Andolana originals

ಅಂಗನವಾಡಿ ಶಿಥಿಲ ಕಟ್ಟಡದ ಪಿಲ್ಲರ್ ಕುಸಿತ

ಮಹಾದೇಶ್ ಎಂ.ಗೌಡ

ಹನೂರು: ಸ್ವಲ್ಪದರಲ್ಲೇ ಪಾರಾದ ಮಕ್ಕಳು; ಬೇರೆಡೆಗೆ ಸ್ಥಳಾಂತರ ಮಾಡುವವರೆಗೂ ಮಕ್ಕಳನ್ನು ಕಳಿಸಲ್ಲ ಎನ್ನುತ್ತಿರುವ ಪೋಷಕರು

ಹನೂರು: ತಾಲ್ಲೂಕು ಕೇಂದ್ರ ಸ್ಥಾನದ ಅಂಗನವಾಡಿ ೧ರ ಕಟ್ಟಡ ಬಳಕೆಗೆ ಯೋಗ್ಯವಿಲ್ಲದಿದ್ದರೂ ತಾತ್ಕಾಲಿಕವಾಗಿ ಪ್ರಾರಂಭಿಸಿದ ಒಂದು ವಾರದಲ್ಲಿಯೇ ಕಟ್ಟಡದ ಮುಂಭಾಗದ ಪಿಲ್ಲರ್ ಬಿದ್ದು ಸಂಭವಿಸಬಹುದಾದ ದೊಡ್ಡ ಅನಾಹುತ ಸ್ವಲ್ಪದರಲ್ಲಿಯೇ ತಪ್ಪಿರುವ ಘಟನೆ ಬೆಳಕಿಗೆ ಬಂದಿದೆ.

ಹನೂರು ಪಟ್ಟಣದ ಅಂಗನವಾಡಿ ೧ನೇ ಕೇಂದ್ರ ಲೋಕೋಪಯೋಗಿ ಇಲಾಖೆ ವಸತಿಗೃಹದ ಆವರಣ ದಲ್ಲಿರುವ ಹಳೇ ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಹತ್ತು ವರ್ಷಗಳಿಂದ ಕಾರ್ಯಾಚರಿಸುತ್ತಿದೆ. ಆದರೆ, ಈ ಕಟ್ಟಡವನ್ನು ಕಳೆದ ಜನವರಿ ತಿಂಗಳಿನಲ್ಲಿ ತಾಲ್ಲೂಕು ಅಭಿಲೇಖಾಲಯ ಕಚೇರಿಗೆ ಹಸ್ತಾಂತರ ಮಾಡಿದ ನಂತರ ಅಂಗನವಾಡಿ ಒಂದನೇ ಕೇಂದ್ರವನ್ನು ಪಟ್ಟಣದ ಸರ್ಕಾರಿ ಉನ್ನತೀಕರಿಸಿದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಆವರಣದ ಹಳೆಯ ಕಟ್ಟಡಕ್ಕೆ ಸ್ಥಳಾಂತರ ಮಾಡಲಾಗಿತ್ತು.

ಅಂಗನವಾಡಿ ಒಂದನೇ ಕೇಂದ್ರದಲ್ಲಿ ೨೦ ಮಕ್ಕಳು ದಾಖಲಾಗಿದ್ದು, ಪ್ರತಿದಿನ ಮಕ್ಕಳು ಎಂದಿನಂತೆ ಅಂಗನವಾಡಿ ಕೇಂದ್ರಕ್ಕೆ ಆಗಮಿಸುತ್ತಿದ್ದರು. ಬಳಕೆಗೆ ಯೋಗ್ಯವಿಲ್ಲದಿದ್ದರೂ ಸುಮಾರು ೪೦ ವರ್ಷಗಳಿಗೂ ಹಳೆಯದಾದ ಕಟ್ಟಡಕ್ಕೆ ಹಿರಿಯ ಅಧಿಕಾರಿಗಳ ಒತ್ತಡಕ್ಕೆ ಮಣಿದು ಅಂಗನವಾಡಿ ಕಾರ್ಯಕರ್ತೆ ಒಲ್ಲದ ಮನಸ್ಸಿನಿಂದಲೇ ಸ್ಥಳಾಂತರ ಮಾಡಿದ್ದರು.

