗಳು ನಡೆಯದೇ ಇರುವುದರಿಂದ ಜನಸಾಮಾನ್ಯರು ಅಧಿಕಾರಿಗಳ ಕಾರ್ಯವೈಖರಿಗೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಜನಪ್ರತಿನಿಧಿಗಳು ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಜನಸಾಮಾನ್ಯರಿಗೆ ಒಂದು ರೀತಿಯ ಸಮಸ್ಯೆಗಳಿದ್ದರೆ, ಈಗ ಅಧಿಕಾರಿಗಳ ಆಡಳಿತದಲ್ಲಿ ಮತ್ತೊಂದು ರೀತಿಯ ಸಮಸ್ಯೆಗಳು ಎದುರಾಗಿರುವುದು ವಿಪರ್ಯಾಸವಾಗಿದೆ.

ಇಲ್ಲಿನ ಪುರಸಭೆಯ ಸದಸ್ಯರುಗಳ ಅವಧಿ ಮುಗಿದು ೨ ತಿಂಗಳಾ ದರೂ ಹುಣಸೂರಿನ ಎಸಿ ಅವರು ಆಡಳಿತ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಿಲ್ಲ. ಜನಸಾ ಮಾನ್ಯರು ಇ-ಸ್ವತ್ತು ಪಡೆಯಲು ಸಾಧ್ಯವಾಗಿಲ್ಲ. ಸಾರ್ವಜನಿಕರ ಕೆಲಸ ಗಳಿಗೆ ಸಂಬಂಧಪಟ್ಟ ದಾಖಲಾತಿಗಳ ಕಡತಗಳು ಅಽಕಾರಿಗಳ ಚೇಂಬರ್‌ಗಳಲ್ಲಿ ಸಂಗ್ರಹವಾಗಿವೆ. ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಬೀದಿ ದೀಪಗಳ ನಿರ್ವಹಣೆ ಸಮರ್ಪಕವಾಗಿಲ್ಲದೆ ಕಗ್ಗತ್ತಲಿನಿಂದ ಕೂಡಿದೆ.

ಅಲ್ಲದೆ, ಪ್ರತಿ ರಸ್ತೆಯಲ್ಲೂ ಬೀದಿ ನಾಯಿಗಳ ಹಾವಳಿಂದಾಗಿ ಶಾಲಾ ಮಕ್ಕಳು, ವೃದ್ಧರು ನಿವಾಸಿಗಳು ಓಡಾಡಲು ಸಾಧ್ಯವಾಗದಂತಾಗಿದೆ. ಸ್ಟೇಡಿಯಂ ಬಡಾವಣೆಯಲ್ಲಿ ಚರಂಡಿಯಲ್ಲಿ ನೀರು ಹೋಗದೆ ರಸ್ತೆಗಳಲ್ಲಿ ಕೊಳಚೆ ನೀರು ಸಂಗ್ರಹವಾಗಿ ಕೆರೆಯಂತಾಗಿದೆ.

” ತಾಂತ್ರಿಕ ದೋಷದಿಂದ ೨ ತಿಂಗಳಿನಿಂದ ಇ-ಸ್ವತ್ತು ನೀಡಲು ಸಾಧ್ಯವಾಗುತ್ತಿರಲಿಲ್ಲ. ಈಗ ಸರಿಯಾಗುತ್ತಿದೆ. ಆಡಳಿತಾಧಿಕಾರಿಗಳು ಕಳೆದ ವಾರ ಅಧಿಕಾರ ಸ್ವೀಕರಿಸಿದ್ದು, ಶೀಘ್ರದಲ್ಲೇ ಕಚೇರಿಗೆ ಬರುವುದಾಗಿ ತಿಳಿಸಿದ್ದಾರೆ. ಅಮೃತ್ ಯೋಜನೆಯಡಿ ಪಟ್ಟಣದಲ್ಲಿ ಕಾಮಗಾರಿಯನ್ನು ವಾಟರ್ ಬೋರ್ಡ್‌ನವರು ಸಮರ್ಪಕವಾಗಿ ನಿರ್ವಹಿಸಬೇಕಾಗಿದೆ.”

