Andolana originals

ಮಡಿಕೇರಿಯಲ್ಲಿ ಬಂಟರ ಭವನ ನಿರ್ಮಾಣಕ್ಕೆ ಸಿದ್ಧತೆ

ನವೀನ್ ಡಿಸೋಜ

೧೨ ರಿಂದ ೧೫ ಕೋಟಿ ರೂ.ವೆಚ್ಚದ ಕಾಮಗಾರಿಗೆ ಇಂದು ಅಡಿಗಲ್ಲು ೦.೫೨ ಎಕರೆ ಜಾಗ 

ಮಡಿಕೇರಿ: ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ಸುಮಾರು ೧೨ರಿಂದ ೧೫ ಕೋಟಿ ರೂ. ವೆಚ್ಚದಲ್ಲಿ ಬಂಟರ ಸಮುದಾಯ ಭವನ ನಿರ್ಮಾಣವಾಗಲಿದ್ದು, ಶುಕ್ರವಾರ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಲಿದೆ.

ಕೊಡಗು ಜಿಲ್ಲೆಯಲ್ಲಿ ಸುಸಜ್ಜಿತವಾದ ಬಂಟರ ಭವನ ನಿರ್ಮಾಣವಾಗಬೇಕೆಂಬುದು ಸಮುದಾಯದವರ ಹಲವು ವರ್ಷಗಳ ಕನಸಾಗಿತ್ತು. ಈ ಕನಸು ಈಗ ನನಸಾಗುತ್ತಿದ್ದು, ಮಡಿಕೇರಿಯ ಅಬ್ಬಿಫಾಲ್ಸ್ ರಸ್ತೆಯಲ್ಲಿ ಕೊಡಗು ಜಿಲ್ಲಾ ಬಂಟರ ಭವನ ಟ್ರಸ್ಟ್ ಮತ್ತು ಕೊಡಗು ಜಿಲ್ಲಾ ಬಂಟರ ಸಂಘದ ವತಿಯಿಂದ ಕೊಡಗು ಬಂಟರ ಭವನ ನಿರ್ಮಾಣಕ್ಕೆ ತಯಾರಿ ನಡೆಸಲಾಗಿದೆ.

ದಾನಿ ದಿ. ಡಾ. ಬಿ.ಟಿ. ಪ್ರೇಮನಾಥ್ ಪೂಂಜಾ ಅವರು ಭವನ ನಿರ್ಮಾಣಕ್ಕಾಗಿ ೦.೫೨ ಎಕರೆ ಜಾಗವನ್ನು ದಶಕದ ಹಿಂದೆಯೇ ದಾನವಾಗಿ ನೀಡಿದ್ದರು. ಅದೇ ಸ್ಥಳದಲ್ಲಿ ಆಧುನಿಕ ಶೈಲಿಯಲ್ಲಿ ಸುಸಜ್ಜಿತ ಭವನ ನಿರ್ಮಾಣಕ್ಕೆ ಚಿಂತನೆ ನಡೆದಿತ್ತು. ಆದರೆ, ಕಾಮಗಾರಿ ನಡೆಸಲು ಸಾಧ್ಯವಾಗಿರಲಿಲ್ಲ. ಇದೀಗ ಸುಸಜ್ಜಿತ ಭವನ ನಿರ್ಮಾಣಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈಗಾಗಲೇ ಸ್ಥಳದಲ್ಲಿ ಮಣ್ಣು ತೆಗೆದು ಸಮತಟ್ಟು ಮಾಡುವ ಕೆಲಸ ನಡೆಸಲಾಗಿದೆ. ಒಂದು ತಿಂಗಳಿನಿಂದ ಕಾಮಗಾರಿ ಸಂಬಂಧ ಸಿದ್ಧತಾ ಕೆಲಸ ನಡೆಯುತ್ತಿದೆ. ಆದಷ್ಟು ಶೀಘ್ರದಲ್ಲಿ ಬಂಟರ ಭವನದ ಕಾಮಗಾರಿಯನ್ನು ಆರಂಭಿಸಿ ಪೂರ್ಣಗೊಳಿಸಲು ಕೊಡಗು ಜಿಲ್ಲಾ ಬಂಟರ ಭವನ ಟ್ರಸ್ಟ್ ಮತ್ತು ಕೊಡಗು ಜಿಲ್ಲಾ ಬಂಟರ ಸಂಘ ನಿರ್ಧರಿಸಿವೆ.

