Andolana originals

ಪೆರಿಫೆರಲ್ ರಸ್ತೆ: ಭೂ ಸ್ವಾಧೀನಕ್ಕೆ ಎಂಡಿಎ ಸಿದ್ಧತೆ

ಕೆ.ಬಿ.ರಮೇಶ ನಾಯಕ

ಮೈಸೂರು: ಮುಂದಿನ ೩೦-೫೦ ವರ್ಷಗಳ ದೂರದೃಷ್ಟಿ ಇಟ್ಟುಕೊಂಡು ಮೈಸೂರು ಹೊರವಲಯದಲ್ಲಿ ೧೦೫.೩೧ ಕಿ. ಮೀ. ಪೆರಿಫೆರಲ್ ರಸ್ತೆ ನಿರ್ಮಾಣ ಮಾಡಲು ನಿರ್ಧರಿಸಿರುವ ಹಿನ್ನೆಲೆಯಲ್ಲಿ ಇದಕ್ಕೆ ಅಗತ್ಯವಾದ ಭೂ ಸ್ವಾಧೀನಕ್ಕೆ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಎಂಡಿಎ) ಮುಂದಾಗಿದೆ.

ಮೈಸೂರು ಮಹಾನಗರದಲ್ಲಿ ವಾಹನಗಳ ಸಂಚಾರ ದಟ್ಟಣೆಯ ಒತ್ತಡವನ್ನು ಕಡಿಮೆಗೊಳಿಸಲು ಮತ್ತು ಮೈಸೂರು ನಗರ ಸಂಪರ್ಕಿಸುವ ರಸ್ತೆಯನ್ನು ಬಲಪಡಿಸಲು ಮತ್ತೊಂದು ಹೊರವರ್ತುಲ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ. ಎಂಡಿಎ, ೧೦೫ ಕಿ.ಮೀ. ರಸ್ತೆ ನಿರ್ಮಾಣಕ್ಕಾಗಿ ೨೦೦ ಅಡಿ ಅಗಲ ಭೂಸ್ವಾಧೀನ ಮಾಡಿ ಸಾರ್ವಜ ನಿಕರಿಗೆ ಉಪಯುಕ್ತತೆಗಳು, ಲಾಜಿಸ್ಟಿಕ್ ಹಬ್, ಆದಾಯ ತರುವ ಯೋಜನೆಗಳನ್ನು ಕಾರ್ಯ ಗತ ಗೊಳಿಸಲು ಉದ್ದೇಶಿಸಿದೆ. ಗ್ರೇಟರ್ ಮೈಸೂರು ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಮೈಸೂರಿನಲ್ಲಿ ನಡೆದ ಸಭೆ ಯಲ್ಲಿ ಪೆರಿಫೆರಲ್ ರಿಂಗ್ ರಸ್ತೆಯಲ್ಲಿ ನಡೆಸಲು ಉದ್ದೇಶಿ ಸಿರುವ ವಾಣಿಜ್ಯ ಚಟುವಟಿಕೆ ಗಳನ್ನು ಕುರಿತು ವಿವರಣೆ ನೀಡಲಾಗಿದೆ. ಈ ಬಗ್ಗೆ ವಿಸ್ತೃತವಾದ ಡಿಪಿಆರ್ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಪ್ರಸ್ತಾವಿತ ರಸ್ತೆ ೪೫ ಮೀ. ಅಗಲವಿದ್ದು, ಆರು ಪಥಗಳು (೩+೩ ವಾಹನಗಳಿಗೆ) ಮತ್ತು ಎರಡು ಸರ್ವೀಸ್ (೨+೨) ರಸ್ತೆಗಳನ್ನು ಒಳಗೊಂಡಿದೆ. ಪ್ರಸ್ತುತ ಅಸ್ತಿತ್ವದಲ್ಲಿರುವ ಹೊರ ವರ್ತುಲ ರಸ್ತೆಯಲ್ಲಿನ ದಟ್ಟಣೆಯನ್ನು ಕಡಿಮೆ ಮಾಡಲು ಮತ್ತು ಮೈಸೂರು ಯೋಜಿತ ನಗರ ವಿಸ್ತರಣೆಯನ್ನು ಬೆಂಬಲಿಸಲು ಯೋಜನೆಯನ್ನು ವಿನ್ಯಾಸಗೊಳಿಸಲಾಗಿದೆ.

