ಟಾಂಗಾ ಸವಾರಿ ವಲಯ ನಿರ್ಮಾಣಕ್ಕೆ ೨.೭೧ ಕೋಟಿ ರೂ. ಮಂಜೂರು
ಕೇಂದ್ರದ ಸ್ವದೇಶ ದರ್ಶನ ಯೋಜನೆಯಡಿ ಗ್ರೀನ್ ಟೂರ್ಗೆ ಆದ್ಯತೆ
ಮೈಸೂರು: ಮೈಸೂರಿನ ಪ್ರವಾಸೋದ್ಯಮದ ಕಲ್ಪನೆಯನ್ನು ಬದಲಾಯಿಸಬಲ್ಲ ಎರಡು ಹೊಸ ಯೋಜನೆಗಳು ಸಿದ್ಧವಾಗುತ್ತಿವೆ.
ಅರಮನೆ, ಮೃಗಾಲಯ, ಚಾಮುಂಡಿಬೆಟ್ಟ ಬಿಟ್ಟರೆ ಮೈಸೂರಿನಲ್ಲಿ ಏನೂ ಇಲ್ಲ ಎನ್ನುವ ಪ್ರವಾಸಿಗರ ಗೊಣಗಾಟ ಶೀಘ್ರದಲ್ಲೇ ದೂರಾಗಲಿದೆ. ನಗರದ ಪಾರಂಪರಿಕ ಗತವೈಭವದ ಕೊಂಡಿಯಾಗಿರುವ ಟಾಂಗಾ ಸವಾರಿ ಹಾಗೂ ಗ್ರೀನ್ ಟೂರ್ಗೆ ಹೊಸ ರೂಪ ಬರಲಿದೆ.
ನಗರಕ್ಕೆ ಪ್ರತಿ ವರ್ಷ ಅಂದಾಜು ೪೦ರಿಂದ ೫೦ಲಕ್ಷ ಮಂದಿ ಪ್ರವಾಸಿಗರು ಭೇಟಿ ನೀಡುತ್ತಾರೆ. ಆದರೆ, ಒಮ್ಮೆ ಬಂದವರು ಮತ್ತೊಮ್ಮೆ ಬರಲು ಹೆಚ್ಚಿನ ಆಕರ್ಷಣೆ ಇಲ್ಲ. ಅರಮನೆ, ಮೃಗಾಲಯ ಹಾಗೂ ಬೆಟ್ಟಕ್ಕಷ್ಟೇ ಪ್ರವಾಸೋದ್ಯಮ ಸೀಮಿತವಾಗಿದೆ ಎನ್ನುವ ಅಸಮಾಧಾನ ಸಾಕಷ್ಟು ಜನರಲ್ಲಿತ್ತು. ಈ ತಾಣಗಳ ವೀಕ್ಷಣೆ ಬಳಿಕ ಪ್ರವಾಸಿಗರು ಮೈಸೂರಿನಲ್ಲಿ ವಾಸ್ತವ್ಯ ಹೂಡುವುದಿಲ್ಲ. ಅಕ್ಕಪಕ್ಕದ ಜಿಲ್ಲೆಗಳಿಗೆ ಹೋಗುತ್ತಾರೆ. ಇದರಿಂದ ಪ್ರವಾಸೋದ್ಯಮಕ್ಕೆ ನಿರೀಕ್ಷಿತ ಆದಾಯ ಬರುತ್ತಿಲ್ಲ ಎಂಬ ಅಭಿಪ್ರಾಯ ಇತ್ತು. ಇದೀಗ ಕೇಂದ್ರ ಸರ್ಕಾರದ ಎರಡು ಹೊಸ ಯೋಜನೆಗಳು ಮೈಸೂರಿನ ಪ್ರವಾಸೋದ್ಯಮಕ್ಕೆ ಹೊಸ ರೂಪ ನೀಡಲಿವೆ ಎಂದು ಅಂದಾಜಿಸಲಾಗಿದೆ.
