Andolana originals

ಕೋಟೆ ತಾಲ್ಲೂಕಿನಾದ್ಯಂತ ಗೌರಿ-ಗಣೇಶ ಹಬ್ಬ ಆಚರಣೆಗೆ ಸಿದ್ಧತೆ

ಮಂಜು ಕೋಟೆ

ಬೆಲೆ ದುಬಾರಿಯಾಗಿದ್ದರೂ ಲೆಕ್ಕಿಸದೆ ಪದಾರ್ಥಗಳ ಖರೀದಿ; ನಿಯಮಗಳ ಪ್ರಕಾರ ಗಣೇಶ ಮೂರ್ತಿ ಪ್ರತಿಷ್ಠಾಪಿಸಲು ಸೂಚನೆ 

ಎಚ್.ಡಿ.ಕೋಟೆ: ತಾಲ್ಲೂಕಿನಾದ್ಯಂತ ಗೌರಿ- ಗಣೇಶ ಹಬ್ಬವನ್ನು ಸಡಗರದಿಂದ ಆಚರಿಸಲು ಸಿದ್ಧತೆಗಳು ನಡೆದಿವೆ.

ಕೋಟೆ ಕ್ಷೇತ್ರದ ಪಟ್ಟಣ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ಈ ಬಾರಿಯ ಗೌರಿ-ಗಣೇಶ ಹಬ್ಬವನ್ನು ಸಡಗರದಿಂದ ಆಚರಿಸಲು ಹೆಣ್ಣು ಮಕ್ಕಳು ಮಹಿಳೆಯರು ಹಾಗೂ ಯುವ ಸಮುದಾಯ ಮುಂದಾಗಿದ್ದು, ಮಂಗಳವಾರ ಗೌರಿ ಹಬ್ಬ ಇರುವುದರಿಂದ ಗೌರಿಯ ಪೂಜೆ ನಡೆಸಲು ಸಕಲ ಸಿದ್ಧತೆಯಲ್ಲಿ ತೊಡಗಿದ್ದಾರೆ.

ಬುಧವಾರ ಗಣೇಶ ಹಬ್ಬ ಇರುವುದರಿಂದ ಪುರಸಭೆ ವ್ಯಾಪ್ತಿ ಸೇರಿದಂತೆ ತಾಲ್ಲೂಕು ವ್ಯಾಪ್ತಿಯಲ್ಲಿರುವ ಗ್ರಾಮಗಳಲ್ಲಿ ಗಣಪತಿ ಮೂರ್ತಿಯನ್ನು ಕೂರಿಸಿ ಪೂಜೆ ಸಲ್ಲಿಸಲು ಯುವಕರ ಸಂಘಗಳು, ಸಂಘ-ಸಂಸ್ಥೆಯವರು ನಿಗದಿತ ಸ್ಥಳಗಳಲ್ಲಿ ಚಪ್ಪರ ಹಾಕುವುದು, ಗಣಪತಿ ಮೂರ್ತಿ ಖರೀದಿ ಹಾಗೂ ಇನ್ನಿತರ ಕಾರ್ಯಗಳಲ್ಲಿ ನಿರತರಾಗಿದ್ದಾರೆ.

ಹೂವು, ಹಣ್ಣು, ಕಾಯಿ ಹಾಗೂ ಇನ್ನಿತರ ಪದಾರ್ಥಗಳ ಬೆಲೆ ಹಬ್ಬದ ಪ್ರಯುಕ್ತ ಹೆಚ್ಚಾಗಿದ್ದರೂ ಜನರು ಲೆಕ್ಕಿಸದೆ ಹಬ್ಬವನ್ನು ಸಡಗರದಿಂದ ಆಚರಿಸಲು ಕುಟುಂಬ ಸಮೇತರಾಗಿ ಖರೀದಿಯಲ್ಲಿ ಮಗ್ನರಾಗಿದ್ದಾರೆ.  ಪ್ರತಿಯೊಂದು ಸಮುದಾಯದ ರಸ್ತೆಗಳಲ್ಲೂ ಗಣೇಶ ಮೂರ್ತಿ ಕೂರಿಸಲು ಪೈಪೋಟಿ ಏರ್ಪಟ್ಟಿದೆ. ಕಳೆದ ವರ್ಷಕ್ಕಿಂತ ಈ ವರ್ಷ ಎತ್ತರವಾದ ಗಣಪತಿ ಮೂರ್ತಿಯನ್ನು  ಕೂರಿಸಬೇಕೆಂದು ವಿವಿಧೆಡೆಯಿಂದ ಮೂರ್ತಿಯನ್ನು ಖರೀದಿಸಿ ತರಲು ಮುಂದಾಗಿರುವುದು ಕಂಡುಬಂದಿದೆ.

” ಪರಿಸರ ಸ್ನೇಹಿ  ಗಣಪತಿ ಮೂರ್ತಿಗಳನ್ನೇ ಜನಸಾಮಾನ್ಯರು ಕೂರಿಸಿ ಪೂಜೆ ಸಲ್ಲಿಸಬೇಕು. ಈ ಮೂಲಕ ಸರ್ಕಾರದ ಮತ್ತು ಪುರಸಭೆಯ ನಿಯಮಗಳನ್ನು ಪ್ರತಿಯೊಬ್ಬರೂ ಪಾಲಿಸ ಬೇಕು. ಸ್ವಚ್ಛತೆ ಕಾಪಾಡಬೇಕು. ಗಣಪತಿ ಮೂರ್ತಿ ಕೂರಿಸುವ ಸಂಘ ಸಂಸ್ಥೆಯವರು ಪುರಸಭೆಯಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಗಣಪತಿ ಮೂರ್ತಿಗಳ ವಿಸರ್ಜನೆಗಾಗಿ ಪಟ್ಟಣದ ಸಂತೆ ಮೈದಾನದಲ್ಲಿ ನೀರಿನ ಕೊಳವನ್ನು ಪುರಸಭೆ ವತಿಯಿಂದ ಸಜ್ಜುಗೊಳಿಸಲಾಗಿದೆ.”

