Andolana originals

ಮಳೆ ಅವಘಡ ತಡೆಯಲು ಮುನ್ನೆಚ್ಚರಿಕೆ ಕ್ರಮ

ಎಂ.ಯೋಗಾನಂದ

ಹುಣಸೂರು ತಾಲ್ಲೂಕು ಆಡಳಿತದಿಂದ ಅಗತ್ಯ ಸಿದ್ಧತೆ; ಮಳೆ ಹಾನಿ ಪ್ರದೇಶಗಳ ಮೇಲೆ ನಿಗಾ

ಹುಣಸೂರು: ತಾಲ್ಲೂಕಿನಲ್ಲಿ ಮುಂಗಾರು ಮಳೆಯಿಂದ ಸಂಭವಿಸಬಹುದಾದ ಅನಾಹುತಗಳನ್ನು ತಡೆಗಟ್ಟಲು ತಾಲ್ಲೂಕು ಆಡಳಿತ ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ.

ತಾಲ್ಲೂಕು ಅಧಿಕಾರಿಗಳು ಹಾಗೂ ತಾಪಂ ಇಒ ಅವರು ಮಳೆಯಿಂದಾಗಿ ರೈತರ ಬೆಳೆ ನಾಶವಾದರೆ ಸೂಕ್ತ ಪರಿಹಾರಕ್ಕೆ ಮತ್ತು ಜೀವ ಹಾನಿಯಾಗದಂತೆ ತಡೆಯಲು ಸಿದ್ಧತೆ ನಡೆಸಿದ್ದಾರೆ.

ಭಾರೀ ಮಳೆ ಯಿಂದಾಗಿ ಜೀವ ಹಾನಿ ಹಾಗೂ ಫಸಲು ನಷ್ಟವಾದರೆ ತಕ್ಷಣ ಸ್ಥಳಕ್ಕೆ ಅಧಿಕಾರಿಗಳು  ಭೇಟಿ ನೀಡಿ ಜನರ ಸಮಸ್ಯೆಗೆ ಸ್ಪಂದಿಸಿ ವರದಿ ಸಲ್ಲಿಸಬೇಕು ಎಂದು ಈಗಾಗಲೇ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿರುವುದರಿಂದ ಕಂದಾಯ, ಸೆಸ್ಕ್, ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ಆರೋಗ್ಯ  ಇಲಾಖೆಗಳ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಅಗತ್ಯ ಕ್ರಮ ಕೈಗೊಂಡಿದ್ದಾರೆ.

ಅಲ್ಲದೆ ಮಳೆ ಸಂದರ್ಭದಲ್ಲಿ ಸಿಡಿಲು ಬಡಿತದಿಂದ ತಪ್ಪಿಸಿಕೊಳ್ಳುವ ಕುರಿತು, ಟಿಸಿಗಳ ಬಳಿ ಜಾನುವಾರುಗಳನ್ನು ಕಟ್ಟದಿರುವ ಕುರಿತು, ಮುರಿದು ಬಿದ್ದ ವಿದ್ಯುತ್ ತಂತಿಗಳನ್ನು ಸ್ಪರ್ಶಿಸಬಾರದು ಎಂದು ಜಾಗೃತಿ ಮೂಡಿಸಲಾಗುತ್ತಿದೆ.ಮಳೆಯ ಹಿನ್ನೆಲೆಯಲ್ಲಿ ಸೆಸ್ಕ್ ಸಿಬ್ಬಂದಿ ವಿದ್ಯುತ್ ಮಾರ್ಗಗಳನ್ನು ಪರಿಶೀಲಿಸಬೇಕು. ಶಿಥಿಲ ಗೊಂಡಿರುವ ವಿದ್ಯುತ್ ಕಂಬಗಳು, ಕೆಟ್ಟಿರುವ ಟಿಸಿಗಳನ್ನು ತಕ್ಷಣ ಬದಲಿಸಬೇಕು. ವಿದ್ಯುತ್ ತಂತಿಗಳಿಗೆ ತಾಗುವ ರೆಂಬೆ- ಕೊಂಬೆಗಳನ್ನು ಕಡಿಯಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ.

