mysore university
ಮೈಸೂರು: ಶತಮಾನ ಪೂರೈಸಿರುವ ಮೈಸೂರು ವಿಶ್ವವಿದ್ಯಾನಿಲಯವು ಇದೇ ಮೊದಲ ಬಾರಿಗೆ ಸ್ನಾತ ಕೋತ್ತರ ಪದವಿ ಪರೀಕ್ಷೆಗಳನ್ನು ಒಂದೇ ಸೂರಿನಡಿ ನಡೆಸುವ ಮೂಲಕ ಪರೀಕ್ಷಾ ಚಟುವಟಿಕೆಗಳಲ್ಲಿ ಸುಧಾರಣೆಗೆ ಮುನ್ನುಡಿ ಬರೆದಿದೆ.
ಈವರೆಗೆ ಆಯಾಯ ಅಧ್ಯಯನ ವಿಭಾಗಗಳಲ್ಲೇ ಪರೀಕ್ಷೆಗಳನ್ನು ನಡೆಸಲಾಗುತ್ತಿತ್ತು. ಆದರೆ, ೨೦೨೫-೨೬ನೇ ಶೈಕ್ಷಣಿಕ ವರ್ಷದಲ್ಲಿ ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಮೈಸೂರು ವಿವಿಯ ಮೌಲ್ಯ ಭವನದಲ್ಲಿ ನಡೆಸಲಾಗುತ್ತದೆ. ಪ್ರಸಕ್ತ ಶೈಕ್ಷಣಿಕ ಸಾಲಿನ ೨ನೇ ಮತ್ತು ನಾಲ್ಕನೇ ಸೆಮಿಸ್ಟರ್ ಸ್ನಾತಕೋತ್ತರ ಪದವಿ ಪರೀಕ್ಷೆಗಳು ಜುಲೈ ೩ ರಿಂದಲೇ ಪ್ರಾರಂಭವಾಗಿದ್ದು, ಈ ಮೂಲಕ ಮೈಸೂರು ವಿವಿಯು ಮಹತ್ವದ ಹೆಜ್ಜೆ ಇರಿಸಿದೆ.
ವಿಶ್ವವಿದ್ಯಾನಿಲಯದ ೫೪ ವಿಭಾಗಗಳ ವಿದ್ಯಾರ್ಥಿಗಳು ಒಂದೇ ಸೂರಿನಡಿ ಪರೀಕ್ಷೆ ಬರೆದಾಗ ಸಾರ್ಥಕ ಭಾವನೆ ಬರುತ್ತದೆ. ಇದರಿಂದ ವಿದ್ಯಾರ್ಥಿಗಳಿಗೂ ಪರೀಕ್ಷೆಯ ಬಗ್ಗೆ ಶಿಸ್ತು ಬರಲಿದೆ. ಇಲ್ಲಿಯವರೆಗೆ ಆಯಾ ವಿಭಾಗಗಳಲ್ಲೇ ಪರೀಕ್ಷೆಗಳು ನಡೆಯುತ್ತಿದ್ದಾಗ ಅದೇ ವಿಭಾಗಗಳ ಅಧ್ಯಾಪಕರು, ಪರಿವೀಕ್ಷಕರಾಗಿ ಕಾರ್ಯನಿರ್ವಹಿಸು ತ್ತಿದ್ದರು. ಇದೀಗ ಬೇರೆ ಬೇರೆ ವಿಭಾಗದವರು ಪರಿವೀಕ್ಷಕರಾಗಿ ಪರೀಕ್ಷೆಯ ಮೇಲ್ವಿಚಾರಣೆ ನಡೆಸು ವಂತಾ ಗಿದೆ. ವಿದ್ಯಾರ್ಥಿಗಳು ಅತ್ತ ಇತ್ತ ತಿರುಗಿ ನೋಡುವ ಪರಿಪಾಟಕ್ಕೂ ಬ್ರೇಕ್ ಬಿದ್ದಿದೆ.
ಸದ್ಯ ಸ್ನಾತಕೋತ್ತರ ಪದವಿಯ ೨ನೇ ಮತ್ತು ನಾಲ್ಕನೇ ಸೆಮಿಸ್ಟರ್ಗಳಲ್ಲಿ ಒಟ್ಟು ೪,೫೦೦ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಪರೀಕ್ಷೆಗಳು ಎರಡು ಅವಧಿಗಳಲ್ಲಿ ನಡೆಯುತ್ತಿವೆ ಎನ್ನುತ್ತಾರೆ ಮೈಸೂರು ವಿಶ್ವವಿದ್ಯಾನಿಲಯದ ಮೌಲ್ಯಮಾಪನ ಕುಲಸಚಿವ ಪ್ರೊ.ಎನ್.ನಾಗರಾಜು ಅವರು. ಈ ಹಿಂದೆ ಪರೀಕ್ಷಾ ಸಮಯದಲ್ಲಿ ನಿತ್ಯ ಆಯಾ ವಿಭಾಗಕ್ಕೆ ಹೋಗಿ ಪ್ರಶ್ನೆ ಪತ್ರಿಕೆ ನೀಡುವುದು, ಬಳಿಕ ಉತ್ತರ ಪತ್ರಿಕೆ ಸಂಗ್ರಹಿಸುವ ಕಾರ್ಯ ಮಾಡಲಾಗುತ್ತಿತ್ತು.
