Andolana originals

ತಡವಾಗುತ್ತಿರುವ ಪೂರ್ವ ಮುಂಗಾರು; ರೈತರಲ್ಲಿ ಆತಂಕ

ಜಯಪುರ ಹೋಬಳಿ ವ್ಯಾಪ್ತಿಯಲ್ಲಿ ಶೇ.೧೦ರಷ್ಟು ಬಿತ್ತನೆ ಕಾರ್ಯವೂ ನಡೆದಿಲ್ಲ

ದೂರ ನಂಜುಂಡಸ್ವಾಮಿ

ದೂರ: ಜಯಪುರ ಹೋಬಳಿ ವ್ಯಾಪ್ತಿಯಲ್ಲಿ ಈ ಬಾರಿ ಪೂರ್ವ ಮುಂಗಾರು ತಡವಾಗುತ್ತಿರುವುದರಿಂದ ರೈತರಲ್ಲಿ ಆತಂಕ ಮನೆ ಮಾಡಿದೆ.

ಹೋಬಳಿ ವ್ಯಾಪ್ತಿಯಲ್ಲಿ ದೂರ, ದೊಡ್ಡಕಾಟೂರು, ಟಿ.ಕಾಟೂರು, ಮಾರ್ಬಳ್ಳಿ ಹುಂಡಿ, ಮಾರ್ಬಳ್ಳಿ, ಅರಸಿನಕೆರೆ, ಹಾರೋಹಳ್ಳಿ, ಗುಜ್ಜೇಗೌಡನಪುರ, ಮಂಡನಹಳ್ಳಿ ಸೇರಿದಂತೆ ಒಟ್ಟು ೪೫ ಗ್ರಾಮಗಳಿದ್ದು, ಬಹುತೇಕ ರೈತರು ಮಳೆಯನ್ನೇ ನಂಬಿ ಕೃಷಿ ಮಾಡುತ್ತಿದ್ದಾರೆ.

ಕಳೆದ ವರ್ಷ ಉತ್ತಮವಾಗಿ ಮಳೆ ಬಿದ್ದರೂ ರೈತರು ಬೆಳೆದ ಬೆಳೆಗೆ ಉತ್ತಮ ಬೆಲೆ ದೊರೆಯಲಿಲ್ಲ. ಕಳೆದ ಐದಾರು ವರ್ಷಗಳಿಂದ ರೈತರಿಗೆ ಬಿತ್ತನೆಗೆಂದು ಮಾಡಿದ ಖರ್ಚು ಸಹ ಅವರಿಗೆ ದೊರಕುತ್ತಿಲ್ಲ.

ಮಾರ್ಚ್ ತಿಂಗಳಲ್ಲಿ ಮಳೆಯು ಒಂದು ಬಾರಿ ಮಾತ್ರ ಬಿದ್ದಿದ್ದರಿಂದ ರೈತರು ಭೂಮಿಯನ್ನು ಹದ ಮಾಡಿಟ್ಟುಕೊಂಡಿದ್ದರು. ವರ್ಷದ ಮೊದಲ ಮಳೆಯಾದ ರೇವತಿ ಮಳೆಯಾದಾಗ ಬಿತ್ತನೆ ಮಾಡಿದಲ್ಲಿ ಉತ್ತಮ ಇಳುವರಿ ಬರುತ್ತದೆ ಎಂಬ ನಂಬಿಕೆಯಲ್ಲಿದ್ದರು.

ಆದರೆ ರೇವತಿ ಮಳೆಯೂ ನಿರೀಕ್ಷಿತ ಮಟ್ಟದಲ್ಲಿ ಆಗಲಿಲ್ಲ. ಅಶ್ವಿನಿ ಮಳೆ ಕಳೆದರೂ ಮಳೆ ಬೀಳುವ ಸಾಧ್ಯತೆ ಕಾಣುತ್ತಿಲ್ಲ. ಇದರಿಂದ ಶೇ.೧೦ರಷ್ಟು ಬಿತ್ತನೆ ಕಾರ್ಯವೂ ನಡೆದಿಲ್ಲ. ಈ ಬಾರಿ ಜಯಪುರ ರೈತ ಸಂಪರ್ಕ ಕೇಂದ್ರದಲ್ಲಿ ಹತ್ತಿ, ಅಲಸಂದೆ, ಉದ್ದು, ಹೆಸರು ಬಿತ್ತನೆ ಬೀಜಗಳು ರಿಯಾಯಿತಿ ದರದಲ್ಲಿ ಮಾರಾಟವಾಗಿವೆ. ಇದಲ್ಲದೆ ಬೇರೆ ಕಡೆಗಳಿಂದಲೂ ಬಿತ್ತನೆ ಬೀಜಗಳನ್ನು ಖರೀದಿಸಿದ್ದು, ರೈತರು ಮಳೆಗಾಗಿ ಕಾಯುತ್ತಿದ್ದಾರೆ.

” ಪೂರ್ವ ಮುಂಗಾರು ಪ್ರಾರಂಭವಾಗಿ ಒಂದು ತಿಂಗಳು ಕಳೆಯುತ್ತಾ ಬಂದರೂ ಮಳೆ ಬಾರದೆ ಇರುವುದರಿಂದ ರೈತರು ತಲೆ ಮೇಲೆ ಕೈ ಹೊತ್ತು ಕೂರುವಂತಾಗಿದೆ. ಸಕಾಲಕ್ಕೆ ಮಳೆಯಾಗದೇ ಇರುವುದರಿಂದ ರೈತರು ಭೀತಿಗೊಂಡಿದ್ದಾರೆ. ಬಿತ್ತನೆ ಮಾಡಿರುವ ಅಲ್ಪಸ್ವಲ್ಪ ಪ್ರದೇಶದಲ್ಲಿ ಬೆಳೆದಿರುವ ಬೆಳೆಗಳು ಮಳೆ ಇಲ್ಲದೆ ಒಣಗುತ್ತಿವೆ.”

