Andolana originals

ನಳನಳಿಸಲಿವೆ ವಿವಿಧ ಜಾತಿಯ ಅಲಂಕಾರಿಕ ಗಿಡಗಳು

ಎಚ್.ಎಸ್.ದಿನೇಶ್‌ಕುಮಾರ್

ದಸರಾದಲ್ಲಿ ಚಿತ್ತಾಕರ್ಷಕ ಫಲಪುಷ್ಪ ಪ್ರದರ್ಶನಕ್ಕೆ ಸಿದ್ಧತೆ 

 

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಗಳಲ್ಲಿ ಫಲಪುಷ್ಪ ಪ್ರದರ್ಶನ ಕೂಡ ಒಂದು. ಈ ಬಾರಿಯ ಫಲಪುಷ್ಪ ಪ್ರದರ್ಶನದಲ್ಲಿ ತೋಟಗಾರಿಕೆ ಇಲಾಖೆ ವಿವಿಧ ಜಾತಿಯ ಅಲಂಕಾರಿಕ ಗಿಡಗಳನ್ನು ಪ್ರದರ್ಶನಕ್ಕೆ ವ್ಯವಸ್ಥೆ ಮಾಡಲಿದ್ದು, ಸ್ಥಳೀಯರು ಹಾಗೂ ಪ್ರವಾಸಿಗರನ್ನು ಆಕರ್ಷಿಸಲಿವೆ.

ನಾಡಹಬ್ಬ ದಸರಾ ಎಂದರೆ ಜನರಿಗೆ ಎಲ್ಲಿಲ್ಲದ ಪ್ರೀತಿ ಮತ್ತು ಆಸಕ್ತಿ. ದಸರಾದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿ ವೀಕ್ಷಿಸಲು ದೇಶ, ವಿದೇಶಗಳಿಂದ ಲಕ್ಷಾಂತರ ಮಂದಿ ಮೈಸೂರಿಗೆ ಆಗಮಿಸುತ್ತಾರೆ.

ಹೀಗಾಗಿ ದಸರಾ ಹಬ್ಬಕ್ಕೆ ಪೂರಕವಾಗಿ ಒಂದು ತಿಂಗಳುಮುಂಚಿತವಾಗಿಯೇ ಸರ್ವ ಸಿದ್ಧತೆಗಳನ್ನು ದಸರಾ ಉನ್ನತ ಸಮಿತಿ ಆರಂಭಿಸುತ್ತದೆ. ವಸ್ತು ಪ್ರದರ್ಶನ, ಆಹಾರ ಮೇಳ, ಪುಸ್ತಕ ಮೇಳ, ಚಲನಚಿತ್ರ ಪ್ರದರ್ಶನ ಹೀಗೆ ಸಾಕಷ್ಟು ಕಾರ್ಯಕ್ರಮಗಳು ಮೈಸೂರಿನಲ್ಲಿ ಜರುಗುತ್ತವೆ. ಇವುಗಳ ಪೈಕಿ ಫಲಪುಷ್ಪ ಪ್ರದರ್ಶನ ಕೂಡ ಪ್ರಮುಖವಾದದ್ದು. ಈ ಹಿಂದೆ ಅರಮನೆ ಪಕ್ಕದಲ್ಲಿಯೇ ತೋಟಗಾರಿಕೆ ಇಲಾಖೆಯ ಆವರಣದಲ್ಲಿ ಫಲಪುಷ್ಪ ಪ್ರದರ್ಶನ ಏರ್ಪಾಡು ಮಾಡಲಾಗುತ್ತಿತ್ತು. ಜಾಗದ ಅಭಾವದಿಂದ ಕೆಲ ವರ್ಷಗಳಿಂದ ಕುಪ್ಪಣ್ಣ ಪಾರ್ಕ್‌ನಲ್ಲಿ ಫಲಪುಷ್ಪ ಪ್ರದರ್ಶನ ಆಯೋಜಿಸಲಾಗುತ್ತಿದೆ. ನಗರದ ಪ್ರಮುಖ ಉದ್ದಿಮೆಗಳು, ವಿವಿಧ ಇಲಾಖೆಗಳು ಹಾಗೂ ಪ್ರಮುಖ ಸಂಘ ಸಂಸ್ಥೆಗಳು ಕೂಡ ತಮ್ಮ ಆವರಣದಲ್ಲಿ ಬೆಳೆಯಲಾಗಿರುವ ಅಲಂಕಾರಿಕ ಗಿಡಗಳು, ಹಣ್ಣು, ತರಕಾರಿಗಳ ಗಿಡಗಳನ್ನು ಪ್ರದರ್ಶಿಸಲಿವೆ.

ಇದರ ಜೊತೆಗೆ ತೋಟಗಾರಿಕೆ ಇಲಾಖೆಯೂ ವಸ್ತು ಪ್ರದರ್ಶನದಲ್ಲಿ ಅಲಂಕಾರಿಕ ಗಿಡಗಳನ್ನು ಪ್ರದರ್ಶಿಸಲಿದೆ. ಇದಕ್ಕಾಗಿ ಎರಡು ತಿಂಗಳು ಮುಂಚಿತವಾಗಿಯೇ ಸಿದ್ಧತೆ ನಡೆಸಿದ್ದು, ಕುಪ್ಪಣ್ಣ ಪಾರ್ಕ್ ಆವರಣ ಹಾಗೂ ಕೇಂದ್ರ ಸಸ್ಯಾಗಾರದ ಸುಮಾರು ಮೂರು ಎಕರೆ ಪ್ರದೇಶದಲ್ಲಿ ವಿವಿಧ ಜಾತಿಯ ಸಸ್ಯಗಳನ್ನು ಪೋಷಣೆ ಮಾಡಲಾಗುತ್ತಿದೆ.

