Andolana originals

ರಾಜ್ಯಾದ್ಯಂತ 242 ಗ್ರಂಥಾಲಯ ಸ್ಥಾಪನೆಗೆ ಸಿದ್ಧತೆ

ಪ್ರಶಾಂತ್ ಎಸ್.

ರಾಷ್ಟ್ರಿಯ ಡಿಜಿಟಲ್ ಲೈಬ್ರರಿ ಯೋಜನೆಯಡಿ ತಯಾರಿ

ಗ್ರಾಮೀಣ ಪ್ರದೇಶಗಳಿಗೆ ಮಾತ್ರ ಗ್ರಂಥಾಲಯ

ಗ್ರಂಥಾಲಯ ಕಟ್ಟಡ ನಿರ್ಮಾಣಕ್ಕೆ ಸ್ಥಳ ಗುರುತು

ಯೋಜನೆಗೆ ಒಟ್ಟು ೨.೪ ಕೋಟಿ ರೂ. ಬಿಡುಗಡೆ

ಡಿಜಿಟಲ್ ಮೂಲಸೌಕರ್ಯಕ್ಕೆ ಚಿಂತನೆ

ಮೈಸೂರು: ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿನ ಯುವಜನರು, ವಿದ್ಯಾರ್ಥಿಗಳಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ಉತ್ತೇಜಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ರಾಜ್ಯಾದ್ಯಂತ ೨೪೨ ಗ್ರಂಥಾಲಯಗಳನ್ನು ಸ್ಥಾಪಿಸಲು ಮುಂದಾಗಿದೆ.

ಡಿಜಿಟಲ್ ಮೂಲಸೌಕರ್ಯಕ್ಕೆ ಚಿಂತನೆ ಗ್ರಾಮೀಣ ಪ್ರದೇಶದಲ್ಲಿ ಪುಸ್ತಕ ಸಂಸ್ಕೃತಿಯನ್ನು ಉತ್ತೇಜಿಸಿ, ವಯಸ್ಸಿಗೆ ತಕ್ಕಂತೆ ಓದುವ ಸಾಮಗ್ರಿಗಳನ್ನು ಒದಗಿಸುವುದಕ್ಕೆ ರಾಷ್ಟ್ರೀಯ ಡಿಜಿಟಲ್ ಲೈಬ್ರರಿಯಲ್ಲಿ ಏಕೀಕೃತ ಡಿಜಿಟಲ್ ಪ್ಲಾಟ್ ಫಾರ್ಮ್‌ಗಳಲ್ಲಿ ವಿವಿಧ ಕಲಿಕಾ ಸಂಪನ್ಮೂಲಗಳು ಲಭ್ಯವಾಗುವಂತೆ ಮಾಡುವ ಉದ್ದೇಶದಿಂದ ಗ್ರಾ ಪಂ ಮಟ್ಟದಲ್ಲಿ ಡಿಜಿಟಲ್ ಮೂಲ ಸೌಕರ್ಯಗಳ ಜತೆಗೆ ಹೊಸದಾಗಿ ಗ್ರಂಥಾ ಲಯಗಳನ್ನು ಆರಂಭಿಸಲು ಚಿಂತಿಸಲಾಗಿದೆ.

ಪುಸ್ತಕ ಸರಬರಾಜು: ಪ್ರತಿ ಗ್ರಂಥಾಲಯಕ್ಕೆ ಮಂಜೂರಾದ ೧ ಲಕ್ಷ ರೂ.ಗಳಲ್ಲಿ ಶೇ.೫೦ರಷ್ಟು ಮೊದಲ ಕಂತಿನ ಹಣವನ್ನು ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ನ್ಯಾಷನಲ್ ಬುಕ್ ಟ್ರಸ್ಟ್ ಆಫ್ ಇಂಡಿಯಾ, ಕೇಂದ್ರ ಶಿಕ್ಷಣ ಸಚಿವಾಲಯದಿಂದ ಪ್ರಕಟಗೊಂಡ ಪುಸ್ತಕಗಳನ್ನು ಖರೀದಿಸಲು ಆದೇಶ ನೀಡಲಾಗಿದೆ.ಪ್ರಸ್ತುತ ಪುಸ್ತಕ ಸರಬರಾಜು ಪ್ರಕ್ರಿಯೆ ಪ್ರಗತಿಯಲ್ಲಿದೆ.

