Andolana originals

ನೆಫ್ರೋ ಯುರಾಲಜಿ ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ಸಿದ್ಧತೆ

ಕೆ.ಬಿ.ರಮೇಶನಾಯಕ

ಮೈಸೂರಿನ ಕುಂಬಾರಕೊಪ್ಪಲು ಬಳಿ ತಲೆ ಎತ್ತಲಿರುವ ಸ್ವಂತ ಕಟ್ಟಡ

೧೧೭.೭೧ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ

೧೦೦ ಹಾಸಿಗೆಗಳ ಸಾಮರ್ಥ್ಯದ ಜಿ ಪ್ಲಸ್ ೬ ಅಂತಸ್ತಿನ ಕಟ್ಟಡ

ಮೈಸೂರು, ಚಾ.ನಗರ, ಮಂಡ್ಯ, ಹಾಸನ, ಕೊಡಗು ಜಿಲ್ಲೆಗಳ ಜನಕ್ಕೆ ಅನುಕೂಲ

ಮೈಸೂರು: ಬಡವರ ಪಾಲಿನ ದೊಡ್ಡಾಸ್ಪತ್ರೆ ಎಂದೇ ಜನಜನಿತವಾಗಿರುವ ಕೆ.ಆರ್.ಆಸ್ಪತ್ರೆ ಮೇಲಿನ ಒತ್ತಡ ತಗ್ಗಿಸಲು ನಗರದ ಕೆಆರ್‌ಎಸ್ ರಸ್ತೆಯಲ್ಲಿ ಸೂಪರ್ ಸ್ಪೆಷಾಲಿಟಿ, ಜಿಲ್ಲಾ ಆಸ್ಪತ್ರೆಗಳನ್ನು ನಿರ್ಮಾಣ ಮಾಡಿದ ರಾಜ್ಯ ಸರ್ಕಾರ, ಕುಂಬಾರಕೊಪ್ಪಲು ರಸ್ತೆಗೆ ಹೊಂದಿ ಕೊಂಡಂತಿರುವ ಒಂದು ಎಕರೆ ಪ್ರದೇಶದಲ್ಲಿ ೧೧೭.೭೧ ಕೋಟಿ ರೂ. ವೆಚ್ಚದಲ್ಲಿ ನೆಫ್ರೋ  ಯುರಾಲಜಿ ಆಸ್ಪತ್ರೆಯನ್ನು ನಿರ್ಮಿಸಲು ಸಿದ್ಧತೆ ನಡೆಸಿದೆ.

ಅತ್ಯಾಧುನಿಕ ಸೇವೆಗಳನ್ನು ಒಳಗೊಂಡ ೧೦೦ ಹಾಸಿಗೆಗಳ ಸಾಮರ್ಥ್ಯದ ಜಿ ಪ್ಲಸ್ ೬ ಅಂತಸ್ತಿನ ಕಟ್ಟಡದ ಆಸ್ಪತ್ರೆಯು ತಲೆ ಎತ್ತಲಿದೆ. ಇದರಿಂದಾಗಿ ಮುಂದಿನ ಒಂದು ವರ್ಷದಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಲಕ್ಷಾಂತರ ರೂ. ಖರ್ಚು ಮಾಡಿ ಚಿಕಿತ್ಸೆ ಪಡೆಯುವುದು ಕಡಿಮೆಯಾಗಲಿದೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನೆ- ಯುರಾಲಜಿ ಸಂಸ್ಥೆಯು ಸ್ವಾಯತ್ತ ಸಂಸ್ಥೆಯಾಗಿದೆ. ಇದು ಮೂತ್ರಪಿಂಡ ಹಾಗೂ ಮೂತ್ರಕೋಶ ಕಾಯಿಲೆಗಳಿಗೆ ಚಿಕಿತ್ಸೆ ನೀಡುವಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕದ ಏಕೈಕ ಸಂಸ್ಥೆಯಾಗಿತ್ತು.

