Andolana originals

6 ಉಪಕೇಂದ್ರಗಳಲ್ಲಿ ಸೌರ ವಿದ್ಯುತ್ ಘಟಕ ಸ್ಥಾಪನೆಗೆ ಸಿದ್ಧತೆ

ನವೀನ್ ಕುಮಾರ್

ಪಿರಿಯಾಪಟ್ಟಣ: ಪಿಎಂ ಕುಸುಮ್ ಸಿ ಸೌರ ವಿದ್ಯುತ್ ಯೋಜನೆಯಡಿ ವಿದ್ಯುತ್ ಉತ್ಪಾದನೆಯ ಗುರಿ

ಪಿರಿಯಾಪಟ್ಟಣ: ಪಿರಿಯಾಪಟ್ಟಣ ತಾಲ್ಲೂಕಿನಲ್ಲಿ ವಿದ್ಯುತ್ ಅಭಾವ ನೀಗಿಸಲು ಪಿಎಂ ಕುಸುಮ್-ಸಿ ಸೌರ ವಿದ್ಯುತ್ ಯೋಜನೆಯಡಿ ೬ ಸೌರ ವಿದ್ಯುತ್ ಘಟಕಗಳ ಸ್ಥಾಪನೆಗೆ ಭರದ ಸಿದ್ಧತೆ ನಡೆಯುತ್ತಿದೆ.

ಪಿರಿಯಾಪಟ್ಟಣ ತಾಲ್ಲೂಕಿನಲ್ಲಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್ ) ವತಿಯಿಂದ ತಾಲ್ಲೂಕು ವ್ಯಾಪ್ತಿಯ ೬ ವಿದ್ಯುತ್ ಉಪ ಕೇಂದ್ರಗಳಲ್ಲಿ ಪಿಎಂ ಕುಸುಮ್-ಸಿ ಯೋಜನೆಯಡಿ ಸೌರ ವಿದ್ಯುತ್ ಪೂರೈಕೆ ಘಟಕಗಳನ್ನು ಸ್ಥಾಪಿಸಲಾಗುತ್ತಿದೆ.

೧೪೭ ಕೋಟಿ ರೂ. ಯೋಜನೆ: ಇತ್ತೀಚೆಗೆ ಮುಖ್ಯಮಂತ್ರಿಗಳು ಪಿರಿಯಾಪಟ್ಟಣಕ್ಕೆ ಆಗಮಿಸಿ ಈ ಯೋಜನೆಗೆ ಚಾಲನೆ ನೀಡಿದ್ದು, ಈಗಾಗಲೇ ತಾಲ್ಲೂಕಿನಲ್ಲಿ ೨೧೬ ಎಕರೆ ಭೂಮಿಯನ್ನು ಗುರುತಿಸಿ ಈ ಯೋಜನೆಗೆ ಮೀಸಲಿರಿ ಸಲಾಗಿದೆ. ಒಟ್ಟು ೧೪೭ ಕೋಟಿ ರೂ. ವೆಚ್ಚದ ಯೋಜನೆ ಇದಾಗಿದೆ.

೪೨ ಮೆಗಾವ್ಯಾಟ್ ಗುರಿ: ಪಿರಿಯಾಪಟ್ಟಣದ ಬೆಟ್ಟದಪುರ ಕೇಂದ್ರಕ್ಕೆ ೭.೩೨೮, ಪಿರಿಯಾಪಟ್ಟಣ ವಿದ್ಯುತ್ ಉಪ ಕೇಂದ್ರಕ್ಕೆ ೧೪.೮೭, ಬೈಲಕುಪ್ಪೆಗೆ ೫.೦೫೭, ರಾವಂದೂರಿಗೆ ೪.೬೭, ಕಣಗಾಲು ವಿದ್ಯುತ್ ಉಪ ಕೇಂದ್ರಕ್ಕೆ ೭.೩೮, ಕಂಪಲಾಪುರ ವಿದ್ಯುತ್ ಉಪ ಕೇಂದ್ರಕ್ಕೆ ೨.೫೪ ಮೆಗಾವ್ಯಾಟ್ ಸೌರ ವಿದ್ಯುತ್ ಪೂರೈಕೆಯಾಗಲಿದೆ. ಒಟ್ಟಾರೆ ೪೨ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯ ಗುರಿ ಹೊಂದಲಾಗಿದೆ.

