Andolana originals

ಒಣ ಕಸ ವಿಲೇವಾರಿ ಘಟಕ ನಿರ್ಮಾಣಕ್ಕೆ ಸಿದ್ಧತೆ

ಕಸ ವಿಲೇವಾರಿಯಲ್ಲಿ ಸ್ವಾವಲಂಬನೆಯತ್ತ ಹೂಟಗಳ್ಳಿ ನಗರಸಭೆ

ಕೆ. ಪಿ. ಮದನ್
ಮೈಸೂರು: ಮೂರು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದಿರುವ ಹೂಟಗಳ್ಳಿ ನಗರಸಭೆಯಲ್ಲಿ ಹಲವು ಹೊಸ ಯೋಜನೆಗಳು ರೂಪು ಗೊಳ್ಳುತ್ತಿದ್ದು, ಸದ್ಯ ತ್ಯಾಜ್ಯ ಸಂಸ್ಕರಣೆಯಲ್ಲಿ ಸ್ವಾವಲಂಬನೆ ಸಾಧಿಸುವ ನಿಟ್ಟಿನಲ್ಲಿ ನಗರಸಭೆ ಮುಂದಾಗಿದೆ.

ನಗರಸಭೆ ವ್ಯಾಪ್ತಿಯಲ್ಲಿ ಪ್ರತಿದಿನ ೨೩ ಟನ್ ಕಸ ಸಂಗ್ರಹವಾಗುತ್ತಿದೆ. ಅದರಲ್ಲಿ ಸುಮಾರು ೮ ಟನ್ ಒಣ ಕಸವಿರುತ್ತದೆ. ಇದರ ವಿಲೇವಾರಿ ನಗರ ಸಭೆಗೆ ಸವಾಲಾಗಿತ್ತು. ಹಾಗಾಗಿ ಅಷ್ಟೂ ಒಣ ಕಸವನ್ನು ಮೈಸೂರು ನಗರಪಾಲಿಕೆಯ ತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ಕಳುಹಿಸುವ ಮೂಲಕ ಸ್ವಚ್ಛತೆ ವಿಷಯದಲ್ಲಿ ನಗರಸಭೆ ಪರಾವಲಂಬಿಯಾಗಿತ್ತು.

ಈಗ ಒಣ ಕಸ ವಿಲೇವಾರಿಯಲ್ಲಿ ಸ್ವಾವಲಂಬನೆ ಸಾಧಿಸಬೇಕೆಂಬ ಉದ್ದೇಶದಿಂದ ಹಿನಕಲ್ ವ್ಯಾಪ್ತಿಯ ಪ್ರದೇಶದಲ್ಲಿ ೧. ೦೫ ಕೋಟಿ ರೂ. ವೆಚ್ಚದಲ್ಲಿ ಒಣ ತ್ಯಾಜ್ಯ ಸಂಸ್ಕರಣಾ ಘಟಕವನ್ನು ಸ್ಥಾಪಿಸಲು ನಿರ್ಧರಿಸಿದೆ. ಘಟಕ ಸ್ಥಾಪನೆಯಾಗಲಿದ್ದು, ಇಲ್ಲಿ ಹೂಟಗಳ್ಳಿ ನಗರ ಸಭೆ ವ್ಯಾಪ್ತಿಯಲ್ಲಿ ನಿತ್ಯ ಸಂಗ್ರಹವಾಗುವ ಕಸದಿಂದ ಪ್ಲಾಸ್ಟಿಕ್, ಪೇಪರ್ ಮತ್ತಿತರ ವಸ್ತು ಗಳನ್ನು ಸಂಪೂರ್ಣವಾಗಿ ಬೇರ್ಪಡಿಸಿ ವಿಲೇವಾರಿ ಮಾಡಲು ಯೋಜನೆ ರೂಪಿಸ ಲಾಗಿದೆ. ಯಂತ್ರೋಪಕರಣಗಳನ್ನು ಅಳವಡಿಸಲು ಕ್ರಮ ವಹಿಸಲಾಗಿದೆ.

೩೫ ಬಡಾವಣೆಗಳು: ೬೫ ಸಾವಿರ ಜನಸಂಖ್ಯೆ ಇರುವ ಹೂಟಗಳ್ಳಿ ನಗರಸಭೆ ವ್ಯಾಪ್ತಿಯಲ್ಲಿ ನಾಲ್ಕು ಕೈಗಾರಿಕಾ ಪ್ರದೇಶಗಳೊಂದಿಗೆ ೩೫ ಬಡಾವಣೆಗಳು ಮತ್ತು ೧೦೦ಕ್ಕೂ ಹೆಚ್ಚು ಖಾಸಗಿ ಬಡಾವಣೆಗಳಿವೆ. ಇಲ್ಲಿ ಕಸ ಸಂಗ್ರಹ ಮತ್ತು ವಿಲೇವಾರಿ ದೊಡ್ಡ ಸವಾಲಾಗಿತ್ತು. ನಿತ್ಯ ಕಸ ವಿಲೇವಾರಿಗೆ ಅಗತ್ಯ ಸಿಬ್ಬಂದಿ ನೇಮಕ ದೊಂದಿಗೆ ಪೂರಕವಾಗಿ ಸ್ವಚ್ಛತಾ ವಾಹನಗಳನ್ನು ಖರೀದಿ ಸಿರುವ ನಗರಸಭೆ ಅಽಕಾರಿಗಳು, ನಿತ್ಯ ೨೩ ಟನ್ ತ್ಯಾಜ್ಯವನ್ನು ಸಂಗ್ರಹಿಸುತ್ತಿದ್ದಾರೆ.

