Andolana originals

ಕೋಟೆ: ಮರಗಳ ಹನನಕ್ಕೆ ಸಿದ್ಧತೆ!

ತಾಪಂ ಆವರಣದ 6 ಮರ ಕಟಾವಿಗೆ ಮುಂದಾದ ಅರಣ್ಯ ಇಲಾಖೆ
13 ಮರಗಳ ತೆರವಿಗೆ ಅರಣ್ಯ ಇಲಾಖೆಗೆ ತಾಪಂ ಅಧಿಕಾರಿಗಳು ಪತ್ರ
ಅರಣ್ಯಾಧಿಕಾರಿಗಳ ನಿರ್ಧಾರಕ್ಕೆ ಪರಿಸರ ಪ್ರೇಮಿಗಳ ಆಕ್ರೋಶ

ಮಂಜು ಕೋಟೆ

ಎಚ್.ಡಿ.ಕೋಟೆ: ಪಟ್ಟಣದ ಕೇಂದ್ರ ಪ್ರದೇಶದಲ್ಲಿರುವ ಅನೇಕ ಮರಗಳ ತೆರವಿಗೆ ಇದೀಗ ಅಧಿಕಾರಿಗಳೇ ಮುಂದಾಗಿರುವುದು ಪರಿಸರ ಪ್ರೇಮಿಗಳಲ್ಲಿ ಆತಂಕ ಮೂಡಿಸಿದೆ.

ಈ ಹಿಂದೆ ಇದ್ದ ಅಧಿಕಾರಿಗಳು ಅನೇಕ ಸರ್ಕಾರಿ ಕಚೇರಿಗಳ ಆವರಣದಲ್ಲಿ ವಿವಿಧ ಜಾತಿಗಳ ಗಿಡಗಳನ್ನು ನೆಟ್ಟು ಬೆಳೆಸಿದ್ದಾರೆ. ಇದರಿಂದ ಪರಿಸರಕ್ಕೆ ಪೂರಕವಾದ ವಾತಾವರಣ ಉಂಟಾಗಿದೆ. ಗ್ರಾಮೀಣ ಪ್ರದೇಶದಿಂದ ಆಗಮಿಸುವ ಸಾರ್ವಜನಿಕರು ನೆರಳಿನ ಆಸರೆ ಪಡೆದುಕೊಳ್ಳಲು ಇದು ನೆರವಾಗಿದೆ.

ಆದರೆ, ಇತ್ತೀಚೆಗೆ ಇಂತಹ ಮರಗಳ ಹನನ ನಡೆಯುತ್ತಿರುವುದು ಆತಂಕ ಮೂಡಿಸಿದೆ. ಪಟ್ಟಣದ ತಾಪಂ ಕಚೇರಿಯ ಮುಂಭಾಗದಲ್ಲಿರುವ 13 ಮರಗಳನ್ನು ತೆರವುಗೊಳಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಾಪಂ ಅಧಿಕಾರಿಗಳು ಪತ್ರ ಬರೆದಿದ್ದಾರೆ.

ಅರಣ್ಯ ಇಲಾಖೆ ಅಧಿಕಾರಿ ಪೂಜಾ ಅವರು ಇತ್ತೀಚೆಗೆ ಪರಿಶೀಲನೆ ನಡೆಸಿ, 13 ಮರಗಳು ಹಳೆಯ ದಾಗಿವೆ. ಈ ಮರಗಳಿಂದ ಕಟಡಕೆ ಹಾನಿಯಾಗಲಿದೆ ಎಂದು ತಿಳಿಸಿ, ಸದ್ಯಕ್ಕೆ ಮರಗಳನ್ನು ತೆರವುಗೊಳಿಸಲು ಮುಂದಾಗಿದ್ದಾರೆ.

