Andolana originals

ಪೋಸ್ಟರ್‌ಗಳ ಹಾವಳಿ; ತಂಗುದಾಣಗಳು ವಿರೂಪ

ಬಸ್ ನಿಲ್ದಾಣಕ್ಕೆ ಪೋಸ್ಟರ್ ಅಂಟಿಸಿ ಸೌಂದರ್ಯ ಹಾಳು

ಪೋಸ್ಟರ್ ಅಂಟಿಸಿದವರ ವಿರುದ್ಧ ಕಾನೂನು ಕ್ರಮ, ದಂಡ, ಶೀಘ್ರ ಬಸ್ ನಿಲ್ದಾಣಗಳ ಸ್ವಚ್ಛತೆ

ಮೈಸೂರು: ಪಾರಂಪರಿಕ ನಗರಿ ಮೈಸೂರಿನ ಸ್ವಚ್ಛತೆ ಕಾಪಾಡುವಲ್ಲಿ ಮೈಸೂರು ಮಹಾನಗರ ಪಾಲಿಕೆ ಸಕಲ ಪ್ರಯತ್ನಗಳನ್ನು ಮಾಡುತ್ತಿದೆ. ಆದರೆ ಪಾರಂಪರಿಕತೆಯನ್ನು ಬಿಂಬಿಸುವ ಪ್ರಯಾಣಿಕರ ತಂಗುದಾಣಗಳಲ್ಲಿ ಜಾಹೀರಾತು ಗಳು ಹಾಗೂ ಕಾರ್ಯಕ್ರಮಗಳ ಪೋಸ್ಟರ್‌ಗಳನ್ನು ಅಂಟಿಸಿ ವಿರೂಪಗೊಳಿಸಲಾಗಿದೆ.

ನಗರದ ವಿವಿಧ ಭಾಗಗಳಲ್ಲಿರುವ ತಂಗುದಾಣಗಳ ಹೊರಗೆ ಹಾಗೂ ಒಳಭಾಗದಲ್ಲಿ ರಾಜಕಾರಣಿಗಳು, ಮುಖಂಡರ ಹುಟ್ಟುಹಬ್ಬ, ರಾಜಕೀಯ ಪಕ್ಷಗಳ ರ‍್ಯಾಲಿ, ಜತ್ರಾ ಮಹೋತ್ಸವಗಳು, ಉದ್ಯೋಗ, ಪಿ.ಜಿ.ಗಳ ಮಾಹಿತಿ, ಮನೆ ಯಿಂದಲೇ ಕೆಲಸ ಮಾಡಿ, ತಿಗಣೆಯಿಂದ ಮುಕ್ತಿ ಮುಂತಾದ ಹಲವಾರು ಪೋಸ್ಟರ್‌ಗಳು ಹಾಗೂ ಮಾಹಿತಿ ಗಳಿರುವ ಭಿತ್ತಿಪತ್ರಗಳು, ಕರಪತ್ರಗಳನ್ನು ಅನುಮತಿ ಇಲ್ಲದೆ ಅಂಟಿಸಲಾಗುತ್ತಿದೆ.

ಹೀಗೆ ತಂಗುದಾಣಗಳಲ್ಲಿ ಅಂಟಿಸಿರುವ ಈ ಕರಪತ್ರಗಳು ಹಾಗೂ ಬಿತ್ತಿಪತ್ರಗಳಿಂದ ತಂಗುದಾಣಗಳ ಸೌಂದರ್ಯ, ಸ್ವಚ್ಛತೆ ಹಾಳಾಗುತ್ತಿದೆ. ಇಲ್ಲಿ ಪೋಸ್ಟರ್ ಅಂಟಿಸುವವರ ವಿಳಾಸ ಹಾಗೂ ದೂರವಾಣಿ ಸಂಖ್ಯೆ ಇದ್ದೇ ಇರುತ್ತದೆ ಆದರೂ ಅವರ ಬಗ್ಗೆ ಪಾಲಿಕೆ ಕ್ರಮ ಏಕೆ ಜರುಗಿಸುತ್ತಿಲ್ಲ ಎನ್ನುವುದೇ ಯಕ್ಷ ಪ್ರಶ್ನೆ.

