Andolana originals

ಭೂ ಪರಿಹಾರಕ್ಕಾಗಿ ಮುಗಿಬಿದ್ದ ಜನ

ಶ್ರೀಧರ್ ಆರ್. ಭಟ್

ನಂಜನಗೂಡು: ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಪ್ರತಿನಿಧಿಸುತ್ತಿರುವ ವರುಣ ಕ್ಷೇತ್ರಕ್ಕೆ ಸೇರುವ ಇಮ್ಮಾವು, ಹುಳಿಮಾವು ಗ್ರಾಮಗಳಲ್ಲಿ 2012ರಲ್ಲಿ ಸರ್ಕಾರ ರೈತರಿಂದ ಭೂಮಿ ವಶಪಡಿಸಿಕೊಂಡು ಕೆಐಎಡಿಬಿಗೆ ನೀಡಿದ ಸಂಬಂಧ ಭೂಮಿ ಕಳೆದು ಕೊಂಡ ಜನರು ಇದೀಗ ಪರಿಹಾರಕ್ಕಾಗಿ ಮುಗಿಬಿದ್ದಿದ್ದಾರೆ.

ಜಮೀನಿನ ಪರಿಹಾರ ಪಡೆದುಕೊಳ್ಳಲು ಈ ಭಾಗದ ಸಹಸ್ರಾರು ಜನರು ಬುಧವಾರ ನಂಜನಗೂಡು ತಾಲ್ಲೂಕು ಕಚೇರಿಗೆ ಆಗಮಿಸಿದ್ದ ಪರಿಣಾಮ ಅರ್ಜಿ ಸ್ವೀಕರಿಸುತ್ತಿದ್ದ ಕಚೇರಿಯ ಸಿಬ್ಬಂದಿ ಹೈರಾಣಾದರು.

2012ರಲ್ಲಿ ಹಿಮ್ಮಾವು ಹಾಗೂ ಹುಳಿಮಾವು ಕೈಗಾರಿಕಾ ಕೇಂದ್ರವನ್ನು ನಿರ್ಮಿಸಲು ರಾಜ್ಯ ಸರ್ಕಾರ ಈ ಪ್ರದೇಶದ ಭೂಮಿಯನ್ನು ವಶಪಡಿಸಿಕೊಂಡು ಆಗಲೇ ಕೆಐಎಡಿಬಿಗೆ ಹಸ್ತಾಂತರಿಸಿತ್ತು. ಅಂದಿನಿಂದ ಇಂದಿನವರೆಗೆ ಸುಮಾರು 13 ವರ್ಷಗಳಿಂದ ಪರಿಹಾರಕ್ಕಾಗಿ ಅಲೆದಾಡಿ ಹೋರಾಟ ಮಾಡಿ ಹೈರಾಣಾದ ಜನ ಈಗ ಪರಿಹಾರಕ್ಕಾಗಿ ಅರ್ಜಿ ಕರೆಯಲಾಗಿರುವ ಮಾಹಿತಿ ತಿಳಿದು ಮಂಗಳವಾರ ನಂಜನಗೂಡು ತಾಲ್ಲೂಕು ಕಚೇರಿಗೆ ದೌಡಾಯಿಸಿದ್ದರು.

300 ಎಕರೆಯಲ್ಲಿ ತಮ್ಮ ತಂದೆ, ತಾತ, ಮುತ್ತಾತ ಉಳುಮೆ ಮಾಡುತ್ತಿದ್ದರು. ಆದ್ದರಿಂದ ಈಗ ಆ ಭೂಮಿಯ ಪರಿಹಾರ ಅವರ ವಂಶಸ್ಥರಾದ ನಮಗೆ ಬರಬೇಕು ಎಂಬ ಅರ್ಜಿಗಳು ಸಲ್ಲಿಕೆಯಾಗಿದ್ದು, ಅರ್ಜಿಗಳ ವಿಲೇವಾರಿ ಕಂದಾಯ ಇಲಾಖೆಯ ಸಿಬ್ಬಂದಿಗೆ ತಲೆನೋವಾಗಿ ಪರಿಣಮಿಸಿದೆ.

