Andolana originals

‘ಭವಾನಿ ನಗರಕ್ಕೆ ಒಮ್ಮೆ ಬನ್ನಿ ಪ್ಲೀಸ್…’

ಪ್ರಶಾಂತ್ ಎನ್. ಮಲ್ಲಿಕ್

ಮೈಸೂರು: ಸಾಂಸ್ಕೃತಿಕ ನಗರಿ, ಸ್ವಚ್ಛ ನಗರಿ ಎಂಬ ಹೆಗ್ಗಳಿಕೆಯ ಮೈಸೂರಿನ ಪಕ್ಕದಲ್ಲೇ ಒಂದು ಬಡಾವಣೆ ಇದೆ. ಆದರೆ ಅಲ್ಲಿಗೆ ಹೋದರೆ ನೀವು ಯಾವುದೋ ಹಳ್ಳಿಗಿಂತಲೂ ಕಡೆಯಾದ ಊರಿಗೆ ಬಂದಂತಾಗುತ್ತದೆ! ಇದು ಜೆ.ಪಿ. ನಗರದ  ರಿಂಗ್ ರಸ್ತೆಗೆ ತೀರಾ ಹತ್ತಿರದಲ್ಲಿರುವ ಭವಾನಿ ನಗರ ಬಡಾವಣೆಯ ಇಂದಿನ ದುಸ್ಥಿತಿ. ಹಾಗಾಗಿ ಸ್ಥಳೀಯರು ಸಂಬಂಧಪಟ್ಟ ಅಧಿಕಾರಿಗಳನ್ನು ‘ಒಮ್ಮೆ ಬನ್ನಿ ಪ್ಲೀಸ್…’ ಎನ್ನುತ್ತಿದ್ದಾರೆ.

ಹಂದಿಗಳ ತಾಣವಾದ ವಸತಿ ಪ್ರದೇಶ: ಬಡಾವಣೆಯ ೨ನೇ ಕ್ರಾಸ್‌ನಲ್ಲಿ ಕಾಲಿಟ್ಟರೆ ಸಾಕು, ಮೂಗು ಮುಚ್ಚಿಕೊಳ್ಳದೆ ಓಡಾಡುವುದು ಅಸಾಧ್ಯ. ಇಲ್ಲಿನ ಯುಜಿಡಿ (ಒಳಚರಂಡಿ) ಕಾಮ ಗಾರಿ ಅರ್ಧಕ್ಕೆ ನಿಂತು ಹಲವು ವರ್ಷಗಳೇ ಕಳೆದಿವೆ. ಚರಂಡಿ ನೀರು ಮತ್ತು ಮಳೆಯ ನೀರು ಹರಿದು ಹೋಗಲು ಸರಿಯಾದ ವ್ಯವಸ್ಥೆ ಇಲ್ಲದೆ, ಖಾಲಿ ಇರುವ ಸೈಟುಗಳಲ್ಲೇ ಬಂದು ನಿಲ್ಲುತ್ತಿದೆ. ಈ ಕೊಳಚೆ ನೀರು ಈಗ ಹಂದಿಗಳ ನೆಚ್ಚಿನ ಆವಾಸ ಸ್ಥಾನವಾಗಿದೆ. ಹಗಲು-ರಾತ್ರಿ ಎನ್ನದೇ ಹಂದಿಗಳು ಈ ಗಬ್ಬೆದ್ದು ನಾರುವ ನೀರಿನಲ್ಲಿ ಹೊರಳಾಡುತ್ತಾ, ಸ್ಥಳೀಯರ ಮನೆಗಳ ಬಾಗಿಲವರೆಗೂ ಬಂದು ನಿಲ್ಲುತ್ತಿವೆ.

ನೆಂಟರಿಷ್ಟರ ಮುಂದೆ ಅವಮಾನ: ನಮ್ಮ ಮನೆಗೆ ಬರುವ ನೆಂಟರಿಷ್ಟರು, ‘ಹಳ್ಳಿಗಳ ಪರಿಸ್ಥಿತಿಗಿಂತಲೂ ಹೀನಾಯವಾಗಿರುವ ಈ ಜಾಗದಲ್ಲಿ ನೀವು ಹೇಗೆ ವಾಸಿಸುತ್ತಿದ್ದೀರಿ?’ ಎಂದು ವ್ಯಂಗ್ಯವಾಡುತ್ತಾರೆ. ಅವರ ಮಾತಿನಿಂದ ನಮಗೆ ಅವಮಾನವಾಗತ್ತಿದೆ, ಆದರೆ ಬೇರೆ ದಾರಿಯಿಲ್ಲದೆ ಇಲ್ಲದಂತಾಗಿದೆ ಎಂದು ಸ್ಥಳೀಯರು ನೋವು ತೋಡಿಕೊಳ್ಳುತ್ತಾರೆ.

