Andolana originals

ಬೆಟ್ಟಹಳ್ಳಿ ಗ್ರಾಮದ ಜನರಲ್ಲಿದ್ದ ಆತಂಕ ದೂರ

ಕಲುಷಿತ ನೀರು ಸೇವಿಸಿ ಓರ್ವ ಸಾವು ಪ್ರಕರಣ; ಗ್ರಾಪಂ, ಆರೋಗ್ಯ ಇಲಾಖೆಯಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮ

ಸಾಲಿಗ್ರಾಮ: ತಾಲ್ಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ 10 ದಿನಗಳ ಹಿಂದೆ ಕಂಡು ಬಂದ ವಾಂತಿಭೇದಿ ಪ್ರಕರಣದ ಬಗ್ಗೆ ‘ಆಂದೋಲನ’ ದಿನಪತ್ರಿಕೆಯಲ್ಲಿ ನಿರಂತರವಾಗಿ ವರದಿಗಳನ್ನು ಪ್ರಕಟಿಸಿದ್ದರಿಂದ ಎಚ್ಚೆತ್ತ ಶೀಗವಾಳು ಗ್ರಾಮ ಪಂಚಾಯಿತಿ ಹಾಗೂ ಆರೋಗ್ಯ ಇಲಾಖೆ ಗ್ರಾಮದಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸುವ ಮೂಲಕ ಗ್ರಾಮದ ಜನರಲ್ಲಿ ಮೂಡಿದ್ದ ಆತಂಕವನ್ನು ದೂರ ಮಾಡಿವೆ.

ಗ್ರಾಮ ಪಂಚಾಯಿತಿಯು ಗ್ರಾಮದಲ್ಲಿ ಕುಡಿಯುವ ನೀರಿನ ಟ್ಯಾಂಕ್‌ಅನ್ನು ಸ್ವಚ್ಛ ಮಾಡಿ, ನೀರು ಸರಬರಾಜು ಆಗುವ ಸ್ಥಳಗಳಲ್ಲಿರುವ ವಾಲ್ ಗಳು ಹಾಗೂ ಗ್ರಾಮದ ವಿವಿಧ ಭಾಗಗಳಲ್ಲಿ ನೀರು ಸೋರಿಕೆಯಾಗುತ್ತಿದ್ದ ಸ್ಥಳಗಳನ್ನು ಸರಿಪಡಿಸಿ, ಸ್ವಚ್ಛತಾ ಕಾರ್ಯವನ್ನು ಮಾಡಿ, ನೀರಿನ ಟ್ಯಾಂಕ್ ಮೂಲಕ ಸರಬರಾಜಾಗುತ್ತಿದ್ದ ನೀರನ್ನು ಸ್ಥಗಿತಗೊಳಿಸಿ ಸಾರ್ವಜನಿಕರಿಗೆ ಕುಡಿಯುವ ನೀರಿಗೆ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ಟ್ಯಾಂಕರ್‌ಗಳ ಮೂಲಕ ನೀರು ಪೂರೈಕೆ ಮಾಡುತ್ತಿದ್ದಾರೆ.

ಬೆಟ್ಟಹಳ್ಳಿ ಗ್ರಾಮದಲ್ಲಿ ಕಂಡುಬಂದಿದ್ದ ಈ ಪ್ರಕರಣದ ಹಿನ್ನೆಲೆಯಲ್ಲಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ತಾತ್ಕಾಲಿಕ ಆರೋಗ್ಯ ಕೇಂದ್ರವನ್ನು ತೆರೆದು ಈ ಕೇಂದ್ರದಲ್ಲಿ ವೈದ್ಯರುಗಳಾದ ಡಾ. ಶಿವಕುಮಾರ್, ಡಾ. ಮಧುಸೂದನ್, ಡಾ. ಸಚಿನ್, ಡಾ. ರವಿಚಂದ್ರನ್, ಡಾ. ಕಲ್ಲೇಶ್, ಸಮುದಾಯ ಆರೋಗ್ಯ ಅಽಕಾರಿ ಗಳಾದ ಪಲ್ಲವಿ, ಪೂಜಾ, ಶ್ವೇತಾ ಭಗವಾನ್, ರಂಗ ಸ್ವಾಮಿ, ಶ್ರೀನಿವಾಸ, ಸಚಿನ್, ಕೈಲಾಶ್, ಮಂಜುಳಾ ಸೇರಿದಂತೆ ಆರೋಗ್ಯ ಇಲಾಖೆಯ ಹಲವು ಸಿಬ್ಬಂದಿ ಹಗಲು-ರಾತ್ರಿ ಕಾರ್ಯನಿರ್ವಹಿಸುವ ಮೂಲಕ ಗ್ರಾಮದ ಜನರ ಆರೋಗ್ಯವನ್ನು ಕಾಪಾಡುವಲ್ಲಿ ಶ್ರಮಿಸುವ ಮೂಲಕ ಗ್ರಾಮದಲ್ಲಿ ಹೆಚ್ಚು ಉಲ್ಬಣ ಗೊಳ್ಳದಂತೆ ತಡೆಗಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.

