Andolana originals

ರಾಜ್ಯಾದ್ಯಂತ 242 ಗ್ರಂಥಾಲಯ ಸ್ಥಾಪನೆಗೆ ಸಿದ್ಧತೆ

ಪ್ರಶಾಂತ್ ಎಸ್.

ರಾಷ್ಟ್ರಿಯ ಡಿಜಿಟಲ್ ಲೈಬ್ರರಿ ಯೋಜನೆಯಡಿ ತಯಾರಿ

ಗ್ರಾಮೀಣ ಪ್ರದೇಶಗಳಿಗೆ ಮಾತ್ರ ಗ್ರಂಥಾಲಯ

ಗ್ರಂಥಾಲಯ ಕಟ್ಟಡ ನಿರ್ಮಾಣಕ್ಕೆ ಸ್ಥಳ ಗುರುತು

ಯೋಜನೆಗೆ ಒಟ್ಟು ೨.೪ ಕೋಟಿ ರೂ. ಬಿಡುಗಡೆ

ಡಿಜಿಟಲ್ ಮೂಲಸೌಕರ್ಯಕ್ಕೆ ಚಿಂತನೆ

ಮೈಸೂರು: ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿನ ಯುವಜನರು, ವಿದ್ಯಾರ್ಥಿಗಳಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ಉತ್ತೇಜಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ರಾಜ್ಯಾದ್ಯಂತ ೨೪೨ ಗ್ರಂಥಾಲಯಗಳನ್ನು ಸ್ಥಾಪಿಸಲು ಮುಂದಾಗಿದೆ.

ಡಿಜಿಟಲ್ ಮೂಲಸೌಕರ್ಯಕ್ಕೆ ಚಿಂತನೆ ಗ್ರಾಮೀಣ ಪ್ರದೇಶದಲ್ಲಿ ಪುಸ್ತಕ ಸಂಸ್ಕೃತಿಯನ್ನು ಉತ್ತೇಜಿಸಿ, ವಯಸ್ಸಿಗೆ ತಕ್ಕಂತೆ ಓದುವ ಸಾಮಗ್ರಿಗಳನ್ನು ಒದಗಿಸುವುದಕ್ಕೆ ರಾಷ್ಟ್ರೀಯ ಡಿಜಿಟಲ್ ಲೈಬ್ರರಿಯಲ್ಲಿ ಏಕೀಕೃತ ಡಿಜಿಟಲ್ ಪ್ಲಾಟ್ ಫಾರ್ಮ್‌ಗಳಲ್ಲಿ ವಿವಿಧ ಕಲಿಕಾ ಸಂಪನ್ಮೂಲಗಳು ಲಭ್ಯವಾಗುವಂತೆ ಮಾಡುವ ಉದ್ದೇಶದಿಂದ ಗ್ರಾ ಪಂ ಮಟ್ಟದಲ್ಲಿ ಡಿಜಿಟಲ್ ಮೂಲ ಸೌಕರ್ಯಗಳ ಜತೆಗೆ ಹೊಸದಾಗಿ ಗ್ರಂಥಾ ಲಯಗಳನ್ನು ಆರಂಭಿಸಲು ಚಿಂತಿಸಲಾಗಿದೆ.

ಪುಸ್ತಕ ಸರಬರಾಜು: ಪ್ರತಿ ಗ್ರಂಥಾಲಯಕ್ಕೆ ಮಂಜೂರಾದ ೧ ಲಕ್ಷ ರೂ.ಗಳಲ್ಲಿ ಶೇ.೫೦ರಷ್ಟು ಮೊದಲ ಕಂತಿನ ಹಣವನ್ನು ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ನ್ಯಾಷನಲ್ ಬುಕ್ ಟ್ರಸ್ಟ್ ಆಫ್ ಇಂಡಿಯಾ, ಕೇಂದ್ರ ಶಿಕ್ಷಣ ಸಚಿವಾಲಯದಿಂದ ಪ್ರಕಟಗೊಂಡ ಪುಸ್ತಕಗಳನ್ನು ಖರೀದಿಸಲು ಆದೇಶ ನೀಡಲಾಗಿದೆ.ಪ್ರಸ್ತುತ ಪುಸ್ತಕ ಸರಬರಾಜು ಪ್ರಕ್ರಿಯೆ ಪ್ರಗತಿಯಲ್ಲಿದೆ.