ಇಂಥ ಬಸ್ ನಿಲ್ದಾಣಗಳನ್ನು ನೋಡುತ್ತಿದ್ದರೆ ಅಸಹ್ಯ ಆಗುತ್ತದೆ. ಕೆಲವರು ಬೀಡ ಹಾಕಿಕೊಂಡು ಬಸ್ ನಿಲ್ದಾಣದ ಗೋಡೆಗೆ ಉಗುಳಿರುವುದು ಅಸಹ್ಯ ಹುಟ್ಟಿಸುತ್ತಿದೆ. ಮೈಸೂರು ನಗರಕ್ಕೆ ಬರುವ ಪ್ರವಾಸಿಗರು ಇದನ್ನು ನೋಡಿ ಅಸಹ್ಯ ಪಟ್ಟುಕೊಳ್ಳುತ್ತಾರೆ. ಮೈಸೂರು ಜನತೆಯ ಬಗ್ಗೆ ಅವರಿಗೆ ಒಂದು ರೀತಿಯ ಕೀಳು ಭಾವನೆ ಮೂಡುತ್ತಿದೆ. ಬಸ್ ನಿಲ್ದಾಣ ಗಳಲ್ಲಿರುವ ಕೆಲ ಜಾಹೀರಾತುಗಳು ಕೆಲವೇ ಕೆಲವರಿಗೆ ಉಪಯುಕ್ತವಾಗಿರ ಬಹುದು. ಆದರೆ ಈ ಪೋಸ್ಟರ್‌ಗಳನ್ನು ಅಂಟಿಸುವ ಮೊದಲು ಅನುಮತಿ ಪಡೆದುಕೊಂಡಲ್ಲಿ ಅದಕ್ಕಾಗಿ ಒಂದು ನಿರ್ದಿಷ್ಟ ಸ್ಥಳ ಸೂಚಿಸಬಹುದು, ಇದು ಒಂದು ಒಳ್ಳೆಯ ಶಿಸ್ತಿನ ಕ್ರಮ ಎಂದರೆ ತಪ್ಪಾಗಲಾರದು.

ನಗರದ ಸೌಂದರ್ಯ ಹದಗೆಡಿಸುತ್ತಿರುವ ಇಂಥ ಬಸ್ ತಂಗುದಾಣಗಳನ್ನು ಪಾಲಿಕೆ ಸ್ವಚ್ಛಗೊಳಿಸಿ ಪೋಸ್ಟರ್ ಅಂಟಿಸು ವವರಿಗೆ ಕಾನೂನು ರೀತಿ ದಂಡ ವಿಽಸಲಿ ಎನ್ನುವುದು ಸಾರ್ವಜನಿಕರ ಮನವಿಯಾಗಿದೆ.

ಸುಂದರವಾದ ಬಸ್ ತಂಗುದಾಣಗಳು ನಗರ ಸೌಂದರ್ಯಕ್ಕೆ ಮೆರುಗು ನೀಡುವುದರಲ್ಲಿ ಅನುಮಾನವಿಲ್ಲ. ಆದರೆ ವಿರೂಪಗೊಳ್ಳುತ್ತಿರುವ ಬಸ್ ತಂಗುದಾಣಗಳು ಸ್ವಚ್ಛ ನಗರಿ ಎಂಬ ಬಿರುದು ಗಳಿಸಲು ಅಡ್ಡಿಯಾಗಿವೆ ಎನ್ನುವುದು ಸತ್ಯ.

” ನಮ್ಮ ಹೆಲ್ತ್‌ ಇನ್ಸ್‌ಪೆಕ್ಟರ್‌ಗಳಿಗೆ ಈಗಾಗಲೇ ಬಸ್ ನಿಲ್ದಾಣದಲ್ಲಿ ಅಂಟಿಸಿರುವ ಪೋಸ್ಟರ್ಗಳನ್ನು ತೆರವು ಮಾಡಲು ಸೂಚಿಸಲಾಗಿದೆ. ಕುಂಭಮೇಳದಲ್ಲಿ ಅಧಿಕಾರಿಗಳು ಭಾಗವಹಿಸುತ್ತಿರುವುದರಿಂದ ಅಲ್ಲಿಂದ ಬಂದ ಕೂಡಲೇ ತೆರವು ಮಾಡಿಸುತ್ತೇವೆ. ಪೋಸ್ಟರ್ ಅಂಟಿಸಿರುವವರಿಗೆ ನೋಟಿಸ್ ಕಳುಹಿಸಿ ದಂಡವನ್ನೂ ವಿಧಿಸಲಾಗುತ್ತದೆ.”

