Andolana originals

ಒಣ ಕಸ ವಿಲೇವಾರಿ ಘಟಕ ನಿರ್ಮಾಣಕ್ಕೆ ಸಿದ್ಧತೆ

ಕಸ ವಿಲೇವಾರಿಯಲ್ಲಿ ಸ್ವಾವಲಂಬನೆಯತ್ತ ಹೂಟಗಳ್ಳಿ ನಗರಸಭೆ

ಕೆ. ಪಿ. ಮದನ್
ಮೈಸೂರು: ಮೂರು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದಿರುವ ಹೂಟಗಳ್ಳಿ ನಗರಸಭೆಯಲ್ಲಿ ಹಲವು ಹೊಸ ಯೋಜನೆಗಳು ರೂಪು ಗೊಳ್ಳುತ್ತಿದ್ದು, ಸದ್ಯ ತ್ಯಾಜ್ಯ ಸಂಸ್ಕರಣೆಯಲ್ಲಿ ಸ್ವಾವಲಂಬನೆ ಸಾಧಿಸುವ ನಿಟ್ಟಿನಲ್ಲಿ ನಗರಸಭೆ ಮುಂದಾಗಿದೆ.

ನಗರಸಭೆ ವ್ಯಾಪ್ತಿಯಲ್ಲಿ ಪ್ರತಿದಿನ ೨೩ ಟನ್ ಕಸ ಸಂಗ್ರಹವಾಗುತ್ತಿದೆ. ಅದರಲ್ಲಿ ಸುಮಾರು ೮ ಟನ್ ಒಣ ಕಸವಿರುತ್ತದೆ. ಇದರ ವಿಲೇವಾರಿ ನಗರ ಸಭೆಗೆ ಸವಾಲಾಗಿತ್ತು. ಹಾಗಾಗಿ ಅಷ್ಟೂ ಒಣ ಕಸವನ್ನು ಮೈಸೂರು ನಗರಪಾಲಿಕೆಯ ತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ಕಳುಹಿಸುವ ಮೂಲಕ ಸ್ವಚ್ಛತೆ ವಿಷಯದಲ್ಲಿ ನಗರಸಭೆ ಪರಾವಲಂಬಿಯಾಗಿತ್ತು.

ಈಗ ಒಣ ಕಸ ವಿಲೇವಾರಿಯಲ್ಲಿ ಸ್ವಾವಲಂಬನೆ ಸಾಧಿಸಬೇಕೆಂಬ ಉದ್ದೇಶದಿಂದ ಹಿನಕಲ್ ವ್ಯಾಪ್ತಿಯ ಪ್ರದೇಶದಲ್ಲಿ ೧. ೦೫ ಕೋಟಿ ರೂ. ವೆಚ್ಚದಲ್ಲಿ ಒಣ ತ್ಯಾಜ್ಯ ಸಂಸ್ಕರಣಾ ಘಟಕವನ್ನು ಸ್ಥಾಪಿಸಲು ನಿರ್ಧರಿಸಿದೆ. ಘಟಕ ಸ್ಥಾಪನೆಯಾಗಲಿದ್ದು, ಇಲ್ಲಿ ಹೂಟಗಳ್ಳಿ ನಗರ ಸಭೆ ವ್ಯಾಪ್ತಿಯಲ್ಲಿ ನಿತ್ಯ ಸಂಗ್ರಹವಾಗುವ ಕಸದಿಂದ ಪ್ಲಾಸ್ಟಿಕ್, ಪೇಪರ್ ಮತ್ತಿತರ ವಸ್ತು ಗಳನ್ನು ಸಂಪೂರ್ಣವಾಗಿ ಬೇರ್ಪಡಿಸಿ ವಿಲೇವಾರಿ ಮಾಡಲು ಯೋಜನೆ ರೂಪಿಸ ಲಾಗಿದೆ. ಯಂತ್ರೋಪಕರಣಗಳನ್ನು ಅಳವಡಿಸಲು ಕ್ರಮ ವಹಿಸಲಾಗಿದೆ.

೩೫ ಬಡಾವಣೆಗಳು: ೬೫ ಸಾವಿರ ಜನಸಂಖ್ಯೆ ಇರುವ ಹೂಟಗಳ್ಳಿ ನಗರಸಭೆ ವ್ಯಾಪ್ತಿಯಲ್ಲಿ ನಾಲ್ಕು ಕೈಗಾರಿಕಾ ಪ್ರದೇಶಗಳೊಂದಿಗೆ ೩೫ ಬಡಾವಣೆಗಳು ಮತ್ತು ೧೦೦ಕ್ಕೂ ಹೆಚ್ಚು ಖಾಸಗಿ ಬಡಾವಣೆಗಳಿವೆ. ಇಲ್ಲಿ ಕಸ ಸಂಗ್ರಹ ಮತ್ತು ವಿಲೇವಾರಿ ದೊಡ್ಡ ಸವಾಲಾಗಿತ್ತು. ನಿತ್ಯ ಕಸ ವಿಲೇವಾರಿಗೆ ಅಗತ್ಯ ಸಿಬ್ಬಂದಿ ನೇಮಕ ದೊಂದಿಗೆ ಪೂರಕವಾಗಿ ಸ್ವಚ್ಛತಾ ವಾಹನಗಳನ್ನು ಖರೀದಿ ಸಿರುವ ನಗರಸಭೆ ಅಽಕಾರಿಗಳು, ನಿತ್ಯ ೨೩ ಟನ್ ತ್ಯಾಜ್ಯವನ್ನು ಸಂಗ್ರಹಿಸುತ್ತಿದ್ದಾರೆ.

