Andolana originals

ಕೋಟೆ: ಮರಗಳ ಹನನಕ್ಕೆ ಸಿದ್ಧತೆ!

ತಾಪಂ ಆವರಣದ 6 ಮರ ಕಟಾವಿಗೆ ಮುಂದಾದ ಅರಣ್ಯ ಇಲಾಖೆ
13 ಮರಗಳ ತೆರವಿಗೆ ಅರಣ್ಯ ಇಲಾಖೆಗೆ ತಾಪಂ ಅಧಿಕಾರಿಗಳು ಪತ್ರ
ಅರಣ್ಯಾಧಿಕಾರಿಗಳ ನಿರ್ಧಾರಕ್ಕೆ ಪರಿಸರ ಪ್ರೇಮಿಗಳ ಆಕ್ರೋಶ

ಮಂಜು ಕೋಟೆ

ಎಚ್.ಡಿ.ಕೋಟೆ: ಪಟ್ಟಣದ ಕೇಂದ್ರ ಪ್ರದೇಶದಲ್ಲಿರುವ ಅನೇಕ ಮರಗಳ ತೆರವಿಗೆ ಇದೀಗ ಅಧಿಕಾರಿಗಳೇ ಮುಂದಾಗಿರುವುದು ಪರಿಸರ ಪ್ರೇಮಿಗಳಲ್ಲಿ ಆತಂಕ ಮೂಡಿಸಿದೆ.

ಈ ಹಿಂದೆ ಇದ್ದ ಅಧಿಕಾರಿಗಳು ಅನೇಕ ಸರ್ಕಾರಿ ಕಚೇರಿಗಳ ಆವರಣದಲ್ಲಿ ವಿವಿಧ ಜಾತಿಗಳ ಗಿಡಗಳನ್ನು ನೆಟ್ಟು ಬೆಳೆಸಿದ್ದಾರೆ. ಇದರಿಂದ ಪರಿಸರಕ್ಕೆ ಪೂರಕವಾದ ವಾತಾವರಣ ಉಂಟಾಗಿದೆ. ಗ್ರಾಮೀಣ ಪ್ರದೇಶದಿಂದ ಆಗಮಿಸುವ ಸಾರ್ವಜನಿಕರು ನೆರಳಿನ ಆಸರೆ ಪಡೆದುಕೊಳ್ಳಲು ಇದು ನೆರವಾಗಿದೆ.

ಆದರೆ, ಇತ್ತೀಚೆಗೆ ಇಂತಹ ಮರಗಳ ಹನನ ನಡೆಯುತ್ತಿರುವುದು ಆತಂಕ ಮೂಡಿಸಿದೆ. ಪಟ್ಟಣದ ತಾಪಂ ಕಚೇರಿಯ ಮುಂಭಾಗದಲ್ಲಿರುವ 13 ಮರಗಳನ್ನು ತೆರವುಗೊಳಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಾಪಂ ಅಧಿಕಾರಿಗಳು ಪತ್ರ ಬರೆದಿದ್ದಾರೆ.

ಅರಣ್ಯ ಇಲಾಖೆ ಅಧಿಕಾರಿ ಪೂಜಾ ಅವರು ಇತ್ತೀಚೆಗೆ ಪರಿಶೀಲನೆ ನಡೆಸಿ, 13 ಮರಗಳು ಹಳೆಯ ದಾಗಿವೆ. ಈ ಮರಗಳಿಂದ ಕಟಡಕೆ ಹಾನಿಯಾಗಲಿದೆ ಎಂದು ತಿಳಿಸಿ, ಸದ್ಯಕ್ಕೆ ಮರಗಳನ್ನು ತೆರವುಗೊಳಿಸಲು ಮುಂದಾಗಿದ್ದಾರೆ.

ತಾಪಂ ಕಚೇರಿ ಎದುರು ಇರುವ ಮರಗಳನ್ನು ಕಡಿಯಲಿರುವ ವಿಚಾರ ತಿಳಿದುಪರಿಸರಪ್ರೇಮಿಗಳುಮತ್ತುಪ್ರಜ್ಞಾವಂತರು ಆಕ್ರೋಶಗೊಂಡಿದ್ದಾರೆ. ಅತ್ಯುತ್ತಮವಾದ ಪರಿಸರ ಹೊಂದಿರುವ ಮರಗಳನ್ನು ಕಡಿಯಲು ಮುಂದಾಗುತ್ತಿರುವುದು ಸರಿಯಲ್ಲ ಎಂದು ಆಕ್ಷೇಪಿಸಿದ್ದಾರೆ.

ಸರ್ಕಾರಿ ಕಚೇರಿಗಳ ಆವರಣದಲ್ಲಿ ಮರ ಕಡಿದರೆ ಕೆಲಸ ಕಾರ್ಯಗಳಿಗೆ ಹಳ್ಳಿಗಳಿಂದ ಆಗಮಿಸುವ ಸಾರ್ವಜನಿಕರಿಗೆ ನೆರಳೂ ಇಲ್ಲದಂತಾಗುತ್ತದೆ. ಈಗಾಗಲೇ ಆಡಳಿತ ಸೌಧದ ಮುಂಭಾಗದಲ್ಲಿದ್ದ ಮರಗಳ ತೆರವು ಮಾಡಿರುವುದರಿಂದ ಜನರಿಗೆ ತೊಂದರೆಯಾಗಿದೆ.
ವನಸಿರಿ ಶಂಕರ್‌, ಪರಿಸರ ಪ್ರೇಮಿ

ತಾಲ್ಲೂಕು ಪಂಚಾಯಿತಿ ಕಚೇರಿ ಆವರಣದಲ್ಲಿರುವ 13 ಮರಗಳನ್ನು ಕಡಿದು ಹಾಕುವಂತೆ ತಿಳಿಸಿದ್ದರು. ನಾನು ಮತ್ತು ಮೇಲಧಿಕಾರಿಗಳು ಸ್ಥಳ ಪರಿಶೀಲಿಸಿ 6 ಮರಗಳನ್ನು ಮಾತ್ರ ಕಡಿಯಲು ಟೆಂಡರ್ ಕರೆಯಲು ಕ್ರಮ ವಹಿಸಿದ್ದೇವೆ.
-ಪೂಜಾ, ಅರಣ್ಯ ಅಧಿಕಾರಿ

ಎಚ್.ಡಿ.ಕೋಟೆ ತಾಲ್ಲೂಕು ಪಂಚಾಯಿತಿ ಆವರಣದಲ್ಲಿರುವ ಹಳೆಯ ಮರಗಳು ಹಾಗೂ ಕಚೇರಿಯ ಕಟ್ಟಡ ಮತ್ತು ಸನಿಹದ ಮನೆಗಳ ಮೇಲೆ ಚಾಚಿ ಕೊಂಡಿರುವ ಮರಗಳ ತೆರವಿಗೆ
ಕ್ರಮ ಕೈಗೊಳ್ಳುವಂತೆ ಅರಣ್ಯ ಇಲಾಖೆಗೆ ಸೂಚಿಸಲಾಗಿದೆ. ಕಡಿಯಲಿರುವ ಮರಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಪರಿಶೀಲಿಸಿದ್ದಾರೆ.
-ಧರಣೇಶ್, ಇಒ, ತಾಪಂ

ಆಂದೋಲನ ಡೆಸ್ಕ್

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

4 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

4 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

6 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

6 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

7 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

8 hours ago