ಬೇಸಿಗೆಯಲ್ಲಿ ರೈತರಿಗೆ ಅನುಕೂಲ: ತಾಲ್ಲೂಕಿನಲ್ಲೇ ಸೌರ ವಿದ್ಯುತ್ ಉತ್ಪಾದನೆ ಆಗುವುದರಿಂದ ಬೇಸಿಗೆ ಅವಽಯಲ್ಲೂ ರೈತರಿಗೆ ೭ ಗಂಟೆಗಳ ಸಂಪೂರ್ಣ ವಿದ್ಯುತ್ ಪೂರೈಸಲು ಸಹಕಾರಿಯಾಗಲಿದೆ.

೨೫ ಸಾವಿರ ರೂ. ನೆಲಬಾಡಿಗೆ: ಈಗಾಗಲೇ ಗುರುತಿಸಿರುವ ೨೧೬ ಎಕರೆ ಪ್ರದೇಶವನ್ನು ಖಾಸಗಿ ಕಂಪೆನಿಗಳಿಗೆ ನೀಡಲಿದ್ದು, ಪ್ರತಿ ಎಕರೆಗೆ ೨೫,೦೦೦ ರೂ.ವರೆಗೆ ನೆಲಬಾಡಿಗೆ ಪಡೆಯಲಾಗುತ್ತದೆ. ಇದರಿಂದ ಸರ್ಕಾರಕ್ಕೆ ಆದಾಯ ಕೂಡ ಬರಲಿದೆ.

ಪ್ರಸ್ತುತ ವಿದ್ಯುತ್ ಅನ್ನು ಪ್ರತಿ ಯೂನಿಟ್‌ಗೆ ಸರಾಸರಿ ೭ ರೂ. ನೀಡಿ ಖರೀದಿಸಲಾಗುತ್ತಿದ್ದು, ದೂರದ ಫೀಡರ್‌ಗಳಿಂದ ವಿದ್ಯುತ್ ಖರೀದಿ ಸಲು ಹೆಚ್ಚಿನ ಹಣ ನೀಡಬೇಕಾಗುತ್ತದೆ. ಈ ಯೋಜನೆ ಸಂಪೂರ್ಣ ಜಾರಿಯಾದರೆ ಸರಾಸರಿ ೩.೫ ರೂ.ಗಳಿಗೆ ೧ ಯೂನಿಟ್ ವಿದ್ಯುತ್ ಖರೀದಿ ಮಾಡಬಹುದಾಗಿದೆ. ಈ ಕುರಿತು ಖಾಸಗಿ ಕಂಪೆನಿಗಳೊಂದಿಗೆ ಒಪ್ಪಂದವನ್ನು ಮಾಡಿಕೊಳ್ಳಲಾಗುತ್ತಿದೆ.

ಸಚಿವ ಕೆ.ವೆಂಕಟೇಶ್ ಅವರು ಈಗಾಗಲೇ ಕುಸುಮ್ ಸಿ ಯೋಜನೆ ಅನುಷ್ಠಾನ ಸಂಬಂಧ ಹಿರಿಯ ಅDiಕಾರಿಗಳನ್ನು ಸ್ಥಳಕ್ಕೆ ಕರೆಯಿಸಿ ಕಾರ್ಯಗತಗೊಳಿಸುತ್ತಿದ್ದಾರೆ. ಒಟ್ಟಾರೆ ಯೋಜನೆ ಜಾರಿಯಾದರೆ ತಾಲ್ಲೂಕಿನಲ್ಲಿ ರೈತರಿಗೆ ಹೆಚ್ಚು ಅನುಕೂಲವಾಗಲಿದೆ.

” ಸಚಿವರ ಆದೇಶದಂತೆ ಕುಸುಮ್ ಸಿ ಯೋಜನೆ ಜಾರಿಗೆ ಅಗತ್ಯವಾದ ೨೧೬ ಎಕರೆ ಭೂಮಿಯನ್ನು ಈಗಾಗಲೇ ಗುರುತಿಸಿ ಸೆಸ್ಕ್‌ಗೆ ನೀಡಲಾಗಿದೆ.”