ಈಗ ಗ್ರಾಮದಲ್ಲಿ ಪ್ರಕರಣಗಳು ಕಂಡು ಬರುವುದು ನಿಂತಿರುವ ಕಾರಣ ತಾತ್ಕಾಲಿಕವಾಗಿ ತೆರೆದಿದ್ದ ಆರೋಗ್ಯ ಕೇಂದ್ರವನ್ನು ಮುಚ್ಚಲಾಗಿದ್ದು, ಗ್ರಾಮದಲ್ಲಿರುವ ಆಯುಷ್ಮಾನ್ ಆರೋಗ್ಯ ಮಂದಿರ ಕಾರ್ಯನಿರ್ವಹಿಸುತ್ತಿದೆ. ಆರೋಗ್ಯ ಇಲಾಖೆಯ ಸಿಬ್ಬಂದಿಗಳೊಂದಿಗೆ ಸಾಲಿಗ್ರಾಮ, ಮೇಲೂರು ಮತ್ತು ಮುಂಡೂರು ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿನ ಆಶಾ ಕಾರ್ಯಕರ್ತರು, ಗ್ರಾಮದ ಅಂಗನವಾಡಿ ಕಾರ್ಯಕರ್ತೆ ಮಧುಮಾಲತಿ, ಸಹಾಯಕಿ ಭಾರತಿ, ಆಶಾ ಕಾರ್ಯಕರ್ತೆ ಪಾರ್ವತಿ ಅವರುಗಳೊಂದಿಗೆ ಗ್ರಾಮದಲ್ಲಿನ ಪ್ರತಿಯೊಂದು ಮನೆಗೂ ಭೇಟಿ ನೀಡಿ ಗ್ರಾಮದ ಸರ್ವರ ಆರೋಗ್ಯದ ಬಗ್ಗೆ ಮಾಹಿತಿಯನ್ನು ಕಲೆ ಹಾಕಿ ಜನರಿಗೆ ಯಾವುದಾದರೂ ತೊಂದರೆ ಇರುವುದು ಕಂಡುಬಂದಲ್ಲಿ ಅವರಿಗೆ ತುರ್ತಾಗಿ ಚಿಕಿತ್ಸೆಗಳನ್ನು ಕೊಡಿಸುವ ಕೆಲಸ ಮಾಡುವುದರ ಜೊತೆಗೆ ಗ್ರಾಮದ ಪ್ರತಿಯೊಂದು ಮನೆಗೂ ಒಆರ್‌ಎಸ್ ಪ್ಯಾಕೆಟ್, ವಿವಿಧ ಆಂಟಿ ಬಯಾಟಿಕ್ ಮಾತ್ರೆಗಳನ್ನು ನೀಡಿ ಆರೋಗ್ಯ ಹಾಗೂ ಕುಡಿಯುವ ನೀರಿನ ಬಗ್ಗೆ ಮಾಹಿತಿ ನೀಡಿ, ಕರುಳುಬೇನೆ, ಕಾಲರಾ, ಮಲೇರಿಯಾ, ಡೆಂಗ್ಯೂ, ಚಿಕುನ್ ಗುನ್ಯಾ, ಟೈಫಾಯ್ಡ್, ಅರಿಶಿನ ಕಾಮಾಲೆ ಸೇರಿದಂತೆ ವಿವಿಧ ಸಾಂಕ್ರಾಮಿಕ ರೋಗಗಳ ಬಗ್ಗೆ ವಹಿಸಬೇಕಾದ ಮುಂಜಾಗ್ರತಾ ಕ್ರಮಗಳ ಮಾಹಿತಿಯುಳ್ಳ ಕರಪತ್ರಗಳನ್ನು ಗ್ರಾಮದೆಲ್ಲೆಡೆ ಹಂಚಿ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದಾರೆ.