ಎಂಡಿಎ ಪೆರಿಫೆರಲ್ ರಸ್ತೆಯ ಎರಡೂ ಬದಿಗಳಲ್ಲಿ ಸರ್ವೀಸ್ ರಸ್ತೆಗೆ ಒಟ್ಟು ೧೦೫.೩೧ ಕಿ.ಮೀ. ಉದ್ದಕ್ಕೂ ೨೦೦ ಅಡಿ ಜಾಗವನ್ನು ಸ್ವಾಧೀನಪಡಿಸಿಕೊಳ್ಳಲಿದೆ. ಅಂದರೆ ಸುಮಾರು ೬,೮೨,೫೦,೦೦೦ ಚದರ ಅಡಿ ಭೂಮಿ ಸರ್ಕಾರಿ ಆಸ್ತಿಯಾಗಿ ಉಳಿಯುತ್ತದೆ.

ಟ್ರಕ್ ಟರ್ಮಿನಲ್‌ಗಳು, ಗೋದಾಮು, ಕಮರ್ಷಿಯಲ್ ಶೆಡ್‌ಗಳು, ಲಾಜಿಸ್ಟಿಕ್ಸ್ ಹಬ್‌ಗಳು, ಸೇವಾ ಕೇಂದ್ರಗಳು, ಹಸಿರು ವಲಯಗಳು, ನೀರಿನ ಪೈಪ್ ಲೈನ್‌ಗಳು, ವಿದ್ಯುತ್ ಉಪಕೇಂದ್ರಗಳು, ತ್ಯಾಜ್ಯ ನಿರ್ವಹಣಾ ಸೌಲಭ್ಯಗಳು ಮತ್ತು ಇತರ ಸಾರ್ವಜನಿಕ ಉಪಯುಕ್ತತೆಗಳನ್ನು ಸ್ಥಾಪಿಸಲು ಎಂಡಿಎ ಬಳಸಿಕೊಳ್ಳಲು ಉದ್ದೇಶಿಸಲಾಗಿದೆ. ಈ ಸೌಲಭ್ಯಗಳಿಂದ ಬರುವ ಆದಾಯವು ಖಾಸಗಿ ಡೆವಲಪರ್‌ಗಳಿಗಿಂತ ನೇರವಾಗಿ ಎಂಡಿಎಗೆ ಸೇರುತ್ತದೆ. ಎಂಡಿಎ ಈ ಭೂಮಿಯ ಕೆಲವು ಭಾಗಗಳನ್ನು ಮಾರಾಟ ಮಾಡಲು ಆಯ್ಕೆ ಮಾಡಿಕೊಂಡರೂ, ಅದು ಲಕ್ಷಾಂತರ ಕೋಟಿ ರೂ. ಗಳಿಸುತ್ತದೆ ಎಂದು ಅಧಿಕಾರಿಗಳು ಹೇಳುತ್ತಾರೆ.

ಈಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸಿದ ಗ್ರೇಟರ್ ಮೈಸೂರು ಯೋಜನೆ ಕುರಿತ ಸಭೆಯಲ್ಲಿ ಉದ್ದೇಶಿತ ಪೆರಿಫೆರಲ್ ರಸ್ತೆಯ ಬಗ್ಗೆ ಮಾಹಿತಿ ನೀಡಲಾಗಿದೆ ಎಂದು ಮೂಲಗಳು ಹೇಳಿವೆ. ಆದಾಯ ಗಳಿಸುವ ಮಾದರಿಯನ್ನು ಸಿಎಂ ಮೆಚ್ಚಿಕೊಂಡಿರುವ ಜತೆಗೆ, ಹಾಲಿ ಯೋಜನೆ ಕಾರ್ಯಗತಗೊಳಿಸಲು ಹೊರಟಿರುವ ಎಂಡಿಎ ಮುಂದುವರಿಯಲು ಹಸಿರು ನಿಶಾನೆ ತೋರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಿಎಂ ಸಿದ್ದರಾಮಯ್ಯ ಅವರ ಅನುಮೋದನೆಯ ನಂತರ, ಡಿಪಿಆರ್ ಸಲಹೆಗಾರರಿಗೆ ಮುಖ್ಯ ರಸ್ತೆ ಮತ್ತು ಸರ್ವೀಸ್ ರಸ್ತೆಗೆ ಮಾತ್ರವಲ್ಲದೆ ೨೦೦ ಅಡಿ ಬಫರ್ ವಲಯಗಳು ಮತ್ತು ಎರಡೂ ಕಡೆ ಭೂಮಿಯನ್ನು ಗುರುತಿಸಿ, ಮೀಸಲಿಡಲು ಸೂಚಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

