Andolana originals

ಹವಾಮಾನ ಏರುಪೇರಿನಿಂದಾಗಿ ಕಾಳುಮೆಣಸಿಗೂ ಕಂಟಕ

ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ

ನವೀನ್‌ ಡಿಸೋಜ
ಮಡಿಕೇರಿ: ಈ ಬಾರಿಯ ದೀರ್ಘಕಾಲದ ಮಳೆ ಮತ್ತು ನಿರಂತರ ಹವಾಮಾನ ಏರುಪೇರಿನಿಂದಾಗಿ ಕಾಫಿ ಮಾತ್ರವಲ್ಲದೆ ಕೊಡಗು ಜಿಲ್ಲೆಯ ಮತ್ತೊಂದು ಪ್ರಮುಖ ತೋಟಗಾರಿಕಾ ಬೆಳೆಯಾದ ಕಾಳುಮೆಣಸಿಗೂ ಸಮಸ್ಯೆಯಾಗಿದೆ. ಉತ್ತರ ಕೊಡಗು ಭಾಗದಲ್ಲಿ ಬೆಳೆ ನಷ್ಟ ಸಂಭವಿಸಿದ್ದು, ಒಟ್ಟಾರೆ ಉತ್ಪಾದನೆಯ ಅಂದಾಜು ಶೇ.೩೦ರಷ್ಟು ಉತ್ಪಾದನೆ ಕುಸಿದಿದೆ ಎಂದು ಅಂದಾಜಿಸಲಾಗಿದೆ.

ವಿರಾಜಪೇಟೆ, ಪಾಲಿಬೆಟ್ಟ ದಕ್ಷಿಣ ಭಾಗದಲ್ಲಿ ಕಾಳುಮೆಣಸು ಬೆಳೆಗೆ ದೊಡ್ಡ ಮಟ್ಟದಲ್ಲಿ ಸಮಸ್ಯೆಯಾಗಿಲ್ಲ. ಆದರೆ, ಉತ್ತರದ ಸೋಮವಾರಪೇಟೆ, ಶನಿವಾರಸಂತೆ, ಶಾಂತಹಳ್ಳಿ, ಸೂರ್ಲಬ್ಬಿ, ಸುಂಟಿಕೊಪ್ಪ ಮುಂತಾದ ಭಾಗಗಳು ಹೆಚ್ಚು ಕಾಳುಮೆಣಸು ಬೆಳೆಯುವ ಪ್ರದೇಶಗಳಾಗಿದ್ದು, ಪ್ರತಿಕೂಲ ಹವಾಮಾನದಿಂದ ಈ ಭಾಗದ ಬೆಳೆಗಾರರಿಗೆ ನಷ್ಟ ಉಂಟಾಗಿದೆ.

ಮೇ ತಿಂಗಳಿನಿಂದಲೇ ಮಳೆ ಆರಂಭವಾದ ಹಿನ್ನೆಲೆಯಲ್ಲಿ ಕೆಲವೆಡೆ ಕಾಳುಮೆಣಸಿನ ಇಡೀ ಬಳ್ಳಿ ಕೊಳೆರೋಗಕ್ಕೆ ತುತ್ತಾಗಿ ನಾಶವಾಗಿದ್ದರೇ ಕೆಲವೆಡೆ ಮೆಣಸಿನ ಚಿಗುರು ಗೊನೆ ಕೊಳೆತು ಉದುರುತ್ತಿದೆ. ಈ ಬಾರಿಯ ಇಳುವರಿ ಕುಸಿಯಲು ಇದು ಕೂಡ ಪ್ರಮುಖ ಕಾರಣವಾಗಿದೆ. ಜಿಲ್ಲೆಯಲ್ಲಿ ಈ ಬಾರಿ ಕಾಳುಮೆಣಸು ಉತ್ಪಾದನೆಯಲ್ಲಿ ಶೇ. ೩೦ರಷ್ಟು ಕುಂಠಿತವಾಗಿದೆ ಎಂದು ಐಸಿಎಆರ್‌ನ ಭಾರತೀಯ ಸಂಬಾರ ಬೆಳೆಗಳ ಸಂಶೋಧನಾ ಸಂಸ್ಥೆಯ ಮುಖ್ಯಸ್ಥ ಡಾ. ಎಸ್. ಜೆ ಅಂಕೇಗೌಡ ತಿಳಿಸಿದ್ದಾರೆ.

