Andolana originals

೩ ತಿಂಗಳು ಮುನ್ನವೇ ದಸರಾ ಸಿದ್ಧತೆ ಆರಂಭ

ಕೆ.ಬಿ.ರಮೇಶನಾಯಕ

ವಿವಿಧ ಉಪ ಸಮಿತಿಗಳಿಗೆ ವಿಶೇಷಾಧಿಕಾರಿಗಳ ನೇಮಕ; ಅದ್ಧೂರಿ ಆಚರಣೆಗೆ ಅಧಿಕಾರಿಗಳಿಗೆ ಹೊಣೆಗಾರಿಕೆ

ಕೆ.ಆರ್.ರಕ್ಷಿತ್ಗೆ ಮತ್ತೆ ಯುವ ದಸರಾ ಹೊಣೆ

ಹಲವು ಅಧಿಕಾರಿಗಳಿಗೆ ಮೊದಲ ದಸರಾದ ಜವಾಬ್ದಾರಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವವನ್ನು ಈ ಬಾರಿ ವಿಜೃಂಭಣೆಯಿಂದ ಆಚರಿಸಲು ನಿರ್ಧಾರ ವಾದ ಬೆನ್ನಲ್ಲೇ ಮೂರು ತಿಂಗಳ ಮುನ್ನವೇ ಜಿಲ್ಲಾಡ ಳಿತ ದಸರಾ ಸಿದ್ಧತೆಯನ್ನು ಸದ್ದಿಲ್ಲದೆ ಆರಂಭಿಸಿದ್ದು, ಜಿಲ್ಲಾ ಮಟ್ಟದ ಅಽಕಾರಿಗಳಿಗೆ ಉಪ ಸಮಿತಿ ಹೊಣೆಗಾರಿಕೆಯನ್ನು ವಹಿಸಲಾಗಿದೆ.

ಜಂಬೂ ಸವಾರಿ ಮೆರವಣಿಗೆಯಲ್ಲಿ ಸ್ತಬ್ಧಚಿತ್ರ ಉಪ ಸಮಿತಿ ಸದಸ್ಯರು, ಮೆರವಣಿಗೆ ಸಮಿತಿ ಸದಸ್ಯರು ಓಡಾಡುವುದಕ್ಕೆ ಬ್ರೇಕ್ ಹಾಕುವಂತೆ ಸಲಹೆಗಳು ಕೇಳಿಬಂದಿರುವ ಕಾರಣ ಈ ಬಾರಿ ಒಂದಿಷ್ಟು ಸದಸ್ಯರ ಸಂಖ್ಯೆಯನ್ನು ಕಡಿತ ಮಾಡುವುದು ನಿಶ್ಚಿತವಾಗಿದೆ ಎಂದು ಹೇಳಲಾಗಿದೆ. ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ದಸರಾ ಮಹೋತ್ಸವ ಉನ್ನತ ಮಟ್ಟದ ಸಮಿತಿ ಸಭೆಯ ಬೆನ್ನಲ್ಲೇ ಜಿಲ್ಲಾಧಿಕಾರಿಗಳೂ ಆಗಿರುವ ದಸರಾ ವಿಶೇಷಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ ಉಪ ಸಮಿತಿಗಳಿಗೆ ಉಪ ವಿಶೇಷಾಧಿಕಾರಿಗಳು, ಕಾರ್ಯಾಧ್ಯಕ್ಷರು, ಕಾರ್ಯದರ್ಶಿಗಳನ್ನು ನೇಮಕ ಮಾಡಿದ್ದಾರೆ. ಉಪ ಸಮಿತಿಗಳಿಗೆ ಅಽಕಾರಿಗಳನ್ನು ನೇಮಿಸುವ ಜತೆಗೆ, ಯಾವ್ಯಾವ ರೀತಿಯಲ್ಲಿ ಕಾರ್ಯಕ್ರಮ ರೂಪಿಸಬೇಕೆಂಬ ಸಲಹೆ, ಮಾರ್ಗದರ್ಶನ ಮಾಡಲಾಗಿದೆ. ಅದರಂತೆ, ತಕ್ಷಣ ದಿಂದಲೇ ಕಾರ್ಯಪ್ರವೃತ್ತರಾಗಿರುವ ಅಧಿಕಾರಿಗಳು ಒಂದು ತಿಂಗಳ ಮುನ್ನವೇ ಬೇಕಾದ ಸಿದ್ಧತೆ ಯನ್ನು ಮುಗಿಸುವ ಗಡುವು ನೀಡಲಾಗಿದೆ.