ಪರಿಹಾರಕ್ಕಾಗಿ ನೀಡಬೇಕಾದ ಅರ್ಜಿಯೊಂದಿಗೆ ಸಾಗುವಳಿ ಚೀಟಿ, ಆರ್‌ಟಿಸಿ, ಆಧಾರ್, ವಂಶವೃಕ್ಷ , ಬ್ಯಾಂಕ್ ಪಾಸ್‌ಬುಕ್ ಸೇರಿದಂತೆ ವಿವಿಧ ದಾಖಲಾತಿಗಳನ್ನು ಲಗತ್ತಿಸಬೇಕು ಎಂಬ ಷರತ್ತುಗಳನ್ನು ವಿಧಿಸಿದ್ದು, ಒಂದೇ ಜಾಗಕ್ಕಾಗಿ ಅನೇಕರು ಆ ಜಾಗ ತಮ್ಮದು ಎಂದು ಅರ್ಜಿ ನೀಡಿದ್ದೂ ಸೇರಿದಂತೆ ನೀಡಿದ ಅರ್ಜಿಗಳಲ್ಲಿ ಆ ದಾಖಲಾತಿಗಳ ಸಿಂಧುತ್ವವನ್ನು ಪತ್ತೆ ಮಾಡುವುದೇ ಕಂದಾಯ ಅಧಿಕಾರಿಗಳ ಪಾಲಿಗೆ ಶ್ರಮದಾಯಕವಾಗಲಿದೆ.

ಅರ್ಜಿ ಸಲ್ಲಿಸಲು ಬಂದಿದ್ದ ಅನೇಕರಿಗೆ ಕೈಗಾರಿಕೆಗಾಗಿ ಜಮೀನು ವಶಪಡಿಸಿಕೊಂಡಿರುವುದೇ ತಿಳಿದಿಲ್ಲ. ಅರ್ಜಿ ನೀಡಲು ಸರತಿಯಲ್ಲಿ ನಿಂತವರನ್ನು ಪತ್ರಿಕೆ ಮಾತನಾಡಿಸಿದಾಗ ಅವರು ಚಿತ್ರನಗರಿಗೆ ನಮ್ಮ ಜಮೀನು ನೀಡಿದ್ದು ಅದಕ್ಕಾಗಿ ಪರಿಹಾರ ಎಂದರು.

ಅಧಿಕಾರಿಗಳ ಪ್ರಕಾರ ಈ ಪರಿಹಾರ 2012ರಲ್ಲಿ ಕೈಗಾರಿಕೆಗಾಗಿ ವಶಪಡಿಸಿಕೊಂಡಿದ್ದ 300 ಎಕರೆ ಪ್ರದೇಶದ ಸರ್ವೆ ನಂ. 424ರ ಸುತ್ತಮುತ್ತಲಿನ ಪರಿಹಾರ ನೀಡಿಕೆಯಲ್ಲಿ ಆಗ ಕೈತಪ್ಪಿಹೋಗಿದ್ದ ಪ್ರದೇಶಕ್ಕೆ ಮಾತ್ರ ಸೀಮಿತವಾಗಿದೆ.

ಆಂದೋಲನ ಡೆಸ್ಕ್

Recent Posts

ಬಿಡದಿ ರೈತರ ಪರ ನನ್ನ ಹೋರಾಟ ಇಂದಿನಿಂದ ಆರಂಭ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಘೋಷಣೆ

ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…

12 hours ago

ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವು

ನವೀನ್‌ ಕುಮಾರ್:‌ ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…

12 hours ago

ಹನೂರು| ಅಮಾವಾಸ್ಯೆ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದುಬಂದ ಭಕ್ತಸಾಗರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…

13 hours ago

ಚಾ.ನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ: ಸಚಿವ ಕೆ.ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು:‌ ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು‌‌ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…

13 hours ago

ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರೋಧ

ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…

13 hours ago

ಶಾಸಕ ಜಿಟಿಡಿ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೆ ಅಭ್ಯಂತರವಿಲ್ಲ: ಮಾಜಿ ಸಚಿವ ಸಾ.ರಾ.ಮಹೇಶ್‌

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್‌…

14 hours ago