Andolana originals

ಸೆ. 13, 14ರಂದು ಹಿಂದಿ ಹೇರಿಕೆ ವಿರುದ್ಧ ಜನಾಂದೋಲನ

ಮಂಡ್ಯ: ಹಿಂದಿ ದಿವಸ ಹೇರಿಕೆ, ಹಿಂದಿ ದಬ್ಬಾಳಿಕೆಯನ್ನು ಖಂಡಿಸಿ ಕದಂಬ ಸೈನ್ಯ ವತಿಯಿಂದ ಸೆ. 13 ಮತ್ತು 14ರಂದು ಜನಾಂದೋಲನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕದಂಬ ಸೈನ್ಯದ ರಾಜ್ಯಾಧ್ಯಕ್ಷ ಬೇಕ್ರಿ ರಮೇಶ್ ತಿಳಿಸಿದರು.

ನಮಗೆ ತ್ರಿಭಾಷಾ ಸೂತ್ರದ ಬದಲು ದ್ವಿಭಾಷಾ ಸೂತ್ರ ಬೇಕು ಎಂದು ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು. ಅಧಿಕಾರಿಗಳು ಹಿಂದಿ ಪರ ಕೆಲಸ ಮಾಡುತ್ತಿದ್ದಾರೆ ಎಂದು ಖಂಡಿಸಿದ ಅವರು, ಎಡ ಮತ್ತು ಬಲಪಂಥಿಯರು, ರಾಷ್ಟ್ರೀಯ ವಾದಿಗಳು ಹಿಂದಿ ಹೇರಿಕೆಗೆ ಬೆಂಬಲ ನೀಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತಮಿಳುನಾಡು, ಕೇರಳ, ಆಂಧ್ರ ಪ್ರದೇಶ ರಾಜ್ಯಗಳಲ್ಲಿ ಹಿಂದಿ ಹೇರಿಕೆ ಯನ್ನು ವಿರೋಽಸುತ್ತಿದ್ದಾರೆ. ಆದರೆ, ನಮ್ಮಲ್ಲಿ ವಿರೋಽಸುತ್ತಿಲ್ಲ. ಇದರಿಂದ ಕನ್ನಡ ಭಾಷೆಗೆ ದೊಡ್ಡ ಅಪಾಯವಿದೆ ಎಂದು ಎಚ್ಚರಿಸಿದರು. ಕೇಂದ್ರ ಸರ್ಕಾರ, ರೈಲ್ವೆ, ವಿಮಾನ, ಬ್ಯಾಂಕುಗಳು ಸೇರಿದಂತೆ ಎಲ್ಲಾ ಕಡೆ ಹಿಂದಿ ಭಾಷಿಗರಿಗೆ ಶೇ. ೮೦ರಷ್ಟು ಉದ್ಯೋಗ ನೀಡಲಾಗುತ್ತಿದೆ. ಕನ್ನಡ ನಾಡಿನಲ್ಲಿ ಕನ್ನಡಿಗರನ್ನು ವಂಚಿಸುತ್ತಿ ದ್ದರೂ, ರಾಜ್ಯ ಸರ್ಕಾರ ಸಂಪೂರ್ಣವಾಗಿ ನಿರ್ಲಕ್ಷ ವಹಿಸಿದೆ ಎಂದು ದೂರಿದರು.

ಸೆ. 13 ಮತ್ತು 14ರಂದು ವಿಜಯ ಪುರ, ಬಾಗಲಕೋಟೆ ಸೇರಿ ದಂತೆ ವಿವಿಧೆಡೆ ಕದಂಬ ಸೈನ್ಯದ ವತಿಯಿಂದ ಜನಾಂದೋಲನ ಕಾರ್ಯಕ್ರಮ ನಡೆಸುವುದಾಗಿ ತಿಳಿಸಿದರು. ಸಂಘಟನೆಯ ರಾಜ್ಯ ಸಂಚಾಲಕ ಎಸ್. ಶಿವಕುಮಾರ್ ಮಾತನಾಡಿ, ರಾಜಕಾರಣಿಗಳಿಗೆ ಅಽಕಾರ ಮಾತ್ರ ಬೇಕಿದೆ, ಹಿಂದಿ ಹೇರಿಕೆ ವಿಚಾರದಲ್ಲಿ ಏನೂ ಮಾಡುತ್ತಿಲ್ಲ. ಬೇರೆ ಕಡೆಯಿಂದ ರಾಜ್ಯಕ್ಕೆ ಯಾರೇ ಬಂದರೂ ಅವರಿಗೆ ಆಧಾರ್ ಕಾರ್ಡ್, ರೇಷನ್ ಕಾರ್ಡ್ ಮಾಡಿಕೊಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಹೊರ ರಾಜ್ಯದವರಿಗೆ ಯಾವುದೇ ಕಾರಣಕ್ಕೂ ಪಾನ್‌ಕಾರ್ಡ್, ಆಧಾರ್ ಕಾರ್ಡ್, ರೇಷನ್‌ಕಾರ್ಡ್ ನೀಡ ಬಾರದು. ಸರೋಜಿನಿ ಮಹಿಷಿ ವರದಿಯನ್ನು ಯಥಾವತ್ ಜಾರಿಗೆ ತರಬೇಕು ಎಂದು ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಉಮ್ಮಡಹಳ್ಳಿ ನಾಗೇಶ್, ಮಂಡ್ಯ ಜಿಲ್ಲಾ ಸಂಚಾಲಕ ಸಲ್ಮಾನ್, ರಾಮನಗರ ಜಿಲ್ಲಾ ಕಾರ್ಯದರ್ಶಿ ಚಿಕ್ಕವೆಂಕಟಪ್ಪ, ರಾಮಣ್ಣ, ಮಂಡ್ಯ ಕೃಷ್ಣ, ಚಂದ್ರಶೇಖರಯ್ಯ ಉಪಸ್ಥಿತರಿದ್ದರು.

 

andolana

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

6 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

6 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

6 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

6 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

6 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

6 hours ago