ಬೆರಳೆಣಿಕೆ ಟಾಂಗಾಗಳು: ಒಂದು ಕಾಲದಲ್ಲಿ ಮೈಸೂರಿಗೆ ಬಂದವರು ಟಾಂಗಾ ಏರದೆ ಹಿಂದಿರುಗುತ್ತಿರಲಿಲ್ಲ. ನಂತರ ಸೂಕ್ತ ಮಾರ್ಗ ದರ್ಶನ, ದರ ನಿಗದಿ, ಸೌಲಭ್ಯ ಹಾಗೂ ಟ್ರಾಫಿಕ್ ಹೆಚ್ಚಳದಿಂದಾಗಿ ಜನರು ಟಾಂಗಾ ಪಯಣದಿಂದ ದೂರ ಸರಿದರು. ಮೈಸೂರಿನಲ್ಲಿ ಈಗ ೫೦ ಟಾಂಗಾಗಳು ಹಾಗೂ ೨೦ ಸಾರೋಟುಗಳು ಮಾತ್ರ ಇವೆ. ಹೊಸ ಯೋಜನೆಯಿಂದಾಗಿ ಇವುಗಳಿಗೆ ಮತ್ತೆ ಶುಕ್ರದೆಸೆ ಬರಲಿದೆ. ಹಸಿರು ಪರಿಸರ ಪ್ರವಾಸೋದ್ಯಮಕ್ಕೂ ಕೇಂದ್ರ ಸರ್ಕಾರ ಇದೇ ಯೋಜನೆಯಲ್ಲಿ ಅನುಮತಿ ನೀಡಿದೆ. ಇಕಾಲಾಜಿಕಲ್ ಎಕ್ಸ್ಪೀರಿಯನ್ಸ್ ಜೋನ್ (ಇಇಜೆಡ್)ಗೆ ೧೮.೪೭ ಕೋಟಿ ರೂ. ಮಂಜೂರು ಮಾಡಲಾಗಿದೆ. ಮೃಗಾಲಯದಿಂದ ಕಾರಂಜಿ ಕೆರೆ, ರೀಜನಲ್ ಮ್ಯೂಸಿಯಂ ಆಫ್ ನ್ಯಾಚುರಲ್ ಹಿಸ್ಟರಿಗೆ ಕೆನೋಪಿ ವಾಕ್ ಹೊಸ ಆಕರ್ಷಣೆಯಾಗಲಿದೆ.‘ಆಕಾಶ ನಡಿಗೆ’ ಮೂಲಕ ಈ ಮೂರೂ ತಾಣಗಳ ಸೌಂದರ್ಯವನ್ನು ವೀಕ್ಷಿಸಬಹುದಾಗಿದೆ. ಇದರೊಂದಿಗೆ ಇಕೊ ಬ್ರಿಡ್ಜ್, ಫುಡ್ಕೋರ್ಟ್ ಬರಲಿವೆ.
ಮೃಗಾಲಯದ ಪ್ರಾಣಿ ಪಕ್ಷಿಗಳನ್ನು ಏರಿಯಲ್ವ್ಯೂ ಮೂಲಕ ವೀಕ್ಷಿಸಬಹುದಾಗಿದೆ. ಈ ಯೋಜ ನೆಗೆ ಇದ್ದ ಅರಣ್ಯ ಇಲಾಖೆ, ಪರಿಸರ ಇಲಾಖೆಗಳ ಆಕ್ಷೇಪಣೆಗಳನ್ನು ರಾಜ್ಯ ಅರಣ್ಯ ಸಚಿವರು ಹಾಗೂ ಕೇಂದ್ರ ಪ್ರವಾಸೋದ್ಯಮ ಸಚಿವರ ನೇತೃತ್ವದಲ್ಲಿ ನಡೆದ ಸಮಿತಿ ಸಭೆಯಲ್ಲಿ ನಿವಾರಿಸಲಾಗಿದೆ.
” ಮೈಸೂರು ಪಾರಂಪರಿಕ ನಗರ ಎನ್ನುವ ಖ್ಯಾತಿ ಗಳಿಸಿದೆ. ಆದರೆ, ಪ್ರವಾಸಿಗರಿಗೆ ಮೈಸೂರು ಅರಮನೆ ಹೊರತುಪಡಿಸಿ ಯಾವ ಪಾರಂಪರಿಕ ಕಟ್ಟಡಗಳನ್ನೂ ವೀಕ್ಷಿಸುವ ಸೌಲಭ್ಯವಿಲ್ಲ. ಸೂಕ್ತ ಮಾಹಿತಿ ಹಾಗೂ ಅವುಗಳಿಗೆ ಸಂಪರ್ಕ ಕಲ್ಪಿಸುವ ವ್ಯವಸ್ಥೆಯೂ ಇಲ್ಲ. ನಗರದಲ್ಲಿ ಪ್ರವಾಸಿಗರು ನೋಡಲೇಬೇಕಾದ ಸುಮಾರು ೩೦ಕ್ಕೂ ಹೆಚ್ಚು ಪಾರಂಪರಿಕ ಕಟ್ಟಡಗಳಿವೆ. ಈ ಹಿನ್ನೆಲೆಯಲ್ಲಿ ಅವುಗಳನ್ನು ಜೋಡಿಸುವ ಕೆಲಸ ಟಾಂಗಾ ಸವಾರಿಯಿಂದ ಆಗಲಿದೆ. ಕೇಂದ್ರ ಪ್ರವಾಸೋದ್ಯಮ ಸಚಿವಾಲಯದ ಸ್ವದೇಶ ದರ್ಶನ ೨.೦ ಯೋಜನೆಯಡಿ ಟಾಂಗಾ ರೈಡ್ ಎಕ್ಸ್ಪೀರಿಯನ್ಸ್ ಜೋ ಯೋಜನೆ ಸಿದ್ಧವಾಗಿದ್ದು, ಇದಕ್ಕೆ ಕೇಂದ್ರ ಸರ್ಕಾರ ೨.೭೧ ಕೋಟಿ ರೂ. ಮಂಜೂರು ಮಾಡಿದೆ.”
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್…
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…