Andolana originals

ಕೋಟೆ: ಮರಗಳ ಹನನಕ್ಕೆ ಸಿದ್ಧತೆ!

ತಾಪಂ ಆವರಣದ 6 ಮರ ಕಟಾವಿಗೆ ಮುಂದಾದ ಅರಣ್ಯ ಇಲಾಖೆ
13 ಮರಗಳ ತೆರವಿಗೆ ಅರಣ್ಯ ಇಲಾಖೆಗೆ ತಾಪಂ ಅಧಿಕಾರಿಗಳು ಪತ್ರ
ಅರಣ್ಯಾಧಿಕಾರಿಗಳ ನಿರ್ಧಾರಕ್ಕೆ ಪರಿಸರ ಪ್ರೇಮಿಗಳ ಆಕ್ರೋಶ

ಮಂಜು ಕೋಟೆ

ಎಚ್.ಡಿ.ಕೋಟೆ: ಪಟ್ಟಣದ ಕೇಂದ್ರ ಪ್ರದೇಶದಲ್ಲಿರುವ ಅನೇಕ ಮರಗಳ ತೆರವಿಗೆ ಇದೀಗ ಅಧಿಕಾರಿಗಳೇ ಮುಂದಾಗಿರುವುದು ಪರಿಸರ ಪ್ರೇಮಿಗಳಲ್ಲಿ ಆತಂಕ ಮೂಡಿಸಿದೆ.

ಈ ಹಿಂದೆ ಇದ್ದ ಅಧಿಕಾರಿಗಳು ಅನೇಕ ಸರ್ಕಾರಿ ಕಚೇರಿಗಳ ಆವರಣದಲ್ಲಿ ವಿವಿಧ ಜಾತಿಗಳ ಗಿಡಗಳನ್ನು ನೆಟ್ಟು ಬೆಳೆಸಿದ್ದಾರೆ. ಇದರಿಂದ ಪರಿಸರಕ್ಕೆ ಪೂರಕವಾದ ವಾತಾವರಣ ಉಂಟಾಗಿದೆ. ಗ್ರಾಮೀಣ ಪ್ರದೇಶದಿಂದ ಆಗಮಿಸುವ ಸಾರ್ವಜನಿಕರು ನೆರಳಿನ ಆಸರೆ ಪಡೆದುಕೊಳ್ಳಲು ಇದು ನೆರವಾಗಿದೆ.

ಆದರೆ, ಇತ್ತೀಚೆಗೆ ಇಂತಹ ಮರಗಳ ಹನನ ನಡೆಯುತ್ತಿರುವುದು ಆತಂಕ ಮೂಡಿಸಿದೆ. ಪಟ್ಟಣದ ತಾಪಂ ಕಚೇರಿಯ ಮುಂಭಾಗದಲ್ಲಿರುವ 13 ಮರಗಳನ್ನು ತೆರವುಗೊಳಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಾಪಂ ಅಧಿಕಾರಿಗಳು ಪತ್ರ ಬರೆದಿದ್ದಾರೆ.

ಅರಣ್ಯ ಇಲಾಖೆ ಅಧಿಕಾರಿ ಪೂಜಾ ಅವರು ಇತ್ತೀಚೆಗೆ ಪರಿಶೀಲನೆ ನಡೆಸಿ, 13 ಮರಗಳು ಹಳೆಯ ದಾಗಿವೆ. ಈ ಮರಗಳಿಂದ ಕಟಡಕೆ ಹಾನಿಯಾಗಲಿದೆ ಎಂದು ತಿಳಿಸಿ, ಸದ್ಯಕ್ಕೆ ಮರಗಳನ್ನು ತೆರವುಗೊಳಿಸಲು ಮುಂದಾಗಿದ್ದಾರೆ.

ತಾಪಂ ಕಚೇರಿ ಎದುರು ಇರುವ ಮರಗಳನ್ನು ಕಡಿಯಲಿರುವ ವಿಚಾರ ತಿಳಿದುಪರಿಸರಪ್ರೇಮಿಗಳುಮತ್ತುಪ್ರಜ್ಞಾವಂತರು ಆಕ್ರೋಶಗೊಂಡಿದ್ದಾರೆ. ಅತ್ಯುತ್ತಮವಾದ ಪರಿಸರ ಹೊಂದಿರುವ ಮರಗಳನ್ನು ಕಡಿಯಲು ಮುಂದಾಗುತ್ತಿರುವುದು ಸರಿಯಲ್ಲ ಎಂದು ಆಕ್ಷೇಪಿಸಿದ್ದಾರೆ.

ಸರ್ಕಾರಿ ಕಚೇರಿಗಳ ಆವರಣದಲ್ಲಿ ಮರ ಕಡಿದರೆ ಕೆಲಸ ಕಾರ್ಯಗಳಿಗೆ ಹಳ್ಳಿಗಳಿಂದ ಆಗಮಿಸುವ ಸಾರ್ವಜನಿಕರಿಗೆ ನೆರಳೂ ಇಲ್ಲದಂತಾಗುತ್ತದೆ. ಈಗಾಗಲೇ ಆಡಳಿತ ಸೌಧದ ಮುಂಭಾಗದಲ್ಲಿದ್ದ ಮರಗಳ ತೆರವು ಮಾಡಿರುವುದರಿಂದ ಜನರಿಗೆ ತೊಂದರೆಯಾಗಿದೆ.
ವನಸಿರಿ ಶಂಕರ್‌, ಪರಿಸರ ಪ್ರೇಮಿ