– ಡಿ.ಬಿ.ಶಿವಣ್ಣ, ರೈತ, ದೂರ ಗ್ರಾಮ.

” ಭಾರತೀಯ ಹವಾಮಾನ ಇಲಾಖೆಯ ಪ್ರಕಾರ ೨೦೨೩-೨೪ನೇ ಸಾಲಿಗೆ ಹೋಲಿಸಿದರೆ ಈ ವರ್ಷ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ. ಈ ವರ್ಷ ಪೂರ್ವ ಮುಂಗಾರು ಕಡಿಮೆಯಾದರೂ ಮುಂಗಾರಿನಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿರಲಿದೆ. ಆದ್ದರಿಂದ ರೈತರು ಭಯ ಪಡುವ ಅಗತ್ಯವಿಲ್ಲ. ಮೈಸೂರು ಭಾಗದಲ್ಲಿ ಮೇ ಮತ್ತು ಜೂನ್ ತಿಂಗಳಿನಲ್ಲಿ ಉತ್ತಮ ಮಳೆಯಾಗಲಿದೆ. ಜುಲೈ ತಿಂಗಳಲ್ಲಿ ಸ್ವಲ್ಪ ಕಡಿಮೆ ಹಾಗೂ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಲ್ಲಿ ಹೆಚ್ಚು ಮಳೆಯಾಗಲಿದೆ.”

-ಡಾ.ಸುಮಂತ್ ಕುಮಾರ್, ತಾಂತ್ರಿಕ ಅಧಿಕಾರಿ, ಹವಾಮಾನ ವಿಭಾಗ, ನಾಗನಹಳ್ಳಿ

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಶಾಲಾ ಮಕ್ಕಳ ಬ್ಯಾಗ್ ಹೊರೆ ತಗ್ಗಿಸಿ

ಶಾಲಾ ಮಕ್ಕಳು ಭಾರವಾದ ಪುಸ್ತಕಗಳ ಬ್ಯಾಗ್ ಹೊರಲಾರದೆ ತ್ರಾಸದಿಂದಲೇ ಹೊತ್ತುಕೊಂಡು ನಡೆಯುವ ದೃಶ್ಯ ಈಗ ಎಲ್ಲೆಡೆ ಕಂಡುಬರುತ್ತದೆ. ಬ್ಯಾಗ್‌ನಲ್ಲಿ ಪಠ್ಯ…

2 hours ago

ಓದುಗರ ಪತ್ರ: ಉದ್ಯೋಗ ನೇಮಕಾತಿ ಯಾವಾಗ?

ಸರ್ಕಾರ ಅಧಿಸೂಚನೆ ಹೊರಡಿಸುವುದು ಯಾವಾಗ? ಉದ್ಯೋಗ ನೇಮಕಾತಿ ಯಾವಾಗ? ಇದು ಸಾವಿರಾರು ಉದ್ಯೋಗ ಆಕಾಂಕ್ಷಿಗಳ ಪ್ರಶ್ನೆ. ಇದು ಕಳೆದ ಹಲವು…

2 hours ago

ಓದುಗರ ಪತ್ರ: ಉದ್ಯೋಗ ವಯೋಮಿತಿ ಹೆಚ್ಚಳ ಸ್ವಾಗತಾರ್ಹ

ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸರ್ಕಾರಿ ನೌಕರಿ ಪಡೆಯಲು ಇದ್ದ ವಯೋಮಿತಿಯನ್ನು ಐದು ವರ್ಷ ಹೆಚ್ಚಳ ಮಾಡಿ…

2 hours ago

ಇಂದು ಕೇರಳ ಬೈತೂರು ದೇವಾಲಯದ ಪತ್ತೂಟ

ಕಾಂಗೀರ ಬೋಪಣ್ಣ ಕೊಡಗು-ಕೇರಳದ ಜನರು ಒಟ್ಟಾಗಿ ಆಚರಿಸುವ ವಿಭಿನ್ನ ಆಚರಣೆ; ವಿಶಿಷ್ಟ  ಹಬ್ಬಕ್ಕೆ  ಅಗತ್ಯ ಸಿದ್ಧತೆ  ವಿರಾಜಪೇಟೆ: ಕೇರಳ ಹಾಗೂ…

2 hours ago

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಫುಟ್‌ಪಾತ್ ಒತ್ತುವರಿ

ಮಹೇಂದ್ರ ಹಸಗೂಲಿ ಪಾದಚಾರಿಗಳು ಓಡಾಡದಂತೆ ವಿರೂಪ; ಒತ್ತುವರಿ ತೆರವಿಗೆ ಸಾರ್ವಜನಿಕರ ಆಗ್ರಹ  ಗುಂಡ್ಲುಪೇಟೆ: ಪಟ್ಟಣದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ ಫುಟ್‌ಪಾತ್‌ಗಳನ್ನು…

2 hours ago

ಶಾಲಾ ಮಕ್ಕಳಿಗೆ ಪಾದರಕ್ಷೆ ಭಾಗ್ಯ!

‘ವಿದ್ಯಾವಿಕಾಸ’ ಯೋಜನೆಯಡಿ ಅಗತ್ಯವಿದ್ದರೆ ಚಪ್ಪಲಿ ನೀಡಲು ಸಿದ್ಧತೆ  ಮೈಸೂರು: ‘ವಿದ್ಯಾವಿಕಾಸ’ ಯೋಜನೆಯಡಿ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ೧ನೇ ತರಗತಿಯಿಂದ ೧೦ನೇ…

2 hours ago