Andolana originals

ರಾಜ್ಯಾದ್ಯಂತ 242 ಗ್ರಂಥಾಲಯ ಸ್ಥಾಪನೆಗೆ ಸಿದ್ಧತೆ

ಪ್ರಶಾಂತ್ ಎಸ್.

ರಾಷ್ಟ್ರಿಯ ಡಿಜಿಟಲ್ ಲೈಬ್ರರಿ ಯೋಜನೆಯಡಿ ತಯಾರಿ

ಗ್ರಾಮೀಣ ಪ್ರದೇಶಗಳಿಗೆ ಮಾತ್ರ ಗ್ರಂಥಾಲಯ

ಗ್ರಂಥಾಲಯ ಕಟ್ಟಡ ನಿರ್ಮಾಣಕ್ಕೆ ಸ್ಥಳ ಗುರುತು

ಯೋಜನೆಗೆ ಒಟ್ಟು ೨.೪ ಕೋಟಿ ರೂ. ಬಿಡುಗಡೆ

ಡಿಜಿಟಲ್ ಮೂಲಸೌಕರ್ಯಕ್ಕೆ ಚಿಂತನೆ

ಮೈಸೂರು: ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿನ ಯುವಜನರು, ವಿದ್ಯಾರ್ಥಿಗಳಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ಉತ್ತೇಜಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ರಾಜ್ಯಾದ್ಯಂತ ೨೪೨ ಗ್ರಂಥಾಲಯಗಳನ್ನು ಸ್ಥಾಪಿಸಲು ಮುಂದಾಗಿದೆ.

ಡಿಜಿಟಲ್ ಮೂಲಸೌಕರ್ಯಕ್ಕೆ ಚಿಂತನೆ ಗ್ರಾಮೀಣ ಪ್ರದೇಶದಲ್ಲಿ ಪುಸ್ತಕ ಸಂಸ್ಕೃತಿಯನ್ನು ಉತ್ತೇಜಿಸಿ, ವಯಸ್ಸಿಗೆ ತಕ್ಕಂತೆ ಓದುವ ಸಾಮಗ್ರಿಗಳನ್ನು ಒದಗಿಸುವುದಕ್ಕೆ ರಾಷ್ಟ್ರೀಯ ಡಿಜಿಟಲ್ ಲೈಬ್ರರಿಯಲ್ಲಿ ಏಕೀಕೃತ ಡಿಜಿಟಲ್ ಪ್ಲಾಟ್ ಫಾರ್ಮ್‌ಗಳಲ್ಲಿ ವಿವಿಧ ಕಲಿಕಾ ಸಂಪನ್ಮೂಲಗಳು ಲಭ್ಯವಾಗುವಂತೆ ಮಾಡುವ ಉದ್ದೇಶದಿಂದ ಗ್ರಾ ಪಂ ಮಟ್ಟದಲ್ಲಿ ಡಿಜಿಟಲ್ ಮೂಲ ಸೌಕರ್ಯಗಳ ಜತೆಗೆ ಹೊಸದಾಗಿ ಗ್ರಂಥಾ ಲಯಗಳನ್ನು ಆರಂಭಿಸಲು ಚಿಂತಿಸಲಾಗಿದೆ.

ಪುಸ್ತಕ ಸರಬರಾಜು: ಪ್ರತಿ ಗ್ರಂಥಾಲಯಕ್ಕೆ ಮಂಜೂರಾದ ೧ ಲಕ್ಷ ರೂ.ಗಳಲ್ಲಿ ಶೇ.೫೦ರಷ್ಟು ಮೊದಲ ಕಂತಿನ ಹಣವನ್ನು ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ನ್ಯಾಷನಲ್ ಬುಕ್ ಟ್ರಸ್ಟ್ ಆಫ್ ಇಂಡಿಯಾ, ಕೇಂದ್ರ ಶಿಕ್ಷಣ ಸಚಿವಾಲಯದಿಂದ ಪ್ರಕಟಗೊಂಡ ಪುಸ್ತಕಗಳನ್ನು ಖರೀದಿಸಲು ಆದೇಶ ನೀಡಲಾಗಿದೆ.ಪ್ರಸ್ತುತ ಪುಸ್ತಕ ಸರಬರಾಜು ಪ್ರಕ್ರಿಯೆ ಪ್ರಗತಿಯಲ್ಲಿದೆ.

ಈಗಾಗಲೇ ಗ್ರಾಪಂ ಗ್ರಂಥಾಲಯವಿರುವ ಮತ್ತು ಗ್ರಾಮದಲ್ಲಿ ಗ್ರಂಥಾಲಯ ಹೊಂದಿರುವ ಶಾಲೆಗಳನ್ನು ಹೊರತುಪಡಿಸಿ, ವಸತಿ ಪ್ರದೇಶಕ್ಕೆ ಹತ್ತಿರವಿರುವಂತೆ ಕಟ್ಟಡಗಳನ್ನು ಆಯ್ಕೆ ಮಾಡಲಾಗಿದೆ. ಇನ್ನು ಪ್ರತಿ ಗ್ರಂಥಾಲಯಕ್ಕೆ ತಲಾ ೧ ಲಕ್ಷ ರೂ. ವೆಚ್ಚದಲ್ಲಿ ಪೀಠೋಪಕರಣಗಳನ್ನು ಖರೀದಿಸಲು ಮಾರ್ಗಸೂಚಿಯಲ್ಲಿ ಅವಕಾಶವಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಅಗತ್ಯ ಪೀಠೋಪಕರಣ ಖರೀದಿಸಿ ಗ್ರಂಥಾಲಯಗಳನ್ನು ಆರಂಭಿಸಲಾಗುವುದು.

