Andolana originals

ಮಹದೇಶ್ವರ ಬೆಟ್ಟದತ್ತ ಹರಕೆ ಹೊತ್ತ ಭಕ್ತರ ಪಾದಯಾತ್ರೆ

ಮಹಾಶಿವರಾತ್ರಿ ಪ್ರಯುಕ್ತ ಪ್ರಾಧಿಕಾರದಿಂದ ಪಾದಯಾತ್ರಿಕಗಳಿಗೆ ಸಕಲ ವ್ಯವಸ್ಥೆ; ಅನೇಕರಿಂದ ಅನ್ನಸಂತರ್ಪಣೆ
ಮಹಾದೇಶ್ ಎಂ. ಗೌಡ

ಹನೂರು: ಮಲೆ ಮಹದೇಶ್ವರ ಬೆಟ್ಟದಲ್ಲಿ ಐದು ದಿನಗಳ ಕಾಲ ನಡೆಯಲಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಪ್ರಯುಕ್ತ ಮ. ಬೆಟ್ಟಕ್ಕೆ ಸಾವಿರಾರು ಜನರು ಪಾದಯಾತ್ರೆಯ ಮೂಲಕ ಆಗಮಿಸುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಪಾದಯಾತ್ರೆ ಮೂಲಕ ಬರುವ ಭಕ್ತಾದಿಗಳಿಗೆ ಎಲ್ಲಾ ರೀತಿಯ ಸೌಲಭ್ಯ ಗಳನ್ನು ಒದಗಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ೩ ದಿನಗಳಿಂದ ಸಾವಿರಾರು ಸಂಖ್ಯೆಯಲ್ಲಿ ಕನಕಪುರ, ರಾಮನಗರ, ಬಿಡದಿ, ಚನ್ನಪಟ್ಟಣ ಗ್ರಾಮದವರು ಕಾವೇರಿ ನದಿ ಸಂಗಮದ ಮೂಲಕ ಆಗಮಿಸುತ್ತಿದ್ದಾರೆ. ಇದಲ್ಲದೆ ಮಂಡ್ಯ ಜಿಲ್ಲೆಯ ವಿವಿಧ ಗ್ರಾಮಗಳಿಂದ ಸಾವಿರಾರು ಸಂಖ್ಯೆಯಲ್ಲಿ ಪಾದಯಾತ್ರೆಯ ಮೂಲಕ ಬರುತ್ತಿದ್ದಾರೆ.

ಕಳೆದ ೨ ವರ್ಷಗಳಿಗೆ ಹೋಲಿಕೆ ಮಾಡಿದರೆ ಈ ವರ್ಷ ಭಕ್ತಾದಿಗಳ ಸಂಖ್ಯೆಯಲ್ಲಿ ಗಣನೀಯವಾಗಿ ಏರಿಕೆಯಾ ಗುವ ನಿರೀಕ್ಷೆ ಇದೆ. ಹರಕೆ ಹೊತ್ತ ಭಕ್ತಾದಿಗಳು ಹಗಲು- ರಾತ್ರಿ, ಚಳಿ- ಬಿಸಿಲು ಲೆಕ್ಕಿಸದೆ ಶ್ರೀ ಕ್ಷೇತ್ರದತ್ತ ಪಾದಯಾತ್ರೆ ಬೆಳೆಸಿದ್ದಾರೆ. ಕಾವೇರಿ ನದಿ ದಾಟಿ ಬರುವ ಪಾದಯಾತ್ರಿಕರಿಗೆ ತಾಲ್ಲೂಕಿನ ಶಾಗ್ಯ ಗ್ರಾಮದ ಬಳಿ ಗ್ರಾಮಸ್ಥರು ಸರದಿಯ ರೂಪದಲ್ಲಿ ಹಣವನ್ನು ಸಂಗ್ರಹಿಸಿ ಅನ್ನಸಂತರ್ಪಣೆ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಈಗಾಗಲೇ ಆಹಾರ ಪದಾರ್ಥಗಳು ಸಿದ್ಧವಾಗಿದ್ದು, ಪಾದಯಾತ್ರೆಯಲ್ಲಿ ಬರುವ ಭಕ್ತಾದಿಗಳಿಗೆ ನೆರಳಿನ ವ್ಯವಸ್ಥೆ ಮಾಡಿದ್ದಾರೆ.

