Andolana originals

ಕೋಟೆ ತಾಲ್ಲೂಕಿನಾದ್ಯಂತ ಗೌರಿ-ಗಣೇಶ ಹಬ್ಬ ಆಚರಣೆಗೆ ಸಿದ್ಧತೆ

ಮಂಜು ಕೋಟೆ

ಬೆಲೆ ದುಬಾರಿಯಾಗಿದ್ದರೂ ಲೆಕ್ಕಿಸದೆ ಪದಾರ್ಥಗಳ ಖರೀದಿ; ನಿಯಮಗಳ ಪ್ರಕಾರ ಗಣೇಶ ಮೂರ್ತಿ ಪ್ರತಿಷ್ಠಾಪಿಸಲು ಸೂಚನೆ 

ಎಚ್.ಡಿ.ಕೋಟೆ: ತಾಲ್ಲೂಕಿನಾದ್ಯಂತ ಗೌರಿ- ಗಣೇಶ ಹಬ್ಬವನ್ನು ಸಡಗರದಿಂದ ಆಚರಿಸಲು ಸಿದ್ಧತೆಗಳು ನಡೆದಿವೆ.

ಕೋಟೆ ಕ್ಷೇತ್ರದ ಪಟ್ಟಣ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ಈ ಬಾರಿಯ ಗೌರಿ-ಗಣೇಶ ಹಬ್ಬವನ್ನು ಸಡಗರದಿಂದ ಆಚರಿಸಲು ಹೆಣ್ಣು ಮಕ್ಕಳು ಮಹಿಳೆಯರು ಹಾಗೂ ಯುವ ಸಮುದಾಯ ಮುಂದಾಗಿದ್ದು, ಮಂಗಳವಾರ ಗೌರಿ ಹಬ್ಬ ಇರುವುದರಿಂದ ಗೌರಿಯ ಪೂಜೆ ನಡೆಸಲು ಸಕಲ ಸಿದ್ಧತೆಯಲ್ಲಿ ತೊಡಗಿದ್ದಾರೆ.

ಬುಧವಾರ ಗಣೇಶ ಹಬ್ಬ ಇರುವುದರಿಂದ ಪುರಸಭೆ ವ್ಯಾಪ್ತಿ ಸೇರಿದಂತೆ ತಾಲ್ಲೂಕು ವ್ಯಾಪ್ತಿಯಲ್ಲಿರುವ ಗ್ರಾಮಗಳಲ್ಲಿ ಗಣಪತಿ ಮೂರ್ತಿಯನ್ನು ಕೂರಿಸಿ ಪೂಜೆ ಸಲ್ಲಿಸಲು ಯುವಕರ ಸಂಘಗಳು, ಸಂಘ-ಸಂಸ್ಥೆಯವರು ನಿಗದಿತ ಸ್ಥಳಗಳಲ್ಲಿ ಚಪ್ಪರ ಹಾಕುವುದು, ಗಣಪತಿ ಮೂರ್ತಿ ಖರೀದಿ ಹಾಗೂ ಇನ್ನಿತರ ಕಾರ್ಯಗಳಲ್ಲಿ ನಿರತರಾಗಿದ್ದಾರೆ.

ಹೂವು, ಹಣ್ಣು, ಕಾಯಿ ಹಾಗೂ ಇನ್ನಿತರ ಪದಾರ್ಥಗಳ ಬೆಲೆ ಹಬ್ಬದ ಪ್ರಯುಕ್ತ ಹೆಚ್ಚಾಗಿದ್ದರೂ ಜನರು ಲೆಕ್ಕಿಸದೆ ಹಬ್ಬವನ್ನು ಸಡಗರದಿಂದ ಆಚರಿಸಲು ಕುಟುಂಬ ಸಮೇತರಾಗಿ ಖರೀದಿಯಲ್ಲಿ ಮಗ್ನರಾಗಿದ್ದಾರೆ.  ಪ್ರತಿಯೊಂದು ಸಮುದಾಯದ ರಸ್ತೆಗಳಲ್ಲೂ ಗಣೇಶ ಮೂರ್ತಿ ಕೂರಿಸಲು ಪೈಪೋಟಿ ಏರ್ಪಟ್ಟಿದೆ. ಕಳೆದ ವರ್ಷಕ್ಕಿಂತ ಈ ವರ್ಷ ಎತ್ತರವಾದ ಗಣಪತಿ ಮೂರ್ತಿಯನ್ನು  ಕೂರಿಸಬೇಕೆಂದು ವಿವಿಧೆಡೆಯಿಂದ ಮೂರ್ತಿಯನ್ನು ಖರೀದಿಸಿ ತರಲು ಮುಂದಾಗಿರುವುದು ಕಂಡುಬಂದಿದೆ.

