Andolana originals

ದೀಪಾಲಂಕಾರ ಕಣ್ತುಂಬಿಕೊಳ್ಳಲು ಜನ ಕಾತರ

30 ಕಿ.ಮೀ. ಉದ್ದದ ದೀಪಾಲಂಕಾರ, ಜಗಜಗಿಸಲಿರುವ ಪ್ರಮುಖ ವೃತ್ತಗಳು

ಕೆ.ಬಿ.ರಮೇಶನಾಯಕ

ಮೈಸೂರು: ದಸರಾ ಎಂದಾಕ್ಷಣ ಜಗಜಗಿಸುವ ವಿದ್ಯುತ್‌ ದೀಪಗಳ ಸರಮಾಲೆ, ಅಲಂಕೃತಗೊಂಡ ಉದ್ಯಾನಗಳು, ಸಿಂಗರಿಸಿದ ಪಾರಂಪರಿಕ ಕಟ್ಟಡಗಳು, ವೃತ್ತಗಳು ಹಾಗೂ ರಸ್ತೆಗಳು ಲಕ್ಷಾಂತರ ಜನರ ಮನಸ್ಸನ್ನು ಆಕರ್ಷಿಸುವಂತೆ ಮೋಡಿ ಮಾಡಲಿದ್ದು, ಈಗಾಗಲೇ ಉರಿಯುತ್ತಿರುವ ಬಣ್ಣ ಬಣ್ಣದ ದೀಪಾಲಂಕಾರ ಹೊರಗಿನಿಂದ ಬರುವ ಪ್ರವಾಸಿಗರನ್ನು ಆಕರ್ಷಣೆ ಮಾಡಲು ಮೈಸೂರು ಸಜ್ಜಾಗಿದೆ.

ಈ ಬಾರಿ ಪ್ರಮುಖ 100 ವೃತ್ತಗಳಲ್ಲೂ ವಿದ್ಯುತ್ ದೀಪಾಲಂಕಾರ ಮಾಡುತ್ತಿರು ವುದರಿಂದ ಯಾವುದೇ ದಿಕ್ಕಿನಲ್ಲೂ ನೋಡಿ ದರೂ ಬೆಳಕಿನ ಲೋಕ ಕಾಣಿಸುತ್ತಿದೆ. ವಿಶೇಷವಾಗಿ ಬನ್ನಿಮಂಟಪದಲ್ಲಿ ನಾಲ್ಕು ದಿನಗಳ ಕಾಲ ಡೋನ್ ಮೂಲಕ ದೀಪಗಳ ಸೌಂದರ್ಯವನ್ನು ವೀಕ್ಷಿಸಬಹುದಾಗಿದೆ. ಎಲ್‌ಇಡಿ ಬಲ್ಬಗಳನ್ನು ಅಳವಡಿಸಿರುವ 1,500 ಡೋನ್ ಗಳನ್ನು ಬಳಸಿ ಆಕಾಶದಲ್ಲಿ ಅದ್ಭುತ ವಿನ್ಯಾಸಗಳನ್ನು ಮೂಡಿಸುವ ಕಾರ್ಯಕ್ಕೂ ಸಜ್ಜುಗೊಂಡಿದ್ದು, ಈಗಾಗಲೇ ಪ್ರಾತ್ಯಕಿಕೆ ಸಫಲವಾಗಿದೆ.

ಕಳೆದ ವರ್ಷ 120 ಕಿ.ಮೀ. ಹಾಗೂ 91 ವೃತ್ತಗಳಿಗೆ ದೀಪಾಲಂಕಾರ ಮಾಡಲಾಗಿತ್ತು. ಈ ವರ್ಷ ದೀಪಾಲಂಕಾರದಲ್ಲಿ ಕೆಲವು ಬದಲಾವಣೆ ಮಾಡಿದ್ದು, ನಗರದ ಹೊರ ವರ್ತುಲ ರಸ್ತೆಯ 42 ಕಿ.ಮೀ. ರಸ್ತೆಗೂ ದೀಪಾಲಂಕಾರದ ಜತೆಗೆ ಸದ್ಯ ಆಯ್ಕೆ ಮಾಡಿರುವ 100 ವೃತ್ತಗಳನ್ನು ಸೇರ್ಪಡೆ ಮಾಡಲಾಗಿದೆ.

ನಗರದ ಪ್ರಮುಖ ರಸ್ತೆ, ವೃತ್ತ ಹಾಗೂ ಪಾರಂಪರಿಕ ಕಟ್ಟಡಗಳಿಗೆ ದೀಪಾಲಂಕಾರ ಮಾಡುವ ಮೂಲಕ ದಸರಾ ವೈಭಕ್ಕೆ ಮೆರುಗು ನೀಡಿ ಮೈಸೂರನ್ನು ವಿದ್ಯುತ್‌ ದೀಪಗಳಿಂದ ಪ್ರಕಾಶಿಸುವಂತೆ ಮಾಡಲಾಗಿದೆ.