? ಡಾ.ವೆಂಕಟೇಶ್, ಆರೋಗ್ಯಾಧಿಕಾರಿ, ಮೈಸೂರು ಮಹಾನಗರ ಪಾಲಿಕೆ

ಆಂದೋಲನ ಡೆಸ್ಕ್

Recent Posts

ಪರವಾನಗಿ ಅಮಾನತ್ತು : ನಾಲ್ವರ ವಿರುದ್ಧ ಶಿಸ್ತು ಕ್ರಮ

ಚಾಮರಾಜನಗರ : ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ. ಎಚ್.ಕೃಷ್ಣ ಅವರು ತಮ್ಮ ದಿಢೀರ್ ಭೇಟಿ ಸಂದರ್ಭದಲ್ಲಿ ನ್ಯೂನತೆ ಕಂಡುಬಂದಿರುವ…

5 mins ago

ಸಿ.ಟಿ.ರವಿ ಯಾವ ಕಡೆಯಿಂದಲೂ ಒಳಗೆ ಬರತಕ್ಕದ್ದಲ್ಲ : ಚೀಫ್ ಮಾರ್ಷಲ್​​ಗೆ ಸಭಾಪತಿ ಸೂಚನೆ

ಬೆಂಗಳೂರು : ಸಭಾಪತಿಗಳ ಆದೇಶಕ್ಕೆ ಗೌರವ ನೀಡದೆ, ಗೈರು ಹಾಜರಾಗಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರನ್ನು ವಿಧಾನ ಪರಿಷತ್ತಿನಿಂದ…

17 mins ago

ಮಂಡ್ಯ | 60 ಲಕ್ಷ ಲಂಚಕ್ಕೆ ಬೇಡಿಕೆ ; ಅಬಕಾರಿ ಉಪ ಆಯುಕ್ತ ಅಮಾನತು

ಮಂಡ್ಯ : ಹೊಸದಾಗಿ ಬಾರ್ ಆರಂಭಿಸಲು ಸಿಎಲ್ 7 ಲೈಸೆನ್ಸ್ ನೀಡಲು ಲಂಚ ಕೇಳಿದ ಆರೋಪದಡಿ ಮಂಡ್ಯ ಅಬಕಾರಿ ಉಪ…

2 hours ago

ಮೈಸೂರಿನಲ್ಲಿ ಮತ್ತೆ ಡ್ರಗ್ಸ್‌ ಪತ್ತೆ ; ಮೂವರ ಬಂಧನ

ಮೈಸೂರು : ಮೈಸೂರಲ್ಲಿ ಪದೇ ಪದೇ ಡ್ರಗ್ಸ್‌ ಪ್ರಕರಣಗಳು ಪತ್ತೆಯಾಗುತ್ತಿರುವುದು ಪೊಲೀಸರನ್ನು ನಿದ್ದೆಗೆಡಿಸಿದೆ. ಈ ಸಂಬಂಧ ಹೈಕೋರ್ಟ್‌ ಸಹ ಕಳವಳ…

2 hours ago

ಮೈ-ಬೆಂ ಹೆದ್ದಾರಿಯಲ್ಲಿ ಸುಲಿಗೆ,ದರೋಡೆ ; 34 ಪ್ರಕರಣಗಳಲ್ಲಿ 28 ಕೇಸ್‌ ಸಾಲ್ವ್‌!

ಮಂಡ್ಯ : ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (ಎನ್‌ಎಚ್-275) ಹಾಗೂ ಸರ್ವಿಸ್ ರಸ್ತೆಗಳಲ್ಲಿ ತಡರಾತ್ರಿ ಪ್ರಯಾಣಿಕರನ್ನು ತಡೆದು ಸುಲಿಗೆ, ದರೋಡೆ ಮಾಡುತ್ತಿರುವುದಕ್ಕೆ…

2 hours ago

ಮೂರು ಬಾಲಕಿಯರನ್ನು ಬಲಿ ಪಡೆದ ಆನ್‌ಲೈನ್‌ ಗೇಮ್‌ ; ಮಹಡಿಯಿಂದ ಹಾರಿ ಆತ್ಮಹತ್ಯೆ

ಗಾಜಿಯಾಬಾದ್ : ಆನ್‌ಲೈನ್ ಗೇಮ್ ಆಡಬೇಡಿ ಎಂದಿದ್ದಕ್ಕೆ ಮೂವರು ಅಪ್ರಾಪ್ತ ಸಹೋದರಿಯರು ಹೌಸಿಂಗ್ ಸೊಸೈಟಿಯ 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ…

4 hours ago