ಇದರಿಂದ ವಿವಿ ಆರ್ಥಿಕತೆಗೂ ಪೆಟ್ಟು ಬೀಳುತ್ತಿತ್ತು. ಆದರೆ, ಇದೀಗ ಎಲ್ಲ ವಿಭಾಗಗಳ ಪರೀಕ್ಷೆಗಳು ಒಂದೇ ಸೂರಿನಡಿ ನಡೆಯು ತ್ತಿರುವುದರಿಂದ ವಿವಿಗೆ ಆರ್ಥಿಕ ಅನುಕೂಲವಾಗಲಿದೆ. ಅಲ್ಲದೇ, ಈ ಹೊಸ ವ್ಯವಸ್ಥೆಗೆ ವಿದ್ಯಾರ್ಥಿಗಳೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮೌಲ್ಯಭವನದಲ್ಲಿ ಪರೀಕ್ಷೆಗಳು ಯಾವುದೇ ಸಮಸ್ಯೆಗಳಿಲ್ಲದೆ ನಡೆಯುತ್ತಿದ್ದು, ವಿದ್ಯಾರ್ಥಿಗಳೂ ಸಂತಸಗೊಂಡಿದ್ದಾರೆ. ಮುಂದೆ ಇದು ನ್ಯಾಕ್ ಶ್ರೇಯಾಂಕ ಪಡೆಯುವಲ್ಲಿ ವಿವಿಗೆ ಸಹಕಾರಿಯಾಗಲಿದೆ ಎಂದು ಮೌಲ್ಯಮಾಪನ ಕುಲಸಚಿವ ಪ್ರೊ. ಎನ್.ನಾಗರಾಜ್ ಹೇಳುತ್ತಾರೆ.
“ಈ ಮೊದಲು ಆಯಾ ವಿಭಾಗಗಳಲ್ಲೇ ಪರೀಕ್ಷೆ ನಡೆಯುತ್ತಿತ್ತು. ಇದರಿಂದ ಪರೀಕ್ಷೆಯಲ್ಲಿ ಶಿಸ್ತು ಇರುತ್ತಿರಲಿಲ್ಲ. ಅಲ್ಲದೇ, ಒಂದೇ ವಿಭಾಗದವರೇ ಅಕ್ಕಪಕ್ಕದಲ್ಲಿ ಕುಳಿತು ಪರೀಕ್ಷೆ ಬರೆಯುತ್ತಿದ್ದರು. ಇದೀಗ ಮೌಲ್ಯಭವನದಲ್ಲಿ ಪರೀಕ್ಷೆ ನಡೆಯುತ್ತಿರುವುದರಿಂದ ಅಲ್ಲಿ ಕಲಾ, ವಾಣಿಜ್ಯ, ವಿಜ್ಞಾನ ವಿಭಾಗದವರೆಲ್ಲಾ ಪರೀಕ್ಷೆ ಬರೆಯುತ್ತಾರೆ. ಇದು ನಮಗೆ ಪರೀಕ್ಷಾ ಭಯವನ್ನು ಹೋಗಲಾಡಿಸಲಿದೆ.” – ಶಿಲ್ಪಾ, ನಾಲ್ಕನೇ ಸೆಮಿಸ್ಟರ್ ವಿದ್ಯಾರ್ಥಿನಿ, ಎಂ.ಕಾಂ
“ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್. ರಂಗಪ್ಪ ಅವರ ಆಡಳಿತಾವಧಿಯಲ್ಲಿ ನಿರ್ಮಾಣವಾದ ಮೌಲ್ಯ ಭವನದಲ್ಲಿ ವಿಶ್ವವಿದ್ಯಾಲಯದ ಪರೀಕ್ಷೆಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಮಾತ್ರ ನಡೆಯುತ್ತಿತ್ತು. ಜೊತೆಗೆ ಈ ಹಿಂದೆ ವಿವಿ ನಡೆಸುತ್ತಿದ್ದ ಕೆ-ಸೆಟ್ ಕೇಂದ್ರವೂ ಆಗಿತ್ತು. ಇನ್ನು ಮೇಲೆ ಎಲ್ಲಾ ಪರೀಕ್ಷೆಗೆ ಸಂಬಂಽಸಿದ ಚಟುವಟಿಕೆಗಳಿಗೂ ಈ ಮೌಲ್ಯ ಭವನವನ್ನೇ ಬಳಸಲಾಗುವುದು.” – ಪ್ರೊ.ಎನ್.ನಾಗರಾಜು, ಮೌಲ್ಯಮಾಪನ ಕುಲಸಚಿವ
– ಚಂದು ಸಿ.ಎನ್.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…