Andolana originals

ಕೋಟೆ: ಮರಗಳ ಹನನಕ್ಕೆ ಸಿದ್ಧತೆ!

ತಾಪಂ ಆವರಣದ 6 ಮರ ಕಟಾವಿಗೆ ಮುಂದಾದ ಅರಣ್ಯ ಇಲಾಖೆ
13 ಮರಗಳ ತೆರವಿಗೆ ಅರಣ್ಯ ಇಲಾಖೆಗೆ ತಾಪಂ ಅಧಿಕಾರಿಗಳು ಪತ್ರ
ಅರಣ್ಯಾಧಿಕಾರಿಗಳ ನಿರ್ಧಾರಕ್ಕೆ ಪರಿಸರ ಪ್ರೇಮಿಗಳ ಆಕ್ರೋಶ

ಮಂಜು ಕೋಟೆ

ಎಚ್.ಡಿ.ಕೋಟೆ: ಪಟ್ಟಣದ ಕೇಂದ್ರ ಪ್ರದೇಶದಲ್ಲಿರುವ ಅನೇಕ ಮರಗಳ ತೆರವಿಗೆ ಇದೀಗ ಅಧಿಕಾರಿಗಳೇ ಮುಂದಾಗಿರುವುದು ಪರಿಸರ ಪ್ರೇಮಿಗಳಲ್ಲಿ ಆತಂಕ ಮೂಡಿಸಿದೆ.

ಈ ಹಿಂದೆ ಇದ್ದ ಅಧಿಕಾರಿಗಳು ಅನೇಕ ಸರ್ಕಾರಿ ಕಚೇರಿಗಳ ಆವರಣದಲ್ಲಿ ವಿವಿಧ ಜಾತಿಗಳ ಗಿಡಗಳನ್ನು ನೆಟ್ಟು ಬೆಳೆಸಿದ್ದಾರೆ. ಇದರಿಂದ ಪರಿಸರಕ್ಕೆ ಪೂರಕವಾದ ವಾತಾವರಣ ಉಂಟಾಗಿದೆ. ಗ್ರಾಮೀಣ ಪ್ರದೇಶದಿಂದ ಆಗಮಿಸುವ ಸಾರ್ವಜನಿಕರು ನೆರಳಿನ ಆಸರೆ ಪಡೆದುಕೊಳ್ಳಲು ಇದು ನೆರವಾಗಿದೆ.

ಆದರೆ, ಇತ್ತೀಚೆಗೆ ಇಂತಹ ಮರಗಳ ಹನನ ನಡೆಯುತ್ತಿರುವುದು ಆತಂಕ ಮೂಡಿಸಿದೆ. ಪಟ್ಟಣದ ತಾಪಂ ಕಚೇರಿಯ ಮುಂಭಾಗದಲ್ಲಿರುವ 13 ಮರಗಳನ್ನು ತೆರವುಗೊಳಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಾಪಂ ಅಧಿಕಾರಿಗಳು ಪತ್ರ ಬರೆದಿದ್ದಾರೆ.

ಅರಣ್ಯ ಇಲಾಖೆ ಅಧಿಕಾರಿ ಪೂಜಾ ಅವರು ಇತ್ತೀಚೆಗೆ ಪರಿಶೀಲನೆ ನಡೆಸಿ, 13 ಮರಗಳು ಹಳೆಯ ದಾಗಿವೆ. ಈ ಮರಗಳಿಂದ ಕಟಡಕೆ ಹಾನಿಯಾಗಲಿದೆ ಎಂದು ತಿಳಿಸಿ, ಸದ್ಯಕ್ಕೆ ಮರಗಳನ್ನು ತೆರವುಗೊಳಿಸಲು ಮುಂದಾಗಿದ್ದಾರೆ.

