Andolana originals

ಅಪರಾಧ ತಡೆಗೆ ಶಸ್ತ್ರ ಸಹಿತ ರಸ್ತೆಗಿಳಿದ ಪೊಲೀಸರು

ಸಂಚಾರ ನಿಯಮ ಉಲ್ಲಂಘಿಸುವವರ ಮೇಲೂ ನಿಗಾ

ಎಚ್.ಎಸ್‌ ದಿನೇಶ್‌ ಕುಮಾರ್‌
ಮೈಸೂರು: ಅಪರಾಧ ಪ್ರಕರಣಗಳು, ಸಂಚಾರ ನಿಯಮ ಉಲ್ಲಂಘನೆ ಇತ್ಯಾದಿ ಕಾನೂನು ಬಾಹಿರ ಚಟುವಟಿಕೆಗಳ ನಿಯಂತ್ರಣಕ್ಕಾಗಿ ನಗರ ಪೊಲೀಸರು ಶಸಸಜ್ಜಿತರಾಗಿ ವಿಶೇಷ ತಪಾಸಣಾ ಕಾರ್ಯಕ್ಕೆ ಮುಂದಾಗಿದ್ದಾರೆ.

ಸರಗಳ್ಳತನ, ದರೋಡೆ, ಸಂಖ್ಯಾ ಫಲಕವಿಲ್ಲದ ವಾಹನಗಳ ಮೇಲೆ ಕ್ರಮ ಕೈಗೊಳ್ಳಬೇಕು, ಈ ಮೂಲಕ ಅಪರಾಧ ಕೃತ್ಯಗಳನ್ನು ಕಟ್ಟುನಿಟ್ಟಾಗಿ ತಡೆಗಟ್ಟಬೇಕು ಎಂಬ ಉದ್ದೇಶದಿಂದ ನಗರ ಪೊಲೀಸ್ ಆಯುಕ್ತರು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸರನ್ನೂ ಬಳಸಿಕೊಂಡು ಪ್ರತಿದಿನ ಸಂಜೆ ೬ ಗಂಟೆಯಿಂದ ತಡರಾತ್ರಿವರೆಗೆ ವಿಶೇಷ ತಪಾಸಣಾ ಕಾರ್ಯವನ್ನು ಆರಂಭಿಸಿದ್ದಾರೆ. ಅದೂ ಶಸ್ತ್ರ ಸಜ್ಜಿತ ಪೊಲೀಸರೊಂದಿಗೆ. . !

ಎರಡು ದಿನಗಳ ಹಿಂದೆ ಈ ಕಾರ್ಯಾಚರಣೆಗೆ ಚಾಲನೆ ನೀಡಲಾಗಿದೆ. ನಗರದ ಹೃದಯಭಾಗದ ಪ್ರಮುಖ ರಸ್ತೆಗಳು, ನಗರದಾದ್ಯಂತ ವಿವಿಧ ಬಡಾವಣೆಗಳ ಪ್ರಮುಖ ರಸ್ತೆಗಳಲ್ಲಿ ಶಸ್ತ್ರ ಸಜ್ಜಿತ ಪೊಲೀಸರು ಗಸ್ತು ಹಾಗೂ ತಪಾಸಣೆ ನಡೆಸುತ್ತಿದ್ದಾರೆ.

ನಗರದ ವಿವಿಧೆಡೆ ಆಗಾಗ್ಗೆ ಸರಗಳ್ಳತನ, ದರೋಡೆ, ರಸ್ತೆಯಲ್ಲಿಯೇ ಬಡಿದಾಟ, ಗಲಾಟೆ ಪ್ರಕರಣಗಳು ವರದಿಯಾಗುತ್ತಿವೆ. ಹೀಗಾಗಿ ಕಳೆದ ವಾರ ಪೊಲೀಸ್ ಅಧಿಕಾರಿಗಳು ಹಾಗೂ ಎಲ್ಲಾ ಠಾಣೆಗಳ ಅಧಿಕಾರಿಗಳ ಸಭೆ ಕರೆದಿದ್ದ ಆಯುಕ್ತರಾದ ಸೀಮಾ ಲಾಟ್ಕರ್ ಅವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ.