” ಮೈಸೂರಿನ ಭವಿಷ್ಯದ ದೃಷ್ಟಿಯಿಂದ ಪೆರಿಫೆರಲ್ ರಸ್ತೆ ನಿರ್ಮಾಣಕ್ಕೆ ಡಿಪಿಆರ್ ತಯಾರಿಸಲು ಕರೆದಿದ್ದ ಟೆಂಡರ್‌ನಲ್ಲಿ ನಾಲ್ಕು ಸಂಸ್ಥೆಗಳು ಭಾಗಿಯಾಗಿವೆ. ಈಗ ಒಂದನ್ನು ಆಯ್ಕೆ ಮಾಡಿಕೊಂಡು ವಿಸ್ತೃತ ಯೋಜನಾ ವರದಿಯನ್ನು ತಯಾರಿಸಲು ಹೇಳಲಾಗುವುದು.”

-ಕೆ.ಆರ್.ರಕ್ಷಿತ್, ಆಯುಕ್ತ, ಎಂಡಿಎ

ಆಂದೋಲನ ಡೆಸ್ಕ್

Recent Posts

ಮೈಸೂರಿನ 2 ಹೋಟೆಲ್‌, ಚಾ.ನಗರ ಕೋರ್ಟ್‌ಗೆ ಬಾಂಬ್‌ ಬೆದರಿಕೆ ; ಒಬ್ಬ ವ್ಯಕ್ತಿಯಿಂದಲೇ ಇ-ಮೇಲ್

ಮೈಸೂರು‌ : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್‌ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…

8 hours ago

ಸರಗೂರು | ಮತ್ತೆ ಹುಲಿ ದಾಳಿ ; ಬೋನು ಅಳವಡಿಸಲು ತೆರಳಿದ್ದ ಅರಣ್ಯ ಗಾರ್ಡ್‌ ಮೇಲೆ ಎರಗಿದ ಹುಲಿ

ಸರಗೂರು : ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ದಾಳಿ ಆತಂಕ ಮುಂದುವರಿದಿದ್ದು, ಹುಲಿ ಸೆರೆಹಿಡಿಯಲು ತೆರಳಿದ್ದ ಎಸ್‌ಟಿಎಫ್ ಸಿಬ್ಬಂದಿಯ ಮೇಲೆಯೇ…

9 hours ago

ಎಸ್‌ಐಆರ್‌ | ರಾಜ್ಯಾದ್ಯಂತ ಏಕಕಾಲಕ್ಕೆ ಆರಂಭ ; ನಾಳೆಯಿಂದ ಮನೆ ಮನೆಗೆ ಭೇಟಿ

ಬೆಂಗಳೂರು : ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವು ಮಂಗಳವಾರ (ಜೂ.30)…

9 hours ago

ಮಾದಪ್ಪನ ದರ್ಶನ ಮುಗಿಸಿ ಬರುವಾಗ ಬಸ್‌ ಪಲ್ಟಿ : ಇಬ್ಬರು ಸಾವು ; ಹಲವರು ಗಂಭೀರ

ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…

10 hours ago

ಮೈಸೂರು | ವ್ಯಕ್ತಿ ಅನುಮಾನಾಸ್ಪದ ಸಾವು ; ಹೆಂಡತಿಯಿಂದಲೇ ಕೊಲೆಯ ಶಂಕೆ

ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…

13 hours ago

ಬಿಜೆಪಿ ವಕ್ತಾರ ಎಂ.ಜಿ.ಮಹೇಶ್‌ 6 ವರ್ಷ ಪಕ್ಷದಿಂದ ಉಚ್ಛಾಟನೆ

ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…

14 hours ago