ತಾಪಂ ಕಚೇರಿ ಎದುರು ಇರುವ ಮರಗಳನ್ನು ಕಡಿಯಲಿರುವ ವಿಚಾರ ತಿಳಿದುಪರಿಸರಪ್ರೇಮಿಗಳುಮತ್ತುಪ್ರಜ್ಞಾವಂತರು ಆಕ್ರೋಶಗೊಂಡಿದ್ದಾರೆ. ಅತ್ಯುತ್ತಮವಾದ ಪರಿಸರ ಹೊಂದಿರುವ ಮರಗಳನ್ನು ಕಡಿಯಲು ಮುಂದಾಗುತ್ತಿರುವುದು ಸರಿಯಲ್ಲ ಎಂದು ಆಕ್ಷೇಪಿಸಿದ್ದಾರೆ.

ಸರ್ಕಾರಿ ಕಚೇರಿಗಳ ಆವರಣದಲ್ಲಿ ಮರ ಕಡಿದರೆ ಕೆಲಸ ಕಾರ್ಯಗಳಿಗೆ ಹಳ್ಳಿಗಳಿಂದ ಆಗಮಿಸುವ ಸಾರ್ವಜನಿಕರಿಗೆ ನೆರಳೂ ಇಲ್ಲದಂತಾಗುತ್ತದೆ. ಈಗಾಗಲೇ ಆಡಳಿತ ಸೌಧದ ಮುಂಭಾಗದಲ್ಲಿದ್ದ ಮರಗಳ ತೆರವು ಮಾಡಿರುವುದರಿಂದ ಜನರಿಗೆ ತೊಂದರೆಯಾಗಿದೆ.
ವನಸಿರಿ ಶಂಕರ್‌, ಪರಿಸರ ಪ್ರೇಮಿ

ತಾಲ್ಲೂಕು ಪಂಚಾಯಿತಿ ಕಚೇರಿ ಆವರಣದಲ್ಲಿರುವ 13 ಮರಗಳನ್ನು ಕಡಿದು ಹಾಕುವಂತೆ ತಿಳಿಸಿದ್ದರು. ನಾನು ಮತ್ತು ಮೇಲಧಿಕಾರಿಗಳು ಸ್ಥಳ ಪರಿಶೀಲಿಸಿ 6 ಮರಗಳನ್ನು ಮಾತ್ರ ಕಡಿಯಲು ಟೆಂಡರ್ ಕರೆಯಲು ಕ್ರಮ ವಹಿಸಿದ್ದೇವೆ.
-ಪೂಜಾ, ಅರಣ್ಯ ಅಧಿಕಾರಿ

ಎಚ್.ಡಿ.ಕೋಟೆ ತಾಲ್ಲೂಕು ಪಂಚಾಯಿತಿ ಆವರಣದಲ್ಲಿರುವ ಹಳೆಯ ಮರಗಳು ಹಾಗೂ ಕಚೇರಿಯ ಕಟ್ಟಡ ಮತ್ತು ಸನಿಹದ ಮನೆಗಳ ಮೇಲೆ ಚಾಚಿ ಕೊಂಡಿರುವ ಮರಗಳ ತೆರವಿಗೆ
ಕ್ರಮ ಕೈಗೊಳ್ಳುವಂತೆ ಅರಣ್ಯ ಇಲಾಖೆಗೆ ಸೂಚಿಸಲಾಗಿದೆ. ಕಡಿಯಲಿರುವ ಮರಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಪರಿಶೀಲಿಸಿದ್ದಾರೆ.
-ಧರಣೇಶ್, ಇಒ, ತಾಪಂ