-ಶಿವಮ್ಮ ಚಾಕಹಳ್ಳಿ ಕೃಷ್ಣ, ಅಧ್ಯಕ್ಷರು ಪುರಸಭೆ

” ಪಟ್ಟಣ ಸೇರಿದಂತೆ ತಾಲ್ಲೂಕಿನಾದ್ಯಂತ ಗಣಪತಿ ಮೂರ್ತಿಯನ್ನು ಕೂರಿಸುವವರು ಪೊಲೀಸ್ ಠಾಣೆಯಲ್ಲಿ ಅನುಮತಿ ಪಡೆಯಲೇಬೇಕು. ಇಲ್ಲದಿದ್ದರೆ ಅಂತಹವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು. ಡಿಜೆ, ಇನ್ನಿತರ ಅತಿ ಹೆಚ್ಚು ಶಬ್ದ ಮಾಡುವ ಧ್ವನಿವರ್ಧಕಗಳನ್ನು ಬಳಸಬಾರದು. ಶಾಂತಿ ಸೌಹಾರ್ದತೆಯಿಂದ ಹಬ್ಬ ಆಚರಿಸ ಬೇಕೆಂದು ಈಗಾಗಲೇ ವಿವಿಧ ಸಮುದಾಯಗಳ ಮುಖಂಡರನ್ನು ಕರೆದು ಸಭೆ ನಡೆಸಲಾಗಿದೆ. ಮುಂಜಾಗ್ರತಾ ಕ್ರಮಗಳನ್ನೂ ಕೈಗೊಳ್ಳಲಾಗಿದೆ.”

-ಗಂಗಾಧರ್, ಸರ್ಕಲ್ ಇನ್‌ಸ್ಪೆಕ್ಟರ್

ಆಂದೋಲನ ಡೆಸ್ಕ್

Recent Posts

ಡಿಕೆಶಿ ಸರ್ಕಾರಕ್ಕೆ ಶತದಿನಗಳ ಸಂಭ್ರಮ ; ಬಣ್ಣ ಬಣ್ಣದ ಬೆಳಕಿನಲ್ಲಿ ಝಗಮಗಿಸಲಿದೆ ಮೈಸೂರು ಅರಮನೆ

ಮೈಸೂರು :  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ ಸೆ.10ಕ್ಕೆ ನೂರು ದಿನಗಳ ಸಂಭ್ರಮ. ಈ ಹಿನ್ನೆಲೆಯಲ್ಲಿ ಮೈಸೂರು ಅರಮನೆ ಸೆ.10…

9 hours ago

ದಸರಾ ಮಹೋತ್ಸವದಲ್ಲಿ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿ ; ಜಿಲ್ಲಾಧಿಕಾರ ಜಿ.ಲಕ್ಷ್ಮೀಕಾಂತ ರೆಡ್ಡಿ ಮಾಹಿತಿ

ಮೈಸೂರು : ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯ ವೇಳೆ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿಯಾಗುವರು ಎಂದು…

14 hours ago

ಹೊಸ ಪರಿಕಲ್ಪನೆಯೊಂದಿಗೆ ದೀಪಾಲಂಕಾರ ರೂಪಿಸಿ ; ರಮೇಶ್‌ ಬಂಡಿಸಿದ್ದೇಗೌಡ

ಮೈಸೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿದ್ಯುತ್ ದೀಪಾಲಂಕಾರಕ್ಕೆ ಈ ಬಾರಿ ಹೊಸ ಮೆರುಗು ನೀಡುವುದರ ಜತೆಗೆ ಆಕರ್ಷಕ…

14 hours ago

ದಸರಾ ಮಹೋತ್ಸವದಲ್ಲಿ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿ: ಜಿಲ್ಲಾಧಿಕಾರಿ ಜಿ ಲಕ್ಷ್ಮೀಕಾಂತ ರೆಡ್ಡಿ

ಮೈಸೂರು: ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯ ವೇಳೆ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿಯಾಗುವರು ಎಂದು ಜಿಲ್ಲಾಧಿಕಾರಿ…

18 hours ago

ಅಬಕಾರಿ ಅಕ್ರಮ ಕೇಸ್‌: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಗೆ ED ಶಾಕ್‌

ಬೆಂಗಳೂರು: ಅಬಕಾರಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಶಾಕ್ ನೀಡಿದೆ.…

19 hours ago

ಓದುಗರ ಪತ್ರ: ಬಂದೂಕು ಹಿಡಿದಿರುವ ನಾಯಕನ ಚಿತ್ರದ ಜಾಹೀರಾತಿಗೆ ‘ಇಲ್ಲೂ’ ಪ್ರೋತ್ಸಾಹ ಏಕೆ?

ಇತ್ತೀಚೆಗೆ ಬಿಡುಗಡೆಯಾದ ಟಾಕ್ಸಿಕ್ ಚಲನಚಿತ್ರವು ಕನ್ನಡ ಸೇರಿ ವಿವಿಧ ಭಾಷೆಗಳಲ್ಲಿ ಬಿಡುಗಡೆಯಾಗಿ ಪ್ರದರ್ಶನ ಕಾಣುತ್ತಿದೆ. ಈ ಚಿತ್ರದ ಪ್ರಚಾರಕ್ಕಾಗಿ ಪೋಸ್ಟರ್ ಅನ್ನು…

23 hours ago