Andolana originals

ಭೂ ಪರಿಹಾರಕ್ಕಾಗಿ ಮುಗಿಬಿದ್ದ ಜನ

ಶ್ರೀಧರ್ ಆರ್. ಭಟ್

ನಂಜನಗೂಡು: ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಪ್ರತಿನಿಧಿಸುತ್ತಿರುವ ವರುಣ ಕ್ಷೇತ್ರಕ್ಕೆ ಸೇರುವ ಇಮ್ಮಾವು, ಹುಳಿಮಾವು ಗ್ರಾಮಗಳಲ್ಲಿ 2012ರಲ್ಲಿ ಸರ್ಕಾರ ರೈತರಿಂದ ಭೂಮಿ ವಶಪಡಿಸಿಕೊಂಡು ಕೆಐಎಡಿಬಿಗೆ ನೀಡಿದ ಸಂಬಂಧ ಭೂಮಿ ಕಳೆದು ಕೊಂಡ ಜನರು ಇದೀಗ ಪರಿಹಾರಕ್ಕಾಗಿ ಮುಗಿಬಿದ್ದಿದ್ದಾರೆ.

ಜಮೀನಿನ ಪರಿಹಾರ ಪಡೆದುಕೊಳ್ಳಲು ಈ ಭಾಗದ ಸಹಸ್ರಾರು ಜನರು ಬುಧವಾರ ನಂಜನಗೂಡು ತಾಲ್ಲೂಕು ಕಚೇರಿಗೆ ಆಗಮಿಸಿದ್ದ ಪರಿಣಾಮ ಅರ್ಜಿ ಸ್ವೀಕರಿಸುತ್ತಿದ್ದ ಕಚೇರಿಯ ಸಿಬ್ಬಂದಿ ಹೈರಾಣಾದರು.

2012ರಲ್ಲಿ ಹಿಮ್ಮಾವು ಹಾಗೂ ಹುಳಿಮಾವು ಕೈಗಾರಿಕಾ ಕೇಂದ್ರವನ್ನು ನಿರ್ಮಿಸಲು ರಾಜ್ಯ ಸರ್ಕಾರ ಈ ಪ್ರದೇಶದ ಭೂಮಿಯನ್ನು ವಶಪಡಿಸಿಕೊಂಡು ಆಗಲೇ ಕೆಐಎಡಿಬಿಗೆ ಹಸ್ತಾಂತರಿಸಿತ್ತು. ಅಂದಿನಿಂದ ಇಂದಿನವರೆಗೆ ಸುಮಾರು 13 ವರ್ಷಗಳಿಂದ ಪರಿಹಾರಕ್ಕಾಗಿ ಅಲೆದಾಡಿ ಹೋರಾಟ ಮಾಡಿ ಹೈರಾಣಾದ ಜನ ಈಗ ಪರಿಹಾರಕ್ಕಾಗಿ ಅರ್ಜಿ ಕರೆಯಲಾಗಿರುವ ಮಾಹಿತಿ ತಿಳಿದು ಮಂಗಳವಾರ ನಂಜನಗೂಡು ತಾಲ್ಲೂಕು ಕಚೇರಿಗೆ ದೌಡಾಯಿಸಿದ್ದರು.

300 ಎಕರೆಯಲ್ಲಿ ತಮ್ಮ ತಂದೆ, ತಾತ, ಮುತ್ತಾತ ಉಳುಮೆ ಮಾಡುತ್ತಿದ್ದರು. ಆದ್ದರಿಂದ ಈಗ ಆ ಭೂಮಿಯ ಪರಿಹಾರ ಅವರ ವಂಶಸ್ಥರಾದ ನಮಗೆ ಬರಬೇಕು ಎಂಬ ಅರ್ಜಿಗಳು ಸಲ್ಲಿಕೆಯಾಗಿದ್ದು, ಅರ್ಜಿಗಳ ವಿಲೇವಾರಿ ಕಂದಾಯ ಇಲಾಖೆಯ ಸಿಬ್ಬಂದಿಗೆ ತಲೆನೋವಾಗಿ ಪರಿಣಮಿಸಿದೆ.

ಪರಿಹಾರಕ್ಕಾಗಿ ನೀಡಬೇಕಾದ ಅರ್ಜಿಯೊಂದಿಗೆ ಸಾಗುವಳಿ ಚೀಟಿ, ಆರ್‌ಟಿಸಿ, ಆಧಾರ್, ವಂಶವೃಕ್ಷ , ಬ್ಯಾಂಕ್ ಪಾಸ್‌ಬುಕ್ ಸೇರಿದಂತೆ ವಿವಿಧ ದಾಖಲಾತಿಗಳನ್ನು ಲಗತ್ತಿಸಬೇಕು ಎಂಬ ಷರತ್ತುಗಳನ್ನು ವಿಧಿಸಿದ್ದು, ಒಂದೇ ಜಾಗಕ್ಕಾಗಿ ಅನೇಕರು ಆ ಜಾಗ ತಮ್ಮದು ಎಂದು ಅರ್ಜಿ ನೀಡಿದ್ದೂ ಸೇರಿದಂತೆ ನೀಡಿದ ಅರ್ಜಿಗಳಲ್ಲಿ ಆ ದಾಖಲಾತಿಗಳ ಸಿಂಧುತ್ವವನ್ನು ಪತ್ತೆ ಮಾಡುವುದೇ ಕಂದಾಯ ಅಧಿಕಾರಿಗಳ ಪಾಲಿಗೆ ಶ್ರಮದಾಯಕವಾಗಲಿದೆ.