ಕೆ.ಆರ್.ರಕ್ಷಿತ್‌ಗೆ ಯುವ ದಸರಾ ಹೊಣೆ: ಕಳೆದ ವರ್ಷ ಹೊರವಲಯದ ಉತ್ತನಹಳ್ಳಿ ಸಮೀಪ ಆಯೋಜಿಸಿದ್ದ ಯುವ ದಸರಾ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನಡೆಯುವಂತೆ ನೋಡಿಕೊಂಡ ಕೆ.ಆರ್.ರಕ್ಷಿತ್‌ಗೆ ಈ ಬಾರಿಯೂ ಯುವ ದಸರಾ ಹೊಣೆ ನೀಡಲಾಗಿದೆ. ಈಗ ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿರುವ ರಕ್ಷಿತ್, ಯುವ ದಸರಾಗೆ ಪ್ರಾಯೋಜಕತ್ವ, ಕಲಾವಿದರ ಆಯ್ಕೆ, ಲಕ್ಷಾಂತರ ಜನರು ವೀಕ್ಷಣೆ ಮಾಡಿದರೂ ಸಣ್ಣ ಗೊಂದಲವೂ ಆಗದಂತೆ ಪ್ಲಾನ್ ಮಾಡಿದ್ದ ರಿಂದಾಗಿ ಸರ್ಕಾರ ಮತ್ತೆ ಅವರನ್ನೇ ನಿಯೋಜಿಸಿದೆ. ಕೆ.ಆರ್.ರಕ್ಷಿತ್ ಅವರ ತಂಡಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ್ ಅವರನ್ನು ಉಪ ವಿಶೇಷಾಧಿಕಾರಿಯಾಗಿ ನೇಮಿಸಿರುವುದು ಗಮನಾರ್ಹವಾಗಿದೆ.

ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು ಎಸ್‌ಪಿಯಾಗಿದ್ದಾಗ ಯುವ ದಸರಾದಲ್ಲಿ ಕಾರ್ಯ ನಿರ್ವಹಿಸಿದ್ದರೆ, ಜಿ.ಲಕ್ಷ್ಮೀಕಾಂತ ರೆಡ್ಡಿ ಅವರು ಪಾಲಿಕೆ ಆಯುಕ್ತರಾಗಿದ್ದಾಗ ಸ್ವಾಗತ ಮತ್ತು ಆಮಂತ್ರಣ ಉಪ ಸಮಿತಿ ಉಪ ವಿಶೇಷಾಧಿಕಾರಿಗಳಾಗಿದ್ದರು. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಮಂಟೇಲಿಂಗಯ್ಯ, ಹುಣಸೂರು ಮತ್ತು ಮೈಸೂರು ಉಪ ವಿಭಾಗದ ಉಪ ವಿಭಾಗಾಧಿಕಾರಿಗಳಿಗೂ ಇದು ಮೊದಲನೇ ದಸರಾವಾಗಿದೆ. ನವರಾತ್ರಿಯ ದಿನಗಳಲ್ಲಿ ಅರಮನೆ ನಗರಿ ಕಂಗೊಳಿಸುವಂತೆ ಮಾಡುವ ವಿದ್ಯುತ್ ದೀಪಾಲಂಕಾರದ ಹೊಣೆ ಹೊತ್ತಿರುವ ಚಾಮುಂಡೇಶ್ವರಿ ವಿದ್ಯುತ್ ಸರಬ ರಾಜು ನಿಗಮದ ವ್ಯವಸ್ಥಾಪಕ ನಿರ್ದೇಶಕ ಕೆ.ಎಂ. ಮುನಿಗೋಪಾಲ ರಾಜು ಅವರು ದಸರಾಮಹೋತ್ಸವದಲ್ಲಿ ಅತಿ ಹೆಚ್ಚು ಬಾರಿ ಹೊಣೆ ಹೊತ್ತ ಹೆಸರನ್ನು ಪಡೆದಿದ್ದಾರೆ. ಕಾರ್ಯಪಾಲಕ ಅಭಿಯಂತರ, ಅಧಿಕ್ಷಕ ಅಭಿಯಂತರ, ತಾಂತ್ರಿಕ ನಿರ್ದೇಶಕರಾಗಿದ್ದಾಗಲೂ ಈ ಹೊಣೆಯನ್ನು ನಿರ್ವಹಿಸಿದ್ದರು. ಈಗ ಅವರೇ ನಿಗಮದ ಎಂಡಿಯಾದ ಮೇಲೆ ನಡೆಯುತ್ತಿರುವ ಮೊದಲನೇ ದಸರಾದಲ್ಲಿ ಹೊಸ ಹೊಸ ವಿನ್ಯಾಸಗಳ ಮಾದರಿಯನ್ನು ಅಳವಡಿಸುವುದಕ್ಕೆ ಪ್ಲಾನ್ ಮಾಡುತ್ತಿರುವುದು ಕೇಳಿಬಂದಿದೆ.

ಸಿಇಒ, ಪಾಲಿಕೆ ಆಯುಕ್ತರಿಗೆ ಮೊದಲ ದಸರಾ: ಕಳೆದ ಮೂರು ತಿಂಗಳಿಂದ ಅಧಿಕಾರಿಗಳ ವರ್ಗಾವಣೆಯಾಗಿರುವ ಕಾರಣ ಈ ಬಾರಿ ಹಳಬರು – ಹೊಸಬರು ಮಿಳಿತ ಗೊಂಡಿದ್ದು, ಅನೇಕರಿಗೆ ಮೊದಲ ದಸರೆಯಾಗಿದೆ. ಜಿಪಂ ಸಿಇಒ ಎಸ್.ಯುಕೇಶ್ ಕುಮಾರ್, ನಗರಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸಿ-, ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಬಿಂದುರಾಣಿ, ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಕೆ.ಎಸ್.ಸುಂದರರಾಜ್ ಹೊಸಬರಾಗಿದ್ದಾರೆ.

ವೈಮಾನಿಕ ಪ್ರದರ್ಶನಕ್ಕೆ ಪತ್ರ ವ್ಯವಹಾರ: 

ದಸರಾದಲ್ಲಿ ವೈಮಾನಿಕ ಪ್ರದರ್ಶನಕ್ಕೆ ರಕ್ಷಣಾ ಪಡೆಯ ಯುದ್ಧ ವಿಮಾನಗಳನ್ನು ಒದಗಿಸುವ ಸಂಬಂಧ ರಕ್ಷಣಾ ಇಲಾಖೆಗೆ ಪತ್ರ ಬರೆಯಲು ಜಿಲ್ಲಾಡಳಿತ ಮುಂದಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಲಹೆಯಂತೆ ಪತ್ರ ಬರೆಯುವ ಸಿದ್ಧತೆ ನಡೆದಿದೆ. ಅಲ್ಲದೆ,ಮುಂದಿನ ದಿನಗಳಲ್ಲಿ ರಕ್ಷಣಾ ಸಚಿವರು, ಕಾರ್ಯದರ್ಶಿ ಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸುವ ಸಾಧ್ಯತೆ ಇದೆ.

ಆಂದೋಲನ ಡೆಸ್ಕ್

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

5 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

5 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

6 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

6 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

11 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

11 hours ago