Andolana originals

ಕೋಟೆ: ಮರಗಳ ಹನನಕ್ಕೆ ಸಿದ್ಧತೆ!

ತಾಪಂ ಆವರಣದ 6 ಮರ ಕಟಾವಿಗೆ ಮುಂದಾದ ಅರಣ್ಯ ಇಲಾಖೆ
13 ಮರಗಳ ತೆರವಿಗೆ ಅರಣ್ಯ ಇಲಾಖೆಗೆ ತಾಪಂ ಅಧಿಕಾರಿಗಳು ಪತ್ರ
ಅರಣ್ಯಾಧಿಕಾರಿಗಳ ನಿರ್ಧಾರಕ್ಕೆ ಪರಿಸರ ಪ್ರೇಮಿಗಳ ಆಕ್ರೋಶ

ಮಂಜು ಕೋಟೆ

ಎಚ್.ಡಿ.ಕೋಟೆ: ಪಟ್ಟಣದ ಕೇಂದ್ರ ಪ್ರದೇಶದಲ್ಲಿರುವ ಅನೇಕ ಮರಗಳ ತೆರವಿಗೆ ಇದೀಗ ಅಧಿಕಾರಿಗಳೇ ಮುಂದಾಗಿರುವುದು ಪರಿಸರ ಪ್ರೇಮಿಗಳಲ್ಲಿ ಆತಂಕ ಮೂಡಿಸಿದೆ.

ಈ ಹಿಂದೆ ಇದ್ದ ಅಧಿಕಾರಿಗಳು ಅನೇಕ ಸರ್ಕಾರಿ ಕಚೇರಿಗಳ ಆವರಣದಲ್ಲಿ ವಿವಿಧ ಜಾತಿಗಳ ಗಿಡಗಳನ್ನು ನೆಟ್ಟು ಬೆಳೆಸಿದ್ದಾರೆ. ಇದರಿಂದ ಪರಿಸರಕ್ಕೆ ಪೂರಕವಾದ ವಾತಾವರಣ ಉಂಟಾಗಿದೆ. ಗ್ರಾಮೀಣ ಪ್ರದೇಶದಿಂದ ಆಗಮಿಸುವ ಸಾರ್ವಜನಿಕರು ನೆರಳಿನ ಆಸರೆ ಪಡೆದುಕೊಳ್ಳಲು ಇದು ನೆರವಾಗಿದೆ.

ಆದರೆ, ಇತ್ತೀಚೆಗೆ ಇಂತಹ ಮರಗಳ ಹನನ ನಡೆಯುತ್ತಿರುವುದು ಆತಂಕ ಮೂಡಿಸಿದೆ. ಪಟ್ಟಣದ ತಾಪಂ ಕಚೇರಿಯ ಮುಂಭಾಗದಲ್ಲಿರುವ 13 ಮರಗಳನ್ನು ತೆರವುಗೊಳಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಾಪಂ ಅಧಿಕಾರಿಗಳು ಪತ್ರ ಬರೆದಿದ್ದಾರೆ.

ಅರಣ್ಯ ಇಲಾಖೆ ಅಧಿಕಾರಿ ಪೂಜಾ ಅವರು ಇತ್ತೀಚೆಗೆ ಪರಿಶೀಲನೆ ನಡೆಸಿ, 13 ಮರಗಳು ಹಳೆಯ ದಾಗಿವೆ. ಈ ಮರಗಳಿಂದ ಕಟಡಕೆ ಹಾನಿಯಾಗಲಿದೆ ಎಂದು ತಿಳಿಸಿ, ಸದ್ಯಕ್ಕೆ ಮರಗಳನ್ನು ತೆರವುಗೊಳಿಸಲು ಮುಂದಾಗಿದ್ದಾರೆ.

ತಾಪಂ ಕಚೇರಿ ಎದುರು ಇರುವ ಮರಗಳನ್ನು ಕಡಿಯಲಿರುವ ವಿಚಾರ ತಿಳಿದುಪರಿಸರಪ್ರೇಮಿಗಳುಮತ್ತುಪ್ರಜ್ಞಾವಂತರು ಆಕ್ರೋಶಗೊಂಡಿದ್ದಾರೆ. ಅತ್ಯುತ್ತಮವಾದ ಪರಿಸರ ಹೊಂದಿರುವ ಮರಗಳನ್ನು ಕಡಿಯಲು ಮುಂದಾಗುತ್ತಿರುವುದು ಸರಿಯಲ್ಲ ಎಂದು ಆಕ್ಷೇಪಿಸಿದ್ದಾರೆ.