ಮೇ ೧ರಂದು ಬೆಳಿಗ್ಗೆ ೧೧ ಗಂಟೆಗೆ ಶಂಕು ಸ್ಥಾಪನೆ ಕಾರ್ಯಕ್ರಮ ನಡೆಯಲಿದ್ದು, ೨,೦೦೦ಕ್ಕೂ ಹೆಚ್ಚು ಮಂದಿ ಪಾಲ್ಗೊಳ್ಳಲಿದ್ದಾರೆ. ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ದಿವ್ಯ ಸಾನ್ನಿಧ್ಯದಲ್ಲಿ ನಡೆಯುವ ಕಾರ್ಯಕ್ರಮವನ್ನು ಮಡಿಕೇರಿ ಶಾಸಕ ಡಾ.ಮಂಥರ್‌ಗೌಡ ಉದ್ಘಾಟಿಸಲಿದ್ದಾರೆ. ವಿರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಕ್ಯಾ.ಬ್ರಿಜೇಶ್ ಚೌಟ, ಎಂಎಲ್‌ಸಿ ಸುಜಾ ಕುಶಾ ಲಪ್ಪ, ಪುತ್ತೂರು ಶಾಸಕ ಅಶೋಕ ಕುಮಾರ್ ರೈ, ಮಾಜಿ ಶಾಸಕರಾದ ಕೆ.ಜಿ.ಬೋಪಯ್ಯ, ಎಂ.ಪಿ. ಅಪ್ಪಚ್ಚು ರಂಜನ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.

ಹೀಗಿರಲಿದೆ ಭವನ..!: 

ಒಟ್ಟು ನಾಲ್ಕು ಅಂತಸ್ತುಗಳಲ್ಲಿ ಭವನ ನಿರ್ಮಾಣವಾಗಲಿದೆ. ನೆಲಮಾಳಿಗೆಯಲ್ಲಿ ವಾಹನ ನಿಲುಗಡೆಗೆ ಅವಕಾಶ ಕಲ್ಪಿಸಲಾಗುತ್ತದೆ. ಒಂದು ಮಹಡಿಯಲ್ಲಿ ಭೋಜನಾಲಯ, ಮತ್ತೊಂದು ಮಹಡಿಯಲ್ಲಿ ಸುಮಾರು ೮೦೦ ಮಂದಿ ಆಸೀನರಾಗಲು ಸಾಧ್ಯವಾಗುವ ಸಭಾಂಗಣವನ್ನು ಅತ್ಯಾಧುನಿಕ ಶೈಲಿಯಲ್ಲಿ ನಿರ್ಮಿಸಲಾಗುತ್ತದೆ. ಉಳಿದ ಒಂದು ಮಹಡಿಯಲ್ಲಿ ಕೋಣೆಗಳನ್ನು ನಿರ್ಮಿಸಲಾಗುತ್ತದೆ ಎಂದು ಬಂಟರ ಸಂಘದ ಜಿಲ್ಲಾಧ್ಯಕ್ಷ ಬಿ.ಡಿ.ಜಗದೀಶ್ ರೈ ತಿಳಿಸಿದ್ದಾರೆ.

” ಕೊಡಗು ಜಿಲ್ಲಾ ಬಂಟರ ಭವನ ಟ್ರಸ್ಟ್ ಮತ್ತು ಕೊಡಗು ಜಿಲ್ಲಾ ಬಂಟರ ಸಂಘದ ವತಿಯಿಂದ ಮಡಿಕೇರಿಯ ಅಬ್ಬಿಫಾಲ್ಸ್ ರಸ್ತೆಯಲ್ಲಿ ಕೊಡಗು ಬಂಟರ ಭವನ ನಿರ್ಮಾಣ ಕಾಮಗಾರಿಗೆ ಮೇ ೧ರಂದು ೧೧ ಗಂಟೆಗೆ ಶಂಕುಸ್ಥಾಪನೆ ನೆರವೇರಲಿದೆ. ಕಾರ್ಯಕ್ರಮದಲ್ಲಿ ದಿವಂಗತ ಪ್ರೇಮನಾಥ್ ಪೂಂಜಾ ಅವರಿಗೆ ಮರಣೋತ್ತರವಾಗಿ ವಿಶೇಷ ಬಿರುದು ಪ್ರದಾನ ಮಾಡಲಾಗುವುದು.”

