Andolana originals

ನಳನಳಿಸಲಿವೆ ವಿವಿಧ ಜಾತಿಯ ಅಲಂಕಾರಿಕ ಗಿಡಗಳು

ಎಚ್.ಎಸ್.ದಿನೇಶ್‌ಕುಮಾರ್

ದಸರಾದಲ್ಲಿ ಚಿತ್ತಾಕರ್ಷಕ ಫಲಪುಷ್ಪ ಪ್ರದರ್ಶನಕ್ಕೆ ಸಿದ್ಧತೆ 

 

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಗಳಲ್ಲಿ ಫಲಪುಷ್ಪ ಪ್ರದರ್ಶನ ಕೂಡ ಒಂದು. ಈ ಬಾರಿಯ ಫಲಪುಷ್ಪ ಪ್ರದರ್ಶನದಲ್ಲಿ ತೋಟಗಾರಿಕೆ ಇಲಾಖೆ ವಿವಿಧ ಜಾತಿಯ ಅಲಂಕಾರಿಕ ಗಿಡಗಳನ್ನು ಪ್ರದರ್ಶನಕ್ಕೆ ವ್ಯವಸ್ಥೆ ಮಾಡಲಿದ್ದು, ಸ್ಥಳೀಯರು ಹಾಗೂ ಪ್ರವಾಸಿಗರನ್ನು ಆಕರ್ಷಿಸಲಿವೆ.

ನಾಡಹಬ್ಬ ದಸರಾ ಎಂದರೆ ಜನರಿಗೆ ಎಲ್ಲಿಲ್ಲದ ಪ್ರೀತಿ ಮತ್ತು ಆಸಕ್ತಿ. ದಸರಾದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿ ವೀಕ್ಷಿಸಲು ದೇಶ, ವಿದೇಶಗಳಿಂದ ಲಕ್ಷಾಂತರ ಮಂದಿ ಮೈಸೂರಿಗೆ ಆಗಮಿಸುತ್ತಾರೆ.

ಹೀಗಾಗಿ ದಸರಾ ಹಬ್ಬಕ್ಕೆ ಪೂರಕವಾಗಿ ಒಂದು ತಿಂಗಳುಮುಂಚಿತವಾಗಿಯೇ ಸರ್ವ ಸಿದ್ಧತೆಗಳನ್ನು ದಸರಾ ಉನ್ನತ ಸಮಿತಿ ಆರಂಭಿಸುತ್ತದೆ. ವಸ್ತು ಪ್ರದರ್ಶನ, ಆಹಾರ ಮೇಳ, ಪುಸ್ತಕ ಮೇಳ, ಚಲನಚಿತ್ರ ಪ್ರದರ್ಶನ ಹೀಗೆ ಸಾಕಷ್ಟು ಕಾರ್ಯಕ್ರಮಗಳು ಮೈಸೂರಿನಲ್ಲಿ ಜರುಗುತ್ತವೆ. ಇವುಗಳ ಪೈಕಿ ಫಲಪುಷ್ಪ ಪ್ರದರ್ಶನ ಕೂಡ ಪ್ರಮುಖವಾದದ್ದು. ಈ ಹಿಂದೆ ಅರಮನೆ ಪಕ್ಕದಲ್ಲಿಯೇ ತೋಟಗಾರಿಕೆ ಇಲಾಖೆಯ ಆವರಣದಲ್ಲಿ ಫಲಪುಷ್ಪ ಪ್ರದರ್ಶನ ಏರ್ಪಾಡು ಮಾಡಲಾಗುತ್ತಿತ್ತು. ಜಾಗದ ಅಭಾವದಿಂದ ಕೆಲ ವರ್ಷಗಳಿಂದ ಕುಪ್ಪಣ್ಣ ಪಾರ್ಕ್‌ನಲ್ಲಿ ಫಲಪುಷ್ಪ ಪ್ರದರ್ಶನ ಆಯೋಜಿಸಲಾಗುತ್ತಿದೆ. ನಗರದ ಪ್ರಮುಖ ಉದ್ದಿಮೆಗಳು, ವಿವಿಧ ಇಲಾಖೆಗಳು ಹಾಗೂ ಪ್ರಮುಖ ಸಂಘ ಸಂಸ್ಥೆಗಳು ಕೂಡ ತಮ್ಮ ಆವರಣದಲ್ಲಿ ಬೆಳೆಯಲಾಗಿರುವ ಅಲಂಕಾರಿಕ ಗಿಡಗಳು, ಹಣ್ಣು, ತರಕಾರಿಗಳ ಗಿಡಗಳನ್ನು ಪ್ರದರ್ಶಿಸಲಿವೆ.

