೧೫೦ ಮಳಿಗೆಗಳಲ್ಲಿ ಪಟಾಕಿ ಮಾರಾಟ; ಹಸಿರು ಪಟಾಕಿಗೆ ಆದ್ಯತೆ
ಮೈಸೂರು: ಬೆಳಕಿನ ಹಬ್ಬ ದೀಪಾವಳಿ ಸಂಭ್ರಮ ಮೈಸೂರಿನಲ್ಲಿ ಮನೆ ಮಾಡಿದೆ. ಮನೆ ಮನಗಳಿಗೆ ಬೆಳಕು ಚೆಲ್ಲುವ ಬಗೆಬಗೆಯ ಹಣತೆಗಳು, ಪಟಾಕಿ ಮಾರಾಟ ಜೋರಾಗಿದ್ದು, ಮಕ್ಕಳು, ಪೋಷಕರು, ಯುವಕರು ಹಸಿರು ಪಟಾಕಿ ಖರೀದಿಗೆ ಮುಂದಾಗಿದ್ದಾರೆ.
ಈ ಬಾರಿಯೂ ಹಸಿರು ಪಟಾಕಿ ಮಾರಾಟಕ್ಕಷ್ಟೇ ಅವಕಾಶವಿದ್ದು, ನಗರದ ಜೆ.ಕೆ.ಮೈದಾನದಲ್ಲಿ ೧೯ ಸೇರಿದಂತೆ ನಗರದ ವಿವಿಧೆಡೆಗಳಲ್ಲಿ ೧೫೦ಕ್ಕೂ ಹೆಚ್ಚು ಮಳಿಗೆಗಳಿಗೆ ಅನುಮತಿ ನೀಡಲಾಗಿದೆ. ಇಂದಿನಿಂದ ೨೨ರವರೆಗೆ ಪಟಾಕಿ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಹಸಿರು ಪಟಾಕಿಗೆ ಆದ್ಯತೆ ನೀಡಲಾಗಿದೆ. ಜೆ.ಕೆ.ಮೈದಾನದ ಪಟಾಕಿ ಮೇಳದಲ್ಲಿರುವ ಎಲ್ಲ ಮಳಿಗೆಗಳ ಮುಂದೆಯೂ ರಿಯಾಯಿತಿ ದರದಲ್ಲಿ ಹಸಿರು ಪಟಾಕಿ ಮಾರಾಟ ಫಲಕ ರಾರಾಜಿಸುತ್ತಿವೆ. ಗ್ರಾಹಕರನ್ನು ಆಕರ್ಷಿಸಲು ಬಗೆಬಗೆಯ ಪಟಾಕಿಗಳನ್ನು ಜೋಡಿಸಲಾಗಿದೆ. ಬೆಲೆಯೂ ತರಹೇವಾರಿಯಾಗಿದೆ. ಬಾಕ್ಸ್ ಒಳಗಿನ ಪಟಾಕಿಗಳ ಮಾದರಿ, ಸಂಖ್ಯೆ ಆಧಾರದಲ್ಲಿ ಬೆಲೆ ನಿಗದಿಗೊಳಿಸಲಾಗಿದೆ.
ಇದನ್ನು ಓದಿ: ವರ್ಷದಿಂದ ವರ್ಷಕ್ಕೆ ಮನೋರೋಗಿಗಳ ಸಂಖ್ಯೆ ಹೆಚ್ಚಳ
೧೦೦ ರೂ.ನಿಂದ ಹಿಡಿದು ೫ ಸಾವಿರ ರೂ.ವರೆಗೂ ಪಟಾಕಿ ಬಾಕ್ಸ್ ಇದ್ದು, ಕಳೆದ ಬಾರಿಗಿಂತ ಈ ಬಾರಿಯೂ ದರದಲ್ಲಿ ಏರುಪೇರು ಕಂಡಿದೆ. ಕೆಲವು ಪಟಾಕಿಗಳ ಬೆಲೆ ಏರಿಕೆಯಾಗಿದೆ. ಈ ಬಾರಿ ಭರ್ಜರಿ ವ್ಯಾಪಾರದ ನಿರೀಕ್ಷೆಯಲ್ಲಿಯದ್ದೇವೆ ಎಂದು ಪಟಾಕಿ ಅಂಗಡಿ ಮಾಲೀಕ ಎಸ್.ಗೌತಮ್ ಭಂಡಾರಿ ತಿಳಿಸಿದರು.
