Andolana originals

ಸಾಂಸ್ಕೃತಿಕ ನಗರಿಯಲ್ಲಿ ದೀಪಾವಳಿ ಹಬ್ಬಕ್ಕೆ ಸಿದ್ಧತೆ

೧೫೦ ಮಳಿಗೆಗಳಲ್ಲಿ ಪಟಾಕಿ ಮಾರಾಟ; ಹಸಿರು ಪಟಾಕಿಗೆ ಆದ್ಯತೆ

ಮೈಸೂರು: ಬೆಳಕಿನ ಹಬ್ಬ ದೀಪಾವಳಿ ಸಂಭ್ರಮ ಮೈಸೂರಿನಲ್ಲಿ ಮನೆ ಮಾಡಿದೆ. ಮನೆ ಮನಗಳಿಗೆ ಬೆಳಕು ಚೆಲ್ಲುವ ಬಗೆಬಗೆಯ ಹಣತೆಗಳು, ಪಟಾಕಿ ಮಾರಾಟ ಜೋರಾಗಿದ್ದು, ಮಕ್ಕಳು, ಪೋಷಕರು, ಯುವಕರು ಹಸಿರು ಪಟಾಕಿ ಖರೀದಿಗೆ ಮುಂದಾಗಿದ್ದಾರೆ.

ಈ ಬಾರಿಯೂ ಹಸಿರು ಪಟಾಕಿ ಮಾರಾಟಕ್ಕಷ್ಟೇ ಅವಕಾಶವಿದ್ದು, ನಗರದ ಜೆ.ಕೆ.ಮೈದಾನದಲ್ಲಿ ೧೯ ಸೇರಿದಂತೆ ನಗರದ ವಿವಿಧೆಡೆಗಳಲ್ಲಿ ೧೫೦ಕ್ಕೂ ಹೆಚ್ಚು ಮಳಿಗೆಗಳಿಗೆ ಅನುಮತಿ ನೀಡಲಾಗಿದೆ. ಇಂದಿನಿಂದ ೨೨ರವರೆಗೆ ಪಟಾಕಿ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಹಸಿರು ಪಟಾಕಿಗೆ ಆದ್ಯತೆ ನೀಡಲಾಗಿದೆ. ಜೆ.ಕೆ.ಮೈದಾನದ ಪಟಾಕಿ ಮೇಳದಲ್ಲಿರುವ ಎಲ್ಲ ಮಳಿಗೆಗಳ ಮುಂದೆಯೂ ರಿಯಾಯಿತಿ ದರದಲ್ಲಿ ಹಸಿರು ಪಟಾಕಿ ಮಾರಾಟ ಫಲಕ ರಾರಾಜಿಸುತ್ತಿವೆ. ಗ್ರಾಹಕರನ್ನು ಆಕರ್ಷಿಸಲು ಬಗೆಬಗೆಯ ಪಟಾಕಿಗಳನ್ನು ಜೋಡಿಸಲಾಗಿದೆ. ಬೆಲೆಯೂ ತರಹೇವಾರಿಯಾಗಿದೆ. ಬಾಕ್ಸ್ ಒಳಗಿನ ಪಟಾಕಿಗಳ ಮಾದರಿ, ಸಂಖ್ಯೆ ಆಧಾರದಲ್ಲಿ ಬೆಲೆ ನಿಗದಿಗೊಳಿಸಲಾಗಿದೆ.

ಇದನ್ನು ಓದಿ: ವರ್ಷದಿಂದ ವರ್ಷಕ್ಕೆ ಮನೋರೋಗಿಗಳ ಸಂಖ್ಯೆ ಹೆಚ್ಚಳ

೧೦೦ ರೂ.ನಿಂದ ಹಿಡಿದು ೫ ಸಾವಿರ ರೂ.ವರೆಗೂ ಪಟಾಕಿ ಬಾಕ್ಸ್ ಇದ್ದು, ಕಳೆದ ಬಾರಿಗಿಂತ ಈ ಬಾರಿಯೂ ದರದಲ್ಲಿ ಏರುಪೇರು ಕಂಡಿದೆ. ಕೆಲವು ಪಟಾಕಿಗಳ ಬೆಲೆ ಏರಿಕೆಯಾಗಿದೆ. ಈ ಬಾರಿ ಭರ್ಜರಿ ವ್ಯಾಪಾರದ ನಿರೀಕ್ಷೆಯಲ್ಲಿಯದ್ದೇವೆ ಎಂದು ಪಟಾಕಿ ಅಂಗಡಿ ಮಾಲೀಕ ಎಸ್.ಗೌತಮ್ ಭಂಡಾರಿ ತಿಳಿಸಿದರು.

ಇಂದಿನಿಂದ ವ್ಯಾಪಾರ ಆರಂಭವಾಗಿದ್ದು, ಬುಧವಾರದವರೆಗೂ ನಡೆಯಲಿದೆ. ಮೊದಲ ಅಷ್ಟೊಂದು ವ್ಯಾಪಾರವಾಗುವುದಿಲ್ಲ. ಸೋಮವಾರದಿಂದ ಹಬ್ಬ ದೀಪಾವಳಿ ಹಬ್ಬ ಆರಂಭವಾಗಲಿದ್ದು, ಅಂದಿನಿಂದ ವ್ಯಾಪಾರ ಚುರುಕುಗೊಳ್ಳಲಿದೆ ಎಂದು ಮಾಹಿತಿ ನೀಡಿದರು.

” ಪಟಾಕಿ ಖರೀದಿಸಲು ಎಚ್.ಡಿ.ಕೋಟೆಯಿಂದ ಬಂದಿದ್ದೇನೆ. ನಮಗೆ ಕೈಗೆಟುಕುವ ದರದಲ್ಲಿ ಪಟಾಕಿ ಖರೀದಿಸುತ್ತೇವೆ. ನನ್ನ ಮಗನಿಗೆ ಪಟಾಕಿ ಮೇಲೆ ಪ್ರೇಮವಿದೆ. ಹೀಗಾಗಿ ಖರೀದಿಗೆ ಬಂದಿದ್ದೇವೆ.”

-ರಮೇಶ್, ಎಚ್.ಡಿ.ಕೋಟೆ

” ಹಲವಾರು ವರ್ಷಗಳಿಂದ ಜೆ.ಕೆ.ಮೈದಾನದಲ್ಲಿ ಪಟಾಕಿ ಮಳಿಗೆ ಇಡಲಾಗುತ್ತಿದೆ. ಐದು ದಿನಗಳ ಅವಕಾಶ ನೀಡಲಾಗಿದ್ದು, ಹೆಚ್ಚಿನ ವ್ಯಾಪಾರದ ನಿರೀಕ್ಷೆಯಲ್ಲಿದ್ದೇವೆ.”

-ಗೌತಮ್ ಎಸ್.ಭಂಡಾರಿ, ವ್ಯಾಪಾರಿ

ಆಂದೋಲನ ಡೆಸ್ಕ್

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

4 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

5 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

5 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

5 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

6 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

7 hours ago