Andolana originals

‘ಹೆರಿಟೇಜ್ ಟೂರಿಸಂ ಅಭಿವೃದ್ಧಿಗೆ ಯೋಜನೆ’

ಟಾಂಗಾ ಸವಾರಿ ವಲಯ ನಿರ್ಮಾಣಕ್ಕೆ ೨.೭೧ ಕೋಟಿ ರೂ. ಮಂಜೂರು

ಕೇಂದ್ರದ ಸ್ವದೇಶ ದರ್ಶನ ಯೋಜನೆಯಡಿ ಗ್ರೀನ್ ಟೂರ್‌ಗೆ ಆದ್ಯತೆ 

ಮೈಸೂರು: ಮೈಸೂರಿನ ಪ್ರವಾಸೋದ್ಯಮದ ಕಲ್ಪನೆಯನ್ನು ಬದಲಾಯಿಸಬಲ್ಲ ಎರಡು ಹೊಸ ಯೋಜನೆಗಳು ಸಿದ್ಧವಾಗುತ್ತಿವೆ.

ಅರಮನೆ, ಮೃಗಾಲಯ, ಚಾಮುಂಡಿಬೆಟ್ಟ ಬಿಟ್ಟರೆ ಮೈಸೂರಿನಲ್ಲಿ ಏನೂ ಇಲ್ಲ ಎನ್ನುವ ಪ್ರವಾಸಿಗರ ಗೊಣಗಾಟ ಶೀಘ್ರದಲ್ಲೇ ದೂರಾಗಲಿದೆ. ನಗರದ ಪಾರಂಪರಿಕ ಗತವೈಭವದ ಕೊಂಡಿಯಾಗಿರುವ ಟಾಂಗಾ ಸವಾರಿ ಹಾಗೂ ಗ್ರೀನ್ ಟೂರ್‌ಗೆ ಹೊಸ ರೂಪ ಬರಲಿದೆ.

ನಗರಕ್ಕೆ ಪ್ರತಿ ವರ್ಷ ಅಂದಾಜು ೪೦ರಿಂದ ೫೦ಲಕ್ಷ ಮಂದಿ ಪ್ರವಾಸಿಗರು ಭೇಟಿ ನೀಡುತ್ತಾರೆ. ಆದರೆ, ಒಮ್ಮೆ ಬಂದವರು ಮತ್ತೊಮ್ಮೆ ಬರಲು ಹೆಚ್ಚಿನ ಆಕರ್ಷಣೆ ಇಲ್ಲ. ಅರಮನೆ, ಮೃಗಾಲಯ ಹಾಗೂ ಬೆಟ್ಟಕ್ಕಷ್ಟೇ ಪ್ರವಾಸೋದ್ಯಮ ಸೀಮಿತವಾಗಿದೆ ಎನ್ನುವ ಅಸಮಾಧಾನ ಸಾಕಷ್ಟು ಜನರಲ್ಲಿತ್ತು. ಈ ತಾಣಗಳ ವೀಕ್ಷಣೆ ಬಳಿಕ ಪ್ರವಾಸಿಗರು ಮೈಸೂರಿನಲ್ಲಿ ವಾಸ್ತವ್ಯ ಹೂಡುವುದಿಲ್ಲ. ಅಕ್ಕಪಕ್ಕದ ಜಿಲ್ಲೆಗಳಿಗೆ ಹೋಗುತ್ತಾರೆ. ಇದರಿಂದ ಪ್ರವಾಸೋದ್ಯಮಕ್ಕೆ ನಿರೀಕ್ಷಿತ ಆದಾಯ ಬರುತ್ತಿಲ್ಲ ಎಂಬ ಅಭಿಪ್ರಾಯ ಇತ್ತು. ಇದೀಗ ಕೇಂದ್ರ ಸರ್ಕಾರದ ಎರಡು ಹೊಸ ಯೋಜನೆಗಳು ಮೈಸೂರಿನ ಪ್ರವಾಸೋದ್ಯಮಕ್ಕೆ ಹೊಸ ರೂಪ ನೀಡಲಿವೆ ಎಂದು ಅಂದಾಜಿಸಲಾಗಿದೆ.

ಬೆರಳೆಣಿಕೆ ಟಾಂಗಾಗಳು: ಒಂದು ಕಾಲದಲ್ಲಿ ಮೈಸೂರಿಗೆ ಬಂದವರು ಟಾಂಗಾ ಏರದೆ ಹಿಂದಿರುಗುತ್ತಿರಲಿಲ್ಲ. ನಂತರ ಸೂಕ್ತ ಮಾರ್ಗ ದರ್ಶನ, ದರ ನಿಗದಿ, ಸೌಲಭ್ಯ ಹಾಗೂ ಟ್ರಾಫಿಕ್ ಹೆಚ್ಚಳದಿಂದಾಗಿ ಜನರು ಟಾಂಗಾ ಪಯಣದಿಂದ ದೂರ ಸರಿದರು. ಮೈಸೂರಿನಲ್ಲಿ ಈಗ ೫೦ ಟಾಂಗಾಗಳು ಹಾಗೂ ೨೦ ಸಾರೋಟುಗಳು ಮಾತ್ರ ಇವೆ. ಹೊಸ ಯೋಜನೆಯಿಂದಾಗಿ ಇವುಗಳಿಗೆ ಮತ್ತೆ ಶುಕ್ರದೆಸೆ ಬರಲಿದೆ. ಹಸಿರು ಪರಿಸರ ಪ್ರವಾಸೋದ್ಯಮಕ್ಕೂ ಕೇಂದ್ರ ಸರ್ಕಾರ ಇದೇ ಯೋಜನೆಯಲ್ಲಿ ಅನುಮತಿ ನೀಡಿದೆ. ಇಕಾಲಾಜಿಕಲ್ ಎಕ್ಸ್‌ಪೀರಿಯನ್ಸ್ ಜೋನ್ (ಇಇಜೆಡ್)ಗೆ ೧೮.೪೭ ಕೋಟಿ ರೂ. ಮಂಜೂರು ಮಾಡಲಾಗಿದೆ. ಮೃಗಾಲಯದಿಂದ ಕಾರಂಜಿ ಕೆರೆ, ರೀಜನಲ್ ಮ್ಯೂಸಿಯಂ ಆಫ್ ನ್ಯಾಚುರಲ್ ಹಿಸ್ಟರಿಗೆ ಕೆನೋಪಿ ವಾಕ್ ಹೊಸ ಆಕರ್ಷಣೆಯಾಗಲಿದೆ.‘ಆಕಾಶ ನಡಿಗೆ’ ಮೂಲಕ ಈ ಮೂರೂ ತಾಣಗಳ ಸೌಂದರ್ಯವನ್ನು ವೀಕ್ಷಿಸಬಹುದಾಗಿದೆ. ಇದರೊಂದಿಗೆ ಇಕೊ ಬ್ರಿಡ್ಜ್, ಫುಡ್‌ಕೋರ್ಟ್ ಬರಲಿವೆ.