ನಗರಸಭೆ ವ್ಯಾಪ್ತಿಯಲ್ಲಿ ಸಂಗ್ರಹವಾಗುವ ೮ ಟನ್ ಒಣ ಕಸವನ್ನು ಹಿನಕಲ್‌ನಲ್ಲಿ ಆರಂಭಿಸ ಲಿರುವ ಘಟಕದಲ್ಲಿ ವಿಲೇವಾರಿ ಮಾಡಲಾಗು ತ್ತದೆ. ಅದರಿಂದ ನಗರಸಭೆಗೂ ಆದಾಯ ಬರಲಿದೆ ಎನ್ನುತ್ತಾರೆ ಅಧಿಕಾರಿಗಳು.

೧. ೦೫ ಕೋಟಿ ರೂ. ವೆಚ್ಚದಲ್ಲಿ ಘಟಕ ಸ್ಥಾಪನೆಯಾಗಲಿದ್ದು, ಹೂಟಗಳ್ಳಿ ನಗರಸಭೆ ವ್ಯಾಪಿ ಯಲ್ಲಿ ನಿತ್ಯ ಸಂಗ್ರಹವಾಗುವ ೨೩ ಟನ್ ಕಸದಲ್ಲಿ ಪ್ಲಾಸ್ಟಿಕ್, ಪೇಪರ್ ಸೇರಿದಂತೆ ಇತರೆ ವಸ್ತುಗಳನ್ನು ಸಂಪೂರ್ಣವಾಗಿ ಬೇರ್ಪಡಿಸಿ ವಿಲೇವಾರಿ ಮಾಡಲು ಯೋಜನೆ ರೂಪಿಸಲಾಗಿದೆ. ಅದಕ್ಕೆ ಪೂರಕವಾದ ಯಂತ್ರೋಪಕರಣ ಗಳನ್ನು ಅಳವಡಿಸಲು ಕ್ರಮ ವಹಿಸಲಾಗಿದೆ. -ಗಿರಿಜಾ, ಸಹಾಯಕ ಪರಿಸರ ಅಭಿಯಂತರರು, ಹೂಟಗಳ್ಳಿ ನಗರಸಭೆ

 

ಆಂದೋಲನ ಡೆಸ್ಕ್

Recent Posts

ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಗ್ಯಾರಂಟಿ…

3 mins ago

ಕಾಂಗ್ರೆಸ್‌ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಹಸ್ತಾಂತರ ವಿಚಾರದಲ್ಲಿ ರಾಜ್ಯದಲ್ಲಿ ಗೊಂದಲವಿದೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ…

10 mins ago

ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ ಮಲ್ಲಿಕಾರ್ಜುನ ಮುತ್ಯಾ

ಯಾದಗಿರಿ: ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿರುವ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ…

36 mins ago

ಟಿ.ನರಸೀಪುರ ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ: ಭಯಭೀತರಾದ ಜನತೆ

ಟಿ.ನರಸೀಪುರ: ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ ಮಿತಿಮೀರಿದ್ದು, ಜನತೆ ಭಯಭೀತರಾಗಿದ್ದಾರೆ. ತಾಲ್ಲೂಕಿನ ಎಸ್.ಕೆಬ್ಬೆಹುಂಡಿ, ಕನ್ನಾಯಕನಹಳ್ಳಿ ಗ್ರಾಮದ ಮಧ್ಯೆ ಚಿರತೆ ಪ್ರತ್ಯಕ್ಷವಾಗಿದ್ದು, ಈ…

52 mins ago

ರಾಜಧಾನಿಯ ಮಾಲಿನ್ಯ ನಿಯಂತ್ರಣಕ್ಕೆ ನಿರ್ದಿಷ್ಟ ಮಾನದಂಡ- ಪರಿಸರ ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಂತೆ ಬೆಂಗಳೂರು ಸಹ ಮತ್ತೊಂದು ಗ್ಯಾಸ್ ಛೇಂಬರ್ ಆಗದಂತೆ ಕ್ರಮ ವಹಿಸಲು ಶೀಘ್ರವೇ ನಗರದ ಎಲ್ಲ…

54 mins ago

ಭದ್ರತಾ ಪಡೆ-ಮಾವೋವಾದಿಗಳ ನಡುವೆ ಗುಂಡಿನ ಚಕಮಕಿ: ಇಬ್ಬರು ನಕ್ಸಲರು ಹತ್ಯೆ

ಛತ್ತೀಸ್‌ಗಢ: ಇಲ್ಲಿನ ಬಿಜಾಪುರ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಇಬ್ಬರು ನಕ್ಸಲರು ಹತರಾಗಿದ್ದಾರೆ.…

1 hour ago