ಸಿದ್ದರಾಮಯ್ಯ ಅವರು ಮೊದಲನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದಾಗ, ಸಂಸ್ಥೆಯ ಮುಖ್ಯಘಟಕಕ್ಕೆ ಭೇಟಿ ನೀಡಿದ್ದ ವೇಳೆಯಲ್ಲಿ ರೋಗಿಗಳ ಒತ್ತಡ ಗಮನಿಸಿ ಮೈಸೂರಿನಲ್ಲಿ ಎರಡನೇ ಘಟಕವನ್ನು ಪ್ರಾರಂಭಿಸಲು ಸೂಚಿಸಿದ್ದರು. ಅದರಂತೆ, ೨೦೧೮ರಲ್ಲಿ ಮೈಸೂರು ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಿಗೆ ಅನುಕೂಲವಾಗುವಂತೆ ಕೆ.ಆರ್.ಆಸ್ಪತ್ರೆಯ ಆವರಣದಲ್ಲಿ ಐಪಿಡಿ-ಒಪಿಡಿ ಕಟ್ಟಡದ ನಾಲ್ಕನೇ ಮಹಡಿಯಲ್ಲಿ ೬೦ ಹಾಸಿಗೆಗಳ ಸಾಮರ್ಥ್ಯವುಳ್ಳ ಅತ್ಯಾಧುನಿಕ ಯಂತ್ರೋಪಕರಣಗಳನ್ನು ಒಳಗೊಂಡಂತೆ ಘಟಕವನ್ನು ರೋಗಿಗಳಿಗೆ ಸಮರ್ಪಣೆ ಮಾಡಿದ್ದರು. ಆದರೆ, ಈ ಘಟಕಕ್ಕೆ ಪ್ರತ್ಯೇಕವಾದ ಕಟ್ಟಡವನ್ನು ನಿರ್ಮಾಣ ಮಾಡಬೇಕೆಂಬ ಕೂಗು ಎದ್ದಿತ್ತು.

ಚಾಮರಾಜ ಕ್ಷೇತ್ರದ ಶಾಸಕ ಕೆ.ಹರೀಶ್ ಗೌಡ, ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಈ ಘಟಕಕ್ಕೆ ಸ್ವಂತ ಕಟ್ಟಡ ನಿರ್ಮಿಸುವ ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಇದನ್ನು ಪರಿಗಣಿಸಿದ ಸಿದ್ದರಾಮಯ್ಯ ಅವರು ಪಿಕೆಟಿಬಿ ಆಸ್ಪತ್ರೆ ಆವರಣದಲ್ಲಿರುವ ಜಯದೇವ ಹೃದ್ರೋಗ ಆಸ್ಪತ್ರೆ ಹಾಗೂ ಸಂಶೋಧನಾ ಸಂಸ್ಥೆಯ ಹಿಂಭಾಗದಲ್ಲಿ ಕುಂಬಾರಕೊಪ್ಪಲು ರಸ್ತೆಗೆ ಹೊಂದಿಕೊಂಡಂತೆ ಇರುವ ಸ್ಥಳದಲ್ಲಿ ಸ್ವಂತ ಕಟ್ಟಡಕ್ಕಾಗಿ ೨೦೨೪-೨೫ರಲ್ಲಿ ಒಂದು ಎಕರೆ ಜಾಗವನ್ನು ಮಂಜೂರು ಮಾಡಿದ್ದಲ್ಲದೆ, ೧೦೦ ಹಾಸಿಗೆಗಳ ಸಾಮರ್ಥ್ಯದ ಆಸ್ಪತ್ರೆಯನ್ನು ಉನ್ನತೀಕರಿಸಲು ೧೧೭.೭೧ ಕೋಟಿ ರೂ. ಅನುದಾನ ಬಿಡುಗಡೆಗೆ ಒಪ್ಪಿದ್ದರು. ಅದರಂತೆ ಆಡಳಿತಾತ್ಮಕ ಮತ್ತು ತಾಂತ್ರಿಕ ಅನುಮೋದನೆ ದೊರೆತು ಕಾಮಗಾರಿ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ.

