ಮಂಜು ಕೋಟೆ
ಬೆಲೆ ದುಬಾರಿಯಾಗಿದ್ದರೂ ಲೆಕ್ಕಿಸದೆ ಪದಾರ್ಥಗಳ ಖರೀದಿ; ನಿಯಮಗಳ ಪ್ರಕಾರ ಗಣೇಶ ಮೂರ್ತಿ ಪ್ರತಿಷ್ಠಾಪಿಸಲು ಸೂಚನೆ
ಎಚ್.ಡಿ.ಕೋಟೆ: ತಾಲ್ಲೂಕಿನಾದ್ಯಂತ ಗೌರಿ- ಗಣೇಶ ಹಬ್ಬವನ್ನು ಸಡಗರದಿಂದ ಆಚರಿಸಲು ಸಿದ್ಧತೆಗಳು ನಡೆದಿವೆ.
ಕೋಟೆ ಕ್ಷೇತ್ರದ ಪಟ್ಟಣ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ಈ ಬಾರಿಯ ಗೌರಿ-ಗಣೇಶ ಹಬ್ಬವನ್ನು ಸಡಗರದಿಂದ ಆಚರಿಸಲು ಹೆಣ್ಣು ಮಕ್ಕಳು ಮಹಿಳೆಯರು ಹಾಗೂ ಯುವ ಸಮುದಾಯ ಮುಂದಾಗಿದ್ದು, ಮಂಗಳವಾರ ಗೌರಿ ಹಬ್ಬ ಇರುವುದರಿಂದ ಗೌರಿಯ ಪೂಜೆ ನಡೆಸಲು ಸಕಲ ಸಿದ್ಧತೆಯಲ್ಲಿ ತೊಡಗಿದ್ದಾರೆ.
ಬುಧವಾರ ಗಣೇಶ ಹಬ್ಬ ಇರುವುದರಿಂದ ಪುರಸಭೆ ವ್ಯಾಪ್ತಿ ಸೇರಿದಂತೆ ತಾಲ್ಲೂಕು ವ್ಯಾಪ್ತಿಯಲ್ಲಿರುವ ಗ್ರಾಮಗಳಲ್ಲಿ ಗಣಪತಿ ಮೂರ್ತಿಯನ್ನು ಕೂರಿಸಿ ಪೂಜೆ ಸಲ್ಲಿಸಲು ಯುವಕರ ಸಂಘಗಳು, ಸಂಘ-ಸಂಸ್ಥೆಯವರು ನಿಗದಿತ ಸ್ಥಳಗಳಲ್ಲಿ ಚಪ್ಪರ ಹಾಕುವುದು, ಗಣಪತಿ ಮೂರ್ತಿ ಖರೀದಿ ಹಾಗೂ ಇನ್ನಿತರ ಕಾರ್ಯಗಳಲ್ಲಿ ನಿರತರಾಗಿದ್ದಾರೆ.
ಹೂವು, ಹಣ್ಣು, ಕಾಯಿ ಹಾಗೂ ಇನ್ನಿತರ ಪದಾರ್ಥಗಳ ಬೆಲೆ ಹಬ್ಬದ ಪ್ರಯುಕ್ತ ಹೆಚ್ಚಾಗಿದ್ದರೂ ಜನರು ಲೆಕ್ಕಿಸದೆ ಹಬ್ಬವನ್ನು ಸಡಗರದಿಂದ ಆಚರಿಸಲು ಕುಟುಂಬ ಸಮೇತರಾಗಿ ಖರೀದಿಯಲ್ಲಿ ಮಗ್ನರಾಗಿದ್ದಾರೆ. ಪ್ರತಿಯೊಂದು ಸಮುದಾಯದ ರಸ್ತೆಗಳಲ್ಲೂ ಗಣೇಶ ಮೂರ್ತಿ ಕೂರಿಸಲು ಪೈಪೋಟಿ ಏರ್ಪಟ್ಟಿದೆ. ಕಳೆದ ವರ್ಷಕ್ಕಿಂತ ಈ ವರ್ಷ ಎತ್ತರವಾದ ಗಣಪತಿ ಮೂರ್ತಿಯನ್ನು ಕೂರಿಸಬೇಕೆಂದು ವಿವಿಧೆಡೆಯಿಂದ ಮೂರ್ತಿಯನ್ನು ಖರೀದಿಸಿ ತರಲು ಮುಂದಾಗಿರುವುದು ಕಂಡುಬಂದಿದೆ.
” ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಜನಸಾಮಾನ್ಯರು ಕೂರಿಸಿ ಪೂಜೆ ಸಲ್ಲಿಸಬೇಕು. ಈ ಮೂಲಕ ಸರ್ಕಾರದ ಮತ್ತು ಪುರಸಭೆಯ ನಿಯಮಗಳನ್ನು ಪ್ರತಿಯೊಬ್ಬರೂ ಪಾಲಿಸ ಬೇಕು. ಸ್ವಚ್ಛತೆ ಕಾಪಾಡಬೇಕು. ಗಣಪತಿ ಮೂರ್ತಿ ಕೂರಿಸುವ ಸಂಘ ಸಂಸ್ಥೆಯವರು ಪುರಸಭೆಯಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಗಣಪತಿ ಮೂರ್ತಿಗಳ ವಿಸರ್ಜನೆಗಾಗಿ ಪಟ್ಟಣದ ಸಂತೆ ಮೈದಾನದಲ್ಲಿ ನೀರಿನ ಕೊಳವನ್ನು ಪುರಸಭೆ ವತಿಯಿಂದ ಸಜ್ಜುಗೊಳಿಸಲಾಗಿದೆ.”
-ಶಿವಮ್ಮ ಚಾಕಹಳ್ಳಿ ಕೃಷ್ಣ, ಅಧ್ಯಕ್ಷರು ಪುರಸಭೆ
” ಪಟ್ಟಣ ಸೇರಿದಂತೆ ತಾಲ್ಲೂಕಿನಾದ್ಯಂತ ಗಣಪತಿ ಮೂರ್ತಿಯನ್ನು ಕೂರಿಸುವವರು ಪೊಲೀಸ್ ಠಾಣೆಯಲ್ಲಿ ಅನುಮತಿ ಪಡೆಯಲೇಬೇಕು. ಇಲ್ಲದಿದ್ದರೆ ಅಂತಹವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು. ಡಿಜೆ, ಇನ್ನಿತರ ಅತಿ ಹೆಚ್ಚು ಶಬ್ದ ಮಾಡುವ ಧ್ವನಿವರ್ಧಕಗಳನ್ನು ಬಳಸಬಾರದು. ಶಾಂತಿ ಸೌಹಾರ್ದತೆಯಿಂದ ಹಬ್ಬ ಆಚರಿಸ ಬೇಕೆಂದು ಈಗಾಗಲೇ ವಿವಿಧ ಸಮುದಾಯಗಳ ಮುಖಂಡರನ್ನು ಕರೆದು ಸಭೆ ನಡೆಸಲಾಗಿದೆ. ಮುಂಜಾಗ್ರತಾ ಕ್ರಮಗಳನ್ನೂ ಕೈಗೊಳ್ಳಲಾಗಿದೆ.”
-ಗಂಗಾಧರ್, ಸರ್ಕಲ್ ಇನ್ಸ್ಪೆಕ್ಟರ್
ನವದೆಹಲಿ: ನೀಟ್-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ…
ನವದೆಹಲಿ: ದೆಹಲಿಯಲ್ಲಿ ಸಿಜೆಪಿ ಬೆಂಬಲಿಗರ ಮೇಲಿನ ಪೊಲೀಸರ ಕ್ರಮ ಖಂಡಿಸಿ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಂದು ಪ್ರಧಾನಿ…
ನವದೆಹಲಿ: ಪರೀಕ್ಷಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಜೂನ್.28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್ ವಾಂಗ್ಚುಕ್ ಅವರನ್ನು ಇಲ್ಲಿನ ಸಫ್ದರ್ಜಂಗ್…
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ…
ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.…
ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್ ಮುಂದುವರಿಯಲಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದೀಪ್ಕೆ…