ತಾಲ್ಲೂಕು ಆರೋಗ್ಯ ಅಧಿಕಾರಿ ಡಾ. ನಟರಾಜ್, ಪಿಡಿಒ ಶ್ರೀಧರ್, ತಾ. ಪಂ. ಇಒ ಕುಲದೀಪ್, ತಹಸಿಲ್ದಾರ್ ಎಸ್. ಎನ್. ನರಗುಂದ, ಗ್ರಾಮೀಣ ಕುಡಿಯುವ ನೀರಿನ ಯೋಜನೆಯ ಇಇ ರಂಜಿತ್ ಅವರುಗಳ ನೇತೃತ್ವದಲ್ಲಿ ತುರ್ತು ಕ್ರಮಗಳನ್ನು ಮುಂಜಾಗ್ರತೆಯಾಗಿ ವಹಿಸಿ ನಿರಂತರವಾಗಿ ಗ್ರಾಮದಲ್ಲಿ ಕಾರ್ಯನಿರ್ವಹಣೆ ಮಾಡುವ ಮೂಲಕ ಗ್ರಾಮದಲ್ಲಿ ಕಾಣಿಸಿಕೊಂಡಿದ್ದ ಪ್ರಕರಣವನ್ನು ತಡೆಗಟ್ಟಿ ಜನರ ಆರೋಗ್ಯ ಕಾಪಾಡುವ ಕೆಲಸ ಮಾಡಲಾಗಿದೆ. ಶಾಸಕ ಡಿ. ರವಿಶಂಕರ್, ಮಾಜಿ ಸಚಿವ ಸಾ. ರಾ. ಮಹೇಶ್, ವಿಧಾನ ಪರಿಷತ್ ಸದಸ್ಯ ಸಿ. ಎನ್. ಮಂಜೇಗೌಡ, ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ, ಜಿಪಂ ಸಿಇಒ ಕೆ. ಎಂ. ಗಾಯತ್ರಿ, ಡಿಎಚ್‌ಒ ಕುಮಾರಸ್ವಾಮಿ ಅವರುಗಳು ಪ್ರಕರಣದ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಭೇಟಿ ನೀಡಿ ಈಗಾಗಲೇ ಅಽಕಾರಿಗಳಿಗೆ ಅಗತ್ಯ ಸೂಚನೆ ನೀಡಿದ್ದಾರೆ. ಹೀಗಾಗಿ ವಾಂತಿ ಭೇದಿ ಪ್ರಕರಣವು ನಿಯಂತ್ರಣಕ್ಕೆ ಬಂದಿದ್ದು ಗ್ರಾಮದ ಜನತೆ ನಿಟ್ಟುಸಿರು ಬಿಟ್ಟಿದ್ದಾರೆ.

ಬೆಟ್ಟಹಳ್ಳಿ ಗ್ರಾಮದಲ್ಲಿ ಕಂಡುಬಂದಿದ್ದ ವಾಂತಿ ಭೇದಿ ಪ್ರಕರಣ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ.
– ಡಾ. ನಟರಾಜ್, ಟಿಎಚ್‌ಒ

 

 