-ಬಿ.ಡಿ. ಜಗದೀಶ್ ರೈ, ಕೊಡಗು ಜಿಲ್ಲಾ ಬಂಟರ ಸಂಘದ ಜಿಲ್ಲಾಧ್ಯಕ್ಷರು

 

 

ಆಂದೋಲನ ಡೆಸ್ಕ್

Recent Posts

ನಾಲ್ವರು ಯೋಧರು ಹುತಾತ್ಮ ; ನಕ್ಸಲರಿಟ್ಟಿದ್ದ ನೆಲಬಾಂಬ್ ನಿಷ್ಕ್ರಿಯಗೊಳಿಸುವಾಗ ದುರ್ಘಟನೆ

ಛತ್ತೀಸಗಢ : ನಾರಾಯಣಪುರ ಗಡಿ ಪ್ರದೇಶದಲ್ಲಿ ನೆಲಬಾಂಬ್ ತೆಗೆಯುವ ಕಾರ್ಯಾಚರಣೆಯ ಸಮಯದಲ್ಲಿ ಐಇಡಿ ಸ್ಛೋಟಗೊಂಡಿದ್ದು ನಾಲ್ವರು ಡಿಆರ್‌ಜಿ ಯೋಧರು ಹುತಾತ್ಮರಾಗಿದ್ದಾರೆ.…

3 hours ago

ಮಂಡ್ಯ | ನೀರಿನ ಕೊಳದಲ್ಲಿ ಗೃಹಿಣಿಯ ಶವ ಪತ್ತೆ ; ಕೊಲೆ ಶಂಕೆ

ಮಂಡ್ಯ : ತಾಲ್ಲೂಕಿನ ಜವನಹಳ್ಳಿ ಗ್ರಾಮದಲ್ಲಿ ನೀರಿನ ಕೊಳದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಮೃತ ದೇಹ ಪತ್ತೆಯಾಗಿದ್ದು, ಕೊಲೆ ಶಂಕೆ…

3 hours ago

ಮಂಡ್ಯ ನಗರದಲ್ಲಿ ಮರಗಳ ಸಮೀಕ್ಷೆಗೆ ಅರಣ್ಯ ಸಚಿವರ ಆದೇಶ

ಮದ್ದೂರು : ಜಾಗತಿಕ ತಾಪಮಾನ ಏರಿಕೆಗೆ ವೃಕ್ಷ ಸಂವರ್ಧನೆ, ಸಂರಕ್ಷಣೆಯೇ ಮಾರ್ಗವಾಗಿದ್ದು, ಹಸಿರು ಹೊದಿಕೆ ಹೆಚ್ಚಿಸುವಂತೆ ಮತ್ತು ಮಂಡ್ಯ ನಗರದ…

3 hours ago

ಬಜೆಟ್ ಘೋಷಣೆ ಕಡತದಲ್ಲೇ ಉಳಿಯಬಾರದು ; ಕಾರ್ಯದರ್ಶಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

ಬೆಂಗಳೂರು : ಬಜೆಟ್‌ನಲ್ಲಿ ಘೋಷಿಸಿದ ಯೋಜನೆಗಳು ಘೋಷಣೆಯಾಗಿಯೇ ಉಳಿಯಬಾರದು. ಅನುಷ್ಠಾನದಲ್ಲಿ ವಿಳಂಬವಾದರೆ ಸಂಬಂಧಪಟ್ಟ ಕಾರ್ಯದರ್ಶಿಗಳೇ ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

5 hours ago

ಟೆಂಪೋ-ಬೈಕ್‌ ಡಿಕ್ಕಿ : ಬೈಕ್‌ ಸವಾರ ಸಾವು ; ಓರ್ವ ಗಂಭೀರ

ಹನೂರು : ಮಲೆ ಮಹದೇಶ್ವರ ಬೆಟ್ಟದಿಂದ ತಮಿಳುನಾಡಿನ ಮೆಟ್ಟೂರಿಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸವಾರನಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ…

5 hours ago

NEET UG Exam | ನಾಳೆ ನೀಟ್ ಪರೀಕ್ಷೆ ; ʼಜೀರೋ ಲೀಕ್‌ʼ ಪಾಲಿಸಿ ಜಾರಿ

ಬೆಂಗಳೂರು : ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಯುಜಿ ಭಾನುವಾರ…

6 hours ago