ಕೇವಲ ಸಂಚಾರ ಪೊಲೀಸರು ತಪಾಸಣೆ ನಡೆಸಿದರೆ ಕೆಲ ಅಪರಾಧ ಪ್ರಕರಣಗಳು ಪತ್ತೆಯಾಗಲು ಸಾಧ್ಯವಾಗುವುದಿಲ್ಲ ಎಂಬುದನ್ನು ಅರಿತ ಸೀಮಾ ಲಾಟ್ಕರ್ ಅವರು, ನಗರದ ಎಲ್ಲಾ ಕಾನೂನು- ಸುವ್ಯವಸ್ಥೆ ಠಾಣೆಗಳ ಪೊಲೀಸರನ್ನೂ ತಪಾಸಣೆಗೆ ಬಳಸಿಕೊಂಡಿದ್ದಾರೆ. ಆಯಾ ಠಾಣೆಗಳ ಇನ್‌ಸ್ಪೆಕ್ಟರ್‌ಗಳ ನೇತೃತ್ವದಲ್ಲಿ ಓರ್ವ ಎಸ್‌ಐ ಹಾಗೂ ಮೂವರು ಕಾನ್‌ಸ್ಟೆಬಲ್‌ಗಳನ್ನು ವಿಶೇಷ ತಪಾಸಣೆಗೆ ಬಳಸಿಕೊಳ್ಳಲಾಗಿದೆ. ರಸ್ತೆಯಲ್ಲಿ ಅನುಮಾನಾಸ್ಪದವಾಗಿ ಸಂಚರಿಸುವ ವಾಹನಗಳನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ.

ಅಂತಹ ವಾಹನಗಳ ದಾಖಲೆಗಳನ್ನು ತಪಾಸಣೆ ಮಾಡಿ ದಾಖಲೆಗಳನ್ನು ಪರಿಶೀಲಿಸುವ ಕೆಲಸ ಮಾಡಲಾಗುತ್ತಿದೆ. ಇನ್ನು ಸಂಖ್ಯಾ ಫಲಕವಿಲ್ಲದ ವಾಹನಗಳನ್ನು ತಡೆಯುವ ಪೊಲೀಸರು, ಸವಾರರನ್ನು ಮುಲಾಜಿಲ್ಲದೆ ಠಾಣೆಗೆ ಕರೆದೊಯ್ಯುತ್ತಿದ್ದಾರೆ. ಹೆಲ್ಮೆಟ್ ಧರಿಸದೆ ವಾಹನ ಚಾಲನೆ ಮಾಡುವವರಿಗೆ ಪೊಲೀಸರ ತಂಡ ಜಾಗೃತಿ ಮೂಡಿಸುತ್ತಿದೆ. ತಪಾಸಣೆ ವೇಳೆ ಕಾರುಗಳ ಬಗ್ಗೆ ವಿಶೇಷ ನಿಗಾ ವಹಿಸಲಾಗುತ್ತಿದೆ. ಈ ವಿಶೇಷ ತಪಾಸಣೆ ನಿರಂತರವಾಗಿ ಮುಂದುವರಿಯಲಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಪೊಲಿಸರು ಮನವಿ ಮಾಡಿದ್ದಾರೆ.

ಸುರಕ್ಷತೆಗೆ ಮೊದಲ ಆದ್ಯತೆ
ಜನರ ಸುರಕ್ಷತೆಗೆ ನಮ್ಮ ಮೊದಲ ಆದ್ಯತೆ. ಹೀಗಾಗಿ ವಿಶೇಷ ತಪಾಸಣೆ ಆರಂಭಿಸಲಾಗಿದೆ. ವಾಹನ ಸವಾರರು ಸಂಚಾರ ನಿಯಮವನ್ನು ಪಾಲಿಸಬೇಕು. ಹಾಗೂ ದಾಖಲೆಗಳನ್ನು ಜೊತೆಯಲ್ಲಿ ಇಟ್ಟುಕೊಳ್ಳಬೇಕು. ರಂಜಾನ್ ಹಬ್ಬ ಮುಗಿಯುವವರೆಗೂ ಈ ತಪಾಸಣೆ ಮುಂದುವರಿಯಲಿದೆ. ಸೀಮಾ ಲಾಟ್ಕರ್, ನಗರ ಪೊಲೀಸ್ ಆಯುಕ್ತರು.

