Andolana originals

ದಸರಾದಲ್ಲಿ ಪೊಲೀಸ್‌ ಬ್ಯಾಂಡ್‌ ವಾದ್ಯ ವೈಭವ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪ್ರಮುಖ ಆಕರ್ಷಣೆಗಳಲ್ಲೊಂದಾದ ಸಮೂಹ ಪೊಲೀಸ್ ಬ್ಯಾಂಡ್ ತಂಡ ತನ್ನ ವಿಶೇಷ ವಾದ್ಯಗಳ ಸಂಗೀತದೊಂದಿಗೆ ದಸರಾ ಉತ್ಸವಕ್ಕೆ ಮೆರುಗು ನೀಡಿತು.

ಮಂಗಳವಾರ ಸಂಜೆ ಅರಮನೆಯ ಸಾಂಸ್ಕೃತಿಕ ವೇದಿಕೆಯಲ್ಲಿ ಸುಮಾರು ೪೫೦ ಮಂದಿ ಪೊಲೀಸ್ ಸಿಬ್ಬಂದಿ ವಿವಿಧ ವಾದ್ಯಗಳ ಮೂಲಕ ಗಂಧರ್ವ ಲೋಕವನ್ನೇ ಸೃಷ್ಟಿ ಮಾಡಿದರು. ಸಂಜೆ ೭ ಗಂಟೆಗೆ ಆರಂಭವಾದ ಪೊಲೀಸ್ ಬ್ಯಾಂಡ್‌ನಲ್ಲಿ ಮೈಸೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳ ಪೊಲೀಸರು ಕನ್ನಡ ಮತ್ತು ಇಂಗ್ಲಿಷ್‌ನ ಎರಡು ತಂಡಗಳಲ್ಲಿ ಸಮೂಹ ವಾದ್ಯಗಳ ಮೂಲಕ ಸುಮಾರು ಒಂದೂವರೆ ತಾಸು ಸಂಗೀತ ಕಾರ‍್ಯಕ್ರಮ ನೀಡಿದವು.

ಸಂಗೀತದ ಮೂಲಕ ಜನರಲ್ ಸಲ್ಯೂಟ್

ಪೊಲೀಸ್ ತಂಡವು ಬ್ಯಾಂಡ್ ಕಾರ‍್ಯಕ್ರಮಕ್ಕೆ ರಾಯಲ್ ಫ್ಯಾನ್ ಫೇರ್ ಕೃತಿಯ ಸಂಗೀತ ನುಡಿಸಿ ಮುಖ್ಯ ಅತಿಥಿಗಳಿಗೆ ಸ್ವಾಗತ ಕೋರುವುದರೊಂದಿಗೆ ತಮ್ಮ ಸಂಗೀತ ಕಾರ‍್ಯಕ್ರಮಕ್ಕೆ ಚಾಲನೆ ನೀಡಿತು. ನಂತರ ಅತಿಥಿಗಳಿಗೆ ಸಂಗೀತದ ಮೂಲಕ ಜನರಲ್ ಸಲ್ಯೂಟ್ ನಡೆಸಲಾಯಿತು. ಇದರ ನಂತರ ೪೫೦ಕ್ಕೂ ಹೆಚ್ಚು ಮಂದಿ ಸೇರಿ ವಂದೇ ಮಾತರಂ, ಏ ಮೇರಿ ವತನ್ ಕೇ ಲೋಗೋ, ಭಾರತ್ ಹಮ್ ಕೋ ಜಾನ್‌ಸೆ ಪ್ಯಾರ ಎಂಬ ಹಾಡುಗಳನ್ನು ವಾದ್ಯಗಳ ಮೂಲಕ ನುಡಿಸಿ ಪ್ರೇಕ್ಷಕರ ಕರತಾಡನಕ್ಕೆ ಪಾತ್ರರಾದರು. ಭಕ್ತಿಗೀತಗಳ ಮೆರುಗು ಕರ್ನಾಟಕ ವಾದ್ಯವೃಂದದಿಂದ ನಮ್ಮಮ್ಮ ಶಾರದೆ ಉಮಾ ಮಹೇಶ್ವರಿ ಎಂಬ ಹಾಡನ್ನು ನುಡಿಸಲಾಯಿತು. ಪ್ರೀಣಯಾಮೋ ವಾಸುದೇವಂ, ಶ್ರೀ ರಾಮಚಂದ್ರ ಕೃಪಾಲು ಭಜನಮ ಎಂಬ ಭಕ್ತಿಗೀತೆಗಳನ್ನು ವಾದ್ಯಗಳ ಮೂಲಕ ಪ್ರಸ್ತುತಪಡಿಸಲಾಯಿತು.