-ನಿಸರ್ಗ ಪ್ರಿಯಾ, ತಹಸಿಲ್ದಾರ್.

” ಈಗಾಗಲೇ ಬಹುತೇಕ ಜಾಗ ನೀಡಲಾಗಿದ್ದು, ಹೆಚ್ಚಿನ ಜಾಗ ದೊರಕದಿರುವ ಫೀಡರ್ ಪ್ರದೇಶಗಳಲ್ಲಿ ರೈತರ ಜಮೀನುಗಳನ್ನು ಲೀಸ್‌ಗೆ ಪಡೆದು ವಿದ್ಯುತ್ ಉತ್ಪಾದನೆಗೆ ಮುಂದಾಗಲಾಗುವುದು. ಇದರಿಂದ ರೈತರಿಗೂ ಹೆಚ್ಚಿನ ಅನುಕೂಲವಾಗಲಿದೆ.”

-ಗುರುಬಸವರಾಜು, ಎಇಇ, ಸೆಸ್ಕ್

ಆಂದೋಲನ ಡೆಸ್ಕ್

Recent Posts

ಪ್ರಧಾನಿ ನರೇಂದ್ರ ಮೋದಿಗೆ ಮನವಿ ಪತ್ರ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಂಡ್ಯಕ್ಕೆ ಆಗಮಿಸಲು ಬೆಂಗಳೂರಿಗೆ ಬಂದಿಳಿದಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಮನವಿ ಪತ್ರ ಸಲ್ಲಿಸಿದ್ದಾರೆ. ಇಂದು…

30 mins ago

ಅಮೇರಿಕಾ-ಇರಾನ್‌ ಸಂಧಾನ: ಪಾಕ್‌ನಲ್ಲೇ 2ನೇ ಸುತ್ತಿನ ಮಾತುಕತೆ

ವಾಷಿಂಗ್ಟನ್:‌ ಇರಾನ್‌ ಜೊತೆ ಎರಡನೇ ಸುತ್ತಿನ ಮಾತುಕತೆ ಮುಂದಿನ ಎರಡು ದಿನಗಳಲ್ಲಿ ನಡೆಯಬಹುದು ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌…

44 mins ago

2 ಕ್ಷೇತ್ರಗಳ ಉಪಚುನಾವಣೆಯಲ್ಲೂ ನಾವೇ ಗೆಲ್ಲುತ್ತೇವೆ: ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲೂ ನಾವೇ ಗೆಲುವು ಸಾಧಿಸುತ್ತೇವೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಕುರಿತು…

58 mins ago

ಹನೂರು ತಾಲ್ಲೂಕಿನ ಗ್ರಾಮಗಳಿಗೆ ಜಿಲ್ಲಾಧಿಕಾರ ಶ್ರೀರೂಪ ಭೇಟಿ: ಗ್ರಾಮಸ್ಥರ ಸಮಸ್ಯೆ ಆಲಿಸಿದ ಜಿಲ್ಲಾಧಿಕಾರಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡಾಣೆ,…

59 mins ago

ಯುವಕರಲ್ಲಿ ಮಾನವೀಯತೆ ಹೆಚ್ಚಬೇಕು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಸರಿಯಾಗಿ ಅರ್ಥ ಮಾಡಿಕೊಂಡಾಗ ಮಾತ್ರ ಸಮ ಸಮಾಜ ನಿರ್ಮಾಣ ಸಾಧ್ಯ ಎಂದು ಮುಖ್ಯಮಂತ್ರಿ…

2 hours ago

ಚಾಮುಂಡಿ ಬೆಟ್ಟ ರಸ್ತೆಯ ತಾವರೆಕಟ್ಟೆ ಬಳಿ ವ್ಯಕ್ತಿಯ ಶವ ಪತ್ತೆ

ಮೈಸೂರು: ಚಾಮುಂಡಿಬೆಟ್ಟ ರಸ್ತೆಯ ತಾವರೆಕಟ್ಟೆ ಬಳಿ ವ್ಯಕ್ತಿಯ ಶವ ಪತ್ತೆಯಾಗಿದ್ದು, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಅಂದಾಜು 40 ವರ್ಷ…

2 hours ago