ಆಂದೋಲನ ಡೆಸ್ಕ್

Recent Posts

ಈಶಾ ಫೌಂಡೇಶನ್‌ ಬಳಿ ಅರಣ್ಯ ಪ್ರದೇಶದಲ್ಲಿ ಬೆಂಕಿ ಅವಘಡ

ಚಿಕ್ಕಬಳ್ಳಾಪುರ: ಮಹಾಶಿವರಾತ್ರಿ ಸಂಭ್ರಮದ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತರು ಚಿಕ್ಕಬಳ್ಳಾಪುರದ ಈಶಾ ಫೌಂಡೇಶನ್‌ಗೆ ಆಗಮಿಸಿದ್ದರು. ಎಲ್ಲೆಡೆ ಶಿವನಾಮ ಸ್ಮರಣೆ ಕೇಳಿಬರುತ್ತಿದೆ. ಈ…

1 hour ago

ಕೇಂದ್ರದ ವಿರುದ್ಧ ರಾಹುಲ್‌ ಗಾಂಧಿ ಮತ್ತೆ ವಾಗ್ದಾಳಿ

ನವದೆಹಲಿ: ಭಾರತ-ಅಮೇರಿಕಾ ಮಧ್ಯಂತರ ವ್ಯಾಪಾರ ಒಪ್ಪಂದ ಕುರಿತು ಕೇಂದ್ರ ಸರ್ಕಾರದ ಒಪ್ಪಂದ ಕುರಿತು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ನಾಯಕ…

1 hour ago

ಬಾಂಗ್ಲಾ ನೂತನ ಪ್ರಧಾನಿ ಪ್ರಮಾಣ ವಚನಕ್ಕೆ ಭಾರತದ ಪ್ರತಿನಿಧಿಯಾಗಿ ಸ್ಪೀಕರ್‌ ಓಂ ಬಿರ್ಲಾ

ನವದೆಹಲಿ: ಬಾಂಗ್ಲಾದೇಶದ ನೂತನ ಸರ್ಕಾರದ ಪ್ರಧಾನಿಯಾಗಿ ತಾರಿಕ್‌ ರೆಹಮಾನ್‌ ಅವರು ಪ್ರಮಾಣವಚನ ಸ್ವೀಕರಿಸಲಿರುವ ಕಾರ್ಯಕ್ರಮದಲ್ಲಿ ಭಾರತದ ಪರವಾಗಿ ಲೋಕಸಭಾ ಸ್ಪೀಕರ್‌…

2 hours ago

ಕೆನಡಾದಲ್ಲಿ ಹತ್ಯೆಯಾಗಿದ್ದ ಐಟಿ ಉದ್ಯೋಗಿ ಚಂದನ್‌ ಮೃತದೇಹ ಸ್ವಗ್ರಾಮಕ್ಕೆ

ಬೆಂಗಳೂರು: ಕೆನಡಾದಲ್ಲಿ ಐಟಿ ಉದ್ಯೋಗಿ ಚಂದನ್‌ ಕುಮಾರ್‌ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ರಾತ್ರಿ ಸ್ವಗ್ರಾಮ ತ್ಯಾಮಗೊಂಡ್ಲುಗೆ ಚಂದನ್‌…

2 hours ago

ಕೋಲಾರದಲ್ಲಿ ನಾಳೆ ಟಾಟಾ ಹೆಲಿಕಾಪ್ಟರ್‌ ಘಟಕ ಉದ್ಘಾಟಿಸಲಿರುವ ಪ್ರಧಾನಿ ಮೋದಿ

ನವದೆಹಲಿ: ಕೋಲಾರ ಜಿಲ್ಲೆಯ ವೇಮಗಲ್‌ನಲ್ಲಿ ಟಾಟಾ ಏರ್‌ಬಸ್‌ ಲಘು ಹೆಲಿಕಾಪ್ಟರ್‌ ಅಂತಿಮ ಜೋಡಣೆ ಘಟಕವನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ…

2 hours ago

ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಮೈಸೂರು: ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್ಸೊಂದು ಏಕಾಏಕಿ ಮುಂದೆ ಚಲಿಸುತ್ತಿದ್ದ ಮತ್ತೊಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿರುವ…

10 hours ago