ಇದನ್ನೂ ಓದಿ:-ಹವಾಮಾನ ಏರುಪೇರಿನಿಂದಾಗಿ ಕಾಳುಮೆಣಸಿಗೂ ಕಂಟಕ

ಜಿಲ್ಲೆಯ ಎಲ್ಲೆಡೆ ಕಾಫಿ ತೋಟಗಳಲ್ಲಿ ಕಾಳುಮೆಣಸು ಬೆಳೆಯನ್ನು ಬೆಳೆಯಲಾಗುತ್ತಿದ್ದು, ಒಟ್ಟು ೫೯ ಸಾವಿರದ ೯೬೨ ಹೆಕ್ಟೇರ್ ಪ್ರದೇಶದಲ್ಲಿ ಕಾಳು ಮೆಣಸಿನ ಬೆಳೆಯಿದೆ. ಈ ಪೈಕಿ ವಾರ್ಷಿಕವಾಗಿ ಸರಾಸರಿ ೨೪,೬೨೪ ಮೆಟ್ರಿಕ್‌ಟನ್ ಮೆಣಸಿನ ಉತ್ಪಾದನೆ ಮಾಡಲಾಗುತ್ತಿದೆ. ಈ ಬಾರಿ ಶೇ. ೭೦ ಅಥವಾ ಅದಕ್ಕಿಂತ ಕಡಿಮೆ ಪ್ರಮಾಣದ ಉತ್ಪಾದನೆಯಾಗಲಿದೆ ಎಂದು ಅಂದಾಜಿಸಲಾಗಿದೆ.

ತಡವಾಗಿ ಮರ ಸವರುವಿಕೆ (ನೆರಳು ತೆಗೆಯುವುದು) ಮಾಡಿದವರಿಗೆ ಹೆಚ್ಚು ನಷ್ಟ ಸಂಭವಿಸಿದೆ. ಕೆಲವೆಡೆ ಬಳ್ಳಿಯೇ ಸಂಪೂರ್ಣವಾಗಿ ನಾಶವಾಗಿದ್ದು, ಹೊಸದಾಗಿ ನಾಟಿ ಮಾಡುವ ಪರಿಸ್ಥಿತಿ ಎದುರಾಗಿದೆ ಎಂದು ಡಾ. ಅಂಕೇಗೌಡ ಆತಂಕ ವ್ಯಕ್ತಪಡಿಸಿದ್ದಾರೆ.

ಕಾಫಿ ತೋಟಗಳಲ್ಲಿ ನೆರಳು ತೆಗೆಯುವ ಸಮಯ ಕಾಳು ಮೆಣಸು ಉತ್ಪಾದನೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಫೆಬ್ರವರಿ, ಮಾರ್ಚ್ ತಿಂಗಳಲ್ಲಿಯೇ ನೆರಳು ತೆಗೆದು ನೀರಾವರಿ ವ್ಯವಸ್ಥೆ ಮಾಡಿಕೊಂಡವರಿಗೆ ಈ ಬಾರಿ ದೊಡ್ಡ ಮಟ್ಟದ ನಷ್ಟ ಸಂಭವಿಸಿಲ್ಲ. ಆದರೆ ಏಪ್ರಿಲ್ ತಿಂಗಳಲ್ಲಿ ನೆರಳು ತೆಗೆದು ಬಿಸಿಲಿಗಾಗಿ ಕಾದವರಿಗೆ ಮೇ ತಿಂಗಳಲ್ಲಿ ಬಿಸಿಲಿಲ್ಲದಾದ ಪರಿಣಾಮ ಹೆಚ್ಚು ಸಮಸ್ಯೆ ಉಂಟಾಗಿದೆ.

ಕಾಯಿಕಟ್ಟುವ ಮೊದಲೇ ಮೆಣಸಿನ ದಾರಗಳು ಉದುರಿಹೋಗಿದ್ದು, ಈಗ ಮತ್ತೆ ಹೊಸ ದಾರಗಳು ಕಾಣಿಸಿಕೊಂಡಿವೆ. ಇಂತಹ ಕಡೆ ಈ ಸಾಲಿನಲ್ಲಿ ಬೆಳೆ ಇಲ್ಲವಾಗಿದೆ. ಹೀಗಾಗಿ ಕೆಲವು ಬೆಳೆಗಾರರು ಗಿಡಗಳನ್ನು ಸಂಪೂರ್ಣವಾಗಿ ತೆಗೆದು ಅಲ್ಪಾವಽಯ ತಳಿಗಳನ್ನು ಬೆಳೆಯುವ ಚಿಂತನೆಯಲ್ಲಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಟ್ಯಾಂಕರ್ ಮೇಲೆ ದಾಳಿ

ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್‌ಬೋಟ್‌ಗಳಿಂದ…

10 mins ago

ಮತ್ತೆ ಹೊರ್ಮುಜ್‌ ಬಂದ್‌ ಮಾಡಿದ ಇರಾನ್‌

ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್‌ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್‌, ತನ್ನ ನಿರ್ಧಾರವನ್ನು…

25 mins ago

ಚಿರತೆಯಿಂದ ಅತ್ತೆ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ : ಸಚಿವೆ ಹೆಬ್ಬಾಳ್ಕರ್‌ ಭರವಸೆ

ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…

1 hour ago

ದಕ್ಷಿಣ ಆಫ್ರಿಕಾದಿಂದ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದ ನಾಲ್ಕು ಚೀತಾ

ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…

2 hours ago

ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧಿಸಲ್ಲ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…

4 hours ago

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ರಾಬರ್ಟ್‌ ವಾದ್ರಾ

ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…

6 hours ago