೨೦ ಟ್ಯಾಂಕ್ ಅಳವಡಿಕೆ: ಬೆಟ್ಟಕ್ಕೆ ಬರುವ ಪಾದ ಯಾತ್ರಿಕರ ಅನುಕೂಲಕ್ಕಾಗಿ ತಾಳಬೆಟ್ಟದಿಂದ ಮಲೆ ಮ. ಬೆಟ್ಟದವರೆಗೆ ಸುಮಾರು ೨೦ ಕಡೆ ಒಂದು ಸಾವಿರ ಲೀಟರ್ ಸಾಮರ್ಥ್ಯದ ಮಿನಿ ಟ್ಯಾಂಕ್‌ಗಳನ್ನು ಇಡ ಲಾಗಿದ್ದು ಸಮ ರ್ಪಕವಾಗಿ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ತಾಳಬೆಟ್ಟದಲ್ಲಿ ತಾತ್ಕಾಲಿಕ ಪ್ರಾಥಮಿಕ ಆರೋಗ್ಯ ಕೇಂದ್ರ ತೆರೆಯಲಾಗಿದೆ.ಐವತ್ತಕ್ಕೂ ಹೆಚ್ಚು ಮೊಬೈಲ್ ಶೌಚಾಲಯಗಳ ವ್ಯವಸ್ಥೆ ಮಾಡಲಾಗಿದೆ.

ಪಾದಯಾತ್ರೆಯ ಮೂಲಕ ಶ್ರೀ ಕ್ಷೇತ್ರಕ್ಕೆ ಬರುತ್ತಿರುವ ದೇವರ ಗುಡ್ಡರು, ಮಹದೇಶ್ವರ ಭಕ್ತರು ಕಂಸಾಳೆ ಬಾರಿಸುತ್ತಾ ಮಾದಪ್ಪನ ಮಹಿಮೆಯ ಹಾಡನ್ನು ಹಾಡುತ್ತಾ ಭಕ್ತಿ ಭಾವದಿಂದ ತೆರಳುತ್ತಿದ್ದರೆ, ಯುವಕರು ತಮಟೆ ಬಾರಿಸುತ್ತ ಅಲ್ಲಲ್ಲಿ ಕುಣಿದು ಕುಪ್ಪಳಿಸುತ್ತಾ ಸಾಗುತ್ತಿದ್ದಾರೆ.

ಮ. ಬೆಟ್ಟಕ್ಕೆ ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಪಾದಯಾತ್ರಿಕರು ಆಗಮಿಸುವುದರಿಂದ ಮುಂಜಾಗ್ರತಾ ಕ್ರಮವಾಗಿ ಕಾವೇರಿ ನದಿಯ ನೀರಿನ ಪ್ರಮಾಣ ಕಡಿಮೆ ಮಾಡಲು ಡಿಸಿಎಂ ಈಗಾಗಲೇ ಸೂಚನೆ ನೀಡಿದ್ದಾರೆ.

ಕನಕಪುರ ತಹಸಿಲ್ದಾರ್ ಮಂಜುನಾಥ್ ನೇತೃತ್ವದಲ್ಲಿ ಕಂದಾಯ, ಅರಣ್ಯ, ಗ್ರಾಪಂ, ಅಗ್ನಿಶಾಮಕ, ಪೊಲೀಸ್ ಇಲಾಖೆಯವರು ಸೇರಿದಂತೆ ಇನ್ನೂರಕ್ಕೂ ಹೆಚ್ಚು ಸಿಬ್ಬಂದಿಗಳು ಕಾವೇರಿ ನದಿ ದಾಟುವ ಸ್ಥಳದಲ್ಲಿ ಅಗತ್ಯ ಬಂದೋಬಸ್ತ್ ಮಾಡಿದ್ದಾರೆ. ಎಸ್‌ಟಿಆರ್‌ಎಫ್, ಎನ್ ಡಿಆರ್ ಎಫ್ ತಂಡದ ಸಿಬ್ಬಂದಿ ಸಹ ಬೊಮ್ಮಸಂದ್ರದ ಬಳಿಯೇ ಠಿಕಾಣಿ ಹೂಡಿದ್ದಾರೆ.

