Andolana originals

ಸಾಂಸ್ಕೃತಿಕ ನಗರಿಯಲ್ಲಿ ದೀಪಾವಳಿ ಹಬ್ಬಕ್ಕೆ ಸಿದ್ಧತೆ

೧೫೦ ಮಳಿಗೆಗಳಲ್ಲಿ ಪಟಾಕಿ ಮಾರಾಟ; ಹಸಿರು ಪಟಾಕಿಗೆ ಆದ್ಯತೆ

ಮೈಸೂರು: ಬೆಳಕಿನ ಹಬ್ಬ ದೀಪಾವಳಿ ಸಂಭ್ರಮ ಮೈಸೂರಿನಲ್ಲಿ ಮನೆ ಮಾಡಿದೆ. ಮನೆ ಮನಗಳಿಗೆ ಬೆಳಕು ಚೆಲ್ಲುವ ಬಗೆಬಗೆಯ ಹಣತೆಗಳು, ಪಟಾಕಿ ಮಾರಾಟ ಜೋರಾಗಿದ್ದು, ಮಕ್ಕಳು, ಪೋಷಕರು, ಯುವಕರು ಹಸಿರು ಪಟಾಕಿ ಖರೀದಿಗೆ ಮುಂದಾಗಿದ್ದಾರೆ.

ಈ ಬಾರಿಯೂ ಹಸಿರು ಪಟಾಕಿ ಮಾರಾಟಕ್ಕಷ್ಟೇ ಅವಕಾಶವಿದ್ದು, ನಗರದ ಜೆ.ಕೆ.ಮೈದಾನದಲ್ಲಿ ೧೯ ಸೇರಿದಂತೆ ನಗರದ ವಿವಿಧೆಡೆಗಳಲ್ಲಿ ೧೫೦ಕ್ಕೂ ಹೆಚ್ಚು ಮಳಿಗೆಗಳಿಗೆ ಅನುಮತಿ ನೀಡಲಾಗಿದೆ. ಇಂದಿನಿಂದ ೨೨ರವರೆಗೆ ಪಟಾಕಿ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಹಸಿರು ಪಟಾಕಿಗೆ ಆದ್ಯತೆ ನೀಡಲಾಗಿದೆ. ಜೆ.ಕೆ.ಮೈದಾನದ ಪಟಾಕಿ ಮೇಳದಲ್ಲಿರುವ ಎಲ್ಲ ಮಳಿಗೆಗಳ ಮುಂದೆಯೂ ರಿಯಾಯಿತಿ ದರದಲ್ಲಿ ಹಸಿರು ಪಟಾಕಿ ಮಾರಾಟ ಫಲಕ ರಾರಾಜಿಸುತ್ತಿವೆ. ಗ್ರಾಹಕರನ್ನು ಆಕರ್ಷಿಸಲು ಬಗೆಬಗೆಯ ಪಟಾಕಿಗಳನ್ನು ಜೋಡಿಸಲಾಗಿದೆ. ಬೆಲೆಯೂ ತರಹೇವಾರಿಯಾಗಿದೆ. ಬಾಕ್ಸ್ ಒಳಗಿನ ಪಟಾಕಿಗಳ ಮಾದರಿ, ಸಂಖ್ಯೆ ಆಧಾರದಲ್ಲಿ ಬೆಲೆ ನಿಗದಿಗೊಳಿಸಲಾಗಿದೆ.