ಆಂದೋಲನ ಡೆಸ್ಕ್

Recent Posts

ವೈಯಕ್ತಿಕ ದ್ವೇಷ: ಕಾರ್ಮಿಕನನ್ನು ಕೊಲೆಗೈಯ್ದು ಶರಣಾದ ಆರೋಪಿ

ಚೆಟ್ಟಳ್ಳಿ: ಕಾಫಿ ತೋಟದ ಲೈನ್ ಮನೆಯಲ್ಲಿ ವಾಸವಿದ್ದ ಕಾರ್ಮಿಕನೊಬ್ಬ ಮತ್ತೊಬ್ಬ ಕಾರ್ಮಿಕನನ್ನು ಹತ್ಯೆಗೈದು ಪೊಲೀಸ್ ಠಾಣೆಗೆ ಬಂದು ಶರಣಾದ ಘಟನೆ…

12 hours ago

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರೇ ಈಗ ರಾಜ್ಯಸಭೆ ಅಭ್ಯರ್ಥಿ

ನವದೆಹಲಿ: ರಾಜ್ಯಸಭೆ ಚುನಾವಣೆಗೆ ಬಿಜೆಪಿ 9 ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನಬಿನ್‌ ಅವರು ಬಿಹಾರದಿಂದ…

12 hours ago

ದುಬೈನಲ್ಲಿ ಸಿಲುಕಿರುವ ಕನ್ನಡಿಗರಿಗೆ ವಿಡಿಯೋ ಕಾಲ್‌ ಮಾಡಿ ಧೈರ್ಯ ಹೇಳಿದ ವಿಜಯೇಂದ್ರ

ಬೆಂಗಳೂರು: ಅಮೇರಿಕಾ, ಇಸ್ರೇಲ್‌-ಇರಾನ್‌ ಯುದ್ಧ ನಡೆಯುತ್ತಿರುವ ಸಂದರ್ಭದಲ್ಲಿ ದುಬೈನಲ್ಲಿ ಸಿಲುಕಿ ಆತಂಕದಲ್ಲಿರುವ ಕನ್ನಡಿಗರ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾತನಾಡಿ…

12 hours ago

ಬೂದಬಾಳು ಗ್ರಾಮದ ಕೆರೆಗೆ ಬಾಗಿನ ಸಮರ್ಪಿಸಿದ ಶಾಸಕ ಎಂ.ಆರ್.ಮಂಜುನಾಥ್

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬರಪೀಡಿತ ಪ್ರದೇಶಗಳಲ್ಲಿ ಒಂದಾದ ಬೂದಬಾಳು ಕೆರೆಗೆ ಕಾವೇರಿ ನದಿ ಮೂಲದಿಂದ…

12 hours ago

ಸರ್ಕಾರದಿಂದ ಸಿಗುವ ಸೌಲಭ್ಯವನ್ನು ಪ್ರತಿಯೊಬ್ಬ ರೈತರಿಗೂ ದೊರಕಿಸಿ: ಬಿಜೆಪಿ ಜಿಲ್ಲಾಧ್ಯಕ್ಷ ನಿರಂಜನ್ ಕುಮಾರ್

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಷೇರುದಾರರು ನಿಮ್ಮ ಮೇಲೆ ವಿಶ್ವಾಸವಿಟ್ಟು ಕೃಷಿ ಪತ್ತಿನ ಸಹಕಾರ ಸಂಘದ…

13 hours ago

ಹಾರ್ಮುಜ್‌ ಜನಸಂಧಿಯನ್ನು ಮುಚ್ಚಿದ ಇರಾನ್: ತೈಲ ಬೆಲೆಯಲ್ಲಿ ಭಾರೀ ಏರಿಕೆ

ಟೆಹರಾನ್:‌ ಅಮೇರಿಕಾ ಹಾಗೂ ಇಸ್ರೇಲ್‌ ದೇಶಗಳು ಇರಾನ್‌ ಜೊತೆ ನಡೆಸುತ್ತಿರುವ ಯುದ್ಧವು ಇದೀಗ ವಿಶ್ವದ ಅತ್ಯಂತ ನಿರ್ಣಾಯಕ ಇಂಧನ ಮಾರ್ಗಗಳಲ್ಲಿ…

13 hours ago