ಈಗಾಗಲೇ ಗ್ರಾಪಂ ಗ್ರಂಥಾಲಯವಿರುವ ಮತ್ತು ಗ್ರಾಮದಲ್ಲಿ ಗ್ರಂಥಾಲಯ ಹೊಂದಿರುವ ಶಾಲೆಗಳನ್ನು ಹೊರತುಪಡಿಸಿ, ವಸತಿ ಪ್ರದೇಶಕ್ಕೆ ಹತ್ತಿರವಿರುವಂತೆ ಕಟ್ಟಡಗಳನ್ನು ಆಯ್ಕೆ ಮಾಡಲಾಗಿದೆ. ಇನ್ನು ಪ್ರತಿ ಗ್ರಂಥಾಲಯಕ್ಕೆ ತಲಾ ೧ ಲಕ್ಷ ರೂ. ವೆಚ್ಚದಲ್ಲಿ ಪೀಠೋಪಕರಣಗಳನ್ನು ಖರೀದಿಸಲು ಮಾರ್ಗಸೂಚಿಯಲ್ಲಿ ಅವಕಾಶವಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಅಗತ್ಯ ಪೀಠೋಪಕರಣ ಖರೀದಿಸಿ ಗ್ರಂಥಾಲಯಗಳನ್ನು ಆರಂಭಿಸಲಾಗುವುದು.

” ಜಿಲ್ಲೆಯಲ್ಲಿ ೨೮೫ ಗ್ರಂಥಾಲಯಗಳನ್ನು ಸ್ಥಾಪಿಸಲು ಗುರಿ ನೀಡಲಾಗಿದ್ದು, ಅದರಲ್ಲಿ ೨೪೨ ಗ್ರಂಥಾಲಯಗಳನ್ನು ಆರಂಭಿಸಲು ಸ್ಥಳ ಗುರುತಿಸಲಾಗಿದೆ. ಅನುದಾನ ಕೂಡ ಬಿಡುಗಡೆಯಾಗಿದೆ. ಇನ್ನೂ ಹೆಚ್ಚುವರಿಯಾಗಿ ಗ್ರಂಥಾಲಯ ಆರಂಭಿಸಲು ಅವಕಾಶವಿದ್ದು, ಸ್ಥಳಾವಕಾಶ ಸಿಕ್ಕರೆ ಸೂಕ್ತ ರೀತಿಯಲ್ಲಿ ಕ್ರಮವಹಿಸಲಾಗುವುದು.”

ದೀಪಾ, ಜಿಲ್ಲಾ ಯೋಜನಾ ವ್ಯವಸ್ಥಾಪಕರು, ಜಿಲ್ಲಾ ಪಂಚಾಯಿತಿ, ಮೈಸೂರು

” ಗ್ರಾಮೀಣ ಭಾಗದಲ್ಲಿ ಗ್ರಂಥಾಲಯಗಳು ಹೆಚ್ಚಾದರೆ ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಉಪಯೋಗವಾಗುತ್ತದೆ. ಬೆಳಿಗ್ಗೆಯಿಂದ ಕೆಲಸ ಮಾಡಿ ಸಾಯಂಕಾಲ ಬಿಡುವು ಮಾಡಿಕೊಂಡು ಒಂದಿಷ್ಟು ಪುಸ್ತಕಗಳನ್ನು ಓದಿದರೆ ಜ್ಞಾನಾರ್ಜನೆ ಜೊತೆಗೆ ಹೊಸ ವಿಷಯಗಳನ್ನೂ ತಿಳಿದುಕೊಳ್ಳಬಹುದು.”