ದಸರಾ ಆರಂಭದ ವೇಳೆಗೆ ಅವು ಪ್ರದರ್ಶನಕ್ಕೆ ಸಿದ್ಧಗೊಳ್ಳಲಿವೆ. ಗಾರ್ಡನರ್‌ಗಳಾದ ಮಹದೇವು ಹಾಗೂ ಸಿದ್ದರಾಜು ನೇತೃತ್ವದಲ್ಲಿ ಸುಮಾರು ೧೦ ಸಿಬ್ಬಂದಿ ೧೫ ಸಾವಿರ ಸಸ್ಯಗಳನ್ನು ಪೋಷಿಸುತ್ತಿದ್ದಾರೆ. ಜೇನಿಯಾ, ತುರೇನಿಯಾ, ಕಲೆಂಡೋ, ಕಾಸ್‌ಮಸ್, ಡಯಂತಸ್, ಸಾಲ್ವೆ, ಸೇವಂತಿಗೆ, ಚೆಂಡುಮಲ್ಲಿಗೆ, ಸೆಲೇಷಿಯಾ, ಕೋಲಂಸೋ, ನೀಲ್‌ಬಾಲ್ ಸಮ್, ಡೇಲಿಯಾ, ಪಿಟೋನಿಯಾ ಸೇರಿದಂತೆ ಇಪ್ಪತ್ತಕ್ಕೂ ಹೆಚ್ಚು ವಿಭಿನ್ನ ತಳಿಯ ಸಸಿಗಳನ್ನು ಪೋಷಣೆ ಮಾಡಲಾಗುತ್ತಿದ್ದು, ದಸರಾ ವೇಳೆ ಅವುಗಳು ನೋಡುಗರನ್ನು ಸೆಳೆಯಲಿವೆ. ಇದಲ್ಲದೆ, ವಿವಿಧ ಸಂಘ ಸಂಸ್ಥೆಗಳು, ಸರ್ಕಾರಿ ಇಲಾಖೆಗಳು, ಉದ್ದಿಮೆಗಳು ಕೂಡ ತಮ್ಮ ಆವರಣದಲ್ಲಿ ಸಿದ್ಧಗೊಳಿಸಿರುವ ಸುಮಾರು ೨೦ ಸಾವಿರಕ್ಕೂ ಹೆಚ್ಚು ಅಲಂಕಾರಿಕ ಗಿಡಗಳನ್ನು ಪ್ರದರ್ಶನದಲ್ಲಿ ಇಡಲಿದ್ದು, ಪ್ರವಾಸಿಗರನ್ನು ಸೂಜಿಗಲ್ಲಿನಂತೆ ಸೆಳೆಯಲಿವೆ.

ಆಂದೋಲನ ಡೆಸ್ಕ್

Recent Posts

ಎಲ್‌ಪಿಜಿ ಸಿಲಿಂಡರ್‌ ಸಿಗುತ್ತದೆ, ಜನರಲ್ಲಿ ಭೀತಿ ಬೇಡ : ಕೇಂದ್ರ

ಹೊಸದಿಲ್ಲಿ : ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಎಲ್‌ಪಿಜಿ ಸಿಲಿಂಡರ್ ಕೊರತೆ ಬಗ್ಗೆ ಸಾರ್ವಜನಿಕರಲ್ಲಿ ಉದಿಸಿದ ಆತಂಕದ ನಡುವೆ, ಕೇಂದ್ರ ಸರ್ಕಾರವು…

7 hours ago

IPL 2026 | ಮಾ.28ರಿಂದ ಪಂದ್ಯ ಆರಂಭ, ಬೆಂಗಳೂರಿನಲ್ಲಿ ಉದ್ಘಾಟನೆ, ಹೀಗಿದೆ ವೇಳಾಪಟ್ಟಿ

ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು…

7 hours ago

“ಸಂಶೋಧನೆಗೆ AI ನಿಂದಲ್ಲ, ಸ್ವಂತಿಕೆಯಿಂದ ಕೂಡಿರಲಿ” : ಕುಲಪತಿ ಶರಣಪ್ಪ ಹಲಸೆ ಸಲಹೆ

ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…

7 hours ago

ಖಾತೆ ಮಾಡಿಕೊಡದ ಅಧಿಕಾರಿಗಳು : ರೈತನಿಂದ ವಿಷ ಸೇವನೆ ಯತ್ನ

ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…

7 hours ago

ಹಡುಗುಗಳ ಮೇಲೆ ದಾಳಿ : ಇಬ್ಬರು ಭಾರತೀಯರ ಸಾವು

ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…

8 hours ago

ಗುಂಡ್ಲುಪೇಟೆ | ಕತ್ತು ಕೂಯ್ದು ವ್ಯಕ್ತಿಯ ಬರ್ಬರ ಹತ್ಯೆ

ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…

8 hours ago