ಇಂದಿನಿಂದ ವ್ಯಾಪಾರ ಆರಂಭವಾಗಿದ್ದು, ಬುಧವಾರದವರೆಗೂ ನಡೆಯಲಿದೆ. ಮೊದಲ ಅಷ್ಟೊಂದು ವ್ಯಾಪಾರವಾಗುವುದಿಲ್ಲ. ಸೋಮವಾರದಿಂದ ಹಬ್ಬ ದೀಪಾವಳಿ ಹಬ್ಬ ಆರಂಭವಾಗಲಿದ್ದು, ಅಂದಿನಿಂದ ವ್ಯಾಪಾರ ಚುರುಕುಗೊಳ್ಳಲಿದೆ ಎಂದು ಮಾಹಿತಿ ನೀಡಿದರು.
” ಪಟಾಕಿ ಖರೀದಿಸಲು ಎಚ್.ಡಿ.ಕೋಟೆಯಿಂದ ಬಂದಿದ್ದೇನೆ. ನಮಗೆ ಕೈಗೆಟುಕುವ ದರದಲ್ಲಿ ಪಟಾಕಿ ಖರೀದಿಸುತ್ತೇವೆ. ನನ್ನ ಮಗನಿಗೆ ಪಟಾಕಿ ಮೇಲೆ ಪ್ರೇಮವಿದೆ. ಹೀಗಾಗಿ ಖರೀದಿಗೆ ಬಂದಿದ್ದೇವೆ.”
-ರಮೇಶ್, ಎಚ್.ಡಿ.ಕೋಟೆ
” ಹಲವಾರು ವರ್ಷಗಳಿಂದ ಜೆ.ಕೆ.ಮೈದಾನದಲ್ಲಿ ಪಟಾಕಿ ಮಳಿಗೆ ಇಡಲಾಗುತ್ತಿದೆ. ಐದು ದಿನಗಳ ಅವಕಾಶ ನೀಡಲಾಗಿದ್ದು, ಹೆಚ್ಚಿನ ವ್ಯಾಪಾರದ ನಿರೀಕ್ಷೆಯಲ್ಲಿದ್ದೇವೆ.”
-ಗೌತಮ್ ಎಸ್.ಭಂಡಾರಿ, ವ್ಯಾಪಾರಿ
ಬಳ್ಳಾರಿ: ಹೊಸಪೇಟೆ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಜಲಾಶಯದ ಮೇಲ್ಬಾಗದಲ್ಲಿ ಗೇಟ್ ಮುಂದೆ…
ಮೈಸೂರು: ಮದುವೆ ಆಗುವುದಾಗಿ ನಂಬಿಸಿ ಮಹಿಳಾ ವಕೀಲೆಯೊಬ್ಬರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ನಂತರ ಮೋಸ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವಕೀಲ…
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ನೊಟೀಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ…
ಎಚ್.ಡಿ.ಕೋಟೆ: ಬಸ್ ವ್ಯವಸ್ಥೆ ಇಲ್ಲದೇ ಶಾಲಾ ವಿದ್ಯಾರ್ಥಿಗಳು ಪರದಾಟ ನಡೆಸುತ್ತಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ…
ಮಂಡ್ಯ: ವಿಸಿ ಫಾರ್ಮ್ನ ಕೃಷಿ ಮೇಳದ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಶ್ರೀಗಳ ಸಮ್ಮುಖದಲ್ಲೇ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ.…
ಬೆಂಗಳೂರು: ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ವೈಫಲ್ಯಗಳ ವಿರುದ್ಧ ಕಾಂಗ್ರೆಸ್ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದರೂ ಅಚ್ಚರಿ ಇಲ್ಲ ಎಂದು…