ಕುಮಾರಿ ನಾಯಕ್, ವಿದ್ಯಾರ್ಥಿನಿ

ಆಂದೋಲನ ಡೆಸ್ಕ್

Recent Posts

ಎಐ ಸಮ್ಮಿಟ್‌ನಲ್ಲಿ ಯುವ ಕಾಂಗ್ರೆಸ್ ಅರೆಬೆತ್ತಲೆ ಪ್ರತಿಭಟನೆ : ಮಾರ್ಗರೇಟ್ ಆಳ್ವಾ ಖಂಡನೆ

ಬೆಂಗಳೂರು : ‘ಇಂಡಿಯಾ ಎಐ ಸಮ್ಮಿಟ್’ ಸಂದರ್ಭ ಯುವ ಕಾಂಗ್ರೆಸ್ ನಾಯಕರು ಶರ್ಟ್ ಬಿಚ್ಚಿ ಪ್ರತಿಭಟನೆ ನಡೆಸಿದ್ದಕ್ಕೆ ವಿಪಕ್ಷಗಳ ನಾಯಕರಿಂದಲೇ…

1 hour ago

ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಮಂಡ್ಯ: ಫೆ.28 ರಿಂದ ಮಾ.17ರ ವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ ಬೆಳ್ಳಿಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ…

1 hour ago

ಮೈಸೂರು | ಸ್ವಚ್ಛತಾ ರಾಯಾಭಾರಿಗಳಾಗಿ ಆರು ಗಣ್ಯರ ನೇಮಕ

ಮೈಸೂರು : ಐತಿಹಾಸಿಕ ಪರಂಪರೆ, ಸಾಂಸ್ಕ ತಿಕ ವೈಭವದಿಂದ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವ ಮೈಸೂರು ನಗರದ ಸ್ವಚ್ಛತೆಯನ್ನು ಇನ್ನಷ್ಟು ಉತ್ತಮಪಡಿಸುವ…

2 hours ago

ನಟ ದರ್ಶನ್‌ಗೆ ಬಿಗ್‌ ರಿಲೀಫ್‌: ಗನ್‌ ಲೈಸೆನ್ಸ್‌ ಅಮಾನತು ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ದರ್ಶನ್‌ ಅವರಿಗೆ ಕರ್ನಾಟಕ ಹೈಕೋರ್ಟ್‌ನಲ್ಲಿ ದೊಡ್ಡ ಮಟ್ಟದ ಕಾನೂನು ಜಯ ಸಿಕ್ಕಿದೆ. ನಟ ದರ್ಶನ್‌ ಅವರ…

3 hours ago

ದೆಹಲಿಯಲ್ಲಿ ಲಷ್ಕರ್‌ ಸಂಘಟನೆಯ ಶಂಕಿತ ಉಗ್ರರು ಸೆರೆ: ರಾಜ್ಯದಲ್ಲೂ ಹೈಅಲರ್ಟ್‌ ಎಂದ ಪರಮೇಶ್ವರ್‌

ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲಷ್ಕರ್‌ ಎ ತೈಬಾ ಉಗ್ರ ಸಂಘಟನೆಯ ಶಂಕಿತರು ಬಂಧನವಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಲಾಗಿದೆ…

3 hours ago

ಎಚ್.ಸಿ.ಮಹದೇವಪ್ಪ ಸಿಎಂ ಆದರೆ ನನಗೆ ಖುಷಿ: ಸಚಿವ ಕೆ.ವೆಂಕಟೇಶ್‌

ಮೈಸೂರು: ಸಚಿವ ಎಚ್.ಸಿ.ಮಹದೇವಪ್ಪ ಮುಖ್ಯಮಂತ್ರಿಯಾದರೆ ನನಗೆ ಖುಷಿಯಿದೆ ಎಂದು ಸಚಿವ ಕೆ.ವೆಂಕಟೇಶ್‌ ಹೇಳಿದ್ದಾರೆ. ಕಾಂಗ್ರೆಸ್‌ ಪಕ್ಷದಲ್ಲಿ ದಲಿತ ಸಿಎಂ ಕೂಗು…

4 hours ago