ಸರ್ಕಾರಿ ಕಚೇರಿಗಳ ಆವರಣದಲ್ಲಿ ಮರ ಕಡಿದರೆ ಕೆಲಸ ಕಾರ್ಯಗಳಿಗೆ ಹಳ್ಳಿಗಳಿಂದ ಆಗಮಿಸುವ ಸಾರ್ವಜನಿಕರಿಗೆ ನೆರಳೂ ಇಲ್ಲದಂತಾಗುತ್ತದೆ. ಈಗಾಗಲೇ ಆಡಳಿತ ಸೌಧದ ಮುಂಭಾಗದಲ್ಲಿದ್ದ ಮರಗಳ ತೆರವು ಮಾಡಿರುವುದರಿಂದ ಜನರಿಗೆ ತೊಂದರೆಯಾಗಿದೆ.
ವನಸಿರಿ ಶಂಕರ್‌, ಪರಿಸರ ಪ್ರೇಮಿ

ತಾಲ್ಲೂಕು ಪಂಚಾಯಿತಿ ಕಚೇರಿ ಆವರಣದಲ್ಲಿರುವ 13 ಮರಗಳನ್ನು ಕಡಿದು ಹಾಕುವಂತೆ ತಿಳಿಸಿದ್ದರು. ನಾನು ಮತ್ತು ಮೇಲಧಿಕಾರಿಗಳು ಸ್ಥಳ ಪರಿಶೀಲಿಸಿ 6 ಮರಗಳನ್ನು ಮಾತ್ರ ಕಡಿಯಲು ಟೆಂಡರ್ ಕರೆಯಲು ಕ್ರಮ ವಹಿಸಿದ್ದೇವೆ.
-ಪೂಜಾ, ಅರಣ್ಯ ಅಧಿಕಾರಿ

ಎಚ್.ಡಿ.ಕೋಟೆ ತಾಲ್ಲೂಕು ಪಂಚಾಯಿತಿ ಆವರಣದಲ್ಲಿರುವ ಹಳೆಯ ಮರಗಳು ಹಾಗೂ ಕಚೇರಿಯ ಕಟ್ಟಡ ಮತ್ತು ಸನಿಹದ ಮನೆಗಳ ಮೇಲೆ ಚಾಚಿ ಕೊಂಡಿರುವ ಮರಗಳ ತೆರವಿಗೆ
ಕ್ರಮ ಕೈಗೊಳ್ಳುವಂತೆ ಅರಣ್ಯ ಇಲಾಖೆಗೆ ಸೂಚಿಸಲಾಗಿದೆ. ಕಡಿಯಲಿರುವ ಮರಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಪರಿಶೀಲಿಸಿದ್ದಾರೆ.
-ಧರಣೇಶ್, ಇಒ, ತಾಪಂ

ಆಂದೋಲನ ಡೆಸ್ಕ್

Recent Posts

ಹನೂರು| ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಬೈಕ್‌ ನಡುವೆ ಅಪಘಾತ: ಇಬ್ಬರು ಸಾವು

ಮಹಾದೇಶ್‌ ಎಂ ಗೌಡ  ಹನೂರು: ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರರಿಬ್ಬರೂ…

3 hours ago

ಹನೂರು: ಟ್ರ್ಯಾಕ್ಟರ್‌ಗೆ ದ್ವಿಚಕ್ರ ವಾಹನ ಡಿಕ್ಕಿ: ಸವಾರ ಸಾವು

ಮಹಾದೇಶ್‌ ಎಂ ಗೌಡ  ಹನೂರು: ದ್ವಿಚಕ್ರ ವಾಹನ ಸವಾರ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡು ಮೃತಪಟ್ಟಿರುವ ಘಟನೆ…

3 hours ago

ಮೈಸೂರು ಏರ್‌ಪೋರ್ಟ್‌ನಲ್ಲಿ ಸಿಎಂ, ಡಿಸಿಎಂ ಜೊತೆ ರಾಹುಲ್‌ ಗಾಂಧಿ ಮಾತುಕತೆ

ಮೈಸೂರು: ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌…

6 hours ago

ರಾಮಾಪುರ ರಸ್ತೆಯಲ್ಲಿ ನಿತ್ಯ ಗಜರಾಜನ‌ ಎಂಟ್ರಿ: ವಾಹನ ಸವಾರರಿಗೆ ಢವಢವ

ಮಹಾದೇಶ್‌ ಎಂ ಗೌಡ ಹನೂರು: ಅಂತರ ರಾಜ್ಯ ನೆರೆಯ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಾಮಾಪುರ ರಸ್ತೆಯಲ್ಲಿ ನಿತ್ಯ ಗಜರಾಜ ಎಂಟ್ರಿ…

7 hours ago

ಎಂ.ಲಕ್ಷ್ಮಣ್‌ ವಿರುದ್ಧ ಪೊಲೀಸ್‌ ಮಹಾನಿರ್ದೇಶಕರಿಗೆ ದೂರು ನೀಡಿದ ಶಾಸಕ ಶ್ರೀವತ್ಸ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಚಿತಾವಣೆಯಿಂದ ಬಳ್ಳಾರಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಹೆಣ ಬಿದ್ದಿದೆ ಎಂದು ಹೇಳಿಕೆ…

7 hours ago

ನಾಯಕತ್ವ ಬದಲಾವಣೆ ಚರ್ಚೆಗೆ ಹೈಕಮಾಂಡ್‌ ಸ್ಪಷ್ಟನೆ ನೀಡಲಿ: ಮಾಜಿ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ನಾಯಕತ್ವ ಬದಲಾವಣೆ ಚರ್ಚೆಗೆ ಹೈಕಮಾಂಡ್‌ ಸ್ಪಷ್ಟನೆ ಕೊಡಬೇಕು ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಒತ್ತಾಯಿಸಿದ್ದಾರೆ. ಜನವರಿ.16ಕ್ಕೆ ಸಿಹಿಸುದ್ದಿ ಬರಲಿದೆ…

7 hours ago