ಈ ಕಟ್ಟಡವು ಸಂಪೂರ್ಣ ಬಿರುಕು ಬಿಟ್ಟಿದ್ದು, ನೆಲಕ್ಕೆ ಹಾಕಲಾಗಿದ್ದ ಗಾರೆಯೆಲ್ಲಾ ಕಿತ್ತು ಬಂದಿದೆ. ಸ್ಥಳಾಂತರವಾದ ನಂತರ ಅಂಗನವಾಡಿ ಕಾರ್ಯಕರ್ತೆ ಇಂದಿರಾ ಕ್ಯಾಂಟೀನ್ ಕಾಮಗಾರಿ ನಡೆಯುತ್ತಿದ್ದ ಗುತ್ತಿಗೆದಾರರಿಗೆ ಮನವಿ ಮಾಡಿ ಬಿರುಕು ಬಿಟ್ಟಿದ್ದ ಗೋಡೆ ಹಾಗೂ ನೆಲಹಾಸಿಗೆ ಸಿಮೆಂಟ್ ಹಾಕಿಸಿದ್ದರು.

ಆದರೆ ಕಟ್ಟಡ ಹಳೆಯದಾಗಿರುವುದರಿಂದ ೪ ದಿನಗಳ ಹಿಂದೆ ಕಟ್ಟಡದ ಮುಂಭಾಗದ ಒಂದು ಪಿಲ್ಲರ್ ಇದ್ದಕ್ಕಿದ್ದಂತೆ ಕುಸಿದಿದೆ. ಒಂದೊಮ್ಮೆ ವಿದ್ಯಾರ್ಥಿಗಳು ಮೂತ್ರ ವಿಸರ್ಜನೆಗೆ ಅಥವಾ ಆಟವಾಡುವ ಸಂದರ್ಭದಲ್ಲಿ ಬಿದ್ದು ಯಾವುದಾದರೂ ಮಕ್ಕಳಿಗೆ ಅನಾಹುತ ಸಂಭವಿಸಿದ್ದರೆ ಇದಕ್ಕೆ ಯಾರು ಹೊಣೆ ಎಂದು ಪೋಷಕರು ಪ್ರಶ್ನೆ ಮಾಡಿದ್ದಾರೆ. ಅಂಗನವಾಡಿ ಕೇಂದ್ರದ ಮುಂಭಾಗದಲ್ಲಿದ್ದ ಪಿಲ್ಲರ್ ಬಿದ್ದ ನಂತರ ಕಟ್ಟಡಕ್ಕೆ ಆಧಾರವಾಗಿ ಎರಡು ಮರದ ಬೊಂಬುಗಳನ್ನು ನಿಲ್ಲಿಸಿ, ಅಂಗನವಾಡಿ ಪ್ರಾರಂಭಿಸಿದ್ದರು.

ಆದರೆ ಅಂಗನವಾಡಿ ಕೇಂದ್ರಕ್ಕೆ ಮಕ್ಕಳನ್ನು ಕರೆ ತರುತ್ತಿದ್ದ ಪೋಷಕರು ಇಂದೋ ನಾಳೆಯೋ ಬೀಳುವ ಈ ಕಟ್ಟಡಕ್ಕೆ ನಮ್ಮ ಮಕ್ಕಳನ್ನು ಕಳುಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದ ನಂತರ ಅಂಗನವಾಡಿ ಕಾರ್ಯಕರ್ತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಮಾಡಿ, ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಬೇರೆ ಕಟ್ಟಡ ನೀಡುವಂತೆ ಮನವಿ ಮಾಡಿದ್ದರು. ಅವರು ಕೂಡ ಬೇರೆ ಕೊಠಡಿ ವ್ಯವಸ್ಥೆ ಮಾಡಿಕೊಡುವುದಾಗಿ ಭರವಸೆ ನೀಡಿದ್ದಾರೆ. ಆದರೆ ಇನ್ನೂ ಕೊಠಡಿ ವ್ಯವಸ್ಥೆ ಆಗದೆ ಇರುವುದರಿಂದ ಎರಡು ದಿನಗಳಿಂದ ಅಂಗನವಾಡಿ ವಿದ್ಯಾರ್ಥಿಗಳಿಗೆ ರಜೆ ನೀಡಲಾಗಿದೆ.