ತಾಪಂ ಕಚೇರಿ ಎದುರು ಇರುವ ಮರಗಳನ್ನು ಕಡಿಯಲಿರುವ ವಿಚಾರ ತಿಳಿದುಪರಿಸರಪ್ರೇಮಿಗಳುಮತ್ತುಪ್ರಜ್ಞಾವಂತರು ಆಕ್ರೋಶಗೊಂಡಿದ್ದಾರೆ. ಅತ್ಯುತ್ತಮವಾದ ಪರಿಸರ ಹೊಂದಿರುವ ಮರಗಳನ್ನು ಕಡಿಯಲು ಮುಂದಾಗುತ್ತಿರುವುದು ಸರಿಯಲ್ಲ ಎಂದು ಆಕ್ಷೇಪಿಸಿದ್ದಾರೆ.

ಸರ್ಕಾರಿ ಕಚೇರಿಗಳ ಆವರಣದಲ್ಲಿ ಮರ ಕಡಿದರೆ ಕೆಲಸ ಕಾರ್ಯಗಳಿಗೆ ಹಳ್ಳಿಗಳಿಂದ ಆಗಮಿಸುವ ಸಾರ್ವಜನಿಕರಿಗೆ ನೆರಳೂ ಇಲ್ಲದಂತಾಗುತ್ತದೆ. ಈಗಾಗಲೇ ಆಡಳಿತ ಸೌಧದ ಮುಂಭಾಗದಲ್ಲಿದ್ದ ಮರಗಳ ತೆರವು ಮಾಡಿರುವುದರಿಂದ ಜನರಿಗೆ ತೊಂದರೆಯಾಗಿದೆ.
ವನಸಿರಿ ಶಂಕರ್‌, ಪರಿಸರ ಪ್ರೇಮಿ

ತಾಲ್ಲೂಕು ಪಂಚಾಯಿತಿ ಕಚೇರಿ ಆವರಣದಲ್ಲಿರುವ 13 ಮರಗಳನ್ನು ಕಡಿದು ಹಾಕುವಂತೆ ತಿಳಿಸಿದ್ದರು. ನಾನು ಮತ್ತು ಮೇಲಧಿಕಾರಿಗಳು ಸ್ಥಳ ಪರಿಶೀಲಿಸಿ 6 ಮರಗಳನ್ನು ಮಾತ್ರ ಕಡಿಯಲು ಟೆಂಡರ್ ಕರೆಯಲು ಕ್ರಮ ವಹಿಸಿದ್ದೇವೆ.
-ಪೂಜಾ, ಅರಣ್ಯ ಅಧಿಕಾರಿ

ಎಚ್.ಡಿ.ಕೋಟೆ ತಾಲ್ಲೂಕು ಪಂಚಾಯಿತಿ ಆವರಣದಲ್ಲಿರುವ ಹಳೆಯ ಮರಗಳು ಹಾಗೂ ಕಚೇರಿಯ ಕಟ್ಟಡ ಮತ್ತು ಸನಿಹದ ಮನೆಗಳ ಮೇಲೆ ಚಾಚಿ ಕೊಂಡಿರುವ ಮರಗಳ ತೆರವಿಗೆ
ಕ್ರಮ ಕೈಗೊಳ್ಳುವಂತೆ ಅರಣ್ಯ ಇಲಾಖೆಗೆ ಸೂಚಿಸಲಾಗಿದೆ. ಕಡಿಯಲಿರುವ ಮರಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಪರಿಶೀಲಿಸಿದ್ದಾರೆ.
-ಧರಣೇಶ್, ಇಒ, ತಾಪಂ

ಆಂದೋಲನ ಡೆಸ್ಕ್

Recent Posts

ಮನ್‌ರೇಗಾ ಯೋಜನೆ ಬಗ್ಗೆ ಚರ್ಚೆಗೆ ನಾವು ಸಿದ್ಧ: ಎಚ್‌ಡಿಕೆಗೆ ಸಿಎಂ ಸಿದ್ದರಾಮಯ್ಯ ಟಾಂಗ್‌

ಬೆಂಗಳೂರು: ಕಾಂಗ್ರೆಸ್‌ ನಾಯಕರ ಪ್ರಚಾರಕ್ಕಾಗಿ ವಿಬಿ ಜಿ ರಾಮ ಜಿ ಯೋಜನೆಯನ್ನು ವಿರೋಧಿಸುತ್ತಿದ್ದಾರೆ. ಮನ್‌ರೇಗಾ ಯೋಜನೆ ಬಗ್ಗೆ ಓಪನ್‌ ಡಿಬೇಟ್‌…