” ಜಿಲ್ಲೆಯಲ್ಲಿ ೨೮೫ ಗ್ರಂಥಾಲಯಗಳನ್ನು ಸ್ಥಾಪಿಸಲು ಗುರಿ ನೀಡಲಾಗಿದ್ದು, ಅದರಲ್ಲಿ ೨೪೨ ಗ್ರಂಥಾಲಯಗಳನ್ನು ಆರಂಭಿಸಲು ಸ್ಥಳ ಗುರುತಿಸಲಾಗಿದೆ. ಅನುದಾನ ಕೂಡ ಬಿಡುಗಡೆಯಾಗಿದೆ. ಇನ್ನೂ ಹೆಚ್ಚುವರಿಯಾಗಿ ಗ್ರಂಥಾಲಯ ಆರಂಭಿಸಲು ಅವಕಾಶವಿದ್ದು, ಸ್ಥಳಾವಕಾಶ ಸಿಕ್ಕರೆ ಸೂಕ್ತ ರೀತಿಯಲ್ಲಿ ಕ್ರಮವಹಿಸಲಾಗುವುದು.”

ದೀಪಾ, ಜಿಲ್ಲಾ ಯೋಜನಾ ವ್ಯವಸ್ಥಾಪಕರು, ಜಿಲ್ಲಾ ಪಂಚಾಯಿತಿ, ಮೈಸೂರು

” ಗ್ರಾಮೀಣ ಭಾಗದಲ್ಲಿ ಗ್ರಂಥಾಲಯಗಳು ಹೆಚ್ಚಾದರೆ ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಉಪಯೋಗವಾಗುತ್ತದೆ. ಬೆಳಿಗ್ಗೆಯಿಂದ ಕೆಲಸ ಮಾಡಿ ಸಾಯಂಕಾಲ ಬಿಡುವು ಮಾಡಿಕೊಂಡು ಒಂದಿಷ್ಟು ಪುಸ್ತಕಗಳನ್ನು ಓದಿದರೆ ಜ್ಞಾನಾರ್ಜನೆ ಜೊತೆಗೆ ಹೊಸ ವಿಷಯಗಳನ್ನೂ ತಿಳಿದುಕೊಳ್ಳಬಹುದು.”

ಕುಮಾರಿ ನಾಯಕ್, ವಿದ್ಯಾರ್ಥಿನಿ

ಆಂದೋಲನ ಡೆಸ್ಕ್

Recent Posts

ನೀಟ್-ಯುಜಿ ಮರುಪರೀಕ್ಷೆ : ಪರೀಕ್ಷೆ ಬರೆದ 22 ಲಕ್ಷ ವಿದ್ಯಾರ್ಥಿಗಳು

ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…

9 hours ago

ತಮಿಳುನಾಡು ಸೀಫುಡ್‌ ಘಟಕದಲ್ಲಿ ಅನಿಲ ಸೋರಿಕೆ ; 7 ಜನ ಸಾವು, ಹಲವರು ಗಂಭೀರ

ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…

10 hours ago

ಬೆಂಗಾಳಿಗಳನ್ನು ಬಾಂಗ್ಲಾ ವಲಸಿಗರೆಂದು ಗ್ರಹಿಕೆ ; ಮೈಸೂರು ರೈಲ್ವೆ ನಿಲ್ದಾಣದಲ್ಲಿ ಕೆಲಕಾಲ ಆತಂಕ

ಆಧಾರ್‌ ಕಾರ್ಡ್‌ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…

11 hours ago

ಚಾ.ನಗರ | ಸಿದ್ದಲಿಂಗಪುರ ಬಳಿ ಹುಲಿ ದಾಳಿ ; 4 ಮೇಕೆಗಳು ಸಾವು

ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…

12 hours ago

ಕರ್ನಾಟಕದಲ್ಲಿ ಮುಂಗಾರು ವಿಳಂಬ: ಕಂಗಾಲಾದ ರೈತರು

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…

16 hours ago

ಇದು ಕೇವಲ ಆರಂಭ: ಮುಂದೆ ಹೋರಾಟ ದೊಡ್ಡಮಟ್ಟದಲ್ಲಿ ಇದೆ ಎಂದ ನಿಖಿಲ್‌ ಕುಮಾರಸ್ವಾಮಿ

ರಾಮನಗರ: ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್‌ ಕೈಗೊಂಡಿರುವ ಕೈಗೊಂಡಿರುವ ಬೃಹತ್‌ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್‌ ಕುಮಾರಸ್ವಾಮಿ ಇದು ಕೇವಲ…

16 hours ago