” ಪರಿಸರ ಸ್ನೇಹಿ  ಗಣಪತಿ ಮೂರ್ತಿಗಳನ್ನೇ ಜನಸಾಮಾನ್ಯರು ಕೂರಿಸಿ ಪೂಜೆ ಸಲ್ಲಿಸಬೇಕು. ಈ ಮೂಲಕ ಸರ್ಕಾರದ ಮತ್ತು ಪುರಸಭೆಯ ನಿಯಮಗಳನ್ನು ಪ್ರತಿಯೊಬ್ಬರೂ ಪಾಲಿಸ ಬೇಕು. ಸ್ವಚ್ಛತೆ ಕಾಪಾಡಬೇಕು. ಗಣಪತಿ ಮೂರ್ತಿ ಕೂರಿಸುವ ಸಂಘ ಸಂಸ್ಥೆಯವರು ಪುರಸಭೆಯಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಗಣಪತಿ ಮೂರ್ತಿಗಳ ವಿಸರ್ಜನೆಗಾಗಿ ಪಟ್ಟಣದ ಸಂತೆ ಮೈದಾನದಲ್ಲಿ ನೀರಿನ ಕೊಳವನ್ನು ಪುರಸಭೆ ವತಿಯಿಂದ ಸಜ್ಜುಗೊಳಿಸಲಾಗಿದೆ.”

-ಶಿವಮ್ಮ ಚಾಕಹಳ್ಳಿ ಕೃಷ್ಣ, ಅಧ್ಯಕ್ಷರು ಪುರಸಭೆ

” ಪಟ್ಟಣ ಸೇರಿದಂತೆ ತಾಲ್ಲೂಕಿನಾದ್ಯಂತ ಗಣಪತಿ ಮೂರ್ತಿಯನ್ನು ಕೂರಿಸುವವರು ಪೊಲೀಸ್ ಠಾಣೆಯಲ್ಲಿ ಅನುಮತಿ ಪಡೆಯಲೇಬೇಕು. ಇಲ್ಲದಿದ್ದರೆ ಅಂತಹವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು. ಡಿಜೆ, ಇನ್ನಿತರ ಅತಿ ಹೆಚ್ಚು ಶಬ್ದ ಮಾಡುವ ಧ್ವನಿವರ್ಧಕಗಳನ್ನು ಬಳಸಬಾರದು. ಶಾಂತಿ ಸೌಹಾರ್ದತೆಯಿಂದ ಹಬ್ಬ ಆಚರಿಸ ಬೇಕೆಂದು ಈಗಾಗಲೇ ವಿವಿಧ ಸಮುದಾಯಗಳ ಮುಖಂಡರನ್ನು ಕರೆದು ಸಭೆ ನಡೆಸಲಾಗಿದೆ. ಮುಂಜಾಗ್ರತಾ ಕ್ರಮಗಳನ್ನೂ ಕೈಗೊಳ್ಳಲಾಗಿದೆ.”

-ಗಂಗಾಧರ್, ಸರ್ಕಲ್ ಇನ್‌ಸ್ಪೆಕ್ಟರ್

ಆಂದೋಲನ ಡೆಸ್ಕ್

Recent Posts

ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವು

ನವೀನ್‌ ಕುಮಾರ್:‌ ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…

3 mins ago

ಹನೂರು| ಅಮಾವಾಸ್ಯೆ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದುಬಂದ ಭಕ್ತಸಾಗರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…

60 mins ago

ಚಾ.ನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ: ಸಚಿವ ಕೆ.ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು:‌ ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು‌‌ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…

1 hour ago

ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರೋಧ

ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…

1 hour ago

ಶಾಸಕ ಜಿಟಿಡಿ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೆ ಅಭ್ಯಂತರವಿಲ್ಲ: ಮಾಜಿ ಸಚಿವ ಸಾ.ರಾ.ಮಹೇಶ್‌

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್‌…

2 hours ago

ಮಂಡ್ಯ| ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳ ಬಂಧನ

Θಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಪಾಂಡವಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ…

2 hours ago