Andolana originals

ಚುಂಚನಕಟ್ಟೆ ಶ್ರೀರಾಮ ಕಾರ್ಖಾನೆ ಆರಂಭಕ್ಕೆ ಮುನ್ನುಡಿ

ಆನಂದ್ ಹೊಸೂರು

ಹೊಸೂರು: ಮೈಸೂರು ಜಿಲ್ಲೆಯ ಏಕೈಕ ಸಹಕಾರ ಸಕ್ಕರೆ ಕಾರ್ಖಾನೆಗೆ ಹಿಡಿದಿದ್ದ ಗ್ರಹಣ ಕಳಚುವ ಸಂದರ್ಭ ಕೂಡಿ ಬಂದಿದ್ದು, ಶ್ರೀರಾಮ ಸಹಕಾರ ಸಕ್ಕರೆ ಕಾರ್ಖಾನೆ ಆರಂಭಕ್ಕೆ ಸರ್ಕಾರ ಅಽಕೃತವಾಗಿ ಮುನ್ನುಡಿ ಬರೆದಿದೆ.

ಸಾಲಿಗ್ರಾಮ ತಾಲ್ಲೂಕಿನ ಚುಂಚನಕಟ್ಟೆ ಶ್ರೀರಾಮ ಕಾರ್ಖಾನೆಯ ನೋಂದಣಿ ಕಾರ್ಯಕ್ಕೆ ಸರ್ಕಾರ ಜನವರಿ ೨ರ ಡೆಡ್‌ಲೈನ್ ನೀಡಿದ್ದು ಮುಂದಿನ ಜುಲೈ ಅಥವಾ ಆಗಸ್ಟ್‌ನಿಂದ ಕಬ್ಬು ನುರಿಸಲು ಅನುವಾಗುವಂತೆ ಕ್ರಮ ಕೈಗೊಳ್ಳಬೇಕೆಂದು ನಿರಾಣಿ ಶುಗರ್ಸ್‌ನವರಿಗೆ ನಿರ್ದೇಶನ ನೀಡಿದೆ.

೨೦೧೨ರಿಂದ ೨೦೨೨ರವರೆಗೆ ಕಾರ್ಖಾನೆ ಸ್ಥಗಿತಗೊಂಡು ಸಂಪೂರ್ಣ ಹಾಳಾಗಿತ್ತು. ಅಂದಿನ ಶಾಸಕರಾಗಿದ್ದ ಸಾ. ರಾ ಮಹೇಶ್‌ರವರ ಪ್ರಯತ್ನದ ಫಲವಾಗಿ ಹಲವಾರು ಬಾರಿ ಟೆಂಡರ್ ಕರೆದರೂ ಯಾರೂ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳದೇ ಕಾರ್ಖಾನೆ ಪಾಳು ಬಿದ್ದಿತ್ತು. ನಂತರ ನಿರಾಣಿ ಸಮೂಹದ ಮನವೊಲಿಸಿ ೨೦೨೩ರಲ್ಲಿ ಕಾರ್ಖಾನೆಯನ್ನು ಗುತ್ತಿಗೆ ನೀಡಲಾಗಿತ್ತು.

ಅದರ ಫಲವಾಗಿ ೨೦೨೩ರ ಹಂಗಾಮಿನಲ್ಲಿ ಸುಮಾರು ೨೦ ಸಾವಿರ ಟನ್ ಕಬ್ಬು ಅರೆದರೂ ಪದೇ ಪದೇ ಕೈಕೊಡುತ್ತಿದ್ದ ಹಳೆಯ ಯಂತ್ರಗಳಿಂದ ಹೆಚ್ಚಿನ ಕಾರ್ಯದಕ್ಷತೆ ಇಲ್ಲ ಎಂದು ಮನಗಂಡು ಕಾರ್ಖಾನೆಯ ಗುತ್ತಿಗೆಯನ್ನು ನೋಂದಣಿ ಮಾಡಿಸಿ ಎಂದು ಹೇಳಿ ಕೆಲವು ನಿಬಂಧನೆಗಳನ್ನು ವಿಽಸಿ ನಿರಾಣಿ ಸಮೂಹ ಕಬ್ಬು ಅರೆಯುವ ಕಾರ್ಯ ಸ್ಥಗಿತಗೊಳಿಸಿತ್ತು. ನೋಂದಣಿಗೆ ಬೇಕಾಗುವ ಸುಮಾರು ೨ ಕೋಟಿ ರೂ. ಶುಲ್ಕದ ವಿನಾಯಿತಿ ಕೋರಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು.

ಅದರಂತೆ ಸರ್ಕಾರ ಆರ್ಥಿಕ ಇಲಾಖೆ ಮತ್ತು ಕಬ್ಬು ಅಭಿವೃದ್ಧಿ ಸಚಿವಾಲಯ ಎಲ್ಲಾ ಪಕ್ರಿಯೆಗಳನ್ನು ಪೂರ್ಣಗೊಳಿಸಿ ಆ. ೩ರಂದು ಆರ್ಥಿಕ ಇಲಾಖೆಯ ಟಿಪ್ಪಣಿಯೊಂದಿಗೆ ಎನ್‌ಪಿವಿ ಆಧಾರದಂತೆ ನೋಂದಣಿ ಪ್ರಕ್ರಿಯೆ ಮುಗಿಸುವಂತೆ ಹಾಗೂ ೨ ಕೋಟಿ ರೂ. ನೋಂದಣಿ ವೆಚ್ಚವನ್ನು ಮನ್ನಾ ಮಾಡಿ ಹಾಗೂ ೨೦೨೨-೨೩ರಿಂದ ೪೦ ವರ್ಷಗಳಿಗೆ ವಿಸ್ತರಿಸಿ ಗುತ್ತಿಗೆ ನೀಡಲು ಆದೇಶಿಸಿದೆ.

