Andolana originals

ಶಾಲೆಯಲ್ಲಿ ಶೀಘ್ರ ಶೌಚಾಲಯ ನಿರ್ಮಿಸಿ ವರದಿ ನೀಡಿ

ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯ ಅಧಿಕಾರಿ ಡಾ.ಕೆ.ವೈಷ್ಣವಿ ಸೂಚನೆ

ಹನೂರು: ಹನೂರು ತಾಲ್ಲೂಕಿನ ಮೀಣ್ಯಂ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಪ್ರಾಥಮಿಕ ಶಾಲೆಯ ಶೌಚಾಲಯ ನಿರ್ಮಾಣ ಕಾಮಗಾರಿಯನ್ನು ಆದ್ಯತೆಯ ಮೇರೆಗೆ ಕೈಗೊಂಡು ಅನುಪಾಲನ ವರದಿ ನೀಡುವಂತೆ ಮುಖ್ಯ  ಮಂತ್ರಿಗಳ ವಿಶೇಷ ಕರ್ತವ್ಯ ಅಧಿಕಾರಿ ಡಾ.ಕೆ. ವೈಷ್ಣವಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ರವರಿಗೆ ಪತ್ರ ಬರೆದಿದ್ದಾರೆ.

ಆಗಸ್ಟ್ ೧೪ರಂದು ‘ಶಾಲೆಯಲ್ಲಿ ಶೌಚಾಲಯವಿಲ್ಲದೆ ವಿದ್ಯಾರ್ಥಿಗಳಿಗೆ ಸಮಸ್ಯೆ’ ಎಂಬ ಶೀರ್ಷಿಕೆಯಡಿ ಮೀಣ್ಯಂ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶೌಚಾಲಯ ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳದೆ ವಿದ್ಯಾರ್ಥಿಗಳಿಗೆ ಮೂತ್ರ ವಿಸರ್ಜನೆ ಮಾಡಲು ಸಮಸ್ಯೆಯಾಗಿದ್ದು ಸಂಬಂಧಪಟ್ಟವರು ಶೌಚಾಲಯದ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಪೋಷಕರು ಆಗ್ರಹಿಸಿರುವ ಬಗ್ಗೆ ‘ಆಂದೋಲನ’ ದಿನಪತ್ರಿಕೆಯಲ್ಲಿ ವರದಿ ಪ್ರಕಟಿಸಲಾಗಿತ್ತು.

ವರದಿಯನ್ನು ಗಮನಿಸಿರುವ ಮುಖ್ಯ ಮಂತ್ರಿಗಳ ವಿಶೇಷ ಕರ್ತವ್ಯ ಅಧಿಕಾರಿ ಡಾ. ಕೆ.ವೈಷ್ಣವಿ ಆಗಸ್ಟ್ ೧೬ರಂದು ಶಾಲಾ ಶಿಕ್ಷಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿರವರಿಗೆ ಸದರಿ ವಿಷಯದ ವಾಸ್ತವಾಂಶದ ಬಗ್ಗೆ ಆದ್ಯತೆಯ ಮೇರೆಗೆ ಪರಿಶೀಲಿಸಿ ತಕ್ಷಣವೇ ಅಗತ್ಯ ಕ್ರಮ ಕೈಗೊಂಡು ಜಿಪಿಎಸ್ ಛಾಯಾಚಿತ್ರಗಳೊಂದಿಗೆ ಅನುಪಾಲನಾ ವರದಿಯನ್ನು ಅತಿ ಜರೂರಾಗಿ ಕಳುಹಿಸಿ ಕೊಡುವಂತೆ ನಿರ್ದೇಶನ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

2 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

2 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

2 hours ago

ವಿರಾಜಪೇಟೆ: ರಸ್ತೆಯುದ್ದಕ್ಕೂ ಗುಂಡಿಗಳದ್ದೇ ಪಾರಮ್ಯ

ಕಾಂಗೀರ ಬೋಪಣ್ಣ ವಿರಾಜಪೇಟೆ: ತಾಲ್ಲೂಕಿನಲ್ಲಿನ ಮುಖ್ಯರಸ್ತೆಗಳು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ…

2 hours ago

ಇದು ಅಂತ್ಯವಲ್ಲ-ಹೊಸ ಆರಂಭ

ರೇಣುಕಾ ನಿಡುಗುಂದಿ ಜಂತರ್ ಮಂತರ್‌ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ತಾತ್ಕಾಲಿಕ ನೈತಿಕ ಗೆಲುವು ದೊರೆತಿದೆ. ಕೇಂದ್ರ ಶಿಕ್ಷಣ ಸಚಿವ…

2 hours ago

ಎಸ್‌ಐಆರ್ ಅರ್ಜಿ; ಅನಿವಾರ್ಯ ಮರ್ಜಿ

ಚಿರಂಜೀವಿ ಸಿ ಹುಲ್ಲಹಳ್ಳಿ ಗ್ರಾಮೀಣ ಭಾಗಗಳಲ್ಲಿ ಸಮಸ್ಯೆ ಇನ್ನಷ್ಟು ಗಂಭೀರವಾಗಿದೆ. ಹಲವು ಗ್ರಾಮಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ಕುರಿತು ಸಮರ್ಪಕ ಜಾಗೃತಿಯೇ…

2 hours ago