ಈ ಸಮಸ್ಯೆ ಪರಿಹಾರಕ್ಕಾಗಿ ಶ್ರೀರಾಂಪುರ ಪಟ್ಟಣ ಪಂಚಾಯಿತಿಗೆ ದಿನನಿತ್ಯ ಅಲೆದಾಡಿದರೂ ಅಧಿಕಾರಿಗಳು ಮಾತ್ರ ಕಣ್ಣುಮುಚ್ಚಿ ಕುಳಿತಿದ್ದಾರೆ. ಜನರ ತೆರಿಗೆ ಹಣದಲ್ಲಿ ಸಂಬಳ ಪಡೆಯುವ ಅಧಿಕಾರಿಗಳಿಗೆ ಜನರ ಕಷ್ಟ ಮಾತ್ರ ಕಾಣಿಸುತ್ತಿಲ್ಲ.

ರೋಗಗಳಿಗೆ ಸರಾಗ: ಈಗಾಗಲೇ ಬಡಾವಣೆಯ ಅನೇಕರಲ್ಲಿ ಚರ್ಮವ್ಯಾಧಿ ಹಾಗೂ ಉಸಿರಾಟದ ತೊಂದರೆಗಳು ಕಾಣಿಸಿಕೊಂಡಿವೆ. ಈಗ ಬೇಸಿಗೆ ಕಾಲ ಶುರುವಾಗುತ್ತಿರುವುದರಿಂದ ಕೊಳಚೆ ನೀರಿನ ದುರ್ವಾಸನೆ ಮತ್ತಷ್ಟು ಹೆಚ್ಚಾಗಲಿದ್ದು, ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದೆ. ಗರ್ಭಿಣಿಯರು, ಮಕ್ಕಳು ಮತ್ತು ವೃದ್ಧರು ಈ ಅಶುಚಿತ್ವದ ನಡುವೆಯೇ ಬದುಕು ದೂಡುತ್ತಿದ್ದಾರೆ.

” ಬೀದಿಯ ನೀರು ಮನೆಯೊಳಗೆ ನುಗ್ಗುತ್ತದೆ. ಈ ಬಗ್ಗೆ ಹಲವಾರು ಬಾರಿ ಶ್ರೀರಾಂಪುರ ಪಟ್ಟಣ ಪಂಚಾಯಿತಿಗೆ ತಿಳಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಹಂದಿಗಳ ಹಾವಳಿಯಿಂದ ಮಕ್ಕಳು, ವೃದ್ಧರು ದಿನವೂ ಕಾಯಿಲೆಗೆ ತುತ್ತಾಗುತ್ತಿದ್ದಾರೆ. ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಅವರು ನಿರ್ಲಕ್ಷ್ಯ ಮಾಡುತ್ತಿದ್ದಾರೆ.”

ಶಂಕರ್, ಬಡಾವಣೆ ನಿವಾಸಿ

” ರಸ್ತೆ, ಯುಜಿಡಿ ಹಾಗೂ ಕುಡಿಯುವ ನೀರಿನ ಸಮಸ್ಯೆಯನ್ನು ನಿತ್ಯವೂ ಎದುರಿಸುವಂತಾಗಿದೆ. ಸಂಬಂಧಪಟ್ಟ ಅಧಿಕಾರಿಗಳ ಬಳಿ ಎಷ್ಟು ಬಾರಿ ಹೋದರೂ ಪ್ರಯೋಜನವಾಗುತ್ತಿಲ್ಲ. ಮುಂದೆ ಬೃಹತ್ ಮೈಸೂರು ಮಹಾನಗರ ಪಾಲಿಕೆಯಾದರೆ ಇಲ್ಲಿನ ಸಮಸ್ಯೆ ಮತ್ತಷ್ಟು ಉಲ್ಬಣವಾಗಲಿದೆ.”