ಈಗಾಗಲೇ ಗ್ರಾಪಂ ಗ್ರಂಥಾಲಯವಿರುವ ಮತ್ತು ಗ್ರಾಮದಲ್ಲಿ ಗ್ರಂಥಾಲಯ ಹೊಂದಿರುವ ಶಾಲೆಗಳನ್ನು ಹೊರತುಪಡಿಸಿ, ವಸತಿ ಪ್ರದೇಶಕ್ಕೆ ಹತ್ತಿರವಿರುವಂತೆ ಕಟ್ಟಡಗಳನ್ನು ಆಯ್ಕೆ ಮಾಡಲಾಗಿದೆ. ಇನ್ನು ಪ್ರತಿ ಗ್ರಂಥಾಲಯಕ್ಕೆ ತಲಾ ೧ ಲಕ್ಷ ರೂ. ವೆಚ್ಚದಲ್ಲಿ ಪೀಠೋಪಕರಣಗಳನ್ನು ಖರೀದಿಸಲು ಮಾರ್ಗಸೂಚಿಯಲ್ಲಿ ಅವಕಾಶವಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಅಗತ್ಯ ಪೀಠೋಪಕರಣ ಖರೀದಿಸಿ ಗ್ರಂಥಾಲಯಗಳನ್ನು ಆರಂಭಿಸಲಾಗುವುದು.

” ಜಿಲ್ಲೆಯಲ್ಲಿ ೨೮೫ ಗ್ರಂಥಾಲಯಗಳನ್ನು ಸ್ಥಾಪಿಸಲು ಗುರಿ ನೀಡಲಾಗಿದ್ದು, ಅದರಲ್ಲಿ ೨೪೨ ಗ್ರಂಥಾಲಯಗಳನ್ನು ಆರಂಭಿಸಲು ಸ್ಥಳ ಗುರುತಿಸಲಾಗಿದೆ. ಅನುದಾನ ಕೂಡ ಬಿಡುಗಡೆಯಾಗಿದೆ. ಇನ್ನೂ ಹೆಚ್ಚುವರಿಯಾಗಿ ಗ್ರಂಥಾಲಯ ಆರಂಭಿಸಲು ಅವಕಾಶವಿದ್ದು, ಸ್ಥಳಾವಕಾಶ ಸಿಕ್ಕರೆ ಸೂಕ್ತ ರೀತಿಯಲ್ಲಿ ಕ್ರಮವಹಿಸಲಾಗುವುದು.”

ದೀಪಾ, ಜಿಲ್ಲಾ ಯೋಜನಾ ವ್ಯವಸ್ಥಾಪಕರು, ಜಿಲ್ಲಾ ಪಂಚಾಯಿತಿ, ಮೈಸೂರು

” ಗ್ರಾಮೀಣ ಭಾಗದಲ್ಲಿ ಗ್ರಂಥಾಲಯಗಳು ಹೆಚ್ಚಾದರೆ ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಉಪಯೋಗವಾಗುತ್ತದೆ. ಬೆಳಿಗ್ಗೆಯಿಂದ ಕೆಲಸ ಮಾಡಿ ಸಾಯಂಕಾಲ ಬಿಡುವು ಮಾಡಿಕೊಂಡು ಒಂದಿಷ್ಟು ಪುಸ್ತಕಗಳನ್ನು ಓದಿದರೆ ಜ್ಞಾನಾರ್ಜನೆ ಜೊತೆಗೆ ಹೊಸ ವಿಷಯಗಳನ್ನೂ ತಿಳಿದುಕೊಳ್ಳಬಹುದು.”

ಕುಮಾರಿ ನಾಯಕ್, ವಿದ್ಯಾರ್ಥಿನಿ

ಆಂದೋಲನ ಡೆಸ್ಕ್

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

5 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

5 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

6 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

7 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

12 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

12 hours ago