ಮೃಗಾಲಯದ ಪ್ರಾಣಿ ಪಕ್ಷಿಗಳನ್ನು ಏರಿಯಲ್ವ್ಯೂ ಮೂಲಕ ವೀಕ್ಷಿಸಬಹುದಾಗಿದೆ. ಈ ಯೋಜ ನೆಗೆ ಇದ್ದ ಅರಣ್ಯ ಇಲಾಖೆ, ಪರಿಸರ ಇಲಾಖೆಗಳ ಆಕ್ಷೇಪಣೆಗಳನ್ನು ರಾಜ್ಯ ಅರಣ್ಯ ಸಚಿವರು ಹಾಗೂ ಕೇಂದ್ರ ಪ್ರವಾಸೋದ್ಯಮ ಸಚಿವರ ನೇತೃತ್ವದಲ್ಲಿ ನಡೆದ ಸಮಿತಿ ಸಭೆಯಲ್ಲಿ ನಿವಾರಿಸಲಾಗಿದೆ.

” ಮೈಸೂರು ಪಾರಂಪರಿಕ ನಗರ ಎನ್ನುವ ಖ್ಯಾತಿ ಗಳಿಸಿದೆ. ಆದರೆ, ಪ್ರವಾಸಿಗರಿಗೆ ಮೈಸೂರು ಅರಮನೆ ಹೊರತುಪಡಿಸಿ ಯಾವ ಪಾರಂಪರಿಕ ಕಟ್ಟಡಗಳನ್ನೂ ವೀಕ್ಷಿಸುವ ಸೌಲಭ್ಯವಿಲ್ಲ. ಸೂಕ್ತ ಮಾಹಿತಿ ಹಾಗೂ ಅವುಗಳಿಗೆ ಸಂಪರ್ಕ ಕಲ್ಪಿಸುವ ವ್ಯವಸ್ಥೆಯೂ ಇಲ್ಲ. ನಗರದಲ್ಲಿ ಪ್ರವಾಸಿಗರು ನೋಡಲೇಬೇಕಾದ ಸುಮಾರು ೩೦ಕ್ಕೂ ಹೆಚ್ಚು ಪಾರಂಪರಿಕ ಕಟ್ಟಡಗಳಿವೆ. ಈ ಹಿನ್ನೆಲೆಯಲ್ಲಿ ಅವುಗಳನ್ನು ಜೋಡಿಸುವ ಕೆಲಸ ಟಾಂಗಾ ಸವಾರಿಯಿಂದ ಆಗಲಿದೆ. ಕೇಂದ್ರ ಪ್ರವಾಸೋದ್ಯಮ ಸಚಿವಾಲಯದ ಸ್ವದೇಶ ದರ್ಶನ ೨.೦ ಯೋಜನೆಯಡಿ ಟಾಂಗಾ ರೈಡ್ ಎಕ್ಸ್‌ಪೀರಿಯನ್ಸ್ ಜೋ ಯೋಜನೆ ಸಿದ್ಧವಾಗಿದ್ದು, ಇದಕ್ಕೆ ಕೇಂದ್ರ ಸರ್ಕಾರ ೨.೭೧ ಕೋಟಿ ರೂ. ಮಂಜೂರು ಮಾಡಿದೆ.”

ಆಂದೋಲನ ಡೆಸ್ಕ್

Recent Posts

ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಅಂತ್ಯ

5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)…

8 hours ago

ಮೈಸೂರು | ದಸರಾ ವೇಳೆಗೆ ಫುಟ್‌ಪಾತ್‌ಗಳ ದುರಸ್ತಿಗೆ ಸೂಚನೆ

ಮೈಸೂರು‌ : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…

9 hours ago

ಪ.ಬಂಗಾಳ | ಬೆಂಕಿ ಅವಘಡದಲ್ಲಿ ಏಳು ಮಂದಿ ಸಾವು, ಹಲವರು ಗಂಭೀರ

ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…

9 hours ago

ಯಳಂದೂರು | ಚಿರತೆ ದಾಳಿಗೆ ಕರು ಬಲಿ

ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…

10 hours ago

ಸಿಡಬ್ಲ್ಯುಎಂಎ ಆದೇಶ ಪಾಲಿಸಿ ; ಕರ್ನಾಟಕಕ್ಕೆ ಸುಪ್ರೀಂ ಸೂಚನೆ

ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…

11 hours ago

ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಎಚ್1ಎನ್1‌ ಸೋಂಕು ದೃಢ

ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…

11 hours ago