ದೀಪಾಲಂಕೃತಗೊಳ್ಳುವ ವೃತ್ತಗಳು: ವಿಶೇಷವಾಗಿ ರಾಜಶ್ರೀ ಚಾಮರಾಜ ವೃತ್ತ, ಕೃಷ್ಣರಾಜ ವೃತ್ತ, ಜಯಚಾಮರಾಜೇಂದ್ರ ವೃತ್ತ, ಬಸವೇಶ್ವರ ವೃತ್ತ, ಗಾಂಧಿ ವೃತ್ತ, ಅಂಬೇಡ್ಕರ್ ವೃತ್ತ, ಫೌಂಟೆನ್ ವೃತ್ತ, ಮುಡಾ ವೃತ್ತ, ರೈಲ್ವೆ ನಿಲ್ದಾಣ ಸಮೀಪವಿರುವ ಬಾಬು ಜಗಜೀವನ್ ರಾವ್ ವೃತ್ತ ಆಯುರ್ವೇದ ವೃತ್ತ, ಮೈಸೂರು-ಬೆಂಗಳೂರು ರಸ್ತೆಯ ಕಮಾನು ಗೇಟು, ಅಗ್ರಹಾರ ವೃತ್ತ ಸೇರಿದಂತೆ ನಗರದ ಪ್ರಮುಖ ವೃತ್ತಗಳನ್ನು ದೀಪಾಲಂಕೃತಗೊಳಿಸಲಾಗಿದೆ.

ಯಾವ್ಯಾವ ಪ್ರತಿಕೃತಿಗಳು?: ವಿವಿಧೆಡೆ 65 ಪ್ರತಿಕೃತಿಗಳ ಮಾದರಿಗಳನ್ನು ಅಳವಡಿಸಿದ್ದು, ಪ್ರಜಾಪ್ರಭುತ್ವ ಸಾಗಿಬಂದ ಹಾದಿ, ಭುವನೇಶ್ವರಿ, ಸೋಮನಾಥೇಶ್ವರ ದೇವಾ ಲಯ, ಸಂವಿಧಾನದ ಪ್ರಸ್ತಾವನೆ, ಮುಮ್ಮಡಿ ಕೃಷ್ಣರಾಜ ಒಡೆಯರ್, ನಾಲ್ವಡಿ ಕೃಷ್ಣರಾಜ ಒಡೆಯರ್, ಕೆ.ಎಂ.ಮುನಿಗೋಪಾಲರಾಜು, ತಾಂತ್ರಿಕ ನಿರ್ದೇಶಕರು, ಸೆಸ್ ಕೆಂಪನಂಜಮ್ಮಣ್ಣಿ, ಜಯಚಾಮರಾಜೇಂದ್ರ ಒಡೆಯರ್, ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ಪ್ರತಿಕ್ರಿತಿಗಳು ಗಮನ ಸೆಳೆಯಲಿವೆ.

ಸಯ್ಯಾಜಿರಾವ್ ರಸ್ತೆ, ಇರ್ವಿನ್ ರಸ್ತೆ, ನಂಜನಗೂಡು ರಸ್ತೆ, ಹರ್ಷ ರಸ್ತೆ, ಅಶೋಕ ರಸ್ತೆ, ಮಹದೇಶ್ವರ ರಸ್ತೆ, ಹುಣಸೂರು ರಸ್ತೆ, ಜೆ.ಎಲ್.ಬಿ.ರಸ್ತೆ, ಮೈಸೂರು ಬೆಂಗಳೂರು ರಸ್ತೆ, ವಿನೋಬಾ ರಸ್ತೆ, ಧನ್ವಂತರಿ ರಸ್ತೆ, ನಾರಾಯಣಶಾಸ್ತ್ರಿ ರಸ್ತೆ, ಚಾಮರಾಜ ಜೋಡಿ ರಸ್ತೆ, ಬುಲೇವಾರ್ಡ್ ರಸ್ತೆ, ಸಿದ್ದಾರ್ಥನಗರ ರಸ್ತೆ, ಸರ್ಕಾರಿ ಕಚೇರಿಗಳು, ಪಾರಂಪರಿಕ ಕಟ್ಟಡಗಳು, ಸಾರ್ವಜನಿಕರ ಉದ್ಯಾನವನ ಗಳಿಗೂ ದೀಪಾಲಂಕಾರ ಮಾಡಲಾಗುತ್ತಿದೆ. ರಾತ್ರಿ 7 ಗಂಟೆಗೆ ಅರಮನೆಯಲ್ಲಿ ವಿದ್ಯುತ್ ದೀಪ ಬೆಳಗುತ್ತಿದ್ದಂತೆ ಇಡೀ ಕ್ಷಣಾರ್ಧದಲ್ಲಿ ಬೆಳಕಿನ ಮಯವಾಗಲಿದೆ.