-ಸುರೇಶ್, ಮುಖ್ಯಾಧಿಕಾರಿ, ಪುರಸಭೆ

” ಪಟ್ಟಣದ ಪುರಸಭೆಯ ಆಡಳಿತ, ಕೆಲಸ ಕಾರ್ಯಗಳು ಸಂಪೂರ್ಣವಾಗಿ ಕುಸಿದಿವೆ. ಜನರಿಗೆ ಇ-ಸ್ವತ್ತು ಸಿಗದೆ ಪರದಾಡುತ್ತಿದ್ದಾರೆ. ಅಮೃತ್ ಯೋಜನೆಯಡಿ ಶುದ್ಧ ಕುಡಿಯುವ ನೀರಿನ ೩೨ ಕೋಟಿ ರೂ. ವೆಚ್ಚದ ಕಾಮಗಾರಿಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ನಮ್ಮ ಅವಧಿಯ ೨ ಕೋಟಿ ರೂ. ವೆಚ್ಚದ ಕಾಮಗಾರಿಗೆ ಆರ್ಡರ್ ಕೂಡ ಸಿಕ್ಕಿಲ್ಲ. ಪುರಸಭೆಯಲ್ಲಿ  ಅಧಿಕಾರ ನಡೆಸಿದ ನಮ್ಮಂತಂಹವರಿಗೆ ನೋವು ಉಂಟಾಗುತ್ತಿದೆ.”

-ಶಿವಮ್ಮ ಚಾಕಹಳ್ಳಿ ಕೃಷ್ಣ, ಮಾಜಿ ಅಧ್ಯಕ್ಷರು, ಪುರಸಭೆ 

 

 

ಆಂದೋಲನ ಡೆಸ್ಕ್

Recent Posts

ಎರಡನೇ ಆಷಾಢ ಶುಕ್ರವಾರದ ಸಂಭ್ರಮ: ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ತಾಯಿ ಚಾಮುಂಡೇಶ್ವರಿ

ಮೈಸೂರು: ಆಷಾಢ ಮಾಸದ ಎರಡನೇ ಶುಕ್ರವಾರವಾದ ಇಂದು ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾಳೆ.…

11 hours ago

ಓದುಗರ ಪತ್ರ: ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ಖಂಡನೀಯ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ದಿಲ್ಲಿಯಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ವೇಳೆ ಕೇಂದ್ರ ಸರ್ಕಾರದ ಕುಮ್ಮಕ್ಕು ಹಾಗೂ ಪೊಲೀಸರ…

14 hours ago

ಓದುಗರ ಪತ್ರ: ಗ್ರಂಥಪಾಲಕರಿಲ್ಲದ ಗ್ರಂಥಾಲಯಗಳು

ಕಳೆದ ೨೫ ವರ್ಷಗಳಿಂದ ರಾಜ್ಯದಲ್ಲಿ ೧೦ ಸಾವಿರ ಗ್ರಂಥಪಾಲಕ ಹುದ್ದೆಗಳನ್ನು ಭರ್ತಿ ಮಾಡದಿರುವುದು ಸರ್ಕಾರದ ಅಕ್ಷಮ್ಯ ನಿರ್ಲಕ್ಷ್ಯ. ೧,೨೦೦ ಸರ್ಕಾರಿ…

14 hours ago

ಓದುಗರ ಪತ್ರ: ಮುಚ್ಚಿರುವ ಪಿಎಚ್‌ಸಿ ಕೇಂದ್ರ ತೆರೆಯುವುದು ಎಂದು?

ಮೈಸೂರಿನ ಕುವೆಂಪು ನಗರದ ಎಂ ಬ್ಲಾಕ್‌ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರವು, ಕಳೆದ ಮೂರು ತಿಂಗಳಿಂದ ಮುಚ್ಚಿದೆ. ಇದಕ್ಕೆ ಕಾರಣ ತಿಳಿದಿಲ್ಲ.…

15 hours ago

ಇದು ನಮಿತ್ ಮಲ್ಹೋತ್ರ ‘ರಾಮಾಯಣ’ ದರ್ಶನ

 ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ  ‘ತಿಣಿಕಿದನು -ಣಿರಾಯ ರಾಮಾಯಣದ ಕವಿಗಳ ಭಾರದಲಿ ತಿಂ ತಿಣೀಯ ರಘುವರ ಚರಿತೆಯಲಿ ಕಾಲಿಡಲು ತೆರಪಿಲ್ಲ’ ಎಂದು…

15 hours ago

ಮಡಿಕೇರಿಯಲ್ಲಿ ಬಳಂಜಿಗಿಲ್ಲ ಬೇಡಿಕೆ

ಪುನೀತ್ ಜಿಲ್ಲೆಯಲ್ಲಿ ಕ್ಷೀಣಿಸಿದ ಮಳೆಯಿಂದ ಬೇಡಿಕೆ ಕುಸಿತ; ಕುಲಕಸುಬಿಗೆ ಹೊಡೆತ  ಮಡಿಕೇರಿ: ಜಿಲ್ಲೆಯಲ್ಲಿ ಧಾರಾಕಾರ ಮಳೆಯ ವಾತಾವರಣ ಇಲ್ಲದ ಕಾರಣ…

15 hours ago