ಎ. ಆರ್. ರೆಹಮಾನ್ ಸಾಂಗ್ಸ್

ಮೆಡ್ಲೇ ಆಂಗ್ಲ ವಾದ್ಯವೃಂದದಿಂದ ಲೈಟ್ ಕ್ಯಾವೆಲರಿ, ರಾಖಿ ಮೆಡ್ಲೀ, ಖ್ಯಾತ ಸಂಗೀತ ನಿರ್ದೇಶಕ ಎ. ಆರ್.ರೆಹಮಾನ್ ಅವರ ಸುಪ್ರಸಿದ್ಧ ಆರು ಗೀತೆಗಳನ್ನು ಒಟ್ಟುಗೂಡಿಸಿ ಎ. ಆರ್. ರೆಹಮಾನ್ ಸಾಂಗ್ಸ್ ಮೆಡ್ಲೇ ಎಂಬ ಹೆಸರಿನಲ್ಲಿ ವಾದ್ಯಗಳನ್ನು ನುಡಿಸಿ ಪ್ರೇಕ್ಷಕರಿಂದ ಪ್ರಶಂಸೆ ಪಡೆದರು.

ಮನಸೆಳೆದ ಜುಗಲ್ ಬಂದಿ

ನಂತರ ವಯೋಲಿನ್ ಕಲಾವಿದ ಪದ್ಮಭೂಷಣ ಡಾ. ಎಲ್. ಸುಬ್ರಹ್ಮಣ್ಯ ಅವರ ಕಾನ್ವರ್‌ಸೆಷನ್ ಎಂಬ ಸಂಯೋಜನೆಯನ್ನು ಕರ್ನಾಟಕ ಸಂಗೀತ ಹಾಗೂ ಆಂಗ್ಲ ವಾದ್ಯವೃಂದದವರು ಜುಗಲ್ಬಂದಿ ರೂಪದಲ್ಲಿ ಪ್ರಸ್ತುತಪಡಿಸಿದ್ದು, ಸಂಗೀತ ಪ್ರಿಯರನ್ನು ತಲೆದೂಗುವಂತೆ ಮಾಡಿದರು.

ಡ್ರಮ್ಮರ್ ಡಿಲೈಟ್ ಆಕರ್ಷಣೆ

ನಂತರ ಸಮೂಹ ವಾದ್ಯ ಮೇಳದಲ್ಲಿನ ಡ್ರಮ್ಮರ‍್ಸ್ ಅವರಿಂದ ಡ್ರಮ್ಮರ್ ಡಿಲೈಟ್ ಎಂಬ ಕಾರ್ಯಕ್ರಮ ನೋಡುಗರನ್ನು ಸೂಜಿಗಲ್ಲಿನಂತೆ ಸೆಳೆಯುವಲ್ಲಿ ಯಶಸ್ವಿಯಾಯಿತು. ವಿಶೇಷವಾಗಿ ಕನ್ನಡ ಮತ್ತು ಇಂಗ್ಲಿಷ್‌ನ ಒಟ್ಟು ೧೨ ಕೃತಿಗಳು ಪೊಲೀಸ್ ಬ್ಯಾಂಡ್ ಕಾರ್ಯಕ್ರಮದಲ್ಲಿ ಪ್ರೇಕ್ಷಕರ ಮನ ಸೂರೆಗೊಂಡವು. ಸಾರೆ ಜಹಾನ್ ಸೆ ಅಚ್ಚಾ ಗೀತೆಯೊಂದಿಗೆ ಕಾರ್ಯಕ್ರಮ ಸಂಪನ್ನಗೊಂಡಿತು. ಪೊಲೀಸ್ ಬ್ಯಾಂಡ್ ಕಲಾವಿದರು ಕ್ಲಾರಿಯೋನೆಟ್, ಪಿಕೋಲೊ, ಕೊಳಲು, ಬ್ಯಾಸೂನ್, ಸ್ಯಾಕ್ಸೋಫೋನ್, ಟ್ರುಂಪೆಟ್ಸ್, ಫ್ರೆಂಚ್ ಹಾರ್ನ್, ಸರ್ಕಲ್ ಬೇಸ್, ತುಬಾ, ಡ್ರಮ್ಸ್, ಪಿಯಾನೋ, ವಯಲಿನ್, ಸೆಲೋ, ಡಬ್ಬಲ್ ಬೇಸ್, ಗ್ರೇಸಿಯನ್ ಹಾಪ್ಸ್ ಮುಂತಾದ ವಾದ್ಯಗಳನ್ನು ಬಳಸಿದ್ದರು. ಕಾರ್ಯಕ್ರಮದಲ್ಲಿ ಗೃಹಸಚಿವ ಡಾ. ಜಿ. ಪರಮೇಶ್ವರ್, ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್. ಸಿ. ಮಹದೇವಪ್ಪ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಶಾಸಕರಾದ ತನ್ವೀರ್ ಸೇಠ್, ಅನಿಲ್ ಚಿಕ್ಕಮಾದು, ಶ್ರೀವತ್ಸ, ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ಸೇರಿದಂತೆ ಹಿರಿಯ, ಕಿರಿಯ ಅಽಕಾರಿಗಳು ಕಾರ‍್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