” ಇತ್ತೀಚೆಗೆ ತಾಲ್ಲೂಕಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಎಲ್ಲ ಗ್ರಾಪಂ ಪಿಡಿಒಗಳ ಜತೆ ಚರ್ಚಿಸಿ, ಸ್ಥಳೀಯ ಅಧಿಕಾರಿಗಳಾದ ಆರ್‌ಐ ಹಾಗೂ ವಿಎಗಳನ್ನು ಸಂಪರ್ಕದಲ್ಲಿರಿಸಿಕೊಂಡು ಪಂಚಾಯಿತಿ ಮಟ್ಟದಲ್ಲಿಯೇ ಸಣ್ಣ ಪುಟ್ಟ ಸಮಸ್ಯೆಗಳಾದರೆ ಬಗೆಹರಿಸಲು ತಿಳಿಸಿದ್ದೇವೆ. ಹೆಚ್ಚಿನ ಸಮಸ್ಯೆಗಳಾದರೆ ಅಕ್ಕ-ಪಕ್ಕದ ಶಾಲೆಗಳನ್ನು ಬಳಸಿಕೊಂಡು ಕಾಳಜಿ ಕೇಂದ್ರ ತೆರೆಯಲು ಸಿದ್ಧತೆ ಮಾಡಿಕೊಳ್ಳಲಾಗಿದೆ.”

-ಹೊಂಗಯ್ಯ, ಕಾರ್ಯನಿರ್ವಹಣಾಧಿಕಾರಿ, ತಾಲ್ಲೂಕು ಪಂಚಾಯಿತಿ

” ಈಗಾಗಲೇ ಹೂಳು ತುಂಬಿಕೊಂಡಿರುವ ಚರಂಡಿಗಳನ್ನು ಗುರುತಿಸಿ, ಸ್ವಚ್ಛಗೊಳಿಸಿ, ಹೂಳೆತ್ತುವ ಕೆಲಸ ನಡೆಯುತ್ತಿದೆ. ಮಂಜುನಾಥ ಬಡಾವಣೆಯಲ್ಲಿ ೩.೫೦ ಕೋಟಿ ರೂ. ವೆಚ್ಚದಲ್ಲಿ ಚರಂಡಿ ಕಾಮಗಾರಿ ನಡೆಯುತ್ತಿದೆ. ಪ್ರವಾಹ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿಯಿಂದ ೪೧ ಲಕ್ಷ ರೂ. ಹಣ ಬಂದಿದೆ. ಅತಿ ಹೆಚ್ಚು ಮಳೆಯಾದಾಗ ತಗ್ಗು ಪ್ರದೇಶದ ಹಲವು ಮನೆಗಳಿಗೆ ನೀರು ನುಗ್ಗುತ್ತದೆ. ಅಂತಹ ಮನೆಗಳನ್ನು ಗುರುತಿಸಿ ಜನರನ್ನು ಸ್ಥಳಾಂತರಿಸುತ್ತೇವೆ.”

-ಮಾನಸ, ಪೌರಾಯುಕ್ತರು, ನಗರಸಭೆ

” ಮಳೆಯ ಹಿನ್ನೆಲೆಯಲ್ಲಿ ಕಲುಷಿತ ನೀರು ನಿಂತಿರುವ ಜಾಗದಲ್ಲಿ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇದ್ದು, ಆಶಾ ಕಾರ್ಯಕರ್ತೆಯರು ಹಾಗೂ ಹೆಲ್ತ್ ಇನ್‌ಸ್ಪೆಕ್ಟರ್‌ಗಳನ್ನು ಪ್ರತಿ ಹಳ್ಳಿಗೂ ಕಳುಹಿಸಿ ಸಾಂಕ್ರಾಮಿಕ ರೋಗಗಳು ಹರಡದಂತೆ ವಹಿಸಬೇಕಾದ ಎಚ್ಚರಿಕೆಗಳ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ.”

-ಡಾ.ಕೀರ್ತಿಕುಮಾರ್, ಟಿಎಚ್‌ಒ

ಆಂದೋಲನ ಡೆಸ್ಕ್

Recent Posts

ಮಾಡೆಲ್‌ ಟ್ವಿಶಾ ಶರ್ಮಾ ಸಾವಿನ ಕೇಸ್‌ ತನಿಖೆ ಸಿಬಿಐ ಹೆಗಲಿಗೆ

ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್​ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…

7 hours ago

ಮೈಸೂರು | ಪೊಲೀಸರ ಬಲೆಗೆ ಬಿದ್ದ ಸುಪಾರಿ ಗ್ಯಾಂಗ್‌

ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…

8 hours ago

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…

10 hours ago

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…

11 hours ago

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

12 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

12 hours ago