ತಾಲ್ಲೂಕು ಪಂಚಾಯಿತಿ ಕಚೇರಿ ಆವರಣದಲ್ಲಿರುವ 13 ಮರಗಳನ್ನು ಕಡಿದು ಹಾಕುವಂತೆ ತಿಳಿಸಿದ್ದರು. ನಾನು ಮತ್ತು ಮೇಲಧಿಕಾರಿಗಳು ಸ್ಥಳ ಪರಿಶೀಲಿಸಿ 6 ಮರಗಳನ್ನು ಮಾತ್ರ ಕಡಿಯಲು ಟೆಂಡರ್ ಕರೆಯಲು ಕ್ರಮ ವಹಿಸಿದ್ದೇವೆ.
-ಪೂಜಾ, ಅರಣ್ಯ ಅಧಿಕಾರಿ

ಎಚ್.ಡಿ.ಕೋಟೆ ತಾಲ್ಲೂಕು ಪಂಚಾಯಿತಿ ಆವರಣದಲ್ಲಿರುವ ಹಳೆಯ ಮರಗಳು ಹಾಗೂ ಕಚೇರಿಯ ಕಟ್ಟಡ ಮತ್ತು ಸನಿಹದ ಮನೆಗಳ ಮೇಲೆ ಚಾಚಿ ಕೊಂಡಿರುವ ಮರಗಳ ತೆರವಿಗೆ
ಕ್ರಮ ಕೈಗೊಳ್ಳುವಂತೆ ಅರಣ್ಯ ಇಲಾಖೆಗೆ ಸೂಚಿಸಲಾಗಿದೆ. ಕಡಿಯಲಿರುವ ಮರಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಪರಿಶೀಲಿಸಿದ್ದಾರೆ.
-ಧರಣೇಶ್, ಇಒ, ತಾಪಂ

ಆಂದೋಲನ ಡೆಸ್ಕ್

Recent Posts

ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ

ಮದ್ದೂರು : ತಾಲ್ಲೂಕಿನ ನಿಡಘಟ್ಟದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕಾರು ಸುಟ್ಟುಹೋಗಿದ್ದು, ಅದೃಷ್ಟವಶಾತ್…

5 hours ago

ಮೈಸೂರಿನಲ್ಲಿ ನಾಳೆ ಇಂದ ಮೂರು ದಿನ ದೇಸಿ ಎಣ್ಣೆ ಮೇಳ : ಮೇಳೈಸಲಿದೆ ಸಾಂಪ್ರದಾಯಿಕ ಎಣ್ಣೆ

ಮೈಸೂರು : ಇತ್ತೀಚಿನ ದಿನಗಳಲ್ಲಿ ಸಾಂಪ್ರದಾಯಿಕ ಅಡುಗೆ ಎಣ್ಣೆಗಳು, ಅವುಗಳ ಆರೋಗ್ಯ ಲಾಭಗಳ ಕಾರಣದಿಂದ ಮತ್ತೆ ಹೆಚ್ಚಿನ ಮಹತ್ವ ಪಡೆದುಕೊಳ್ಳುತ್ತಿವೆ.…

6 hours ago

ಬಿ-ಖಾತಾಗಳಿಗೂ ʼಎ-ಖಾತಾʼ ಭಾಗ್ಯ ; ಸಂಪುಟ ಸಭೆಯಲ್ಲಿ ನಿರ್ಣಯ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು (ಜ.8) ನಡೆದ 2026ನೇ ಸಾಲಿನ 2ನೇ ಸಚಿವ ಸಂಪುಟದ ಸಭೆಯಲ್ಲಿ…

7 hours ago

ಮಂಡ್ಯದಲ್ಲಿ ಕೆಂಪೇಗೌಡರ ಬೃಹತ್‌ ಪ್ರತಿಮೆ : ಶಿಲ್ಪಿ ಅರುಣ್‌ ಯೋಗಿರಾಜ್‌ಗೆ ಕೆತ್ತನೆ ಜವಾಬ್ದಾರಿ

ಮಂಡ್ಯ : ನಗರಕ್ಕೆ ಹೈಟೆಕ್ ಸ್ಪರ್ಶ ನೀಡಲು ಮುಂದಾಗಿರುವ ಶಾಸಕ ಪಿ. ರವಿಕುಮಾರಗೌಡ ಅವರು, ಒಕ್ಕಲಿಗ ಜನಾಂಗದ ಹಲವು ವರ್ಷಗಳ…

8 hours ago

ಬೀದಿಬದಿ ವ್ಯಾಪಾರಿಗಳ ವಲಯ ನಿರ್ಮಿಸಲು ಚಿಂತನೆ : ಸಂಸದ ಯದುವೀರ್‌

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಸ್ವಚ್ಛತೆಯನ್ನು ಕಾಪಾಡುವ ನಿಟ್ಟಿನಲ್ಲಿ ನಗರದಲ್ಲಿ ಬೀದಿಬದಿ ವ್ಯಾಪಾರಿಗಳ ವಲಯ ನಿರ್ಮಿಸಲು ಆದ್ಯತೆ ನೀಡಲಾಗುವುದು…

9 hours ago

ಗೃಹಲಕ್ಷ್ಮಿ ಹಣ ಶೀಘ್ರ ಸಂದಾಯ : ಸಚಿವೆ ಹೆಬ್ಬಾಳಕರ್‌

ಬೆಂಗಳೂರು : ಹಣಕಾಸು ಇಲಾಖೆ ಅನುಮತಿ ನೀಡಿದ ತಕ್ಷಣವೇ 2025ರ ಫೆಬ್ರವರಿ ಹಾಗೂ ಮಾರ್ಚ್‌ ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣವನ್ನು…

9 hours ago