೧೫೬ ವರ್ಷ ಇತಿಹಾಸ

ಪೊಲೀಸ್ ಬ್ಯಾಂಡ್‌ಗೆ ಸುಮಾರು ೧೫೬ ವರ್ಷಗಳ ಇತಿಹಾಸವಿದೆ. ಮೈಸೂರು ಸಂಸ್ಥಾನದ ಅಂದಿನ ಮಹಾರಾಜ ಜಯಚಾಮರಾಜೇಂದ್ರ ಒಡೆಯರ್ ಅವರು ಸಂಗೀತ ಅಭಿರುಚಿ ಉಳ್ಳವರಾಗಿದ್ದರು. ಹಾಗಾಗಿ ೧೮೬೮ ರಲ್ಲಿ ಅರಮನೆ ಬ್ಯಾಂಡ್ ಅನ್ನು ಸ್ಥಾಪಿಸಿದರು. ಸ್ವಾತಂತ್ರ್ಯಾ ನಂತರ ಅರಮನೆ ಬ್ಯಾಂಡ್ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡಿತು. ಅಂದಿನಿಂದ ಇಂದಿನ ವರೆಗೂ ಈ ಪೊಲೀಸ್ ಬ್ಯಾಂಡ್ ದಸರಾ ಮಹೋತ್ಸವದಲ್ಲಿ ತನ್ನದೇ ಆದ ಪ್ರಮುಖ್ಯತೆ ಪಡೆದಿದೆ.

andolana

Recent Posts

ಕುರಟ್ಟಿ ಹೊಸೂರಲ್ಲಿ ಪ್ರಕೃತಿ ವಿಸ್ಮಯ: ಕಹಿ ಬೇವಿನ ಮರದಲ್ಲಿ ಸಿಹಿ ದ್ರಾವಣ ಕಂಡು ಜನರು ಅಚ್ಚರಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು  ಹನೂರು: ಕಡು ಕಹಿ ಎಲೆ, ಕಾಂಡ, ಕಾಯಿ ನೀಡುವ ಬೇವಿನ ಮರದಲ್ಲಿ…

10 hours ago

ಕನ್ನಡದಲ್ಲಿ ರೈಲ್ವೆ ಪರೀಕ್ಷೆ ನಡೆಸದಿದ್ದರೆ ಉಗ್ರ ಹೋರಾಟ: ನಾರಾಯಣಗೌಡ ಎಚ್ಚರಿಕೆ

ಬೆಂಗಳೂರು: ರೈಲ್ವೆಯ ಯಾವುದೇ ಪರೀಕ್ಷೆಯಿರಲಿ, ಅದನ್ನು ಕನ್ನಡದಲ್ಲೇ ಕಡ್ಡಾಯವಾಗಿ ನಡೆಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ…

10 hours ago

ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ: ಪರೀಕ್ಷಾ ಕೇಂದ್ರಗಳಿಗೆ ಸಿಇಓ ಭೇಟಿ

ಮಂಡ್ಯ: ಜನವರಿ.27ರಿಂದ ಪ್ರಾರಂಭವಾಗಿರುವ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಹಿನ್ನೆಲೆಯಲ್ಲಿ ಇಂದು ತಾಲ್ಲೂಕಿನ ಸೂನಗನಹಳ್ಳಿ ಮತ್ತು ತಗ್ಗಹಳ್ಳಿ ಗ್ರಾಮದ ಸರ್ಕಾರಿ…

11 hours ago

ಲೋಕಸಭೆಯಲ್ಲಿ ಸ್ಪೀಕರ್‌ ಮೇಲೆ ಪೇಪರ್‌ ತೂರಿದ್ದ 8 ಮಂದಿ ಸಂಸದರು ಅಮಾನತು

ನವದೆಹಲಿ: ಸಂಸತ್ತಿನ ಬಜೆಟ್‌ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಉಂಟಾದ ಭಾರೀ ಗದ್ದಲ ಮತ್ತು ಸ್ಪೀಕರ್‌ ಪೀಠದ ಕಡೆಗೆ ಪೇಪರ್‌ ಹರಿದು…

11 hours ago

ನರೇಗಾ ಮರುಸ್ಥಾಪನೆಗೆ ಸಿಎಂ ಸಿದ್ದರಾಮಯ್ಯ ಪಟ್ಟು: ವಿಧಾನಸಭೆಯಲ್ಲಿ ಕೇಂದ್ರದ ವಿರುದ್ಧ ನಿರ್ಣಯ ಮಂಡನೆ

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಉದ್ಯೋಗ ಯೋಜನೆಯನ್ನು ವಿರೋಧಿಸಿ ಹಾಗೂ ಹಳೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ…

11 hours ago

ಹನೂರು| ಆಂದೋಲನ ವರದಿಯಿಂದ ಎಚ್ಚೆತ್ತ ಅಧಿಕಾರಿಗಳು: ಗ್ರಾಮಗಳಿಗೆ ಭೇಟಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಟಳ್ಳಿ ಹಾಗೂ ಸುಳ್ವಾಡಿ…

11 hours ago