ತಾತ್ಕಾಲಿಕ ಅಂಗನವಾಡಿ ಕೇಂದ್ರದಲ್ಲಿ ಅವ್ಯವಸ್ಥೆ:  ಪಟ್ಟಣದ ಅಂಗನವಾಡಿ ಒಂದನೇ ಕೇಂದ್ರವನ್ನು ಸರ್ಕಾರಿ ಉನ್ನತೀಕರಿಸಿದ ಮಾದರಿ ಪ್ರಾಥಮಿಕ ಶಾಲೆಗೆ ಸ್ಥಳಾಂತರ ಮಾಡಲಾಗಿದೆ. ಆದರೆ ಇರುವ ಒಂದೇ ಕೊಠಡಿಯಲ್ಲಿ ಪಾಠ ಕಲಿಯಬೇಕು. ಅಡುಗೆ ಸಾಮಗ್ರಿಗಳನ್ನು ದಾಸ್ತಾನು ಇಟ್ಟು ಇಲ್ಲಿಯೇ ಮಧ್ಯಾಹ್ನದ ಊಟ ಸಿದ್ಧಪಡಿಸಿ ಮಕ್ಕಳಿಗೆ ವಿತರಿಸಬೇಕು. ಇದರಿಂದ ಮಕ್ಕಳಿಗೆ ಪ್ರತಿದಿನ ತೊಂದರೆಯಾಗಿದೆ.

ಸ್ವಂತ ಕಟ್ಟಡವಿಲ್ಲ:  ಹನೂರು ಪಟ್ಟಣ ವ್ಯಾಪ್ತಿಯಲ್ಲಿ ಅನೇಕ ಸರ್ಕಾರಿ ನಿವೇಶನಗಳಿದ್ದರೂ ಒಂದು ಅಂಗನವಾಡಿ ಕಟ್ಟಡಕ್ಕೆ ನಿವೇಶನ ಮಂಜೂರು ಮಾಡಿಕೊಡುವಲ್ಲಿ ಸಂಬಂಧಪಟ್ಟ ಕಂದಾಯ ಇಲಾಖೆಯವರು ವಿಫಲರಾಗಿದ್ದಾರೆ. ಪಟ್ಟಣದ ಅರಣ್ಯ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಖಾಲಿ ನಿವೇಶನಗಳಿದೆ. ಈ ವ್ಯಾಪ್ತಿಯಲ್ಲಿ ಅಂಗನವಾಡಿ ಕೇಂದ್ರಕ್ಕೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡು ನಿವೇಶನ ಮಂಜೂರು ಮಾಡಿಕೊಡಬಹುದು.

” ಹನೂರು ಪಟ್ಟಣದ ಅಂಗನವಾಡಿ ಒಂದನೇಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ರಜೆ ನೀಡಿರುವುದು ಗಮನಕ್ಕೆ ಬಂದಿಲ್ಲ,. ಈ ಕೂಡಲೇ ಸಂಬಂಧಪಟ್ಟವರಿಗೆ ನಿರ್ದೇಶನ ನೀಡಿ ಸೂಕ್ತ ಕ್ರಮ ವಹಿಸಲಾಗುವುದು. ಪಟ್ಟಣದಲ್ಲಿ ಅಂಗನವಾಡಿ ಕೇಂದ್ರ ನಿರ್ಮಾಣ ಮಾಡಲು ನಿವೇಶನ ಮಂಜೂರಾದ ತಕ್ಷಣವೇ ಹೊಸ ಅಂಗನವಾಡಿ ಕಟ್ಟಡ ನಿರ್ಮಾಣ ಮಾಡಲಾಗುವುದು.”

ಮಂಜುನಾಥ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ, ಚಾ.ನಗರ.

” ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಇಂದೋ ನಾಳೆಯೋ ಬೀಳುವ ಸ್ಥಿತಿಯಲ್ಲಿರುವ ಕಟ್ಟಡದಲ್ಲಿ ಅಂಗನವಾಡಿ ಪ್ರಾರಂಭಿಸಿದ್ದಾರೆ. ಹೀಗಾಗಿ ನಮ್ಮ ಮಕ್ಕಳ ಸುರಕ್ಷತೆ ಹಾಗೂ ಭವಿಷ್ಯದ ದೃಷ್ಟಿಯಿಂದ ಬೇರೆ ಕಟ್ಟಡಕ್ಕೆ ಸ್ಥಳಾಂತರ ಮಾಡುವವರೆಗೂ ನಮ್ಮ ಮಗುವನ್ನು ಅಂಗನವಾಡಿಗೆ ಕಳುಹಿಸುವುದಿಲ್ಲ.”