ಬಿ.ಟಿ. ಮೋಹನ್ ಕುಮಾರ್

ಮಂಡ್ಯ ಜಿಲ್ಲೆ, ಮಂಡ್ಯ ತಾಲ್ಲೂಕು ಹೊಸಬೂದನೂರು ಗ್ರಾಮದ ನಾನು ಮೈಸೂರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಎಂ.ಎ. (ಎಂಸಿಜೆ) ಮಾಡಿ, 1999ರಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. 1999ರಲ್ಲಿ `ಆಂದೋಲನ' ಪತ್ರಿಕೆಯಲ್ಲಿ ಮೊದಲು ಪೇಜ್ ಡಿಸೈನರ್ ಆಗಿ ಕೆಲಸಕ್ಕೆ ಸೇರಿದ ಅನುಭವ ಪಡೆದು, 2001ರಲ್ಲಿ `ಆಂದೋಲನ' ಪತ್ರಿಕೆಯಲ್ಲೇ ಜಿಲ್ಲಾ ವರದಿಗಾರನಾದೆ. 2001ರಿಂದ 2008ರವರೆಗೆ ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸಿದ ನಾನು, 2009ರಿಂದ `ಪ್ರಜಾನುಡಿ' ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸಿ, 2011ರಲ್ಲಿ `ವಿಜಯ ವಾಣಿ' ಪತ್ರಿಕೆಯ ಮೈಸೂರು ವಿಭಾಗದ ಹಿರಿಯ ಉಪ ಸಂಪಾದಕನಾಗಿ ಕೆಲಸ ನಿರ್ವಹಿಸಿದೆ. ಸುಮಾರು ಮೂರೂವರೆ ವರ್ಷ ಕೆಲಸ ನಿರ್ವಹಿಸಿ, 2015ರಲ್ಲಿ `ರಾಜ್ಯ ಧರ್ಮ' ಪತ್ರಿಕೆಯ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸಿದೆ. 2019ರಲ್ಲಿ ಮತ್ತೆ `ಆಂದೋಲನ' ಪತ್ರಿಕೆಯ ಮಂಡ್ಯ ಜಿಲ್ಲಾ ಹಿರಿಯ ವರದಿಗಾರನಾಗಿ ನೇಮಕವಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸವಾಗಿದೆ.

Recent Posts

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

11 mins ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

29 mins ago

ಮುಡಾ ಪ್ರಕರಣ: ಮುಡಾ ಕಚೇರಿಯ ಮೇಲೆ ಇ.ಡಿ ದಾಳಿ

ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್‌ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…

52 mins ago

ನಟ ದರ್ಶನ್‌ಗೆ ಮತ್ತೊಂದು ಸಂಕಷ್ಟ: ಹಳೆ ಪ್ರಕರಣಕ್ಕೆ ಹೊಸ ಎನ್‌ಸಿಆರ್‌

ಬೆಂಗಳೂರು: ನಟ ದರ್ಶನ್‌ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಮಧ್ಯೆ ಹಳೆ…

2 hours ago

ಓದುಗರ ಪತ್ರ: ಮಹಿಳಾ ಅಧಿಕಾರಿಗಳಿಗೆ ಅಭಿನಂದನೆಗಳು

ಚಾಮರಾಜನಗರದಲ್ಲಿ ಅಕ್ಟೋಬರ್ ೭ರಿಂದ ಅ. ೯ರವರೆಗೆ ಆಯೋಜಿಸಿದ್ದ ‘ಚೆಲುವ ಚಾಮರಾಜನಗರ ದಸರಾ’ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ಆಯೋಜಿಸಿದ್ದರಿಂದ…

3 hours ago

ಓದುಗರ ಪತ್ರ: ರತನ್‌ ಟಾಟಾರಿಗೆ ಭಾರತರತ್ನ ನೀಡಿ

ಕೆಲ ಗಣ್ಯರು ನಿಧನರಾದಾಗ ದುಃಖವಾಗುತ್ತದೆ. ಇನ್ನೂ ಕೆಲ ಗಣ್ಯರನ್ನು ಕಳೆದುಕೊಂಡಾಗ ದುಃಖದ ಕೋಡಿಯೇ ಹರಿಯುತ್ತದೆ; ದೇಶಾದ್ಯಂತ ಮೌನ ಹೆಪ್ಪುಗಟ್ಟುತ್ತದೆ. ಹೀಗೆ…

3 hours ago