57 mins ago

ಒಡಿಶಾದಲ್ಲಿ ವಿಮಾನ ಪತನ: ಪೈಲಟ್‌ ಸೇರಿ 7 ಪ್ರಯಾಣಿಕರಿಗೆ ಗಾಯ

ಒಡಿಶಾ: ಇಲ್ಲಿನ ರೂರ್ಕೆಲಾ ವಾಯುನೆಲೆಯ ಬಳಿಯ ಜಗದಾ ಬ್ಲಾಕ್‌ ಬಳಿ ಒಂಭತ್ತು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಸಣ್ಣ ವಿಮಾನವೊಂದು ಅಪಘಾತಕ್ಕೀಡಾಗಿದೆ. ಭುವನೇಶ್ವರಕ್ಕೆ…

1 hour ago

ಮಂಡ್ಯ: ಸರಗಳ್ಳ-ಮನೆಗಳ್ಳನ ಬಂಧನ: 31.98 ಲಕ್ಷ ಮೌಲ್ಯದ ಮಾಲುಗಳ ವಶ

ಮಂಡ್ಯ: ಸರಗಳ್ಳ ಹಾಗೂ ಮನೆಗಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ 31.98 ಲಕ್ಷ ಮೌಲ್ಯದ ಮಾಲುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ…

1 hour ago

ಸಿಡಿ ಫ್ಯಾಕ್ಟರಿ ಇದ್ದಿದ್ದೇ ಹೊಳೆನರಸೀಪುರ, ಪದ್ಮನಾಭನಗರದಲ್ಲಿ: ಮಾಜಿ ಸಂಸದ ಡಿ.ಕೆ.ಸುರೇಶ್‌ ವಾಗ್ದಾಳಿ

ಬೆಂಗಳೂರು: ಸಿಡಿ ಫ್ಯಾಕ್ಟರಿ ಇದ್ದಿದ್ದೇ ಹೊಳೆನರಸೀಪುರದಲ್ಲಿ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ…

2 hours ago

ಗೃಹಲಕ್ಷ್ಮೀ ಸಹಕಾರ ಸಂಘ ಸೇರುವ ಮಹಿಳೆಯರಿಗೆ ಸಾಲ ಸೌಲಭ್ಯ

ಬೆಂಗಳೂರು: ರಾಜ್ಯ ಸರ್ಕಾರವು 2000 ಗೃಹಲಕ್ಷ್ಮೀ ಹಣ ಪಡೆಯುತ್ತಿರುವ ಫಲಾನುಭವಿಗಳಿಗಾಗಿ ಗೃಹಲಕ್ಷ್ಮೀ ಸಹಕಾರ ಸಂಘಗಳನ್ನು ಅಸ್ತಿತ್ವಕ್ಕೆ ತರಲು ಮುಂದಾಗಿದೆ. ಈ…

2 hours ago

ಹನೂರು| ಲೊಕ್ಕನಹಳ್ಳಿ ಗ್ರಾಮದಲ್ಲಿ ನಿರಂತರ ಕಾಡಾನೆ ದಾಳಿ

ಮಹಾದೇಶ್‌ ಎಂ ಗೌಡ  ಹನೂರು: ಲೊಕ್ಕನಹಳ್ಳಿ ಗ್ರಾಮದ ತಮಿಳ್ ಸೆಲ್ವ ಎಂಬುವವರ ಜಮೀನಿನಲ್ಲಿ ಬೆಳೆದಿರುವ ಬಾಳೆ, ಬೆಳ್ಳುಳ್ಳಿ, ಕೃಷಿ ಪರಿಕರಗಳನ್ನು…

3 hours ago