ನದಿ ದಾಟಿಸುತ್ತಿರುವ ಸಿಬ್ಬಂದಿ
೨ ವರ್ಷಗಳ ಹಿಂದೆ ಬೆಟ್ಟಕ್ಕೆ ಆಗಮಿಸುತ್ತಿದ್ದ ಪಾದಯಾತ್ರಿಕರಲ್ಲಿ ನೀರಿನ ಸೆಳೆತಕ್ಕೆ ಸಿಕ್ಕಿ ೫ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದರು. ಈ ಬಾರಿ ಮುಂಜಾಗ್ರತಾ ಕ್ರಮವಾಗಿ ಬೊಮ್ಮಸಂದ್ರದಿಂದ ನದಿ ಮೂಲಕ ನಡೆದುಕೊಂಡು ಬರುತ್ತಿರುವ ಪಾದಯಾತ್ರಿಕರಿಗೆ ಎಡ ಹಾಗೂ ಬಲಬದಿಯಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಹಗ್ಗ ಹಿಡಿದುಕೊಂಡಿದ್ದು ಮಧ್ಯದಲ್ಲಿ ಪಾದಯಾತ್ರಿಕರನ್ನು ಸುರಕ್ಷಿತವಾಗಿ ದಾಟಿಸುತ್ತಿದ್ದಾರೆ.

ಈಗಾಗಲೇ ಪಾದಯಾತ್ರಿಕರಿಗೆ ಅಗತ್ಯ ಸೌಲಭ್ಯ ಕಲ್ಪಿಸಲಾಗಿದೆ. ಉಯ್ಯಂಬಳ್ಳಿ ಗ್ರಾಮ ಪಂಚಾಯಿತಿ ಹಾಗೂ ಮುಖಂಡರಾದ ಜಗದೀಶ್, ಕುಮಾರ್ ಅವರ ಸಹಕಾರದಿಂದ ಏಳಗಳ್ಳಿ ಗ್ರಾಮದಲ್ಲಿ ದಾಸೋಹದ ವ್ಯವಸ್ಥೆ ಕಲ್ಪಿಸಲಾಗಿದೆ. -ರವಿ, ಗ್ರಾಪಂ ಮಾಜಿ ಅಧ್ಯಕ್ಯ

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

2 hours ago

ಓದುಗರ ಪತ್ರ: ರೈಲು ನೀರಿನ ಬಾಟಲಿಗೆ ಒಂದು ರೂ. ಹೆಚ್ಚು ವಸೂಲಿ!

ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…

2 hours ago

ಓದುಗರ ಪತ್ರ: ಹೆಚ್ಚಿನ ಟಿಕೆಟ್ ದರ ನೀಡಲು ಸಿದ್ಧರಾಗಬೇಕಾ?

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…

2 hours ago

ಬಡಮಕ್ಕಳಿಗೆ ಬೆಚ್ಚಗಿನ ಬದುಕು ನೀಡುವ ಕುಶಾಲ್ ರಾಜ್

ಪಂಜು ಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ  ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…

2 hours ago

ಬಸವನಹುಳು ಸಾಕಣೆಯೂ ಲಾಭದಾಯಕ

ಕೇಶವ್ ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…

2 hours ago

ಎಸ್‌ಐಆರ್: ಎನ್.ಆರ್.ಕ್ಷೇತ್ರದಲ್ಲೇ ೧ ಲಕ್ಷ ಮತದಾರರು ಔಟ್

ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ  ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…

2 hours ago