Categories: Andolana originals

‘ಕತ್ತಲ ಜಗತ್ತುʼ ಪುಸ್ತಕದಲ್ಲಿ ಪ್ರತಾಪ್‌ ಸಿಂಹ ಬಣ್ಣ ಬಯಲು

ಮೈಸೂರು: ‘ಕತ್ತಲೆ ಜಗತ್ತು’ ಪುಸ್ತಕ ಬಿಡುಗಡೆಯಾದರೆ ತಮ್ಮ ನಿಜ ಬಣ್ಣ ಬಯಲಾಗುತ್ತದೆ ಎಂಬ ಭಯದಿಂದ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದು, ಮೇಲ್ಮನವಿ ಸಲ್ಲಿಸಿ ನ್ಯಾಯಾಲಯದ ಅನುಮತಿ ಪಡೆದು ಪುಸ್ತಕ ಬಿಡುಗಡೆಗೊಳಿಸುತ್ತೇವೆ ಎಂದು ಮೈಸೂರು ರಕ್ಷಣಾ ವೇದಿಕೆ ಅಧ್ಯಕ್ಷ ಮೈ. ಕಾ. ಪ್ರೇಮ್‌ಕುಮಾರ್ ತಿಳಿಸಿದರು.

ನಗರದ ದಿ ಇನ್‌ಸ್ಟಿಟ್ಯೂಷನ್ ಆ- ಇಂಜಿನಿಯರ‍್ಸ್ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರವೀಣ್ ಕುಮಾರ್ ಮಾವಿನಕಾಡು ಅವರು ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿ ಅಲ್ಲಿ ದೊರೆತ ದಾಖಲೆ ಇಟ್ಟುಕೊಂಡು ಪುಸ್ತಕ ಬರೆದಿದ್ದಾರೆ. ಪುಸ್ತಕ ಬಿಡುಗಡೆಗೆ ಮೊದಲೇ ತಡೆಯಾಜ್ಞೆ ತಂದಿರುವುದು ನಾಚಿಕೆಗೇಡಿನ ವಿಚಾರ ಎಂದರು. ಯಾವ ಕಾರಣಕ್ಕೆ ಅವರಿಗೆ ಕೊನೆ ಕ್ಷಣದಲ್ಲಿ ಟಿಕೆಟ್ ಕೈತಪ್ಪಿತು ಎಂಬ ಅಂಶಗಳನ್ನು ಪುಸ್ತಕ ತೆರೆದಿಡಲಿದೆ. ಅವರ ಕುರಿತ ಹಲವಾರು ವಿಷಯಗಳಿರುವ ‘ಕತ್ತಲೆ ಜಗತ್ತು’ ಪುಸ್ತಕ ಹೊರಬಂದರೆ ತಮ್ಮ ನಿಜವಾದ ಬಣ್ಣ ಬಯಲಾಗುತ್ತದೆ ಎನ್ನುವ ಕಾರಣಕ್ಕಾಗಿಯೇ ತಡೆಯಾಜ್ಞೆ ತಂದಿದ್ದಾರೆ ಎಂದು ಆರೋಪಿಸಿದರು. ಮೈಸೂರು ಬಿಜೆಪಿ ನಾಯಕರೊಳಗಿನ ಬೇಗುದಿಗೆ ಪ್ರತಾಪ್ ಸಿಂಹ ಕಾರಣ. ಹುಣಸೂರಿನಲ್ಲಿ ಶಾಂತಿಯುತವಾಗಿ ನಡೆ ಯುತ್ತಿದ್ದ ಹನುಮ ಜಯಂತಿಯು ಇವರ ಪ್ರವೇಶದ ಬಳಿಕ ಹಿಂದೂ, ಮುಸ್ಲಿಂ ಜಗಳದ ಕೇಂದ್ರ ಬಿಂದುವಾಯಿತು.

