Andolana originals

‘ಭವಾನಿ ನಗರಕ್ಕೆ ಒಮ್ಮೆ ಬನ್ನಿ ಪ್ಲೀಸ್…’

ಪ್ರಶಾಂತ್ ಎನ್. ಮಲ್ಲಿಕ್

ಮೈಸೂರು: ಸಾಂಸ್ಕೃತಿಕ ನಗರಿ, ಸ್ವಚ್ಛ ನಗರಿ ಎಂಬ ಹೆಗ್ಗಳಿಕೆಯ ಮೈಸೂರಿನ ಪಕ್ಕದಲ್ಲೇ ಒಂದು ಬಡಾವಣೆ ಇದೆ. ಆದರೆ ಅಲ್ಲಿಗೆ ಹೋದರೆ ನೀವು ಯಾವುದೋ ಹಳ್ಳಿಗಿಂತಲೂ ಕಡೆಯಾದ ಊರಿಗೆ ಬಂದಂತಾಗುತ್ತದೆ! ಇದು ಜೆ.ಪಿ. ನಗರದ  ರಿಂಗ್ ರಸ್ತೆಗೆ ತೀರಾ ಹತ್ತಿರದಲ್ಲಿರುವ ಭವಾನಿ ನಗರ ಬಡಾವಣೆಯ ಇಂದಿನ ದುಸ್ಥಿತಿ. ಹಾಗಾಗಿ ಸ್ಥಳೀಯರು ಸಂಬಂಧಪಟ್ಟ ಅಧಿಕಾರಿಗಳನ್ನು ‘ಒಮ್ಮೆ ಬನ್ನಿ ಪ್ಲೀಸ್…’ ಎನ್ನುತ್ತಿದ್ದಾರೆ.

ಹಂದಿಗಳ ತಾಣವಾದ ವಸತಿ ಪ್ರದೇಶ: ಬಡಾವಣೆಯ ೨ನೇ ಕ್ರಾಸ್‌ನಲ್ಲಿ ಕಾಲಿಟ್ಟರೆ ಸಾಕು, ಮೂಗು ಮುಚ್ಚಿಕೊಳ್ಳದೆ ಓಡಾಡುವುದು ಅಸಾಧ್ಯ. ಇಲ್ಲಿನ ಯುಜಿಡಿ (ಒಳಚರಂಡಿ) ಕಾಮ ಗಾರಿ ಅರ್ಧಕ್ಕೆ ನಿಂತು ಹಲವು ವರ್ಷಗಳೇ ಕಳೆದಿವೆ. ಚರಂಡಿ ನೀರು ಮತ್ತು ಮಳೆಯ ನೀರು ಹರಿದು ಹೋಗಲು ಸರಿಯಾದ ವ್ಯವಸ್ಥೆ ಇಲ್ಲದೆ, ಖಾಲಿ ಇರುವ ಸೈಟುಗಳಲ್ಲೇ ಬಂದು ನಿಲ್ಲುತ್ತಿದೆ. ಈ ಕೊಳಚೆ ನೀರು ಈಗ ಹಂದಿಗಳ ನೆಚ್ಚಿನ ಆವಾಸ ಸ್ಥಾನವಾಗಿದೆ. ಹಗಲು-ರಾತ್ರಿ ಎನ್ನದೇ ಹಂದಿಗಳು ಈ ಗಬ್ಬೆದ್ದು ನಾರುವ ನೀರಿನಲ್ಲಿ ಹೊರಳಾಡುತ್ತಾ, ಸ್ಥಳೀಯರ ಮನೆಗಳ ಬಾಗಿಲವರೆಗೂ ಬಂದು ನಿಲ್ಲುತ್ತಿವೆ.

ನೆಂಟರಿಷ್ಟರ ಮುಂದೆ ಅವಮಾನ: ನಮ್ಮ ಮನೆಗೆ ಬರುವ ನೆಂಟರಿಷ್ಟರು, ‘ಹಳ್ಳಿಗಳ ಪರಿಸ್ಥಿತಿಗಿಂತಲೂ ಹೀನಾಯವಾಗಿರುವ ಈ ಜಾಗದಲ್ಲಿ ನೀವು ಹೇಗೆ ವಾಸಿಸುತ್ತಿದ್ದೀರಿ?’ ಎಂದು ವ್ಯಂಗ್ಯವಾಡುತ್ತಾರೆ. ಅವರ ಮಾತಿನಿಂದ ನಮಗೆ ಅವಮಾನವಾಗತ್ತಿದೆ, ಆದರೆ ಬೇರೆ ದಾರಿಯಿಲ್ಲದೆ ಇಲ್ಲದಂತಾಗಿದೆ ಎಂದು ಸ್ಥಳೀಯರು ನೋವು ತೋಡಿಕೊಳ್ಳುತ್ತಾರೆ.

ಈ ಸಮಸ್ಯೆ ಪರಿಹಾರಕ್ಕಾಗಿ ಶ್ರೀರಾಂಪುರ ಪಟ್ಟಣ ಪಂಚಾಯಿತಿಗೆ ದಿನನಿತ್ಯ ಅಲೆದಾಡಿದರೂ ಅಧಿಕಾರಿಗಳು ಮಾತ್ರ ಕಣ್ಣುಮುಚ್ಚಿ ಕುಳಿತಿದ್ದಾರೆ. ಜನರ ತೆರಿಗೆ ಹಣದಲ್ಲಿ ಸಂಬಳ ಪಡೆಯುವ ಅಧಿಕಾರಿಗಳಿಗೆ ಜನರ ಕಷ್ಟ ಮಾತ್ರ ಕಾಣಿಸುತ್ತಿಲ್ಲ.