ಮಹಾದೇವಸ್ವಾಮಿ, ಪೋಷಕರು 

ಆಂದೋಲನ ಡೆಸ್ಕ್

Recent Posts

ಪಹಲ್ಗಾಮ್‌ ದಾಳಿಗೆ ಪ್ರತೀಕಾರ: ಪಾಕಿಸ್ತಾನಕ್ಕೆ ಮರ್ಮಾಘಾತ ಕೊಟ್ಟ ಭಾರತ ಸರ್ಕಾರ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಭಾರತ ಸರ್ಕಾರ ಪ್ರತೀಕಾರ ತೀರಿಸಿಕೊಂಡಿದ್ದು, ನೆರೆಯ ದೇಶ ಪಾಕಿಸ್ತಾನಕ್ಕೆ…

6 hours ago

ನಾಳೆ ಅರ್ಧ ದಿನ ಶಿವಮೊಗ್ಗ ಬಂದ್

ಶಿವಮೊಗ್ಗ: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ಗುಂಡಿನ ದಾಳಿಗೆ ಬಲಿಯಾದ ಮಂಜುನಾಥ್‌ ಪಾರ್ಥಿವ ಶರೀರದ ಮೆರವಣಿಗೆ ಹಾಗೂ ಅಂತ್ಯಸಂಸ್ಕಾರ ನೆರವೇರಿಸುವ ಹಿನ್ನೆಲೆಯಲ್ಲಿ…

6 hours ago

ಹುಣಸೂರಿನ ಸರ್ವತೋಮುಖ ಅಭಿವೃದ್ಧಿಗೆ ಒತ್ತು: ಶಾಸಕ ಜಿ.ಡಿ.ಹರೀಶ್‌ ಗೌಡ

ಹುಣಸೂರು: ಹುಣಸೂರು ವಿಧಾನಸಭಾ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶಾಸಕ ಜಿ.ಡಿ.ಹರೀಶ್‌ಗೌಡ ಆದ್ಯತೆ ನೀಡಿದ್ದು, ಕಳೆದ ಹಲವು ವರ್ಷಗಳಿಂದ ನೆನೆಗುದ್ದಿಗೆ ಬಿದ್ದಿದ್ದ…

6 hours ago

ಹನೂರು| ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆಗೆ ಕ್ಷಣಗಣನೆ

ಹನೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ನಾಳೆ ಸಚಿವ ಸಂಪುಟ ಸಭೆ ನಡೆಯಲಿದ್ದು, ಇದಕ್ಕಾಗಿ ಬೆಟ್ಟದಲ್ಲಿ…

7 hours ago

ಉಗ್ರರ ದಾಳಿಯಲ್ಲಿ ಮೃತಪಟ್ಟವರಿಗೆ ಮೇಣದಬತ್ತಿ ಹಿಡಿದು ಶ್ರದ್ಧಾಂಜಲಿ

ಮೈಸೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಉಗ್ರರು ಗುಂಡಿನ ದಾಳಿ ನಡೆಸಿದ್ದು, ಹಲವರು ಸಾವನ್ನಪ್ಪಿದ್ದಾರೆ. ಉಗ್ರರ ದಾಳಿಗೆ ಸಿಲುಕಿ ಸಾವನ್ನಪ್ಪಿರುವವರಿಗೆ…

7 hours ago

ಉಗ್ರರ ದಾಳಿಯಲ್ಲಿ ಮೃತಪಟ್ಟವರಿಗೆ ಮೇಣದಬತ್ತಿ ಹಿಡಿದು ಶ್ರದ್ಧಾಂಜಲಿ

ಮೈಸೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಉಗ್ರರು ಗುಂಡಿನ ದಾಳಿ ನಡೆಸಿದ್ದು, ಹಲವರು ಸಾವನ್ನಪ್ಪಿದ್ದಾರೆ. ಉಗ್ರರ ದಾಳಿಗೆ ಸಿಲುಕಿ ಸಾವನ್ನಪ್ಪಿರುವವರಿಗೆ…

7 hours ago