ನಗರಸಭೆ ವ್ಯಾಪ್ತಿಯಲ್ಲಿ ಸಂಗ್ರಹವಾಗುವ ೮ ಟನ್ ಒಣ ಕಸವನ್ನು ಹಿನಕಲ್‌ನಲ್ಲಿ ಆರಂಭಿಸ ಲಿರುವ ಘಟಕದಲ್ಲಿ ವಿಲೇವಾರಿ ಮಾಡಲಾಗು ತ್ತದೆ. ಅದರಿಂದ ನಗರಸಭೆಗೂ ಆದಾಯ ಬರಲಿದೆ ಎನ್ನುತ್ತಾರೆ ಅಧಿಕಾರಿಗಳು.

೧. ೦೫ ಕೋಟಿ ರೂ. ವೆಚ್ಚದಲ್ಲಿ ಘಟಕ ಸ್ಥಾಪನೆಯಾಗಲಿದ್ದು, ಹೂಟಗಳ್ಳಿ ನಗರಸಭೆ ವ್ಯಾಪಿ ಯಲ್ಲಿ ನಿತ್ಯ ಸಂಗ್ರಹವಾಗುವ ೨೩ ಟನ್ ಕಸದಲ್ಲಿ ಪ್ಲಾಸ್ಟಿಕ್, ಪೇಪರ್ ಸೇರಿದಂತೆ ಇತರೆ ವಸ್ತುಗಳನ್ನು ಸಂಪೂರ್ಣವಾಗಿ ಬೇರ್ಪಡಿಸಿ ವಿಲೇವಾರಿ ಮಾಡಲು ಯೋಜನೆ ರೂಪಿಸಲಾಗಿದೆ. ಅದಕ್ಕೆ ಪೂರಕವಾದ ಯಂತ್ರೋಪಕರಣ ಗಳನ್ನು ಅಳವಡಿಸಲು ಕ್ರಮ ವಹಿಸಲಾಗಿದೆ. -ಗಿರಿಜಾ, ಸಹಾಯಕ ಪರಿಸರ ಅಭಿಯಂತರರು, ಹೂಟಗಳ್ಳಿ ನಗರಸಭೆ

 

ಆಂದೋಲನ ಡೆಸ್ಕ್

Recent Posts

8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿ ; ವಾರದಲ್ಲಿ ಅಧಿಸೂಚನೆ : ಗೃಹ ಸಚಿವ ಪರಮೇಶ್ವರ

ಬೆಂಗಳೂರು : ಒಳಮೀಸಲಾತಿ ವಿವಾದ ಬಗೆಹರಿದಿರುವುದರಿಂದ ಒಂದು ವಾರದೊಳಗೆ 8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್‌ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು…

8 hours ago

ಇರಾನ್‌ ಅಣ್ವಸ್ತ್ರ ಹೊಂದಲು ಬ್ರಿಟನ್‌ ರಾಜ ಚಾರ್ಲ್‌ ಬಯಸುವುದಿಲ್ಲ : ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್ : ಇರಾನ್ ಅಣ್ವಸ್ತ್ರ ಹೊಂದಲು ಬ್ರಿಟನ್ ರಾಜ ಮೂರನೇ ಚಾರ್ಲ್ಸ್ ಬಯಸುವುದಿಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್…

9 hours ago

ಜಾಮೀನಿಗಾಗಿ ಮತ್ತೆ ಸುಪ್ರೀಂ ಕದ ತಟ್ಟಿದ ನಟ ದರ್ಶನ್‌

ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಈಗ ಎರಡನೇ ಬಾರಿ ಜಾಮೀನಿಗಾಗಿ…

11 hours ago

ಚಾ.ನಗರ | ಚಿನ್ನಾಭರಣಕ್ಕಾಗಿ ಮದುವೆ ಮನೆಯಲ್ಲಿ ಮಾರಮಾರಿ ; ಚಾಕು ಇರಿತ

ಚಾಮರಾಜನಗರ : ಮದುವೆ ಮನೆಯಲ್ಲಿ ಸಂಭ್ರಮ ಮನೆ ಮಾಡಬೇಕಿದ್ದ ಹೊತ್ತಲ್ಲಿ ಚಿನ್ನಾಭರಣದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ಹೋಗಿ, ಚಾಕು…

12 hours ago

ಕಾವೇರಿ ನದಿಯಲ್ಲಿ ನೀರಿನ ಹರಿವು ಇಳಿಮುಖ

ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…

15 hours ago

ಅನಾಥ ಶವಗಳಿಗೆ ಗೌರವದ ವಿದಾಯ ಹೇಳುವ ಶರೀಫ್‌ ಚಾಚಾ

1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…

15 hours ago