ರೋಗಗಳಿಗೆ ಸರಾಗ: ಈಗಾಗಲೇ ಬಡಾವಣೆಯ ಅನೇಕರಲ್ಲಿ ಚರ್ಮವ್ಯಾಧಿ ಹಾಗೂ ಉಸಿರಾಟದ ತೊಂದರೆಗಳು ಕಾಣಿಸಿಕೊಂಡಿವೆ. ಈಗ ಬೇಸಿಗೆ ಕಾಲ ಶುರುವಾಗುತ್ತಿರುವುದರಿಂದ ಕೊಳಚೆ ನೀರಿನ ದುರ್ವಾಸನೆ ಮತ್ತಷ್ಟು ಹೆಚ್ಚಾಗಲಿದ್ದು, ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದೆ. ಗರ್ಭಿಣಿಯರು, ಮಕ್ಕಳು ಮತ್ತು ವೃದ್ಧರು ಈ ಅಶುಚಿತ್ವದ ನಡುವೆಯೇ ಬದುಕು ದೂಡುತ್ತಿದ್ದಾರೆ.

” ಬೀದಿಯ ನೀರು ಮನೆಯೊಳಗೆ ನುಗ್ಗುತ್ತದೆ. ಈ ಬಗ್ಗೆ ಹಲವಾರು ಬಾರಿ ಶ್ರೀರಾಂಪುರ ಪಟ್ಟಣ ಪಂಚಾಯಿತಿಗೆ ತಿಳಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಹಂದಿಗಳ ಹಾವಳಿಯಿಂದ ಮಕ್ಕಳು, ವೃದ್ಧರು ದಿನವೂ ಕಾಯಿಲೆಗೆ ತುತ್ತಾಗುತ್ತಿದ್ದಾರೆ. ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಅವರು ನಿರ್ಲಕ್ಷ್ಯ ಮಾಡುತ್ತಿದ್ದಾರೆ.”

ಶಂಕರ್, ಬಡಾವಣೆ ನಿವಾಸಿ

” ರಸ್ತೆ, ಯುಜಿಡಿ ಹಾಗೂ ಕುಡಿಯುವ ನೀರಿನ ಸಮಸ್ಯೆಯನ್ನು ನಿತ್ಯವೂ ಎದುರಿಸುವಂತಾಗಿದೆ. ಸಂಬಂಧಪಟ್ಟ ಅಧಿಕಾರಿಗಳ ಬಳಿ ಎಷ್ಟು ಬಾರಿ ಹೋದರೂ ಪ್ರಯೋಜನವಾಗುತ್ತಿಲ್ಲ. ಮುಂದೆ ಬೃಹತ್ ಮೈಸೂರು ಮಹಾನಗರ ಪಾಲಿಕೆಯಾದರೆ ಇಲ್ಲಿನ ಸಮಸ್ಯೆ ಮತ್ತಷ್ಟು ಉಲ್ಬಣವಾಗಲಿದೆ.”

ಕೆ.ಸಿ.ಬಸವರಾಜು, ಬಡಾವಣೆ ನಿವಾಸಿ ಹಾಗೂ ನಿವೃತ್ತ ತಹಸಿಲ್ದಾರ್

 

 

ಆಂದೋಲನ ಡೆಸ್ಕ್

Recent Posts

ಕಾಂಕ್ರೋಚ್‌ಗಳ ಮೇಲೆ ಲಾಠಿಚಾರ್ಜ್:‌ ವಿಡಿಯೋ ನೋಡಲು ಟೈಮ್‌ ಇಲ್ಲ ಎಂದ ಸುಪ್ರೀಂಕೋರ್ಟ್‌

ನವದೆಹಲಿ: ನೀಟ್‌ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…

13 hours ago

ಓದುಗರ ಪತ್ರ: ರೈಲಿನಲ್ಲಿ ತಿನಿಸು ಮಾರುವವರು ವೈಯಕ್ತಿಕ ಸ್ವಚ್ಛತೆಗೂ ಗಮನ ನೀಡಲಿ

ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…

22 hours ago

ಓದುಗರ ಪತ್ರ: ‘ಗೃಹಜ್ಯೋತಿ’ ಗೊಂದಲ ನಿವಾರಿಸಿ

ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…

22 hours ago

ಓದುಗರ ಪತ್ರ: ಬರಪೀಡಿತ ಜಿಲ್ಲೆಗಳೆಂದು ಘೋಷಿಸಿ

ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…

22 hours ago

ಓದುಗರ ಪತ್ರ: ಸಂಸತ್ ಚಲೋ ತಡೆಗೆ ನಡೆದಿತ್ತೆ ಹುನ್ನಾರ?

ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ…

22 hours ago

ಇ-20 ಇಂಧನಕ್ಕೆ ಭಾರತ ಪ್ರಯೋಗಾಲಯವಾಯಿತೆ?!

ಶುಭಾ ಖಟಾವಕರ ಮ್ಹೆತ್ರಸ್ ಸುಪ್ರೀಂ ಕೋರ್ಟ್‌ನಲ್ಲಿ ಸ್ವತಃ ಅಟಾರ್ನಿ ಜನರಲ್ ಹೇಳಿಕೆ! ೨೦೨೩ರ ನಂತರ ತಯಾರಾದ ವಾಹನಗಳಿಗೆ ಮಾತ್ರ ಇ-೨೦…

22 hours ago