ಕಾರ್ಖಾನೆಯನ್ನು ಈ ವ್ಯಾಪ್ತಿಯ ಕೆ. ಆರ್ ನಗರ, ಸಾಲಿಗ್ರಾಮ, ಹುಣಸೂರು, ಪಿರಿಯಾಪಟ್ಟಣ, ಹೆಚ್. ಡಿ. ಕೋಟೆ ತಾಲ್ಲೂಕುಗಳ ರೈತರು ಅವಲಂಬಿಸಿದ್ದಾರೆ. ಈ ಭಾಗದ ಕಬ್ಬನ್ನು ಮಂಡ್ಯ ಜಿಲ್ಲೆಯ ವಿವಿಧ ಕಾರ್ಖಾನೆಗಳಿಗೆ ಕಳುಹಿಸಿ ಅರೆಸಲಾಗುತ್ತಿದ್ದು, ಚುಂಚನಕಟ್ಟೆ ಕಾರ್ಖಾನೆ ಆರಂಭವಾದರೆ ಕೆ. ಆರ್. ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳ ರೈತರಿಗೆ ಅನುಕೂಲವಾಗಲಿದೆ.

ಕಾರ್ಖಾನೆಯ ನೋಂದಣಿ ಕಾರ್ಯಕ್ಕೆ ಜನವರಿ ೨ರ ಡೆಡ್‌ಲೈನ್ ನೀಡಿದ ಸರ್ಕಾರ ಕಾರ್ಖಾನೆ ವಿಚಾರವಾಗಿ ಮುಖ್ಯಮಂತ್ರಿಗಳು ಹಾಗೂ ಸಕ್ಕರೆ ಖಾತೆ ಸಚಿವರಿಗೆ ಮನವಿ ಮಾಡಿದ ಪರಿಣಾಮ ನೋಂದಣಿಗೆ ಅವಕಾಶ ನೀಡಿದ್ದು, ಮುಂದಿನ ಹಂಗಾಮಿನ ಕಬ್ಬನ್ನು ನಮ್ಮ ಕಾರ್ಖಾನೆಯಲ್ಲೇ ನುರಿಸುವ ಕೆಲಸವಾಗಲಿದೆ. ಇದರಿಂದ ನಮ್ಮ ರೈತರು ಕೂಲಿಕಾರ್ಮಿಕರಿಗೆ ಅನುಕೂಲವಾಗಲಿದೆ.
-ಡಿ. ರವಿಶಂಕರ್, ಶಾಸಕ

ಸ್ಥಳೀಯ ಯುವಕರು, ರೈತರು, ಸಾವಿರಾರು ಅವಲಂಬಿತರಿಗೆ ಈ ಕಾರ್ಖಾನೆ ಆಧಾರವಾಗ ಲಿದೆ. ಈ ವಿಚಾರವಾಗಿ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ಸಂಘವು ೨೦೧೨ರಿಂದಲೂ ನಿರಂತರವಾಗಿ ಹೋರಾಟ ಮಾಡುತ್ತಲೇ ಬಂದಿದ್ದು ನಮಗೆ ಈಗ ಯಶಸ್ಸು ಸಿಕ್ಕಿದೆ. -ಅಂಕನಹಳ್ಳಿ ತಿಮ್ಮಪ್ಪ, ರಾಜ್ಯ ಉಪಾಧ್ಯಕ್ಷ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘ

 

ಆಂದೋಲನ ಡೆಸ್ಕ್

Recent Posts

ಕೊಡಗಿನಲ್ಲಿ ಮುಂದುವರೆದ ಕಾಡಾನೆ ಸೆರೆ ಕಾರ್ಯಾಚರಣೆ

ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…

1 min ago

ಅಲಯನ್ಸ್ ಸ್ಕ್ವೇರ್ ಪ್ರಾಪರ್ಟೀಸ್‌ಗೆ 20ನೇ ವರ್ಷದ ಸಂಭ್ರಮ

ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…

1 hour ago

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

4 hours ago

ಓದುಗರ ಪತ್ರ: ರೈಲು ನೀರಿನ ಬಾಟಲಿಗೆ ಒಂದು ರೂ. ಹೆಚ್ಚು ವಸೂಲಿ!

ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…

4 hours ago

ಓದುಗರ ಪತ್ರ: ಹೆಚ್ಚಿನ ಟಿಕೆಟ್ ದರ ನೀಡಲು ಸಿದ್ಧರಾಗಬೇಕಾ?

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…

4 hours ago

ಬಡಮಕ್ಕಳಿಗೆ ಬೆಚ್ಚಗಿನ ಬದುಕು ನೀಡುವ ಕುಶಾಲ್ ರಾಜ್

ಪಂಜು ಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ  ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…

4 hours ago