ಕೆ.ಸಿ.ಬಸವರಾಜು, ಬಡಾವಣೆ ನಿವಾಸಿ ಹಾಗೂ ನಿವೃತ್ತ ತಹಸಿಲ್ದಾರ್

 

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕೊಲ್ಲಿ ರಾಷ್ಟ್ರಗಳಲ್ಲಿ ಮುಂದುವರಿದ ಆತಂಕ

ಮಧ್ಯ ಪ್ರಾಚ್ಯದಲ್ಲಿ ಇರಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕದಿಂದ ನಡೆಯುತ್ತಿರುವ ದಾಳಿ ಹಾಗೂ ಯುಎಇ, ಬಹರೇನ್, ಕುವೈತ್ ಮೊದಲಾದ ರಾಷ್ಟ್ರಗಳಲ್ಲಿರುವ…

1 hour ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಸಫುರಾ ಖಾನ್ ಎಂಬ ಆಟೋ ಓಡಿಸುವ ಕನಸುಗಾರ್ತಿ

೩೦ ವರ್ಷ ಪ್ರಾಯದ ಸಫುರಾ ಖಾನ್‌ರ ತಂದೆ ತಾಯಿ ಚೆನ್ನೆ ಯಿಂದ ಕರ್ನಾಟಕಕ್ಕೆ ವಲಸೆ ಬಂದಾಗ ಆಕೆ ಇನ್ನೂ ಮಗುವಾಗಿದ್ದರು.…

1 hour ago

ರಾಷ್ಟ್ರಿಯ ಹೆದ್ದಾರಿ ಅಗಲೀಕರಣ ವಿಳಂಬ: ಆರೋಪ

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಗುಂಡ್ಲುಪೇಟೆಯಿಂದ ನಂಜನಗೂಡು ತನಕ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು ರಸ್ತೆಯ ಎರಡೂ ಬದಿಗಳನ್ನು ಅಗೆದು…

1 hour ago

ಮೂಗನಕೊಪ್ಪಲಿನಲ್ಲಿ ಮಾದರಿ ಚಾಕಿ ಸಾಕಾಣಿಕಾ ಕೇಂದ್ರ

ಮಾಮರಶಿ ರೇಷ್ಮೆ ಕೃಷಿಯಿಂದಲೇ ಉದ್ಯಮ ಕಟ್ಟಿದ ರೇಷ್ಮೆ ತ್ಯಾಗರಾಜು ೨೦೦ಕ್ಕೂ ಹೆಚ್ಚು ಮಂದಿಗೆ ಉದ್ಯೋಗ ನೀಡಿದ ರೈತನ ಮಗ ಮಳವಳ್ಳಿ:…

1 hour ago

ಆದಾಯದ ಹಳಿಗೆ ಮರಳಿದ ಮೃಗಾಲಯ

ಕೆ.ಬಿ.ರಮೇಶನಾಯಕ ಮೈಸೂರು: ದಕ್ಷಿಣ ಭಾರತದಲ್ಲೇ ಲಕ್ಷಾಂತರ ಪ್ರವಾಸಿಗರನ್ನು ಆಕರ್ಷಿಸುವ ಶ್ರೀ ಚಾಮರಾಜೇಂದ್ರ ಮೃಗಾಲಯವು ಕೋವಿಡ್ ಸಮಯದಲ್ಲಿ ಆದಾಯ ಕುಸಿತದಿಂದ ಕಂಗೆಟ್ಟರೂ…

1 hour ago

ಲೆಬನಾನಿನ ನಾಶಕ್ಕೆ ಕಾರಣವಾಗುತ್ತಿರುವ ಹೆಜ್ಬುಲ್ಲಾ ಎಂಬ ದೇವರ ಪಕ್ಷ!

ಶೇಷಾದ್ರಿ ಗಂಜೂರು ಇರಾನ್ ಮತ್ತು ಇಸ್ರೇಲ್ ನಡುವಿನ ಸಮರ ನಾಲ್ಕನೇ ದಿನ ಪೂರ್ಣಗೊಳಿಸಿದೆ. ಯುದ್ಧದ ಬೀಸಿಗೆ ಸಿಲುಕಿ ಮುಖ್ಯವಾಗಿ ೧೨…

1 hour ago