Andolana originals

ನಳನಳಿಸಲಿವೆ ವಿವಿಧ ಜಾತಿಯ ಅಲಂಕಾರಿಕ ಗಿಡಗಳು

ಎಚ್.ಎಸ್.ದಿನೇಶ್‌ಕುಮಾರ್

ದಸರಾದಲ್ಲಿ ಚಿತ್ತಾಕರ್ಷಕ ಫಲಪುಷ್ಪ ಪ್ರದರ್ಶನಕ್ಕೆ ಸಿದ್ಧತೆ 

 

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಗಳಲ್ಲಿ ಫಲಪುಷ್ಪ ಪ್ರದರ್ಶನ ಕೂಡ ಒಂದು. ಈ ಬಾರಿಯ ಫಲಪುಷ್ಪ ಪ್ರದರ್ಶನದಲ್ಲಿ ತೋಟಗಾರಿಕೆ ಇಲಾಖೆ ವಿವಿಧ ಜಾತಿಯ ಅಲಂಕಾರಿಕ ಗಿಡಗಳನ್ನು ಪ್ರದರ್ಶನಕ್ಕೆ ವ್ಯವಸ್ಥೆ ಮಾಡಲಿದ್ದು, ಸ್ಥಳೀಯರು ಹಾಗೂ ಪ್ರವಾಸಿಗರನ್ನು ಆಕರ್ಷಿಸಲಿವೆ.

ನಾಡಹಬ್ಬ ದಸರಾ ಎಂದರೆ ಜನರಿಗೆ ಎಲ್ಲಿಲ್ಲದ ಪ್ರೀತಿ ಮತ್ತು ಆಸಕ್ತಿ. ದಸರಾದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿ ವೀಕ್ಷಿಸಲು ದೇಶ, ವಿದೇಶಗಳಿಂದ ಲಕ್ಷಾಂತರ ಮಂದಿ ಮೈಸೂರಿಗೆ ಆಗಮಿಸುತ್ತಾರೆ.

ಹೀಗಾಗಿ ದಸರಾ ಹಬ್ಬಕ್ಕೆ ಪೂರಕವಾಗಿ ಒಂದು ತಿಂಗಳುಮುಂಚಿತವಾಗಿಯೇ ಸರ್ವ ಸಿದ್ಧತೆಗಳನ್ನು ದಸರಾ ಉನ್ನತ ಸಮಿತಿ ಆರಂಭಿಸುತ್ತದೆ. ವಸ್ತು ಪ್ರದರ್ಶನ, ಆಹಾರ ಮೇಳ, ಪುಸ್ತಕ ಮೇಳ, ಚಲನಚಿತ್ರ ಪ್ರದರ್ಶನ ಹೀಗೆ ಸಾಕಷ್ಟು ಕಾರ್ಯಕ್ರಮಗಳು ಮೈಸೂರಿನಲ್ಲಿ ಜರುಗುತ್ತವೆ. ಇವುಗಳ ಪೈಕಿ ಫಲಪುಷ್ಪ ಪ್ರದರ್ಶನ ಕೂಡ ಪ್ರಮುಖವಾದದ್ದು. ಈ ಹಿಂದೆ ಅರಮನೆ ಪಕ್ಕದಲ್ಲಿಯೇ ತೋಟಗಾರಿಕೆ ಇಲಾಖೆಯ ಆವರಣದಲ್ಲಿ ಫಲಪುಷ್ಪ ಪ್ರದರ್ಶನ ಏರ್ಪಾಡು ಮಾಡಲಾಗುತ್ತಿತ್ತು. ಜಾಗದ ಅಭಾವದಿಂದ ಕೆಲ ವರ್ಷಗಳಿಂದ ಕುಪ್ಪಣ್ಣ ಪಾರ್ಕ್‌ನಲ್ಲಿ ಫಲಪುಷ್ಪ ಪ್ರದರ್ಶನ ಆಯೋಜಿಸಲಾಗುತ್ತಿದೆ. ನಗರದ ಪ್ರಮುಖ ಉದ್ದಿಮೆಗಳು, ವಿವಿಧ ಇಲಾಖೆಗಳು ಹಾಗೂ ಪ್ರಮುಖ ಸಂಘ ಸಂಸ್ಥೆಗಳು ಕೂಡ ತಮ್ಮ ಆವರಣದಲ್ಲಿ ಬೆಳೆಯಲಾಗಿರುವ ಅಲಂಕಾರಿಕ ಗಿಡಗಳು, ಹಣ್ಣು, ತರಕಾರಿಗಳ ಗಿಡಗಳನ್ನು ಪ್ರದರ್ಶಿಸಲಿವೆ.