ಅಲ್ಲಿ ಅವರ ವಿರುದ್ಧ ದಾಖಲಾದ ಪ್ರಕರಣ ತೆಗಿಸಿದರು. ಆದರೆ, ಯುವಕರಿಬ್ಬರ ಮೇಲೆ ದಾಖಲಾದ ಗೂಂಡಾ ಕಾಯ್ದೆಯನ್ನು ಯಾರು ತೆಗೆಸುತ್ತಾರೆ ಎಂದು ಪ್ರಶ್ನಿಸಿದರು. ಪತ್ರಿಕಾಗೋಷ್ಠಿಗಳಲ್ಲಿ ಮುಸ್ಲಿಮರು ತಲವಾರ್ ಹಿಡಿದರೆ ಹಿಂದೂ ಯುವಕರು ಅದನ್ನೇ ಅನುಸರಿಸಬೇಕಾಗುತ್ತದೆ ಎಂದು ಪ್ರಚೋದನೆ ನೀಡುತ್ತಾರೆ. ಆದರೆ, ಅವರ ರಕ್ಷಣೆ ಮಾಡಿದ್ದಾರೆಯೇ? ಉಪ ಚುನಾವಣೆಯ ಪ್ರಚಾರಕ್ಕೆ ಕರೆಯದಿದ್ದರೂ ತೆರಳಿ, ಮುಸ್ಲಿಮರಿಗೆ ಬೈದು ಪರೋಕ್ಷವಾಗಿ ಕಾಂಗ್ರೆಸ್ ಏಜೆಂಟ್‌ರಂತೆ ವರ್ತಿಸಿದ್ದಾರೆ. ರಾಜ್ಯಾಧ್ಯಕ್ಷರು ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿ, ಪಕ್ಷದ ಕಾರ್ಯಕ್ರಮಗಳಲ್ಲಿ ಭಾಗವಹಿಸದಂತೆ ತಾಕೀತು ಮಾಡಬೇಕು ಎಂದು ಒತ್ತಾಯಿಸಿದರು. ಸಂಸತ್‌ನಲ್ಲಿ ಸ್ಮೋಕ್ ಬಾಂಬ್ ಸಿಡಿಸಿದ ಯುವಕರಿಗೆ ಪಾಸ್ ಕೊಡಿಸಿ ನರೇಂದ್ರ ಮೋದಿ ತಲೆ ತಗ್ಗಿಸುವಂತೆ ಮಾಡಿದ್ದಾರೆ. ಈ ಪ್ರಕರಣದಲ್ಲಿ ಪ್ರತಾಪ್ ಸಿಂಹ ಅವರಿಗೂ ಯುವಕರಿಗೂ ಇರುವ ಸಂಬಂಧದ ಬಗ್ಗೆ ತನಿಖೆಯಾಗಬೇಕು. ಈಗಾಗಲೇ ಅವರು ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಎಂದುಕೊಂಡು ಓಡಾಡುತ್ತಿದ್ದು, ತಾಕತ್ತಿದ್ದರೆ ನರಸಿಂಹ ರಾಜ ಕ್ಷೇತ್ರದಲ್ಲಿ ನಿಂತು ಗೆದ್ದು ತೋರಿಸಲಿ ಎಂದು ಸವಾಲೆಸೆದರು. ಮೈಸೂರು ರಕ್ಷಣಾ ವೇದಿಕೆಯ ಉಪಾಧ್ಯಕ್ಷ ಕುಮಾರ್ ಗೌಡ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

andolana

Recent Posts

ಹಣಕ್ಕಾಗಿ ವೃದ್ದೆ ಕೊಲೆ ; ಶವವನ್ನು ಶೌಚಾಲಯದ ಗುಂಡಿಯಲ್ಲಿ ಹೂತು ಹಾಕಿದ್ದ ಕಿರಾತಕ

ಕೆ.ಆರ್.ನಗರ : ಹಣದಾಸಗೆ ವೃದ್ದೆಯನ್ನು ಕೊಲೆಗೈದು ಶೌಚಾಲಯದ ಯುಜಿಡಿ ಗುಂಡಿಯಲ್ಲಿ ಹೂತು ಹಾಕಿರುವ ಘಟನೆ ತಾಲೂಕಿನ ತಿಪ್ಪೂರು ಗ್ರಾಮದಲ್ಲಿ ನಡೆದಿದೆ.…

2 days ago

ಪಶ್ಚಿಮ ಬಂಗಾಳ | ಸುವೇಂದು ಅಧಿಕಾರಿ ನೂತನ ಮುಖ್ಯಮಂತ್ರಿ

ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ 15 ವರ್ಷಗಳ ಟಿಎಂಸಿ ಆಡಳಿತಕ್ಕೆ ತೆರೆ ಎಳೆದು ಐತಿಹಾಸಿಕ ಗೆಲುವು ಸಾಧಿಸಿರುವ ಬಿಜೆಪಿ, ಮೇ…

2 days ago

ಟಿವಿಕೆಗೆ ಎಡಪಕ್ಷಗಳ ಬೆಂಬಲ : ಬಹುಮತದ ಸೀಟಿ ಊದಿಯೇ ಬಿಟ್ಟ ದಳಪತಿ ವಿಜಯ್‌

ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನು ಪಡೆದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಟಿವಿಕೆ ಸರ್ಕಾರ ರಚಿಸಲು…

2 days ago

ತಮಿಳುನಾಡಿನಲ್ಲಿ ವಿಜಯ್‌ ಸಾಧನೆ ಎಲ್ಲರಿಗೂ ಅಚ್ಚರಿ ತಂದಿದೆ : ಕೇಂದ್ರ ಸಚಿವ ಎಚ್‌ಡಿಕೆ

ಹಾಸನ : ಮಾಧ್ಯಮಗಳಲ್ಲಿ ಡಿಎಂಕೆ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ವರದಿಗಳು ಹರಿದಾಡುತ್ತಿದ್ದವು. ಆದರೆ ವಿಜಯ್‌ ಅವರ ಈಗಿನ ಸಾಧನೆಯನ್ನು…

2 days ago

ಹೊರ್ಮುಜ್‌ ಜಲಸಂಧಿಯಿಂದ ನುಗ್ಗಿಬಂದ ಅಮೆರಿಕದ ಯುದ್ಧನೌಕೆಗಳು : ಇರಾನ್‌ನಿಂದ ದಾಳಿ

ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಮೂರು ಯುದ್ಧನೌಕೆಗಳ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ಮತ್ತು ಸಣ್ಣ ದೋಣಿಗಳ ಮೂಲಕ…

2 days ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ದೇಶದ ಪ್ರವಾಸೋದ್ಯಮವೂ, ಚಲನಚಿತ್ರ ಪ್ರವಾಸೋದ್ಯಮವೂ

ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಅವರ ಈ ಪ್ರವಾಸದ ಹಿಂದೆ ತಮ್ಮ ರಾಜ್ಯದ ಪ್ರವಾಸೋದ್ಯಮವನ್ನು…

2 days ago