ಅರ್ಜಿ ಸಲ್ಲಿಸಲು ಬಂದಿದ್ದ ಅನೇಕರಿಗೆ ಕೈಗಾರಿಕೆಗಾಗಿ ಜಮೀನು ವಶಪಡಿಸಿಕೊಂಡಿರುವುದೇ ತಿಳಿದಿಲ್ಲ. ಅರ್ಜಿ ನೀಡಲು ಸರತಿಯಲ್ಲಿ ನಿಂತವರನ್ನು ಪತ್ರಿಕೆ ಮಾತನಾಡಿಸಿದಾಗ ಅವರು ಚಿತ್ರನಗರಿಗೆ ನಮ್ಮ ಜಮೀನು ನೀಡಿದ್ದು ಅದಕ್ಕಾಗಿ ಪರಿಹಾರ ಎಂದರು.

ಅಧಿಕಾರಿಗಳ ಪ್ರಕಾರ ಈ ಪರಿಹಾರ 2012ರಲ್ಲಿ ಕೈಗಾರಿಕೆಗಾಗಿ ವಶಪಡಿಸಿಕೊಂಡಿದ್ದ 300 ಎಕರೆ ಪ್ರದೇಶದ ಸರ್ವೆ ನಂ. 424ರ ಸುತ್ತಮುತ್ತಲಿನ ಪರಿಹಾರ ನೀಡಿಕೆಯಲ್ಲಿ ಆಗ ಕೈತಪ್ಪಿಹೋಗಿದ್ದ ಪ್ರದೇಶಕ್ಕೆ ಮಾತ್ರ ಸೀಮಿತವಾಗಿದೆ.

ಆಂದೋಲನ ಡೆಸ್ಕ್

Recent Posts

ಇರಾನ್‌ ಡ್ರೋನ್‌ ಉತ್ಪಾದನಾ ಘಟಕದ ಮೇಲೆ ಅಮೆರಿಕ ದಾಳಿ : ಚಿತ್ರಗ ಬಿಡುಗಡೆ

ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…

13 mins ago

ಹೊಸ ಜಾಹೀರಾತು ನೀತಿ ಮೂಲಕ ಪತ್ರಿಕೆಗಳ ದಮನಕ್ಕೆ ಮುಂದಾದ ಸರ್ಕಾರ : ಪುನರ್‌ ಪರಿಶೀಲನೆಗೆ ಒತ್ತಾಯ

ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…

28 mins ago

ಚಾ.ನಗರ | ಮಳೆಯಿಂದ ಹಾನಿ, ಶಾಸಕರಿಂದ ಪರಿಶೀಲನೆ

ಚಾಮರಾಜನಗರ : ಇತ್ತೀಚೆಗೆ ಸುರಿದ ಗಾಳಿ ಸಹಿತ ಮಳೆಯಿಂದಾಗಿ ತಾಲ್ಲೂಕು ವ್ಯಾಪ್ತಿಯ ದೊಡ್ಡಮೋಳೆ, ಕಟ್ನವಾಡಿ, ಗ್ರಾಮಗಳಲ್ಲಿ ಮನೆ ಗೋಡೆ ಕುಸಿದಿದ್ದ…

39 mins ago

ಮೈಸೂರು | ನೆಲಕಪ್ಪಳಿಸಿದ ಭಾರಿ ಗಾತ್ರದ ಮರ; ಕಾರು,ಆಟೋ ಜಖಂ

ಮೈಸೂರು : ಬೇರುಗಳಲ್ಲಿ ಸತ್ವ ಕಳೆದುಕೊಂಡು ಭಾರಿಗಾತ್ರದ ಬೇವಿನ ಮರ ಶನಿವಾರ ಧರೆಗುಳಿರದ ಪರಿಣಾಮ, ಒಂದು ಕಾರು, ಆಟೋ, ಬೈಕ್…

50 mins ago

ಇರಾನ್‌ ಅಧ್ಯಕ್ಷರ ಜತೆ ಪ್ರಧಾನಿ ಮೋದಿ ಮಾತುಕತೆ

ಹೊಸದಿಲ್ಲಿ : ಇರಾನ್‌ ಮತ್ತು ಇಸ್ರೇಲ್‌ ನಡುವಿನ ಸಮರ ಮತ್ತಷ್ಟು ತೀವ್ರಗೊಂಡಿದೆ. ಈ ನಡುವೆ ಇರಾನ್‌ ಅಧ್ಯಕ್ಷ ಮಸೂದ್‌ ಪೆಜೆಶ್ಕಿಯನ್‌…

1 hour ago

IPL | ಈ ಬಾರಿಯೂ ಕಪ್‌ ಗೆಲ್ಲಲು ಪರಿಶ್ರಮ ಅಗತ್ಯ ; ಆಟಗಾರರಿಗೆ ಕಿಂಗ್‌ ಕೊಹ್ಲಿ ಸಲಹೆ

ಬೆಂಗಳೂರು : ಇದೇ ಮಾರ್ಚ್ 28ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಐಪಿಎಲ್-2026 ಆರಂಭವಾಗಲಿದ್ದು, ಆರ್‌ಸಿಬಿ ಮೊದಲ ಪಂದ್ಯವನ್ನು ಸನ್​ರೈಸರ್ಸ್…

1 hour ago