ಇದರ ಜೊತೆಗೆ ತೋಟಗಾರಿಕೆ ಇಲಾಖೆಯೂ ವಸ್ತು ಪ್ರದರ್ಶನದಲ್ಲಿ ಅಲಂಕಾರಿಕ ಗಿಡಗಳನ್ನು ಪ್ರದರ್ಶಿಸಲಿದೆ. ಇದಕ್ಕಾಗಿ ಎರಡು ತಿಂಗಳು ಮುಂಚಿತವಾಗಿಯೇ ಸಿದ್ಧತೆ ನಡೆಸಿದ್ದು, ಕುಪ್ಪಣ್ಣ ಪಾರ್ಕ್ ಆವರಣ ಹಾಗೂ ಕೇಂದ್ರ ಸಸ್ಯಾಗಾರದ ಸುಮಾರು ಮೂರು ಎಕರೆ ಪ್ರದೇಶದಲ್ಲಿ ವಿವಿಧ ಜಾತಿಯ ಸಸ್ಯಗಳನ್ನು ಪೋಷಣೆ ಮಾಡಲಾಗುತ್ತಿದೆ.

ದಸರಾ ಆರಂಭದ ವೇಳೆಗೆ ಅವು ಪ್ರದರ್ಶನಕ್ಕೆ ಸಿದ್ಧಗೊಳ್ಳಲಿವೆ. ಗಾರ್ಡನರ್‌ಗಳಾದ ಮಹದೇವು ಹಾಗೂ ಸಿದ್ದರಾಜು ನೇತೃತ್ವದಲ್ಲಿ ಸುಮಾರು ೧೦ ಸಿಬ್ಬಂದಿ ೧೫ ಸಾವಿರ ಸಸ್ಯಗಳನ್ನು ಪೋಷಿಸುತ್ತಿದ್ದಾರೆ. ಜೇನಿಯಾ, ತುರೇನಿಯಾ, ಕಲೆಂಡೋ, ಕಾಸ್‌ಮಸ್, ಡಯಂತಸ್, ಸಾಲ್ವೆ, ಸೇವಂತಿಗೆ, ಚೆಂಡುಮಲ್ಲಿಗೆ, ಸೆಲೇಷಿಯಾ, ಕೋಲಂಸೋ, ನೀಲ್‌ಬಾಲ್ ಸಮ್, ಡೇಲಿಯಾ, ಪಿಟೋನಿಯಾ ಸೇರಿದಂತೆ ಇಪ್ಪತ್ತಕ್ಕೂ ಹೆಚ್ಚು ವಿಭಿನ್ನ ತಳಿಯ ಸಸಿಗಳನ್ನು ಪೋಷಣೆ ಮಾಡಲಾಗುತ್ತಿದ್ದು, ದಸರಾ ವೇಳೆ ಅವುಗಳು ನೋಡುಗರನ್ನು ಸೆಳೆಯಲಿವೆ. ಇದಲ್ಲದೆ, ವಿವಿಧ ಸಂಘ ಸಂಸ್ಥೆಗಳು, ಸರ್ಕಾರಿ ಇಲಾಖೆಗಳು, ಉದ್ದಿಮೆಗಳು ಕೂಡ ತಮ್ಮ ಆವರಣದಲ್ಲಿ ಸಿದ್ಧಗೊಳಿಸಿರುವ ಸುಮಾರು ೨೦ ಸಾವಿರಕ್ಕೂ ಹೆಚ್ಚು ಅಲಂಕಾರಿಕ ಗಿಡಗಳನ್ನು ಪ್ರದರ್ಶನದಲ್ಲಿ ಇಡಲಿದ್ದು, ಪ್ರವಾಸಿಗರನ್ನು ಸೂಜಿಗಲ್ಲಿನಂತೆ ಸೆಳೆಯಲಿವೆ.

ಆಂದೋಲನ ಡೆಸ್ಕ್

Recent Posts

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

3 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

3 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

3 hours ago

ವಿರಾಜಪೇಟೆ: ರಸ್ತೆಯುದ್ದಕ್ಕೂ ಗುಂಡಿಗಳದ್ದೇ ಪಾರಮ್ಯ

ಕಾಂಗೀರ ಬೋಪಣ್ಣ ವಿರಾಜಪೇಟೆ: ತಾಲ್ಲೂಕಿನಲ್ಲಿನ ಮುಖ್ಯರಸ್ತೆಗಳು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ…

3 hours ago

ಇದು ಅಂತ್ಯವಲ್ಲ-ಹೊಸ ಆರಂಭ

ರೇಣುಕಾ ನಿಡುಗುಂದಿ ಜಂತರ್ ಮಂತರ್‌ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ತಾತ್ಕಾಲಿಕ ನೈತಿಕ ಗೆಲುವು ದೊರೆತಿದೆ. ಕೇಂದ್ರ ಶಿಕ್ಷಣ ಸಚಿವ…

3 hours ago

ಎಸ್‌ಐಆರ್ ಅರ್ಜಿ; ಅನಿವಾರ್ಯ ಮರ್ಜಿ

ಚಿರಂಜೀವಿ ಸಿ ಹುಲ್ಲಹಳ್ಳಿ ಗ್ರಾಮೀಣ ಭಾಗಗಳಲ್ಲಿ ಸಮಸ್ಯೆ ಇನ್ನಷ್ಟು ಗಂಭೀರವಾಗಿದೆ. ಹಲವು ಗ್ರಾಮಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ಕುರಿತು ಸಮರ್ಪಕ ಜಾಗೃತಿಯೇ…

3 hours ago