ಇದರ ಜೊತೆಗೆ ತೋಟಗಾರಿಕೆ ಇಲಾಖೆಯೂ ವಸ್ತು ಪ್ರದರ್ಶನದಲ್ಲಿ ಅಲಂಕಾರಿಕ ಗಿಡಗಳನ್ನು ಪ್ರದರ್ಶಿಸಲಿದೆ. ಇದಕ್ಕಾಗಿ ಎರಡು ತಿಂಗಳು ಮುಂಚಿತವಾಗಿಯೇ ಸಿದ್ಧತೆ ನಡೆಸಿದ್ದು, ಕುಪ್ಪಣ್ಣ ಪಾರ್ಕ್ ಆವರಣ ಹಾಗೂ ಕೇಂದ್ರ ಸಸ್ಯಾಗಾರದ ಸುಮಾರು ಮೂರು ಎಕರೆ ಪ್ರದೇಶದಲ್ಲಿ ವಿವಿಧ ಜಾತಿಯ ಸಸ್ಯಗಳನ್ನು ಪೋಷಣೆ ಮಾಡಲಾಗುತ್ತಿದೆ.

ದಸರಾ ಆರಂಭದ ವೇಳೆಗೆ ಅವು ಪ್ರದರ್ಶನಕ್ಕೆ ಸಿದ್ಧಗೊಳ್ಳಲಿವೆ. ಗಾರ್ಡನರ್‌ಗಳಾದ ಮಹದೇವು ಹಾಗೂ ಸಿದ್ದರಾಜು ನೇತೃತ್ವದಲ್ಲಿ ಸುಮಾರು ೧೦ ಸಿಬ್ಬಂದಿ ೧೫ ಸಾವಿರ ಸಸ್ಯಗಳನ್ನು ಪೋಷಿಸುತ್ತಿದ್ದಾರೆ. ಜೇನಿಯಾ, ತುರೇನಿಯಾ, ಕಲೆಂಡೋ, ಕಾಸ್‌ಮಸ್, ಡಯಂತಸ್, ಸಾಲ್ವೆ, ಸೇವಂತಿಗೆ, ಚೆಂಡುಮಲ್ಲಿಗೆ, ಸೆಲೇಷಿಯಾ, ಕೋಲಂಸೋ, ನೀಲ್‌ಬಾಲ್ ಸಮ್, ಡೇಲಿಯಾ, ಪಿಟೋನಿಯಾ ಸೇರಿದಂತೆ ಇಪ್ಪತ್ತಕ್ಕೂ ಹೆಚ್ಚು ವಿಭಿನ್ನ ತಳಿಯ ಸಸಿಗಳನ್ನು ಪೋಷಣೆ ಮಾಡಲಾಗುತ್ತಿದ್ದು, ದಸರಾ ವೇಳೆ ಅವುಗಳು ನೋಡುಗರನ್ನು ಸೆಳೆಯಲಿವೆ. ಇದಲ್ಲದೆ, ವಿವಿಧ ಸಂಘ ಸಂಸ್ಥೆಗಳು, ಸರ್ಕಾರಿ ಇಲಾಖೆಗಳು, ಉದ್ದಿಮೆಗಳು ಕೂಡ ತಮ್ಮ ಆವರಣದಲ್ಲಿ ಸಿದ್ಧಗೊಳಿಸಿರುವ ಸುಮಾರು ೨೦ ಸಾವಿರಕ್ಕೂ ಹೆಚ್ಚು ಅಲಂಕಾರಿಕ ಗಿಡಗಳನ್ನು ಪ್ರದರ್ಶನದಲ್ಲಿ ಇಡಲಿದ್ದು, ಪ್ರವಾಸಿಗರನ್ನು ಸೂಜಿಗಲ್ಲಿನಂತೆ ಸೆಳೆಯಲಿವೆ.

ಆಂದೋಲನ ಡೆಸ್ಕ್

Recent Posts

ಮನೆಯ ಚಾವಣಿ ಕುಸಿದು ನಾಲ್ವರು ಸಾವು ; ತಲಾ 5 ಲಕ್ಷ ಪರಿಹಾರ ಘೋಷಣೆ

ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…

15 hours ago

ಡಿ.ಕೆ.ಶಿವಕುಮಾರ್‌ ಜನ್ಮದಿನಾಚರಣೆ : ರಾರಾಜಿಸಿದ ಮುಂದಿನ ಮುಖ್ಯಮಂತ್ರಿ ಡಿಕೆಶಿ ಬ್ಯಾನರ್‌ಗಳು

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…

16 hours ago

ದರ್ಶನ್‌ಗೆ ಇನ್ನೂ ಒಂದು ವರ್ಷ ಜಾಮೀನು ಇಲ್ಲ : ಅರ್ಜಿ ವಜಾಗೊಳಿಸಿದ ಸುಪೀಂ

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…

16 hours ago

ಜೂನ್‌ 21ರಂದು ನೀಟ್-ಯುಜಿ 2026ರ ಮರು ಪರೀಕ್ಷೆ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…

18 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

21 hours ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

22 hours ago