ಹೈಟೆಕ್ ಮಾದರಿ ಚಿಕಿತ್ಸಾ ಸೌಲಭ್ಯ: ನೂತನ ವಿನ್ಯಾಸದ ಕಟ್ಟಡದಲ್ಲಿ ರೋಗಿಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಹೈಟೆಕ್ ಮಾದರಿಯ ಚಿಕಿತ್ಸಾ ಸೌಲಭ್ಯವನ್ನು ಒದಗಿಸುವುದು ಈ ಆಸ್ಪತ್ರೆಯ ಮೊದಲ ಗುರಿಯಾಗಿದೆ. ಬದಲಾದ ಕಾಲಕ್ಕೆ ತಕ್ಕಂತೆ ಅತ್ಯಾಧುನಿಕ ಸೇವೆ ನೀಡಲು ೧೦೦ ಹಾಸಿಗೆಗಳ ಸಾಮರ್ಥ್ಯದ ಜಿ ಪ್ಲಸ್ ೬ ಅಂತಸ್ತಿನ ಆಸ್ಪತ್ರೆಯು ನಿರ್ಮಾಣಗೊಳ್ಳಲಿದೆ. ಇದರಲ್ಲಿ ೫೦ ಹಾಸಿಗೆಗಳ ಸಾಮರ್ಥ್ಯದ ಡಯಾಲಿಸಿಸ್ ಘಟಕ, ೨೦ ಹಾಸಿಗೆ ಸಾಮರ್ಥ್ಯದ ತೀವ್ರ ನಿಗಾ ಘಟಕ, ನಾಲ್ಕು ಕೊಠಡಿಗಳ ಮಾಡ್ಯುಲರ್ ಶಸಚಿಕಿತ್ಸಾ ಘಟಕ, ಏಕಕಾಲದಲ್ಲಿ ನೂರು ಜನರು ಆಸೀನರಾಗುವಂತಹ ವಿಶೇಷ ಸೌಲಭ್ಯವುಳ್ಳ ಸಭಾಂಗಣ, ಡಿಜಿಟಲ್ ಲೈಬ್ರರಿ, ಕಟ್ಟಡದ ಹೊರಗಡೆ ವಿಶಾಲವಾದ ವಾಹನ ನಿಲ್ದಾಣ ಮತ್ತು ರೋಗಿಗಳ ವಿಶ್ರಾಂತಿಧಾಮ ಹೊಂದಿರುತ್ತದೆ.

೬,೪೩೧ ಮಂದಿಗೆ ಶಸ್ತ್ರಚಿಕಿತ್ಸೆ:  ೨೦೧೮ರಲ್ಲಿ ಮೈಸೂರಿನಲ್ಲಿ ಆರಂಭವಾದ ನೆಫ್ರೋ ಯುರಾಲಜಿ ಸಂಸ್ಥೆಯ ಘಟಕದಲ್ಲಿ ಈವರೆಗೆ ಲಕ್ಷಾಂತರ ಮಂದಿಗೆ ಮೂತ್ರಪಿಂಡ, ಮೂತ್ರಕೋಶ ಕಾಯಿಲೆಗೆ ಚಿಕಿತ್ಸೆಯನ್ನು ನೀಡಲಾಗಿದೆ. ೨೦೧೮ ರಿಂದ ೨೦೨೫ರ ಜುಲೈ ತನಕ ೯೧ ಸಾವಿರ ಮಂದಿಗೆ ಡಯಾಲಿಸಿಸ್ ಚಿಕಿತ್ಸೆ, ಹೊರ ರೋಗಿಗಳಾಗಿ ೮೯ ಸಾವಿರ, ಒಳರೋಗಿಗಳಾಗಿ ೭,೩೩೬ ಮಂದಿ ಚಿಕಿತ್ಸೆ ಪಡೆದಿದ್ದರೆ, ೬,೪೩೧ ಮಂದಿಗೆ ಶಸ್ತ್ರ ಚಿಕಿತ್ಸೆ ಮಾಡಿರುವುದು ಗಮನಾರ್ಹ.

” ಮೈಸೂರಿನಲ್ಲೇ ಪ್ರತ್ಯೇಕವಾದ ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಮೈಸೂರು ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಾದ ಮಂಡ್ಯ, ಹಾಸನ, ಕೊಡಗು, ಚಾಮರಾಜನಗರ ಜಿಲ್ಲೆಗಳ ಬಡ ರೋಗಿಗಳಿಗೆ ಅನುಕೂಲವಾಗುವಂತೆ ಚಿಕಿತ್ಸೆ ಕೊಡಲು ಸಹಕಾರಿಯಾಗಲಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಡಯಾಲಿಸಿಸ್, ಶಸಚಿಕಿತ್ಸೆಗೆ ದುಬಾರಿ ಖರ್ಚು ಮಾಡುವುದು ತಗ್ಗಲಿದೆ.”

ಡಾ.ಜೆ.ಬಿ.ನರೇಂದ್ರ, ಮುಖ್ಯಸ್ಥ, ನೆಫ್ರೋ ಯುರಾಲಜಿ ಸಂಸ್ಥೆ

ಆಂದೋಲನ ಡೆಸ್ಕ್

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

7 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

7 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

8 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

9 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

14 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

14 hours ago