ಇದನ್ನು ಓದಿ: ವರ್ಷದಿಂದ ವರ್ಷಕ್ಕೆ ಮನೋರೋಗಿಗಳ ಸಂಖ್ಯೆ ಹೆಚ್ಚಳ

೧೦೦ ರೂ.ನಿಂದ ಹಿಡಿದು ೫ ಸಾವಿರ ರೂ.ವರೆಗೂ ಪಟಾಕಿ ಬಾಕ್ಸ್ ಇದ್ದು, ಕಳೆದ ಬಾರಿಗಿಂತ ಈ ಬಾರಿಯೂ ದರದಲ್ಲಿ ಏರುಪೇರು ಕಂಡಿದೆ. ಕೆಲವು ಪಟಾಕಿಗಳ ಬೆಲೆ ಏರಿಕೆಯಾಗಿದೆ. ಈ ಬಾರಿ ಭರ್ಜರಿ ವ್ಯಾಪಾರದ ನಿರೀಕ್ಷೆಯಲ್ಲಿಯದ್ದೇವೆ ಎಂದು ಪಟಾಕಿ ಅಂಗಡಿ ಮಾಲೀಕ ಎಸ್.ಗೌತಮ್ ಭಂಡಾರಿ ತಿಳಿಸಿದರು.

ಇಂದಿನಿಂದ ವ್ಯಾಪಾರ ಆರಂಭವಾಗಿದ್ದು, ಬುಧವಾರದವರೆಗೂ ನಡೆಯಲಿದೆ. ಮೊದಲ ಅಷ್ಟೊಂದು ವ್ಯಾಪಾರವಾಗುವುದಿಲ್ಲ. ಸೋಮವಾರದಿಂದ ಹಬ್ಬ ದೀಪಾವಳಿ ಹಬ್ಬ ಆರಂಭವಾಗಲಿದ್ದು, ಅಂದಿನಿಂದ ವ್ಯಾಪಾರ ಚುರುಕುಗೊಳ್ಳಲಿದೆ ಎಂದು ಮಾಹಿತಿ ನೀಡಿದರು.

” ಪಟಾಕಿ ಖರೀದಿಸಲು ಎಚ್.ಡಿ.ಕೋಟೆಯಿಂದ ಬಂದಿದ್ದೇನೆ. ನಮಗೆ ಕೈಗೆಟುಕುವ ದರದಲ್ಲಿ ಪಟಾಕಿ ಖರೀದಿಸುತ್ತೇವೆ. ನನ್ನ ಮಗನಿಗೆ ಪಟಾಕಿ ಮೇಲೆ ಪ್ರೇಮವಿದೆ. ಹೀಗಾಗಿ ಖರೀದಿಗೆ ಬಂದಿದ್ದೇವೆ.”

-ರಮೇಶ್, ಎಚ್.ಡಿ.ಕೋಟೆ

” ಹಲವಾರು ವರ್ಷಗಳಿಂದ ಜೆ.ಕೆ.ಮೈದಾನದಲ್ಲಿ ಪಟಾಕಿ ಮಳಿಗೆ ಇಡಲಾಗುತ್ತಿದೆ. ಐದು ದಿನಗಳ ಅವಕಾಶ ನೀಡಲಾಗಿದ್ದು, ಹೆಚ್ಚಿನ ವ್ಯಾಪಾರದ ನಿರೀಕ್ಷೆಯಲ್ಲಿದ್ದೇವೆ.”

-ಗೌತಮ್ ಎಸ್.ಭಂಡಾರಿ, ವ್ಯಾಪಾರಿ

ಆಂದೋಲನ ಡೆಸ್ಕ್

Recent Posts

ಪ್ರಧಾನ್‌ ರಾಜೀನಾಮೆ : ವಾಂಗ್ಚುಕ್‌ ಫಸ್ಟ್‌ ರಿಯಾಕ್ಷನ್‌

ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್‌ ವಾಂಗ್ಚುಕ್‌ ಮೊದಲ ಪ್ರತಿಕ್ರಿಯೆ…

8 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 25 ಶನಿವಾರ  

17 hours ago

ನೋಟ-ಪ್ರತಿನೋಟ | ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಸರಿಯೇ? ತಪ್ಪೇ?

ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…

17 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಗೆ ಅಜ್ಜಿ ಒಡವೆ ನೀಡಿದ ಪ್ರಸಂಗ…

ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…

17 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಯ ಉಡುಪು ಯಾಕೆ ಬದಲಾಯಿತು?

  ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…

17 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಸಜ್ಜನನಾದ ಆಂಗ್ಲನಾಗುವ ಪ್ರಯತ್ನ

ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್‌ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…

17 hours ago