ದಸರಾ ಆಚರಣೆ ಮೈಸೂರಿನ ಸಾಂಸ್ಕೃತಿಕ ವೈಭವವಾಗಿದೆ. ಜಂಬೂ ಸವಾರಿಯಂತೆ ದೀಪಾಲಂಕಾರವು ದಸರಾ ಉತ್ಸವದ ಪ್ರಮುಖ ಆಕರ್ಷಣೆಯಾಗಿದೆ. ಈ ಆಚರಣೆಯಿಂದ ಇಂದಿನ ಪೀಳಿಗೆಗೆ ನಮ್ಮ ಪೂರ್ವಜರ ಸಂಸ್ಕೃತಿಯನ್ನು ಬಿಂಬಿಸುವ ಕಾರ್ಯವಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ನಾಗನಹಳ್ಳಿಗೆ ಸಮರ್ಪಕ ಬಸ್ ಸೌಲಭ್ಯ ಕಲ್ಪಿಸಿ

ಮೈಸೂರು ತಾಲ್ಲೂಕಿನ ನಾಗನಹಳ್ಳಿಯಿಂದ ಪ್ರತಿನಿತ್ಯ ಸಾರ್ವಜನಿಕರು ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳು ಮೈಸೂರು ನಗರಕ್ಕೆ ತೆರಳುತ್ತಾರೆ. ಆದರೆ ನಾಗನಹಳ್ಳಿಯಿಂದ ಮೈಸೂರಿಗೆ…

5 hours ago

ಓದುಗರ ಪತ್ರ: ತಾಲ್ಲೂಕು ಕಚೇರಿ ಆವರಣದಲ್ಲಿ ಕಸ ತೆರವುಗೊಳಿಸಿ

ಮೈಸೂರಿನಲ್ಲಿ ಪಾರಂಪರಿಕತೆ ಹಾಗೂ ಆಧುನಿಕತೆಯನ್ನು ಸಮ್ಮಿಳಿಸಿಕೊಂಡು ನಿರ್ಮಿಸಲಾಗಿರುವ ತಾಲ್ಲೂಕು ಕಚೇರಿಯ ಕಟ್ಟಡದ ಆವರಣದಲ್ಲೇ ಕಸ ಸಂಗ್ರಹವಾಗಿದ್ದು, ಕೆಲಸ ಕಾರ್ಯಗಳಿಗಾಗಿ ಪ್ರತಿ…

5 hours ago

ಓದುಗರ ಪತ್ರ: ಜನಪ್ರತಿನಿಧಿಗಳು ಪ್ರಜಾಪ್ರಭುತ್ವದ ಮೌಲ್ಯವನ್ನು ಉಳಿಸಲಿ

ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ ಶಾಸಕ, ಹುಬ್ಬಳ್ಳಿಯ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ…

5 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಶಿವರಾಜಕುಮಾರ್-‘ಆನಂದ್’೪೦ರ ವೇಳೆ-ಆ ದಿನಗಳ ನೆನಪು

ಕಳೆದವಾರ, ಫೆಬ್ರವರಿ ೧೯, ಶಿವರಾಜಕುಮಾರ್ ಅಭಿನಯದ ‘ಆನಂದ್’ ಚಿತ್ರ ಸೆಟ್ಟೇರಿ ೪೦ ವರ್ಷ. ಅಭಿಮಾನಿಗಳು ಈ ನೆನಪಿನ ಸಂಭ್ರಮವನ್ನು ಆಚರಿಸಿದರು.…

5 hours ago

ಸಫಾರಿ ಪುನಾರಂಭಕ್ಕೆ ಸಾರ್ವಜನಿಕರ ಮಿಶ್ರ ಪ್ರತಿಕ್ರಿಯೆ

ಮಾನವ-ವನ್ಯಜೀವಿ ಸಂಘರ್ಷ ತಾರಕಕ್ಕೇರಿದ ಹಿನ್ನೆಲೆಯಲ್ಲಿ ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಕಳೆದ ನವೆಂಬರ್ ತಿಂಗಳಲ್ಲಿ ತಾತ್ಕಾಲಿಕವಾಗಿ…

5 hours ago

ಕುಶಾಲನಗರ: ಕೆಎಸ್‌ಆರ್‌ಟಿಸಿ ಡಿಪೋ ಕಾಮಗಾರಿ ಚುರುಕು

ಪುನೀತ್ ಮಡಿಕೇರಿ ಒಟ್ಟು ೮ ಕೋಟಿ ರೂ. ಮೊತ್ತದ ಯೋಜನೆ; ಸಾರಿಗೆ ಸಮಸ್ಯೆಗಳಿಗೆ ಸಿಗಲಿದೆ ಪರಿಹಾರ  ಮಡಿಕೇರಿ: ಕುಶಾಲನಗರದ ಬಹು…

5 hours ago